Homeಕರ್ನಾಟಕ“ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

“ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

- Advertisement -
- Advertisement -

ಜನರ ಜೀವ ಮತ್ತು ಜೀವನೋಪಾಯ ಉಳಿಸಲು ಸರ್ಕಾರ ಕೈಗೊಳ್ಳಬೇಕಾದ ಪಂಚ ತುರ್ತು ಕ್ರಮಗಳ ಬಗ್ಗೆ ತಿಂಗಳಿನಿಂದ ಹೋರಾಟ ಮಾಡುತ್ತಿರುವ ಜನಾಗ್ರಹ ಆಂದೋಲನವು ಸೋಮವಾರ [ಮೇ 24 ರಂದು] ರಾಜ್ಯವ್ಯಾಪಿ ಜನಾಗ್ರಹಕ್ಕೆ ಕರೆ ನೀಡಿದೆ. ಈ ಆಂದೋಲನಕ್ಕೆ ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲ ವ್ಯಕ್ತಪಡಿಸಿವೆ.

ಉಚಿತ ಚಿಕಿತ್ಸೆ, ಸರ್ವರಿಗೂ ವ್ಯಾಕ್ಸಿನ್, ಬಿಪಿಎಲ್ ಜನರಿಗೆ ಸಮಗ್ರ ದಿನಸಿ – ಮಾಸಿಕ 5000 ನೆರವು ಧನ, ಅನಾಥವಾದ ಕುಟುಂಬಗಳಿಗೆ 5 ಲಕ್ಷ ಪರಿಹಾರ ಮತ್ತು ಕೃಷಿ ಬೀಜ, ಗೊಬ್ಬರಕ್ಕೆ ವಿಶೇಷ ಸಬ್ಸಿಡಿ ಈ ಐದು ಪಂಚ ಕ್ರಮಗಳನ್ನು ಜಾರಿಗೆ ತರಬೇಕೆಂದು ಜನಾಗ್ರಹ ಆಂದೋಲನ ಆಗ್ರಹಿಸಿದೆ. ಜನಪರ ಸಂಘಟನೆಗಳು ಹಾಗೂ ಪಕ್ಷಗಳು ಕರೆ ನೀಡಿವೆ.

ಜನರ ಜೀವ ಉಳಿಸುವ ಕ್ರಮಗಳಿಗಾಗಿ ಹಾಗೂ ಸಂಕಷ್ಟದಲ್ಲಿರುವ ಜನರ ಜೀವನೋಪಾಯಕ್ಕೆ ಆಸರೆಯಾಗಬಲ್ಲ ಪ್ಯಾಕೇಜಿಗಾಗಿ ತಮ್ಮ ತಮ್ಮ ಮನೆ ಮುಂದೆಯೇ ತಟ್ಟೆ ಲೋಟ ಬಡಿದು, ಖಾಲಿ ಚೀಲ ಪ್ರದರ್ಶಿಸುವ ಮೂಲಕ ಸರ್ಕಾರದ ಕಣ್ತೆರೆಸಲು ಮುಂದಾಗಿದೆ.

ಇದನ್ನೂ ಓದಿ: “ನಾವೂ ಬದುಕಬೇಕು”: ನಾಳೆ ರಾಜ್ಯಾದ್ಯಂತ ಜನಾಗ್ರಹ ಆಂದೋಲನ

ಜನಾಗ್ರಹ ಆಂದೋಲನದ ಪೋಸ್ಟರ್‌ಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿರೋಧ ಪಕ್ಷಗಳು ಈ ಆಂದೋಲನಕ್ಕೆ ಬೆಂಬಲ ನೀಡಿವೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಕಾಂಗ್ರೆಸ್ ಪಕ್ಷವು ಈ ಜನಾಗ್ರಹ ಆಂದೋಲನವನ್ನು ಹಾಗೂ ಅದರ ಹಕ್ಕೊತ್ತಾಯಗಳನ್ನು ಬೆಂಬಲಿಸುತ್ತದೆ” ಎಂದಿದ್ದಾರೆ.

’ಸರ್ಕಾರ ತೆಗೆದುಕೊಳ್ಳಲೇಬೇಕಾದ ಕ್ರಮಗಳಿಗಾಗಿ 24 ರಂದು ಜನಾಗ್ರಹ ಆಂದೋಲನ ನಡಿಯುತ್ತಿದೆ.
ಉಚಿತ ಚಿಕಿತ್ಸೆ – ಸರ್ವರಿಗೂ ವ್ಯಾಕ್ಸಿನ್ – ಬಡವರಿಗೆ ಸಮಗ್ರ ದಿನಸಿ – ಕೆಲಸ ಇಲ್ಲದವರಿಗೆ ಆರ್ಥಿಕ ನೆರವು – ಅನಾಥರಿಗೆ ಪರಿಹಾರ. ಕಾಂಗ್ರೆಸ್ ಈ ಹಕ್ಕೊತ್ತಾಯಗಳನ್ನು ಬೆಂಬಲಿಸುತ್ತದೆ ಹಾಗೂ 24 ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲಿದೆ” ಎಂದು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಒಡಿಶಾದ ಬುಡಕಟ್ಟು ಸಮುದಾಯಗಳಲ್ಲಿ ಹೆಚ್ಚಿದ ಸೋಂಕು: ಕೊರೊನಾ ಕೇಂದ್ರಗಳನ್ನು ಆರಂಭಿಸಲು ಒತ್ತಾಯ

ರಾಜ್ಯದ ಪ್ರಾದೇಶಿಕ ಪಕ್ಷ ಜಾತ್ಯಾತೀತ ಜನತಾದಳ ಕೂಡ ಈ ಆಂದೋಲನಕ್ಕೆ ಬೆಂಬಲ ನೀಡಿದೆ. ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ “ಈ ಆಂದೋಲನ ಮುಂದಿಟ್ಟಿರುವ ಹಕ್ಕೊತ್ತಾಯಗಳು ಬಹಳ ಸಮಂಜಸವಾಗಿವೆ. ಸರ್ಕಾರ ಇವನ್ನು ಪರಿಗಣಿಸಲೇಬೇಕು ಎಂದು ಜನತಾ ದಳ ಪಕ್ಷದ ಪರವಾಗಿ ನಾನು ಒತ್ತಾಯಿಸುತ್ತೇನೆ. ಜೆಡಿಎಸ್ 24 ರ ಪ್ರತಿಭಟನೆಯನ್ನು ಬೆಂಬಲಿಸಿ ಭಾಗವಹಿಸಲಿದೆ” ಎಂದು ಹೇಳಿಕೆ ನೀಡಿದ್ದಾರೆ‌‌.

ಸರ್ಕಾರದ ವಿರುದ್ಧ ಜ‌ನರ ಆಕ್ರೋಶ ಹೆಚ್ಚಾಗುತ್ತಿದೆ. ಜನರ ಈ ಆಗ್ರಹಕ್ಕೆ ಸರ್ಕಾರ ಸ್ಪಂದಿಸುವುದೇ ಎಂಬುದನ್ನು ಕಾದು ನೋಡಬೇಕಿದೆ‌ ಎಂದು ಜನಾಗ್ರಹ ಆಂದೋಲನದ ಪರವಾಗಿ ಕೆ.ಎಲ್. ಅಶೋಕ್ ಮತ್ತು ಮಾಮಾವಳ್ಳಿ ಶಂಕರ್ ಆಶಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಬಾಯಿಮಾತಿನಲ್ಲಿ ಕೊರೊನಾ ವಾರಿಯರ್ಸ್ ಎನ್ನದೆ, ದುಡಿದವರಿಗೆ ಗೌರವಧನ ನೀಡಿ- ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...