Homeಮುಖಪುಟ‘ಅಲೋಪತಿ’ ಕುರಿತ ತನ್ನ ವಿವಾದಾತ್ಮಕ ಹೇಳಿಕೆ ಹಿಂಪಡೆದ ಯೋಗ ಗುರು ರಾಮ್‌ದೇವ್‌

‘ಅಲೋಪತಿ’ ಕುರಿತ ತನ್ನ ವಿವಾದಾತ್ಮಕ ಹೇಳಿಕೆ ಹಿಂಪಡೆದ ಯೋಗ ಗುರು ರಾಮ್‌ದೇವ್‌

- Advertisement -
- Advertisement -

ಯೋಗಗುರು ಬಾಬಾ ರಾಮ್‌ದೇವ್‌ ಅಲೋಪತಿ ಔಷಧ ಸಂಬಂಧಿಸಿದಂತೆ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಭಾನುವಾರ ರಾತ್ರಿ ಹಿಂಪಡೆದಿದ್ದಾರೆ. ‘ಕೊರೋನಾ ಸಾಂಕ್ರಾಮಿಕ ಸಮಯದಲ್ಲಿ ಅಲೋಪಥಿಕ್ ಔಷಧಿಗಳಿಂದಾಗಿ ಲಕ್ಷಾಂತರ ಜನರು ಸತ್ತಿದ್ದಾರೆ’ ಎಂದು ಅವರು ಹೇಳಿರುವ ವಿಡಿಯೊವೊಂದು ವೈರಲ್‌ ಆಗಿದ್ದು, ದೇಶದಾದ್ಯತಂತ ಭಾರಿ ಆಕ್ರೋಶ ಉಂಟುಮಾಡಿತ್ತು.

ಈ ಹೇಳಿಕೆ ಸಂಬಂಧಿಸಿದಂತೆ ಭಾರತೀಯ ವೈದ್ಯಕೀಯ ಸಂಸ್ಥೆ ಕಟುವಾಗಿ ಟೀಕಿಸಿತ್ತು ಮತ್ತು ರಾಮದೇವ್ ಅವರಿಗೆ ನೋಟಿಸ್‌ ನೀಡಿತ್ತು. ಸಾಂಕ್ರಾಮಿಕ ಕಾಯ್ದೆ ಅಡಿ ಅವರ ಮೇಲೆ ಪ್ರಕರಣ ದಾಖಲಿಸಲು ಐಎಂಎ ಸರ್ಕಾರಕ್ಕೆ ಮನವಿ ಕೂಡಾ ಮಾಡಿತ್ತು. ಅಲ್ಲದೆ ದೆಹಲಿ ವೈದ್ಯಕೀಯ ಸಂಘವು ದೆಹಲಿಯ ದರಿಯಾಗಂಜ್‌ ಪೊಲೀಸ್‌ ಠಾಣೆಯಲ್ಲಿ ರಾಮ್‌ದೇವ್‌ ಅವರ ವಿರುದ್ದ ಪ್ರಕರಣವನ್ನೂ ದಾಖಲಿಸಿತ್ತು.

ದೇಶದಾದ್ಯಂತ ರಾಮ್‌ದೇವ್‌ ವಿರುದ್ದ ಆಕ್ರೋಶ ಹೆಚ್ಚುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಹೇಳಿಕೆಯನ್ನು ಹಿಂಪಡೆಯುವಂತೆ ಭಾನುವಾರ ಪತ್ರ ಬರೆದಿದ್ದರು. ಅವರು ಪತ್ರದಲ್ಲಿ, “ಅಲೋಪತಿ ಔಷಧಿಗಳ ಬಗ್ಗೆ ನಿಮ್ಮ ಹೇಳಿಕೆಯಿಂದ ದೇಶದ ಜನರು ತುಂಬಾ ನೊಂದಿದ್ದಾರೆ. ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ದೇಶದ ಜನರಿಗೆ ದೇವರಿದ್ದಂತೆ. ಅವರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನೀವು ಕೊರೊನಾ ಯೋಧರನ್ನಷ್ಟೇ ಅವಮಾನಿಸಿದ್ದಲ್ಲ, ದೇಶದ ಜನರ ಭಾವನೆಗಳನ್ನು ನೋಯಿಸಿದ್ದೀರಿ. ನಿಮ್ಮ ಸ್ಪಷ್ಟೀಕರಣ ಮಾತ್ರ ಸಾಕಾಗುವುದಿಲ್ಲ, ಈ ಬಗ್ಗೆ ನೀವು ಗಂಭೀರವಾಗಿ ಯೋಚಿಸಿ ನಿಮ್ಮ ಹೇಳಿಕೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಹರ್ಷವರ್ಧನ್‌ ಪತ್ರದಲ್ಲಿ ಹೇಳಿದ್ದರು.

ಈ ಪತ್ರಕ್ಕೆ ಭಾನುವಾರ ರಾತ್ರಿ ಪ್ರತಿಕ್ರಿಯೆ ನೀಡಿರುವ ರಾಮ್‌ದೇವ್‌, “ಗೌರವಾನ್ವಿತ ಹರ್ಷವರ್ಧನ್‌ ಅವರೆ, ನಾನು ನಿಮ್ಮ ಪತ್ರವನ್ನು ಸ್ವೀಕರಿಸಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ, ವೈದ್ಯಕೀಯ ಪದ್ಧತಿಗಳ ಹೋರಾಟದ ಈ ಸಂಪೂರ್ಣ ವಿವಾದಕ್ಕೆ ವಿಷಾದಿಸುತ್ತಾ ನನ್ನ ಹೇಳಿಕೆಯನ್ನು ಹಿಂತೆಗೆದುಕೊಳ್ಳುತ್ತೇನೆ” ಎಂದು ಪತ್ರವೊಂದನ್ನು ಕಳುಹಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ರಾಮ್‌ದೇವ್‌ ಅವರ ವಿವಾದಾತ್ಮಕ ವಿಡಿಯೊ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. ಅದರಲ್ಲಿ ಅವರು, “ಅಲೋಪತಿ ಔಷಧಿಗಳಿಂದಾಗಿ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ. ಈ ಸಂಖ್ಯೆಯು ಚಿಕಿತ್ಸೆ ಸಿಗದೆ ಅಥವಾ ಆಮ್ಲಜನಕದ ಕೊರೆತೆಯಿಂದ ಸಾವಿಗೀಡಾಗಿರುವ ಜನರಿಗಿಂತ ಹೆಚ್ಚು. ಅಲೋಪತಿಯು ಅವಿವೇಕಿ ಮತ್ತು ದಿವಾಳಿಯಾದ ವಿಜ್ಞಾನ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಲೋಪತಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಾಬಾ ರಾಮದೇವ್‌ಗೆ ಲೀಗಲ್ ನೋಟಿಸ್ – ಬಂಧನಕ್ಕೆ ಒತ್ತಾಯ

ಅವರ ಸಂಸ್ಥೆಯಾದ ಪತಂಜಲಿಯು, “ಈ ವಿಡಿಯೋವನ್ನು ಎಡಿಟ್ ಮಾಡಲಾಗಿದೆ ಮತ್ತು ಹೇಳಿಕೆಯನ್ನು ಬೇರೆ ಸಂದರ್ಭದಿಂದ ಬೇರ್ಪಡಿಸಗಿದೆ. ರಾಮದೇವ್ ಅವರಿಗೆ ಆಧುನಿಕ ವಿಜ್ಞಾನದ ವೈದ್ಯರ ವಿರುದ್ಧ ಯಾವುದೇ ಕೆಟ್ಟ ಅಭಿಪ್ರಾಯವಿಲ್ಲ. ಈ ಘಟನೆಯು ಖಾಸಗಿ ಕಾರ್ಯಕಮವಾಗಿತ್ತು. ರಾಮದೇವ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸದಸ್ಯರು ಫಾರ್ವರ್ಡ್ ಮಾಡಿದ ವಾಟ್ಸಾಪ್ ಸಂದೇಶವನ್ನು ಓದುತ್ತಿದ್ದರು. ಅವರ ವಿರುದ್ಧದ ಆರೋಪ ಸುಳ್ಳು” ಎಂದು ಹೇಳಿತ್ತು.

ಆಡಳಿತಾರೂಢ ಬಿಜೆಪಿ ಸರ್ಕಾರದೊಂದಿಗೆ ನಿಕಟ ಸಂಬಂಧ ಹೊಂದಿರುವ ರಾಮದೇವ್ ಕೊರೊನಾ ಒಂದನೆ ಅಲೆಯ ಸಮಯದಲ್ಲೂ ವಿವಾದವನ್ನು ಎದುರಿಸಿದ್ದರು. ಅವರು ಆರೋಗ್ಯ ಸಚಿವ ಹರ್ಷ್ವರ್ಧನ್ ಮತ್ತು ಸಚಿವ ನಿತಿನ್ ಗಡ್ಕರಿಯ ಸಮ್ಮುಖದಲ್ಲಿ ‘ವಿಶ್ವ ಆರೋಗ್ಯ ಸಂಸ್ಥೆಯಿಂದ ಪ್ರಮಾಣೀಕೃತ ಔಷಧಿಗಳು’ ಎಂದು ಪತಂಜಲಿಯ ಔಷಧಿಗಳನ್ನು ಬಿಡುಗಡೆ ಮಾಡಿದ್ದರು.

ಅಲ್ಲದೆ, ಸ್ವತಃ ವೈದ್ಯರೂ ಆಗಿರುವ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌‌ ಅವರ ಸಮ್ಮುಖದಲ್ಲೇ ವೈದ್ಯರನ್ನು “ಕೊಲೆಗಾರರು” ಎಂದು ಕರೆದಿದ್ದರು ಎಂದು ಆರೋಪಿಸಲಾಗಿದೆ.

ಆದರೆ ವಿಶ್ವ ಆರೋಗ್ಯ ಸಂಸ್ಥೆಯು, “ಕೋವಿಡ್ ಚಿಕಿತ್ಸೆಗೆ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ” ಎಂದು ಸ್ಪಷ್ಟೀಕರಣವನ್ನು ನೀಡಿತ್ತು.

ಇದನ್ನೂ ಓದಿ: ‘ಅಲೋಪತಿ ನಿಂದನೆಯಲ್ಲಿ ಸ್ಪಷ್ಟೀಕರಣವಷ್ಟೇ ಸಾಲದು’: ರಾಮದೇವ್‌ಗೆ ಆರೋಗ್ಯ ಸಚಿವ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...