Homeಮುಖಪುಟ‘ಅಲೋಪತಿ’ ಕುರಿತ ತನ್ನ ವಿವಾದಾತ್ಮಕ ಹೇಳಿಕೆ ಹಿಂಪಡೆದ ಯೋಗ ಗುರು ರಾಮ್‌ದೇವ್‌

‘ಅಲೋಪತಿ’ ಕುರಿತ ತನ್ನ ವಿವಾದಾತ್ಮಕ ಹೇಳಿಕೆ ಹಿಂಪಡೆದ ಯೋಗ ಗುರು ರಾಮ್‌ದೇವ್‌

- Advertisement -
- Advertisement -

ಯೋಗಗುರು ಬಾಬಾ ರಾಮ್‌ದೇವ್‌ ಅಲೋಪತಿ ಔಷಧ ಸಂಬಂಧಿಸಿದಂತೆ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಭಾನುವಾರ ರಾತ್ರಿ ಹಿಂಪಡೆದಿದ್ದಾರೆ. ‘ಕೊರೋನಾ ಸಾಂಕ್ರಾಮಿಕ ಸಮಯದಲ್ಲಿ ಅಲೋಪಥಿಕ್ ಔಷಧಿಗಳಿಂದಾಗಿ ಲಕ್ಷಾಂತರ ಜನರು ಸತ್ತಿದ್ದಾರೆ’ ಎಂದು ಅವರು ಹೇಳಿರುವ ವಿಡಿಯೊವೊಂದು ವೈರಲ್‌ ಆಗಿದ್ದು, ದೇಶದಾದ್ಯತಂತ ಭಾರಿ ಆಕ್ರೋಶ ಉಂಟುಮಾಡಿತ್ತು.

ಈ ಹೇಳಿಕೆ ಸಂಬಂಧಿಸಿದಂತೆ ಭಾರತೀಯ ವೈದ್ಯಕೀಯ ಸಂಸ್ಥೆ ಕಟುವಾಗಿ ಟೀಕಿಸಿತ್ತು ಮತ್ತು ರಾಮದೇವ್ ಅವರಿಗೆ ನೋಟಿಸ್‌ ನೀಡಿತ್ತು. ಸಾಂಕ್ರಾಮಿಕ ಕಾಯ್ದೆ ಅಡಿ ಅವರ ಮೇಲೆ ಪ್ರಕರಣ ದಾಖಲಿಸಲು ಐಎಂಎ ಸರ್ಕಾರಕ್ಕೆ ಮನವಿ ಕೂಡಾ ಮಾಡಿತ್ತು. ಅಲ್ಲದೆ ದೆಹಲಿ ವೈದ್ಯಕೀಯ ಸಂಘವು ದೆಹಲಿಯ ದರಿಯಾಗಂಜ್‌ ಪೊಲೀಸ್‌ ಠಾಣೆಯಲ್ಲಿ ರಾಮ್‌ದೇವ್‌ ಅವರ ವಿರುದ್ದ ಪ್ರಕರಣವನ್ನೂ ದಾಖಲಿಸಿತ್ತು.

ದೇಶದಾದ್ಯಂತ ರಾಮ್‌ದೇವ್‌ ವಿರುದ್ದ ಆಕ್ರೋಶ ಹೆಚ್ಚುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಹೇಳಿಕೆಯನ್ನು ಹಿಂಪಡೆಯುವಂತೆ ಭಾನುವಾರ ಪತ್ರ ಬರೆದಿದ್ದರು. ಅವರು ಪತ್ರದಲ್ಲಿ, “ಅಲೋಪತಿ ಔಷಧಿಗಳ ಬಗ್ಗೆ ನಿಮ್ಮ ಹೇಳಿಕೆಯಿಂದ ದೇಶದ ಜನರು ತುಂಬಾ ನೊಂದಿದ್ದಾರೆ. ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ದೇಶದ ಜನರಿಗೆ ದೇವರಿದ್ದಂತೆ. ಅವರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನೀವು ಕೊರೊನಾ ಯೋಧರನ್ನಷ್ಟೇ ಅವಮಾನಿಸಿದ್ದಲ್ಲ, ದೇಶದ ಜನರ ಭಾವನೆಗಳನ್ನು ನೋಯಿಸಿದ್ದೀರಿ. ನಿಮ್ಮ ಸ್ಪಷ್ಟೀಕರಣ ಮಾತ್ರ ಸಾಕಾಗುವುದಿಲ್ಲ, ಈ ಬಗ್ಗೆ ನೀವು ಗಂಭೀರವಾಗಿ ಯೋಚಿಸಿ ನಿಮ್ಮ ಹೇಳಿಕೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಹರ್ಷವರ್ಧನ್‌ ಪತ್ರದಲ್ಲಿ ಹೇಳಿದ್ದರು.

ಈ ಪತ್ರಕ್ಕೆ ಭಾನುವಾರ ರಾತ್ರಿ ಪ್ರತಿಕ್ರಿಯೆ ನೀಡಿರುವ ರಾಮ್‌ದೇವ್‌, “ಗೌರವಾನ್ವಿತ ಹರ್ಷವರ್ಧನ್‌ ಅವರೆ, ನಾನು ನಿಮ್ಮ ಪತ್ರವನ್ನು ಸ್ವೀಕರಿಸಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ, ವೈದ್ಯಕೀಯ ಪದ್ಧತಿಗಳ ಹೋರಾಟದ ಈ ಸಂಪೂರ್ಣ ವಿವಾದಕ್ಕೆ ವಿಷಾದಿಸುತ್ತಾ ನನ್ನ ಹೇಳಿಕೆಯನ್ನು ಹಿಂತೆಗೆದುಕೊಳ್ಳುತ್ತೇನೆ” ಎಂದು ಪತ್ರವೊಂದನ್ನು ಕಳುಹಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ರಾಮ್‌ದೇವ್‌ ಅವರ ವಿವಾದಾತ್ಮಕ ವಿಡಿಯೊ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. ಅದರಲ್ಲಿ ಅವರು, “ಅಲೋಪತಿ ಔಷಧಿಗಳಿಂದಾಗಿ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ. ಈ ಸಂಖ್ಯೆಯು ಚಿಕಿತ್ಸೆ ಸಿಗದೆ ಅಥವಾ ಆಮ್ಲಜನಕದ ಕೊರೆತೆಯಿಂದ ಸಾವಿಗೀಡಾಗಿರುವ ಜನರಿಗಿಂತ ಹೆಚ್ಚು. ಅಲೋಪತಿಯು ಅವಿವೇಕಿ ಮತ್ತು ದಿವಾಳಿಯಾದ ವಿಜ್ಞಾನ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಲೋಪತಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಾಬಾ ರಾಮದೇವ್‌ಗೆ ಲೀಗಲ್ ನೋಟಿಸ್ – ಬಂಧನಕ್ಕೆ ಒತ್ತಾಯ

ಅವರ ಸಂಸ್ಥೆಯಾದ ಪತಂಜಲಿಯು, “ಈ ವಿಡಿಯೋವನ್ನು ಎಡಿಟ್ ಮಾಡಲಾಗಿದೆ ಮತ್ತು ಹೇಳಿಕೆಯನ್ನು ಬೇರೆ ಸಂದರ್ಭದಿಂದ ಬೇರ್ಪಡಿಸಗಿದೆ. ರಾಮದೇವ್ ಅವರಿಗೆ ಆಧುನಿಕ ವಿಜ್ಞಾನದ ವೈದ್ಯರ ವಿರುದ್ಧ ಯಾವುದೇ ಕೆಟ್ಟ ಅಭಿಪ್ರಾಯವಿಲ್ಲ. ಈ ಘಟನೆಯು ಖಾಸಗಿ ಕಾರ್ಯಕಮವಾಗಿತ್ತು. ರಾಮದೇವ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸದಸ್ಯರು ಫಾರ್ವರ್ಡ್ ಮಾಡಿದ ವಾಟ್ಸಾಪ್ ಸಂದೇಶವನ್ನು ಓದುತ್ತಿದ್ದರು. ಅವರ ವಿರುದ್ಧದ ಆರೋಪ ಸುಳ್ಳು” ಎಂದು ಹೇಳಿತ್ತು.

ಆಡಳಿತಾರೂಢ ಬಿಜೆಪಿ ಸರ್ಕಾರದೊಂದಿಗೆ ನಿಕಟ ಸಂಬಂಧ ಹೊಂದಿರುವ ರಾಮದೇವ್ ಕೊರೊನಾ ಒಂದನೆ ಅಲೆಯ ಸಮಯದಲ್ಲೂ ವಿವಾದವನ್ನು ಎದುರಿಸಿದ್ದರು. ಅವರು ಆರೋಗ್ಯ ಸಚಿವ ಹರ್ಷ್ವರ್ಧನ್ ಮತ್ತು ಸಚಿವ ನಿತಿನ್ ಗಡ್ಕರಿಯ ಸಮ್ಮುಖದಲ್ಲಿ ‘ವಿಶ್ವ ಆರೋಗ್ಯ ಸಂಸ್ಥೆಯಿಂದ ಪ್ರಮಾಣೀಕೃತ ಔಷಧಿಗಳು’ ಎಂದು ಪತಂಜಲಿಯ ಔಷಧಿಗಳನ್ನು ಬಿಡುಗಡೆ ಮಾಡಿದ್ದರು.

ಅಲ್ಲದೆ, ಸ್ವತಃ ವೈದ್ಯರೂ ಆಗಿರುವ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌‌ ಅವರ ಸಮ್ಮುಖದಲ್ಲೇ ವೈದ್ಯರನ್ನು “ಕೊಲೆಗಾರರು” ಎಂದು ಕರೆದಿದ್ದರು ಎಂದು ಆರೋಪಿಸಲಾಗಿದೆ.

ಆದರೆ ವಿಶ್ವ ಆರೋಗ್ಯ ಸಂಸ್ಥೆಯು, “ಕೋವಿಡ್ ಚಿಕಿತ್ಸೆಗೆ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ” ಎಂದು ಸ್ಪಷ್ಟೀಕರಣವನ್ನು ನೀಡಿತ್ತು.

ಇದನ್ನೂ ಓದಿ: ‘ಅಲೋಪತಿ ನಿಂದನೆಯಲ್ಲಿ ಸ್ಪಷ್ಟೀಕರಣವಷ್ಟೇ ಸಾಲದು’: ರಾಮದೇವ್‌ಗೆ ಆರೋಗ್ಯ ಸಚಿವ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...