Homeಚಳವಳಿರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ಈ ಆರು ತಿಂಗಳಲ್ಲಿ ರೈತರು ಅನುಭವಿಸಿದ್ದು ಕೇವಲ ಸರ್ಕಾರದ ಕಿರುಕುಳವಲ್ಲ, ಜೊತೆಗೆ ಪ್ರಕೃತಿ ನೀಡಿದ ಸವಾಲುಗಳನ್ನು ಎದುರಿಸಿದ್ದಾರೆ.

- Advertisement -
- Advertisement -

“ರೈತ ಹೋರಾಟ…” ಕಳೆದ 6 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಅನ್ನದಾತರ ಹೋರಾಟದ ಕುರಿತು ಇಲ್ಲಿಯವರೆಗೆ ಸರ್ಕಾರ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಚುನಾವಣೆ ಹಿನ್ನೆಲೆ ಮಾತುಕತೆಗಳನ್ನು ನಿಲ್ಲಿಸಿದ್ದ ಕೇಂದ್ರ ಮತ್ತೆ ಮಾತುಕತೆಗೆ ಮುಂದಾಗಿಲ್ಲ. ಇವೆಲ್ಲದರ ನಡುವೆ ದೇಶದಲ್ಲೇ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರೂ ಗಡಿಗಳಲ್ಲಿ ಸೋಂಕಿನ ಸುಳಿವಿಲ್ಲ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನವೆಂವರ್ 26, 27 ರಂದು ದೆಹಲಿ ಚಲೋಗೆ ಪಂಜಾಬ್‌ ರೈತರ ನೇತೃತ್ವದಲ್ಲಿ ದೇಶದ ರೈತರು ಕರೆ ನೀಡಿದ್ದರು. ಅಂದಿನಿಂದ ದೆಹಲಿಯ ಗಡಿಗಳನ್ನು ಸುತ್ತುವರೆದಿರುವ ರೈತರು ಈ ಕರಾಳ ಕಾನೂನುಗಳ ರದ್ದತಿಗೆ ಆಗ್ರಹಿಸಿದ್ದಾರೆ. ಜೊತೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಜಾರಿ ಮಾಡಲು ಆಗ್ರಹಿಸಿದ್ದಾರೆ.

ಈ ಆರು ತಿಂಗಳಲ್ಲಿ ರೈತರು ಅನುಭವಿಸಿದ್ದು ಕೇವಲ ಸರ್ಕಾರದ ಕಿರುಕುಳವಲ್ಲ, ಜೊತೆಗೆ ಪ್ರಕೃತಿ ನೀಡಿದ ಸವಾಲುಗಳನ್ನು ಎದುರಿಸಿದ್ದಾರೆ. ತೀವ್ರ ಚಳಿ, ಮಳೆ, ಬಿಸಿಲು ಅದರ ಜೊತೆಗೆ ಕೊರೊನಾ ಸಾಂಕ್ರಾಮಿಕ ರೋಗ ಕೂಡ. ಇಡೀ ದೇಶದಲ್ಲಿ ಕೊರೊನಾ ಸೋಂಕು ಹರಡಿರುವ ಮಧ್ಯೆಯೇ ಈ ಸಾವಿರಾರು ಮಂದಿ ಒಂದೆಡೆ ಇರುವ ಸ್ಥಳದಲ್ಲಿ ಸೋಂಕು ಇಲ್ಲವೆ ಎಂಬ ಪ್ರಶ್ನೆ ಸಹಜವಾಗಿಯೇ ಹುಟ್ಟುತ್ತದೆ.

ಇದನ್ನೂ ಓದಿ: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ – ಫೇಕ್‌, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ’

ಆದರೆ, ಅಚ್ಚರಿಯೆಂದರೆ ಇಲ್ಲಿ ಕೊರೊನಾ ಸೋಂಕಿತ ಪ್ರಕರನಗಳು ವರದಿಯಾಗಿಲ್ಲ. ಇದಕ್ಕೆ ಮೂಲ ಕಾರಣ ಇಲ್ಲಿ ಪ್ರತಿಭಟನೆ ಆರಂಭವಾದಾಗಿನಿಂದ ಇರುವ ಆಸ್ಪತ್ರೆಗಳು. ಹೌದು, ಪ್ರತಿಭಟನಾ ನಿರತ ಸಿಂಘು, ಟಿಕ್ರಿ, ಗಾಜಿಪುರ್‌, ಶಹಾಜಾನ್‌ಪುರ ಗಡಿಗಳಲ್ಲಿ ನೂರಾರು ಮೆಡಿಕಲ್ ಕ್ಯಾಂಪ್‌ಗಳಿವೆ. ಜೊತೆಗೆ ಎಲ್ಲಾ ಸೌಲಭ್ಯಗಳಿರುವ 24 ಗಂಟೆಗಳು ಕಾರ್ಯನಿರ್ವಹಿಸುವ ಆಸ್ಪತ್ರೆಗಳಿವೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ, ಕಳೆದ ನವೆಂಬರ್‌ ತಿಂಗಳಿನಿಂದ ಸಿಂಘು ಗಡಿಯಲ್ಲಿರುವ ಮಾರುತಿ ಮಾನವ್, ’ಇಲ್ಲಿ ಯಾವುದೇ ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ. ನಾನು ಇಲ್ಲಿಯೇ ಇದ್ದೇನೆ. ಜನರಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಮೆಡಿಕಲ್ ಕ್ಯಾಂಪ್‌ಗಳು ಇರುವುದರಿಂದ ಸಣ್ಣ ಪುಟ್ಟ ಜ್ವರ ಕಾಣಿಸಿಕೊಂಡ ತಕ್ಷಣವೇ ಚಿಕಿತ್ಸೆ ಪಡೆಯಲಾಗುತ್ತದೆ’ ಎಂದಿದ್ದಾರೆ.

’ಮೇ 26 ಕ್ಕೆ ಕರಾಳ ದಿನ ಆಚರಣೆಗೆ ಕರೆ ನೀಡಿರುವ ಹಿನ್ನೆಲೆ, ಕಳೆದೆರಡು ದಿನಗಳಿಂದ ರೈತರು ಗಡಿಯಲ್ಲಿ ಹೆಚ್ಚಾಗುತ್ತಿದ್ದಾರೆ. ಎರಡು ವೇದಿಕೆಗಳ ಬಳಿ ಮೊದಲು ಇದ್ದಷ್ಟೇ ಜನರು ಈಗಲೂ ಇದ್ದಾರೆ. 26 ರ ವೇಳೆಗೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಟ್ಯ್ರಾಲಿಗಳಿಗಿಂತ ಟೆಂಟ್‌ಗಳು ಹೆಚ್ಚಾಗಿವೆ’ ಎಂದಿದ್ದಾರೆ.

ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ಇನ್ನು “ರಾಜಸ್ಥಾನದ ಶಹಜಾನ್‌ಪುರ ಗಡಿಗೆ ರಾಜಸ್ಥಾನದಿಂದ ಸಾವಿರಾರು ರೈತರು ಕಪ್ಪು ದಿನ ಆಚರಣೆಗೆ ಪ್ರತಿಭಟನಾ ಸ್ಥಳಕ್ಕೆ ಬರುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದೆ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಇಲ್ಲಿಗೆ ಬಂದು ರೈತರಲ್ಲಿ ಹುಮ್ಮಸ್ಸು ತುಂಬಿದ್ದಾರೆ. ಈ ಬಾರಿಯ ಕಪ್ಪು ದಿನ ಆಚರಣೆಯನ್ನು ಸರ್ಕಾರ ನೆನಪು ಇಟ್ಟುಕೊಳ್ಳುತ್ತದೆ” ಎಂದು ಸ್ವರಾಜ್ ಇಂಡಿಯಾದ ರಾಜೀವ್ ಅವರು ನಾನುಗೌರಿ.ಕಾಂ ಜೊತೆಗೆ ಹಂಚಿಕೊಂಡಿದ್ದಾರೆ.

ಶಹಜಾನ್‌ಪುರ ಗಡಿಯಲ್ಲಿ ರೈತ ಮುಖಂಡರು

ಅತಿ ಹೆಚ್ಚು ವಿಸ್ತೀರ್ಣ ಹೊಂದಿರುವ ಟಿಕ್ರಿ ಗಡಿಯಲ್ಲಿಯೂ ರೈತರ ಸಂಖ್ಯೆ ಹೆಚ್ಚಾಗುತ್ತಿದೆ. ಭಾನುವಾರ ಪಂಜಾಬ್‌ನ ಸಾಗ್ರೂರ್‌ನಲ್ಲಿರುವ ಖಾನೌರಿ ಪ್ರತಿಭಟನಾ ಸ್ಥಳದಿಂದ ಹೊರಟ ಸಾವಿರಾರು ಜನರು ಸೇರಿಕೊಂಡಿದ್ದಾರೆ. ಟಿಕ್ರಿ ಗಡಿಯಲ್ಲಿನ ಪಕೋಡಾ ಚೌಕ್‌ನಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ಉಗ್ರಾಹನ್ ಸಂಘಟನೆಯ ಸಾವಿರಾರು ಮಂದಿ ಗಡಿಯನ್ನು ಸೇರಿಕೊಂಡಿದ್ದಾರೆ.

ಟಿಕ್ರಿಗಡಿಯಲ್ಲಿ ಜನ ನಾಯಕ್‌ ದೇವಿಲಾಲ್‌ ಕಿಸಾನ್‌ ಹೆಸರಿನ 40 ಬೆಡ್‌ಗಳಿರುವ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಇಂಡಿಯನ್‌ ನ್ಯಾಷನಲ್‌ ಲೋಕ್‌ ದಳ ವತಿಯಿಂದ ಆರಂಭವಾದ ಈ ಆಸ್ಪತ್ರೆ ಎರಡು ಜನರಲ್‌ ವಾರ್ಡ್‌, ಒಂದು ಮಹಿಳಾ ವಾರ್ಡ್‌ ಒಳಗೊಂಡಿದೆ.

ಪ್ರತಿಭಟನಾ ನಿರತ ಗಡಿಗಳು ಈಗ ಮತ್ತೆ ರೈತರಿಂದ ತುಂಬುತ್ತಿವೆ. ಹೋರಾಟಕ್ಕೆ 6 ತಿಂಗಳು ತುಂಬುತ್ತಿರುವ ಹಿನ್ನೆಲೆ ಸಂಯುಕ್ತ ಕಿಸಾನ್ ಮೋರ್ಚಾ ಕಪ್ಪು ದಿನಕ್ಕೆ ಕರೆ ನೀಡಿದೆ. ಸಾವಿರಾರು ರೈತರು ತಮ್ಮ ಹಳ್ಳಿಗಳಿಂದ ದೆಹಲಿಯ ಗಡಿಗಳನ್ನು ಸೇರಿಕೊಳ್ಳುತ್ತಿದ್ದಾರೆ.

ಕೊರೊನಾ ಲಾಕ್‌ಡೌನ್ ನೆಪದಲ್ಲಿ ರೈತರನ್ನು ಗಡಿಗಳಿಂದ ಎತ್ತಂಗಡಿ ಮಾಡಲು ಸರ್ಕಾರ ಪ್ರಯತ್ನ ಪಡುತ್ತಿದೆ. ಆದರೆ, ಗಡಿಗಳಲ್ಲಿ ಇಲ್ಲಿಯವರೆಗೆ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ರೈತರು ವಹಿಸಿರುವ ಮುನ್ನೆಚ್ಚರಿಕೆ ಮತ್ತು ದೇಶ-ವಿದೇಶಗಳ ರೈತರು ತೆಗೆದುಕೊಳ್ಳುತ್ತಿರುವ ಆರೈಕೆಯಿಂದಾಗಿ ಅಂತಹ ಕೇಸ್‌ಗಳು ಇಲ್ಲಿ ಕಂಡು ಬಂದಿಲ್ಲ ಎಂದು ವೈದ್ಯರು ಹೇಳಿದ್ದಾರೆ.


ಇದನ್ನೂ ಓದಿ: ಮೇ 26 ಕ್ಕೆ ಪ್ರತಿಭಟನಾ ಗಡಿಗಳಲ್ಲಿ ಕರಾಳ ದಿನ: ದೆಹಲಿಗೆ ಹೊರಟ ಅನ್ನದಾತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...