Homeಚಳವಳಿರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ಈ ಆರು ತಿಂಗಳಲ್ಲಿ ರೈತರು ಅನುಭವಿಸಿದ್ದು ಕೇವಲ ಸರ್ಕಾರದ ಕಿರುಕುಳವಲ್ಲ, ಜೊತೆಗೆ ಪ್ರಕೃತಿ ನೀಡಿದ ಸವಾಲುಗಳನ್ನು ಎದುರಿಸಿದ್ದಾರೆ.

- Advertisement -
- Advertisement -

“ರೈತ ಹೋರಾಟ…” ಕಳೆದ 6 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಅನ್ನದಾತರ ಹೋರಾಟದ ಕುರಿತು ಇಲ್ಲಿಯವರೆಗೆ ಸರ್ಕಾರ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಚುನಾವಣೆ ಹಿನ್ನೆಲೆ ಮಾತುಕತೆಗಳನ್ನು ನಿಲ್ಲಿಸಿದ್ದ ಕೇಂದ್ರ ಮತ್ತೆ ಮಾತುಕತೆಗೆ ಮುಂದಾಗಿಲ್ಲ. ಇವೆಲ್ಲದರ ನಡುವೆ ದೇಶದಲ್ಲೇ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರೂ ಗಡಿಗಳಲ್ಲಿ ಸೋಂಕಿನ ಸುಳಿವಿಲ್ಲ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನವೆಂವರ್ 26, 27 ರಂದು ದೆಹಲಿ ಚಲೋಗೆ ಪಂಜಾಬ್‌ ರೈತರ ನೇತೃತ್ವದಲ್ಲಿ ದೇಶದ ರೈತರು ಕರೆ ನೀಡಿದ್ದರು. ಅಂದಿನಿಂದ ದೆಹಲಿಯ ಗಡಿಗಳನ್ನು ಸುತ್ತುವರೆದಿರುವ ರೈತರು ಈ ಕರಾಳ ಕಾನೂನುಗಳ ರದ್ದತಿಗೆ ಆಗ್ರಹಿಸಿದ್ದಾರೆ. ಜೊತೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಜಾರಿ ಮಾಡಲು ಆಗ್ರಹಿಸಿದ್ದಾರೆ.

ಈ ಆರು ತಿಂಗಳಲ್ಲಿ ರೈತರು ಅನುಭವಿಸಿದ್ದು ಕೇವಲ ಸರ್ಕಾರದ ಕಿರುಕುಳವಲ್ಲ, ಜೊತೆಗೆ ಪ್ರಕೃತಿ ನೀಡಿದ ಸವಾಲುಗಳನ್ನು ಎದುರಿಸಿದ್ದಾರೆ. ತೀವ್ರ ಚಳಿ, ಮಳೆ, ಬಿಸಿಲು ಅದರ ಜೊತೆಗೆ ಕೊರೊನಾ ಸಾಂಕ್ರಾಮಿಕ ರೋಗ ಕೂಡ. ಇಡೀ ದೇಶದಲ್ಲಿ ಕೊರೊನಾ ಸೋಂಕು ಹರಡಿರುವ ಮಧ್ಯೆಯೇ ಈ ಸಾವಿರಾರು ಮಂದಿ ಒಂದೆಡೆ ಇರುವ ಸ್ಥಳದಲ್ಲಿ ಸೋಂಕು ಇಲ್ಲವೆ ಎಂಬ ಪ್ರಶ್ನೆ ಸಹಜವಾಗಿಯೇ ಹುಟ್ಟುತ್ತದೆ.

ಇದನ್ನೂ ಓದಿ: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ – ಫೇಕ್‌, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ’

ಆದರೆ, ಅಚ್ಚರಿಯೆಂದರೆ ಇಲ್ಲಿ ಕೊರೊನಾ ಸೋಂಕಿತ ಪ್ರಕರನಗಳು ವರದಿಯಾಗಿಲ್ಲ. ಇದಕ್ಕೆ ಮೂಲ ಕಾರಣ ಇಲ್ಲಿ ಪ್ರತಿಭಟನೆ ಆರಂಭವಾದಾಗಿನಿಂದ ಇರುವ ಆಸ್ಪತ್ರೆಗಳು. ಹೌದು, ಪ್ರತಿಭಟನಾ ನಿರತ ಸಿಂಘು, ಟಿಕ್ರಿ, ಗಾಜಿಪುರ್‌, ಶಹಾಜಾನ್‌ಪುರ ಗಡಿಗಳಲ್ಲಿ ನೂರಾರು ಮೆಡಿಕಲ್ ಕ್ಯಾಂಪ್‌ಗಳಿವೆ. ಜೊತೆಗೆ ಎಲ್ಲಾ ಸೌಲಭ್ಯಗಳಿರುವ 24 ಗಂಟೆಗಳು ಕಾರ್ಯನಿರ್ವಹಿಸುವ ಆಸ್ಪತ್ರೆಗಳಿವೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ, ಕಳೆದ ನವೆಂಬರ್‌ ತಿಂಗಳಿನಿಂದ ಸಿಂಘು ಗಡಿಯಲ್ಲಿರುವ ಮಾರುತಿ ಮಾನವ್, ’ಇಲ್ಲಿ ಯಾವುದೇ ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ. ನಾನು ಇಲ್ಲಿಯೇ ಇದ್ದೇನೆ. ಜನರಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಮೆಡಿಕಲ್ ಕ್ಯಾಂಪ್‌ಗಳು ಇರುವುದರಿಂದ ಸಣ್ಣ ಪುಟ್ಟ ಜ್ವರ ಕಾಣಿಸಿಕೊಂಡ ತಕ್ಷಣವೇ ಚಿಕಿತ್ಸೆ ಪಡೆಯಲಾಗುತ್ತದೆ’ ಎಂದಿದ್ದಾರೆ.

’ಮೇ 26 ಕ್ಕೆ ಕರಾಳ ದಿನ ಆಚರಣೆಗೆ ಕರೆ ನೀಡಿರುವ ಹಿನ್ನೆಲೆ, ಕಳೆದೆರಡು ದಿನಗಳಿಂದ ರೈತರು ಗಡಿಯಲ್ಲಿ ಹೆಚ್ಚಾಗುತ್ತಿದ್ದಾರೆ. ಎರಡು ವೇದಿಕೆಗಳ ಬಳಿ ಮೊದಲು ಇದ್ದಷ್ಟೇ ಜನರು ಈಗಲೂ ಇದ್ದಾರೆ. 26 ರ ವೇಳೆಗೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಟ್ಯ್ರಾಲಿಗಳಿಗಿಂತ ಟೆಂಟ್‌ಗಳು ಹೆಚ್ಚಾಗಿವೆ’ ಎಂದಿದ್ದಾರೆ.

ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ಇನ್ನು “ರಾಜಸ್ಥಾನದ ಶಹಜಾನ್‌ಪುರ ಗಡಿಗೆ ರಾಜಸ್ಥಾನದಿಂದ ಸಾವಿರಾರು ರೈತರು ಕಪ್ಪು ದಿನ ಆಚರಣೆಗೆ ಪ್ರತಿಭಟನಾ ಸ್ಥಳಕ್ಕೆ ಬರುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದೆ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಇಲ್ಲಿಗೆ ಬಂದು ರೈತರಲ್ಲಿ ಹುಮ್ಮಸ್ಸು ತುಂಬಿದ್ದಾರೆ. ಈ ಬಾರಿಯ ಕಪ್ಪು ದಿನ ಆಚರಣೆಯನ್ನು ಸರ್ಕಾರ ನೆನಪು ಇಟ್ಟುಕೊಳ್ಳುತ್ತದೆ” ಎಂದು ಸ್ವರಾಜ್ ಇಂಡಿಯಾದ ರಾಜೀವ್ ಅವರು ನಾನುಗೌರಿ.ಕಾಂ ಜೊತೆಗೆ ಹಂಚಿಕೊಂಡಿದ್ದಾರೆ.

ಶಹಜಾನ್‌ಪುರ ಗಡಿಯಲ್ಲಿ ರೈತ ಮುಖಂಡರು

ಅತಿ ಹೆಚ್ಚು ವಿಸ್ತೀರ್ಣ ಹೊಂದಿರುವ ಟಿಕ್ರಿ ಗಡಿಯಲ್ಲಿಯೂ ರೈತರ ಸಂಖ್ಯೆ ಹೆಚ್ಚಾಗುತ್ತಿದೆ. ಭಾನುವಾರ ಪಂಜಾಬ್‌ನ ಸಾಗ್ರೂರ್‌ನಲ್ಲಿರುವ ಖಾನೌರಿ ಪ್ರತಿಭಟನಾ ಸ್ಥಳದಿಂದ ಹೊರಟ ಸಾವಿರಾರು ಜನರು ಸೇರಿಕೊಂಡಿದ್ದಾರೆ. ಟಿಕ್ರಿ ಗಡಿಯಲ್ಲಿನ ಪಕೋಡಾ ಚೌಕ್‌ನಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ಉಗ್ರಾಹನ್ ಸಂಘಟನೆಯ ಸಾವಿರಾರು ಮಂದಿ ಗಡಿಯನ್ನು ಸೇರಿಕೊಂಡಿದ್ದಾರೆ.

ಟಿಕ್ರಿಗಡಿಯಲ್ಲಿ ಜನ ನಾಯಕ್‌ ದೇವಿಲಾಲ್‌ ಕಿಸಾನ್‌ ಹೆಸರಿನ 40 ಬೆಡ್‌ಗಳಿರುವ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಇಂಡಿಯನ್‌ ನ್ಯಾಷನಲ್‌ ಲೋಕ್‌ ದಳ ವತಿಯಿಂದ ಆರಂಭವಾದ ಈ ಆಸ್ಪತ್ರೆ ಎರಡು ಜನರಲ್‌ ವಾರ್ಡ್‌, ಒಂದು ಮಹಿಳಾ ವಾರ್ಡ್‌ ಒಳಗೊಂಡಿದೆ.

ಪ್ರತಿಭಟನಾ ನಿರತ ಗಡಿಗಳು ಈಗ ಮತ್ತೆ ರೈತರಿಂದ ತುಂಬುತ್ತಿವೆ. ಹೋರಾಟಕ್ಕೆ 6 ತಿಂಗಳು ತುಂಬುತ್ತಿರುವ ಹಿನ್ನೆಲೆ ಸಂಯುಕ್ತ ಕಿಸಾನ್ ಮೋರ್ಚಾ ಕಪ್ಪು ದಿನಕ್ಕೆ ಕರೆ ನೀಡಿದೆ. ಸಾವಿರಾರು ರೈತರು ತಮ್ಮ ಹಳ್ಳಿಗಳಿಂದ ದೆಹಲಿಯ ಗಡಿಗಳನ್ನು ಸೇರಿಕೊಳ್ಳುತ್ತಿದ್ದಾರೆ.

ಕೊರೊನಾ ಲಾಕ್‌ಡೌನ್ ನೆಪದಲ್ಲಿ ರೈತರನ್ನು ಗಡಿಗಳಿಂದ ಎತ್ತಂಗಡಿ ಮಾಡಲು ಸರ್ಕಾರ ಪ್ರಯತ್ನ ಪಡುತ್ತಿದೆ. ಆದರೆ, ಗಡಿಗಳಲ್ಲಿ ಇಲ್ಲಿಯವರೆಗೆ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ರೈತರು ವಹಿಸಿರುವ ಮುನ್ನೆಚ್ಚರಿಕೆ ಮತ್ತು ದೇಶ-ವಿದೇಶಗಳ ರೈತರು ತೆಗೆದುಕೊಳ್ಳುತ್ತಿರುವ ಆರೈಕೆಯಿಂದಾಗಿ ಅಂತಹ ಕೇಸ್‌ಗಳು ಇಲ್ಲಿ ಕಂಡು ಬಂದಿಲ್ಲ ಎಂದು ವೈದ್ಯರು ಹೇಳಿದ್ದಾರೆ.


ಇದನ್ನೂ ಓದಿ: ಮೇ 26 ಕ್ಕೆ ಪ್ರತಿಭಟನಾ ಗಡಿಗಳಲ್ಲಿ ಕರಾಳ ದಿನ: ದೆಹಲಿಗೆ ಹೊರಟ ಅನ್ನದಾತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...