Homeಕರ್ನಾಟಕಪಂಚರಾಜ್ಯ ಚುನಾವಣೆ ಬದಲು ಕೊರೊನಾ ಕಡೆ ಗಮನ ಕೊಟ್ಟಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ- ಮಾಜಿ ಪ್ರಧಾನಿ...

ಪಂಚರಾಜ್ಯ ಚುನಾವಣೆ ಬದಲು ಕೊರೊನಾ ಕಡೆ ಗಮನ ಕೊಟ್ಟಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ- ಮಾಜಿ ಪ್ರಧಾನಿ ದೇವೇಗೌಡ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಪಂಚರಾಜ್ಯ ಚುನಾವಣೆಗೆ ಕೊಟ್ಟ ಗಮನವನ್ನು ಕೊರೊನಾ ನಿಯಂತ್ರಣಕ್ಕೆ ನೀಡಿದ್ದರೇ ದೇಶದಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿಯವರು ಪಂಚರಾಜ್ಯಗಳ ಚುನಾವಣೆ ಕಡೆ ಹೆಚ್ಚು ಗಮನ ಕೊಟ್ಟರು. ಚುನಾವಣೆಗೆ ಕೊಟ್ಟಷ್ಟು ಕೊರೊನಾ ಬಗ್ಗೆ ಗಮನ ಕೊಡಲಿಲ್ಲ. ಚುನಾವಣೆ ಬದಲು ಕೊರೊನಾ ಕಡೆ ಗಮನ ಕೊಟ್ಟಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು, ಪ್ರಚಾರ ಸಭೆ, ಸಮಾರಂಭಗಳಿಗೆ ಹೆಚ್ಚು ಆದ್ಯತೆ ನೀಡಿದರು. ಚುನಾವಣೆ ಗಮನದಲ್ಲಿ ಸೋಂಕು ನಿರ್ವಹಣೆ ಮರೆತರು ಎಂದು ಪ್ರಧಾನಿ ಮೋದಿ ವಿರುದ್ದ ಕಿಡಿ ಕಾರಿದ್ದಾರೆ.

ಜಾತ್ಯಾತೀತ ಜನತಾದಳದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ’ಕುಮಾರಸ್ವಾಮಿ ಸರ್ಕಾರದ ವೈಫಲ್ಯದ ಬಗ್ಗೆ ಮಾತನಾಡುತ್ತಿದ್ದಾರೆ. ಟ್ವಿಟರ್ ಮೂಲಕ ಸಲಹೆ ನೀಡುವ ಕೆಲಸ ಮಾಡ್ತಿದ್ದಾರೆ. ಅವರೇ ಇಡೀ ರಾಜ್ಯದ ಕೆಲಸ ಮುಂದುವರಿಸುತ್ತಾರೆ’ ಎಂದಿದ್ದಾರೆ.

ಇದನ್ನೂ ಓದಿ: ಮೃತಪಟ್ಟ ಎಲ್ಲಾ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ 50 ಲಕ್ಷ ರೂ. ಪರಿಹಾರ ನೀಡಿ- ಕುಮಾರಸ್ವಾಮಿ

“ಕೊರೊನಾ ನಿರ್ವಹಣೆ ವಿಚಾರದಲ್ಲಿ ಪ್ರಧಾನಿ‌ ಮೋದಿಯವರಿಗೆ ಪತ್ರ ಬರೆದು ಸಲಹೆ ಕೊಟ್ಟಿದ್ದೇನೆ. ನಾನು ಕೊಟ್ಟಿದ್ದ 12 ಸಲಹೆಗಳಲ್ಲಿ 6 ಸಲಹೆಗಳನ್ನು ಕಾರ್ಯಗತ ಮಾಡುತ್ತಿದ್ದಾರೆ. ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಸೋಂಕು ತೀವ್ರವಾಗಿ ಹೆಚ್ಚಳ ಆಗಿದೆ. ಜೊತೆಗೆ ಬ್ಲಾಕ್ ಮತ್ತು ವೈಟ್ ಫಂಗಸ್ ಬಗ್ಗೆ ಆತಂಕ ಹುಟ್ಟುಕೊಂಡಿದೆ. ಇದರಿಂದ ದೇಶದ ಜನ ಸಮಸ್ಯೆಗೆ ಸಿಲುಕಿದ್ದಾರೆ. ಸರ್ಕಾರ ತಕ್ಷಣ ಇದನ್ನ ಸರಿಪಡಿಸುವ ಕೆಲಸ  ಮಾಡಬೇಕು‌ ಎಂದು ಹೇಳಿದ್ದಾರೆ.

’ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಕೇಂದ್ರದಿಂದ ಲಸಿಕೆ, ಔಷಧಿ, ವೆಂಟಿಲೇಟರ್ , ಆಕ್ಸಿಜನ್ ನೀಡುವುದರಲ್ಲಿ ಮಲತಾಯಿ ಧೋರಣೆ ತೋರಿದೆ. ಈ ವಿಚಾರದ ಈ ಬಗ್ಗೆ ನಾನು ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಹಣಕಾಸು ಹಂಚಿಕೆಯಲ್ಲಿಯೂ ನಮಗೆ ಅನ್ಯಾಯ ಆಗಿದೆ. ಚಿಕ್ಕ ರಾಜ್ಯಗಳಿಗೆ ಹೆಚ್ಚು ಹಣ ಬಿಡುಗಡೆ ಮಾಡ್ತಾರೆ. ನಮಗೆ ಕಡಿಮೆ ಹಣ ಬಿಡುಗಡೆ ಮಾಡಿದ್ದಾರೆ’ ಎಂದಿದ್ದಾರೆ.


ಇದನ್ನೂ ಓದಿ: ಟಿಎಂಸಿ ನಾಯಕರ ಗೃಹಬಂಧನಕ್ಕೆ ಅವಕಾಶ: ಹೈಕೋರ್ಟ್ ಆದೇಶ ವಿರೋಧಿಸಿ ಸುಪ್ರೀಂಗೆ ಹೋದ ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...