Homeಮುಖಪುಟಕೊರೊನಾ ನಡುವೆಯೂ ನಿಲ್ಲದ ಗೋ ರಕ್ಷಕರ ಗೂಂಡಾ ವರ್ತನೆ : ಉತ್ತರ ಪ್ರದೇಶದಲ್ಲಿ ಮುಸ್ಲೀಂ ಯುವಕನ...

ಕೊರೊನಾ ನಡುವೆಯೂ ನಿಲ್ಲದ ಗೋ ರಕ್ಷಕರ ಗೂಂಡಾ ವರ್ತನೆ : ಉತ್ತರ ಪ್ರದೇಶದಲ್ಲಿ ಮುಸ್ಲೀಂ ಯುವಕನ ಮೇಲೆ ಮನಸೋ ಇಚ್ಛೆ ಹಲ್ಲೆ

ಉತ್ತರ ಪ್ರದೇಶದಂತಹ ರಾಜ್ಯದಲ್ಲಿ ಗೋ ರಕ್ಷಣೆಯ ಹೆಸರಿನಲ್ಲಿ ನಡೆಸುವ ದೌರ್ಜನ್ಯಗಳ ವಿರುದ್ಧ ಪೊಲೀಸರಾಗಲಿ, ಸರ್ಕಾರವಾಗಲಿ ಕ್ರಮ ಕೈಗೊಳ್ಳುವುದಿಲ್ಲ. ಬದಲಾಗಿ ಸರ್ಕಾರವೇ ಗೋ ರಕ್ಷಕರ ರಕ್ಷಣೆಗೆ ನಿಲ್ಲುತ್ತದೆ.

- Advertisement -
- Advertisement -

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಗೋ ರಕ್ಷಕರು ಮುಸ್ಲೀಂ ಯುವಕನ ಮೇಲೆ ಮನಸೋ ಇಚ್ಛೆ ದಾಳಿ ಮಾಡಿದ್ದಾರೆ. ದೇಶದಲ್ಲಿ ಕೋವಿಡ್‌ ಸಾಂಕ್ರಾಮಿಕ ತಾಂಡವವಾಡುತ್ತಿರುವ ಈ ಹೊತ್ತಿನಲ್ಲೂ ಗೋರಕ್ಷಕರ ಅಮಾನವೀಯ ಹಲ್ಲೆಗಳಿಗೆ ಉತ್ತರ ಪ್ರದೇಶ ಸಾಕ್ಷಿಯಾಗುತ್ತಿದೆ.

ಮೇ 23 (ಭಾನುವಾರ) ರಂದು ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಭಾರತೀಯ ಗೋ ರಕ್ಷಣಾ ವಾಹಿನಿ ಎಂಬ ಹಿಂದೂಪರ ಸಂಘಟನೆಗೆ ಸೇರಿದ ಮನೋಜ್‌ ಠಾಕೂರ್‌ ಎಂಬ ವ್ಯಕ್ತಿಯು ಶಕೀರ್‌ ಎಂಬ ಮುಸ್ಲೀಂ ಯುವಕನ ಮೇಲೆ ಹಾಡಹಗಲೇ ಹಲ್ಲೆ ನಡೆಸಿದ್ದಾನೆ. ಬಲವಾದ ಕೋಲಿನಿಂದ ಸತತವಾಗಿ ಶಕೀರ್‌ರನ್ನು ತೀವ್ರವಾಗಿ ಥಳಿಸಿದ್ದಾನೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗದೆ. ಶಕೀರ್‌ ಎಂದು ಗುರುತಿಸಲಾಗಿರುವ ವ್ಯಕ್ತಿಯನ್ನು ಮನೋಜ್‌ ಠಾಕೂರ್‌ ಥಳಿಸುತ್ತಿದ್ದರೇ, ಇತರ ಕೆಲವು ಮಂದಿ ಕೃತ್ಯಕ್ಕೆ ಬೆಂಬಲ ನೀಡುತ್ತಿರುವ ವಿಡಿಯೋ ನೋಡಿ, ಘಟನೆಯ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಎರಡು ಸಮುದಾಯದ ನಡುವೆ ಘರ್ಷಣೆ: 2000 ಜನರ ಮೇಲೆ ಎಫ್‌ಐಆರ್‌‌!

ವೈರಲ್‌ ಆಗಿರುವ ವಿಡಿಯೋದಲ್ಲಿ ಮನೋಜ್‌ ಠಾಕೂರ್‌ ಎಂದು ಗುರುತಿಸಲಾದ ವ್ಯಕ್ತಿ ಶಕೀರ್‌ ಎಂಬ ವ್ಯಕ್ತಿಯನ್ನು ನಿನ್ನ ವಾಹನದಲ್ಲಿ ಏನಿದೆ..? ದಾಖಲೆ ಪತ್ರಗಳು, ಬಿಲ್‌ ಎಲ್ಲಿ.? ಎಂದು ಕೇಳುತ್ತಿರುವುದು ಸ್ಪಷ್ಟವಾಗಿದೆ. ಇದಕ್ಕೆ ಶಕೀರ್‌ ನನ್ನನ್ನು ಥಳಿಸುವ ಬದಲು ನೀವು ಯಾಕೆ ದಾಖಲೆಗಳನ್ನು ಪರಿಶೀಲಿಸಬಾರದು ಎಂದು ಕೇಳಿದ್ದಾನೆ.

ವಿಡಿಯೊ ವೈರಲ್ ಆಗಿ ಘಟನೆ ಗಮನಕ್ಕೆ ಬಂದ ಬಳಿಕ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ. ಗೋ ರಕ್ಷಕರಿಂದ ಥಳಿತಕ್ಕೆ ಸಂಬಂಧಿಸಿದಂತೆ ಇದುವರೆಗೆ ಎರಡು ಎಫ್‌ಐಆರ್‌ ಗಳು ದಾಖಲಾಗಿವೆ. ಒಂದು ಶಕೀರ್‌ರನ್ನು ಥಳಿಸಿದ ಸಂಬಂಧ ಮನೋಜ್‌ ಠಾಕೂರ್‌ ಮೇಲಾದರೆ ಇನ್ನೊಂದು ಮಾಸ್ಕ್‌ ಹಾಕಿಲ್ಲವೆಂಬ ಕಾರಣಕ್ಕೆ ಶಕೀರ್‌ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಈ ಸಂಬಂಧ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಕತ್ಗಾರ್ ಠಾಣಾ ಅಧಿಕಾರಿ (SHO) ಕ್ವಿಂಟ್‌ ಗೆ ಮೇ 23ರ ಮಧ್ಯರಾತ್ರಿ ಪ್ರತಿಕ್ರಿಯಿಸಿದ್ದಾರೆ.

ಮನೋಜ್‌ ಠಾಕೂರ್‌ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಇತರ ಐವರನ್ನು ಸಹ ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ಉಳಿದ ಐವರು ಆರೋಪಿಗಳೆಂದರೆ ಪ್ರದೀಪ್‌, ಬಾಬು, ಗುಲ್ಶನ್‌ ಅಲಿಯಾಸ್‌ ಗುಲ್ಲಿ, ಸುಮಿತ್‌, ವಿಜಯ್‌. ಇನ್ನು ಹೆಸರಿಸಲಾಗದ ನಾಲ್ಕರಿಂದ ಐವರನ್ನು ಎಫ್‌ಐಆರ್‌ ನಲ್ಲಿ ಸೇರಿಸಲಾಗಿದೆ. ಇವರ ವಿರುದ್ಧ ಐಪಿಸಿ ಸೆಕ್ಷನ್‌ 147(ದಂಗೆ), 148(ಮಾರಕಾಸ್ತ್ರಗಳ ಬಳಕೆ), 148(ಅಕ್ರಮ ಗುಂಪು), 389(ಸುಲಿಗೆ), 506(ಅಪರಾಧಿಕ ಕೃತ್ಯಕ್ಕೆ ಪ್ರಚೋದನೆ) ಗಂಭೀರ ಪ್ರಕರಣಗಳಡಿಯಲ್ಲಿ ಪ್ರಕರಣ ದಾಖಲಿಸಿರುವುದರಿಂದ ಘಟನೆಯ ತೀವ್ರತೆಯನ್ನು ಅರ್ಥಮಾಡಿಕೊಳ್ಳಬಹುದು.

ಇದನ್ನೂ ಓದಿ: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ – ಫೇಕ್‌, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ’

ಪ್ರಕರಣದ ಪ್ರತ್ಯಕ್ಷ ಸಾಕ್ಷಿ ಮತ್ತು ದೂರುದಾರ ಜುನೈದ್‌ ಹೇಳುವಂತೆ ”ಮೊರಾದಾಬಾದ್‌ಗೆ ಬರುವ ದಾರಿಯಲ್ಲಿ ಅನೇಕರು ಗುಂಪಿನಲ್ಲಿ ವ್ಯಕ್ತಿಯನ್ನು ಥಳಿಸುತ್ತಿರುವುದನ್ನು ನೋಡಿದೆ. ಅಲ್ಲಿರುವವರನ್ನು ಈ ಸಂಬಂಧ ವಿಚಾರಿಸಿದಾಗ ವಿಷಯ ತಿಳಿಯಿತು. ಥಳಿತಕ್ಕೆ ಒಳಗಾದ ಶಕೀರ್‌ 50 ಕೆ.ಜಿ. ಯಷ್ಟು ಎಮ್ಮೆಯ ಮಾಂಸವನ್ನು ಕಾನೂನು ಬದ್ಧವಾಗಿ ಸಾಗಿಸುತ್ತಿದ್ದಾಗ ಕೆಲವು ವ್ಯಕ್ತಿಗಳು ಅವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ನಾನು ಅಲ್ಲಿಗೆ ಬಂದಾಗ ಶಕೀರ್ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣವೇ ಆಸ್ಪತ್ರೆಗೆ ಕಳುಹಿಸಿ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಿಸಿದ್ದೇನೆ.” ಎಂದಿದ್ದಾರೆ. ಜುನೈದ್‌ ಸಂತ್ರಸ್ತ ಶಕೀರ್‌ರ ದೂರದ ಸಂಬಂಧಿಯೂ ಹೌದು.

ಶಕೀರ್‌ ತನ್ನ ಮೇಲೆ ಕೋವಿಡ್‌ ನಿಯಮಾವಳಿಯನ್ನು ಪಾಲಿಸದ ಕಾರಣಕ್ಕೆ ಕೆಲವು ಪ್ರಕರಣಗಳು ದಾಖಾಲಾಗಿದೆಯೆಂದು ತಿಳಿದಿದ್ದರೂ ಪ್ರಕರಣಗಳ ವಿವರಗಳು ತಿಳಿದಿಲ್ಲ. ಕ್ವಿಂಟ್‌ ಈ ಸಂಬಂಧ ಶಕೀರ್‌ ಅವರನ್ನು ದೂರವಾಣಿಯ ಮೂಲಕ ಸಂಪರ್ಕಿಸಲು ಪ್ರಯತ್ನಿಸಿತು. ಆದರೆ ಶಕೀರ್‌ ತಾನು ಸದ್ಯ ಮಾತನಾಡುವ ಸ್ಥಿತಿಯಲ್ಲಿ ಇಲ್ಲ, ನೀವು ನನ್ನನ್ನು ಹೇಗೆ ಥಳಿಸಲಾಯಿತೆಂದು ನೋಡಿದ್ದೀರಲ್ಲವೇ ? ವಿಡಿಯೋ ನೋಡಿದ್ದೀರಲ್ಲವೆ ಎಂದು ಕರೆ ಸ್ಥಗಿತಗೊಳಿಸಿದ್ದಾರೆ.

ದೂರುದಾರ ಜುನೈದ್‌ ಅವರನ್ನು ಈ ಸಂಬಂಧ ಸಂಪರ್ಕಿಸಿದಾಗ, ’ಶಕೀರ್‌ ಇನ್ನು ಚೇತರಿಸಿಕೊಳ್ಳುತ್ತಿದ್ದಾನೆ. ಮಾನಸಿಕ ಆಘಾತದಿಂದ ಆತ ಇನ್ನೂ ಹೊರಬರುವುದು ಸಾಧ್ಯವಾಗಿಲ್ಲ’ ಎಂದು ಉತ್ತರಿಸಿದ್ದಾರೆ.

ಗೋ ಸಂರಕ್ಷಣೆಗಾಗಿ ಕೆಲಸ ಮಾಡುತ್ತಿರುವುದಾಗಿ ಹೇಳುವ ಆರೋಪಿ ಮನೋಜ್‌ ಠಾಕೂರ್‌, “ಕೆಲವು ದಿನಗಳ ಹಿಂದೆ ನನ್ನ ಮೇಲೆ ಅನೇಕರು ದಾಳಿ ಮಾಡಿದರು. ಆದರೆ ಅವರ ಮೇಲೆ ಯಾವ ಕ್ರಮವೂ ಆಗಿಲ್ಲ. ಮೊನ್ನೆ ಕೆಲ ಕಟುಕರು ನನ್ನ ಮೇಲೆ ಹಲ್ಲೆ ನಡೆಸಿದರು, ಆದರೆ ಅದಕ್ಕೆ ಯಾವುದೇ ಕ್ರಮವಿಲ್ಲ. ಈಗ ಪೊಲೀಸರು ನಾನು ಹೇಳುವುದನ್ನು ಕೇಳಿಸಿಕೊಳ್ಳಲು ಸಿದ್ಧರಿಲ್ಲ. ನನಗೆ ಸರ್ಕಾರ ಅನುಮತಿ ನೀಡಿದರೆ ನಾನು ಪ್ರತಿಯೊಬ್ಬ ದನ ಕಡಿಯುವವನನ್ನು ಹಿಡಿದುಕೊಡುತ್ತೇನೆ” ಎನ್ನುತ್ತಾರೆ.

ವ್ಯಕ್ತಿಯನ್ನು ಥಳಿಸುವ ಬದಲು ಪೊಲೀಸರಿಗೆ ಒಪ್ಪಿಸಬಹುದಿತ್ತಿಲ್ಲ ಎಂದರೆ ಅವರು ಮತ್ತೆ ನನ್ನ ಮೇಲೆ ದಾಳಿ ಮಾಡುತ್ತಿದ್ದರು. ತನ್ನನ್ನು ರಕ್ಷಿಸಿಕೊಳ್ಳಲು ವ್ಯಕ್ತಿಯನ್ನು ಥಳಿಸಿರುವುದಾಗಿ ಹೇಳುತ್ತಾರೆ. ಆದರೆ ಈ ಸಂಬಂಧ ಯಾವುದೇ ಸಾಕ್ಷಿಯಾಗಲಿ, ಮಾಹಿತಿಯಾಗಲಿ ಇದುವರೆಗೆ ಕಂಡುಬಂದಿಲ್ಲ.

ಇದನ್ನೂ ಓದಿ: ಕರ್ಫ್ಯೂ ಉಲ್ಲಂಘನೆ ನೆಪದಲ್ಲಿ ಯುವಕನ ಕೊಲೆ ಆರೋಪ: ಒಬ್ಬರ ಬಂಧನ, ಇಬ್ಬರು ಪೊಲೀಸರು ನಾಪತ್ತೆ

ಇದೇ ಸಂದರ್ಭದಲ್ಲಿ ಮನೋಜ್‌ ಠಾಕುರ್‌ ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನುದ್ಧೇಶಿಸಿ ಗೋ ಸಂರಕ್ಷಣೆಗಾಗಿ ಹೋರಾಡುತ್ತಿರುವವರನ್ನು ಸರ್ಕಾರ ಕೊಲ್ಲಲು ಮುಂದಾಗುತ್ತಿದೆ ಎಂದು ಸರ್ಕಾರದ ಮೇಲೆ ಆರೋಪವನ್ನು ಮಾಡಿದ್ದಾರೆ.

ಭಾರತೀಯ ಗೋ ರಕ್ಷಣಾ ವಾಹಿನಿ ಸಂಘಟನೆಯ ಮೇಲೆ ಮಾಂಸ ಸಾಗಿಸುವ ವಾಹನಗಳಿಂದ ಹಣ ವಸೂಲಿ ಮಾಡುವ ಆರೋಪಗಳು ಕೇಳಿಬಂದಿವೆ. ಮೊರಾದಾಬಾದ್‌ ಘಟನೆಯಲ್ಲಿ ವಾಹಿನಿಯ ಪಾತ್ರದ ಕುರಿತು ಕೇಳಿದಾಗ ಸಂಘಟನೆ ಅಧ್ಯಕ್ಷರು, ಸಂಘಟನೆಗೂ ಇದಕ್ಕೂ ಸಂಬಂಧವಿಲ್ಲವೆಂದು ಉತ್ತರಿಸಿದ್ದಾರೆ.

“ಮನೋಜ್‌ ಠಾಕೂರ್‌ ಅವರನ್ನು ಆರು ತಿಂಗಳ ಹಿಂದೆಯೇ ಸಂಘಟನೆಯ ಉಪಾಧ್ಯಕ್ಷ ಹುದ್ದೆಯಿಂದ ಹಾಗೂ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ. ಠಾಕೂರ್‌ ಈ ಹಿಂದೆ ಅನೇಕ ಹಣ ವಸೂಲಿ ದಂಧೆಯಲ್ಲಿ ತೊಡಗಿದ್ದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಅನೇಕ ವಿಚಾರಗಳು ಸಂಘಟನೆಯ ಗಮನಕ್ಕೂ ಬಂದಿತ್ತು. ಹಾಗಾಗಿ ಆ ವ್ಯಕ್ತಿಯನ್ನು ಸಂಘಟನೆಯಿಂದ ವಜಾ ಗೊಳಿಸಲಾಗಿದೆ. ಈಗ ಸಂಘಟನೆಗೆ ಈ ಪ್ರಕರಣದ ಆರೋಪಿಗೂ ಯಾವ ಸಂಬಂಧವೂ ಇಲ್ಲ. ನಾವು ಈ ಸಂಬಂಧ ಪ್ರತ್ಯೇಕ ಸುದ್ದಿಗೋಷ್ಠಿ ನಡೆಸಬಹುದು. ನಾವು ಅನೇಕ ಸಾರಿ ಈ ವ್ಯಕ್ತಿಗೆ ಎಚ್ಚರಿಕೆಯನ್ನು ನೀಡುತ್ತಲೇ ಬಂದಿದ್ದೇವೆ” ಎಂದು ಭಾರತೀಯ ಗೋ ರಕ್ಷಣಾ ವಾಹಿನಿಯ ರಾಷ್ಟ್ರೀಯ ಅಧ್ಯಕ್ಷ ರಾಕೇಶ್‌ ಸಿಂಗ್‌ ಸರಿಹಾರ್‌ ಪ್ರಕರಣದ ಕುರಿತು ಕ್ವಿಂಟ್‌ ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಠಾಕೂರ್‌, ಮೊರಾದಾಬಾದ್‌ ಪ್ರದೇಶದಲ್ಲಿನ ಅನೇಕ ಮಾಂಸೋದ್ಯಮಿಗಳು ಮತ್ತು ಕಸಾಯಿಖಾನೆ ನಡೆಸುವವರಿಗೆ ಕಂಟಕಪ್ರಾಯನಾಗಿ ಪರಿಣಮಿಸಿದ್ದ. ಇಷ್ಟು ವರ್ಷ ಸುಳ್ಳು ಆರೋಪ ಮತ್ತು ಬೆದರಿಕೆಯಿಂದ ಹಣ ವಸೂಲಿ ಮಾಡುವುದನ್ನು ಉದ್ಯೋಗ ಮಾಡಿಕೊಂಡು ಬಂದಿದ್ದ ಎಂಬ ಆರೋಪಗಳಿವೆ.

ದೇಶದಲ್ಲಿ ಗೋ ರಕ್ಷಣೆ ಹೆಸರಿನಲ್ಲಿ ದಲಿತರು, ಮುಸ್ಲಿಂ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಕೆಲವು ಕಡೆ ವರದಿಯಾಗುತ್ತಿವೆ. ಇನ್ನೂ ಕೆಲವು ಕಡೆ ವರದಿಯಾಗುತ್ತಿಲ್ಲ. ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಗೋ ರಕ್ಷಣೆಯ ಹೆಸರಿನಲ್ಲಿ ನಡೆಸುವ ದೌರ್ಜನ್ಯಗಳ ವಿರುದ್ಧ ಪೊಲೀಸ್‌ ಇಲಾಖೆಯಾಗಲಿ ಸರ್ಕಾರವಾಗಲಿ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಬದಲಾಗಿ ಸರ್ಕಾರವೇ ಗೋ ರಕ್ಷಕರ ರಕ್ಷಣೆಗೆ ನಿಂತು ಬೆಂಬಲ ನೀಡುತ್ತದೆ. ಅನೇಕ ಸಂಘಟನೆಗಳು ಗೋ ರಕ್ಷಣೆಯ ಹೆಸರಿನಲ್ಲಿ ದೇಶಾದ್ಯಂತ ಸುಲಿಗೆಯನ್ನೇ ವ್ಯವಹಾರವನ್ನಾಗಿಸಿಕೊಂಡಿದ್ದಾರೆ.

ಉತ್ತರ ಪ್ರದೇಶದ ಮೊರಾದಾಬಾದ್‌ ನಲ್ಲಿ ನಡೆದಿರುವುದು ಕೇವಲ ಒಂದು ಘಟನೆಯಷ್ಟೆ. ಪ್ರತಿನಿತ್ಯ ದೇಶಾದ್ಯಂತ ಮಾಂಸೋದ್ಯಮದ ಮೇಲೆ ಜೀವನವನ್ನು ಆಧರಿಸಿರುವ ಸಾವಿರಾರು ಜನರು ಗೋ ರಕ್ಷಕರ ಭಯದಿಂದ ಜೀವವನ್ನು ಕೈಯಲ್ಲಿ ಹಿಡಿದು ಜೀವನ ನಡೆಸುತ್ತಿದ್ದಾರೆ. ಹಿಂದೆ ಅನೇಕ ಕಡೆಗಳಲ್ಲಿ ಗೋ ರಕ್ಷಣೆಯ ಹೆಸರಿನಲ್ಲಿ ಒಂದು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಜನರನ್ನು ಥಳಿಸಿ ಕೊಲ್ಲಲಾಗಿದೆ. ಆದರೆ ಪ್ರಕರಣದ ಆರೋಪಿಗಳು ರಾಜಾರೋಷವಾಗಿ ಸಮಾಜದಲ್ಲಿ ಓಡಾಡುತ್ತಲೇ ಇದ್ದಾರೆ. ಮನುಷ್ಯನ ಜೀವವು ಗೋವಿನ ಜೀವನಕ್ಕಿಂತ ಅಗ್ಗವಾಗಿರುವುದಕ್ಕೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದ ಘಟನೆ ಮತ್ತು ಹಿಂದೆ ನಡೆದ ಘಟನೆಗಳೇ ಸಾಕ್ಷಿ.

ಮೂಲ : ದಿ ಕ್ವಿಂಟ್‌
ಕನ್ನಡಕ್ಕೆ : ರಾಜೇಶ್‌ ಹೆಬ್ಬಾರ್


ಇದನ್ನೂ ಓದಿ: ಪಶ್ಚಿಮ ಬಂಗಾಳ: ಕೊರೊನಾ ಸೋಂಕಿತರ ಅಂತ್ಯಕ್ರಿಯೆಯ ಸಿಬ್ಬಂದಿ ನೇಮಕಾತಿಯಲ್ಲೂ ಜಾತಿ ತಾರತಮ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...