Homeಮುಖಪುಟದೇಶಕ್ಕೆ ಕಾಲಿಟ್ಟ ಯೆಲ್ಲೋ ಫಂಗಸ್: ದೆಹಲಿಯಲ್ಲಿ ಮೊದಲ ಪ್ರಕರಣ ಪತ್ತೆ

ದೇಶಕ್ಕೆ ಕಾಲಿಟ್ಟ ಯೆಲ್ಲೋ ಫಂಗಸ್: ದೆಹಲಿಯಲ್ಲಿ ಮೊದಲ ಪ್ರಕರಣ ಪತ್ತೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದ ನಲುಗಿರುವ ದೇಶದಲ್ಲಿ ಬ್ಲಾಕ್ ಫಂಗಸ್, ವೈಟ್ ಫಂಗಸ್ ಸೋಂಕು ಹಬ್ಬುತ್ತಿದೆ. ಇದರ ನಡುವೆಯೇ ಯೆಲ್ಲೋ ಫಂಗಸ್​ (Yellow Fungus) ಸಹ ಕಂಡು ಬಂದಿದ್ದು ದೇಶದಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.

ಈಗಾಗಲೇ ಎಲ್ಲಾ ರಾಜ್ಯಗಳಲ್ಲೂ ಬ್ಲಾಕ್ ಫಂಗಸ್ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಬ್ಲಾಕ್​ ಫಂಗಸ್ ಪ್ರಕರಣಗಳು​ ಎಲ್ಲಾ ರಾಜ್ಯಗಳಲ್ಲೂ ದಾಖಲಾಗಿದ್ದು, ಅನೇಕರು ಮೃತಪಟ್ಟಿದ್ದಾರೆ. ಕರ್ನಾಟಕದಲ್ಲೂ 300 ಜನ ಈ ಸೋಂಕಿಗೆ ತುತ್ತಾಗಿದ್ದಾರೆ ಎಂದು ಸ್ವತಃ ಆರೋಗ್ಯ ಸಚಿವ ಸುಧಾಕರ್​ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲೇ ದೆಹಲಿಯ ಘಾಜಿಯಬಾದ್‌ನಲ್ಲಿ ಮೊದಲ ಯೆಲ್ಲೋ ಫಂಗಸ್ ಪ್ರಕರಣ ಪತ್ತೆಯಾಗಿದೆ. ಈವರೆಗಿನ ಕಪ್ಪು, ಬಿಳಿ ಫಂಗಸ್‌ಗಿಂತ ಈ ಯೆಲ್ಲೋ ಫಂಗಸ್ ಮತ್ತಷ್ಟು ಮಾರಕವಾಗಿರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಈ ವೈರಸ್​ ಬಾಧಿತರಲ್ಲಿ ಆಲಸ್ಯ, ತೂಕ ಇಳಿಕೆ, ಹಸಿವೇ ಆಗದಿರುವುದು ಅಥವಾ ಕಡಿಮೆ ಹಸಿವಾಗುವುದು, ಕೀವು ಸೋರುವುದು ಸೇರಿದಂತೆ ಹಲವಾರು ಲಕ್ಷಣಗಳು ಕಂಡು ಬರುತ್ತದೆ ಎಂದು ತಿಳಿದು ಬಂದಿದೆ. ಯೆಲ್ಲೋ ಫಂಗಸ್ ಸೋಂಕಿನ ರೋಗ ಲಕ್ಷಣ ಕಂಡು ಬಂದ ತಕ್ಷಣ ರೋಗಿಗಳು ವೈದ್ಯರನ್ನು ಕಾಣುವುದು ಉತ್ತಮ ಎಂದು ಎಚ್ಚರಿಸಲಾಗಿದೆ.

ನೈರ್ಮಲ್ಯ ಕೊರತೆಯಿಂದ ಈ ಫಂಗಸ್ ಹರಡುವ ಸಾಧ್ಯತೆ ಇದೆ. ಕಣ್ಣು ಸೇರಿ ದೇಹದ ಎಲ್ಲಾ ಭಾಗಗಳಿಗೂ ಡ್ಯಾಮೇಜ್ ಮಾಡಬಲ್ಲದು ಎನ್ನಲಾಗಿದೆ. ಇಎನ್‌ಟಿ ಶಸ್ತ್ರಚಿಕಿತ್ಸಕ ಡಾ. ಬ್ರಿಜ್ ಪಾಲ್ ತ್ಯಾಗಿ ಅವರಿಂದ ಈ ಮಾಹಿತಿ ಹೊರಬಿದ್ದಿದ್ದು, ಡಾ. ತ್ಯಾಗಿ, ಈಗ ದೆಹಲಿಯಲ್ಲಿ ಹಳದಿ ಫಂಗಸ್ ರೋಗಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಯೆಲ್ಲೋ ಫಂಗಸ್​ಗೆ ಔಷಧ ಇದೆಯೇ? ಇದಕ್ಕೆ ಯಾವ ಚಿಕಿತ್ಸೆ ನೀಡಬೇಕು? ಈ ವೈರಸ್​ ವಿರುದ್ಧದ ಹೋರಾಟಕ್ಕೆ ತಯಾರಿ ಹೇಗೆ ಮಾಡಬೇಕು? ಎಂಬ ಅಂಶಗಳು ಮತ್ತಷ್ಟು ಅಧ್ಯಯನದಿಂದ ಹೊರ ಬೀಳಬೇಕಿದೆ. ಆದರೆ, ಕೊರೊನಾ ಸಂಕಷ್ಟದಲ್ಲಿರುವ ದೇಶದಲ್ಲಿ ಬ್ಲಾಕ್, ವೈಟ್, ಹಳದಿ ಫಂಗಸ್‌ಗಳು ಆತಂಕ ಸೃಷ್ಟಿ ಮಾಡಿರುವುದು ಸುಳ್ಳಲ್ಲ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...