Homeಮುಖಪುಟಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

- Advertisement -
- Advertisement -

“ಕಾಂಗ್ರೆಸ್ ಟೂಲ್‌ಕಿಟ್” ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರಾ  ಮಾಡಿದ್ದ ಟ್ವೀಟ್‌ಗೆ “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ವಿಟರ್ ಟ್ಯಾಗ್ ಮಾಡಿದ್ದಕ್ಕೆ ವಿವರಣೆ ಪಡೆಯಲು ದೆಹಲಿ ಪೊಲೀಸರು ಸೋಮವಾರ ಸಂಜೆ ದೆಹಲಿಯ ಟ್ವಿಟರ್ ಕಚೇರಿಗೆ ಭೇಟಿ ನೀಡಿದ್ದರು.

ಆದರೆ, ಕೋವಿಡ್ ಲಾಕ್‌ಡೌನ್ ಕಾರಣದಿಂದ ಎಲ್ಲರೂ ಮನೆಯಿಂದ ಕೆಲಸ ಮಾಡುತ್ತಿರುವ ಕಾರಣಕ್ಕೆ ಟ್ವಿಟರ್ ಕಚೇರಿಯಲ್ಲಿ ಯಾರೂ ಪೊಲೀಸರಿಗೆ ಲಭ್ಯವಾಗಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಟ್ಯಾಗ್ ಮಾಡಿದ್ದು ಪೂರ್ವಗ್ರಹಪೀಡಿತ ಎಂದು ಸರ್ಕಾರ ಆರೋಪಿಸಿತ್ತು. ನಂತರ ಟ್ವಿಟರ್ ಕಚೇರಿಗೆ ವಿವರ ಕೇಳಿ ನೋಟಿಸ್ ನಿಡಿದ್ದ ದೆಹಲಿ ಪೊಲೀಸರು ಸೋಮವಾರ ಸಂಜೆ ಟ್ವಿಟರ್ ಇಂಡಿಯಾ ಕಚೇರಿಗೆ ಭೇಟಿ ನೀಡಿದ್ದಾರೆ. ಆದರೆ ಲಾಕ್‌ಡೌನ್ ಕಾರಣ ಕಚೇರಿಯಲ್ಲಿ ಯಾರು ಸಿಕ್ಕಿಲ್ಲ.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

ಸಂಬಿತ್ ಪಾತ್ರಾ ಟ್ವೀಟ್‌ಗೆ “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಟ್ಯಾಗ್ ಹಾಕಿದ್ದಕ್ಕೆ ಕಂಪನಿ ನೀಡಿರುವ ವಿವರಣೆ  ಅಸ್ಪಷ್ಟ ಎಂದು ಹೇಳಿದ್ದ ಪೊಲೀಸರು, ನೋಟಿಸ್ ಅನ್ನು ಖುದ್ದಾಗಿ ಹಸ್ತಾಂತರಿಸಲು ಟ್ವಿಟರ್ ಇಂಡಿಯಾ ಕಚೇರಿಗೆ ಹೋಗಿದ್ದಾಗಿ ತಿಳಿಸಿದ್ದಾರೆ.

ಈ ಕ್ರಮದ ಬಗ್ಗೆ ಬಂದ ಟೀಕೆಗಳನ್ನು ಸಮರ್ಥಿಸಿಕೊಂಡಿರುವ ಸರ್ಕಾರವು, “ಮೂರು ನೋಟಿಸ್ ನೀಡಿದರೂ ಟ್ವಿಟರ್ ಸ್ಪಷ್ಟ ಉತ್ತರ ನೀಡದೇ ಹುಡುಗಾಟ ಆಡುತ್ತ ತಾನೇ ಬಲಿಪಶು ಎಂದು ತೋರಿಸಲು ಪ್ರಯತ್ನಿಸಿದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರ ಉತ್ತರಗಳು ಬಹಳ ಅಸ್ಪಷ್ಟವಾಗಿರುವುದರಿಂದ, ನೋಟಿಸ್ ನೀಡಲು ಸರಿಯಾದ ವ್ಯಕ್ತಿ ಯಾರು ಎಂದು ಗುರುತಿಸಲು ಈ ಭೇಟಿ ಅಗತ್ಯವಾಗಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಮೇ 18 ರಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಮಾಡಿದ ಟ್ವೀಟ್ ಅನ್ನು ಆಡಳಿತ ಪಕ್ಷದ ಹಲವಾರು ನಾಯಕರು ಹಂಚಿಕೊಂಡಿದ್ದಾರೆ. ಇದರಲ್ಲಿ ’ಕೋವಿಡ್ ನಿರ್ವಹಣೆ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅಪಖ್ಯಾತಿಗೊಳಿಸುವ’ ಉದ್ದೇಶದಿಂದ ಕಾಂಗ್ರೆಸ್ ಟೂಲ್‌ಕಿಟ್ ರಚಿಸಿದೆ ಎಂದು ಆರೋಪಿಸಿದ್ದರು. “ಟೂಲ್‌ಕಿಟ್” ನಕಲಿ ಮತ್ತು ಇದನ್ನು ನಕಲಿ ಲೆಟರ್ ಹೆಡ್ ಬಳಸಿ ಮಾಡಲಾಗಿದೆ ಎಂದು ಕಾಂಗ್ರೆಸ್ ಟ್ವಿಟ್‌ರ್‌ಗೆ ಪತ್ರ ಬರೆದಿತ್ತು.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಗುರುವಾರ ಸಂಜೆ, ಟ್ವಿಟರ್ ಸಂಬಿತ್ ಪಾತ್ರಾ ಅವರ ಟ್ವೀಟ್ ಅನ್ನು “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ಯಾಗ್ ಮಾಡಿತ್ತು. ಮರುದಿನ ಸರ್ಕಾರವು, “ಟೂಲ್‌ಕಿಟ್” ಬಗ್ಗೆ ಇನ್ನೂ ತನಿಖೆ ನಡೆಸುತ್ತಿರುವುದರಿಂದ ಟ್ಯಾಗ್ ಅನ್ನು ತೆಗೆದುಹಾಕುವಂತೆ ಟ್ವಿಟರ್‌ಗೆ ಕಠಿಣ ಪತ್ರ ಬರೆದಿತ್ತು. ಸೋಮವಾರ ದೆಹಲಿ ಪೊಲೀಸರ ವಿಶೇಷ ಘಟಕ ಸ್ಪಷ್ಟೀಕರಣ ಕೋರಿ ಟ್ವಿಟರ್‌ಗೆ ನೋಟಿಸ್ ಕಳುಹಿಸಿದೆ.

“ದೆಹಲಿ ಪೊಲೀಸರು ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಇದರಲ್ಲಿ ಸಂಬಿತ್ ಪಾತ್ರಾ ಅವರ ಟ್ವೀಟ್ ಅನ್ನು ’ಮ್ಯಾನಿಪ್ಯುಲೇಟಿವ್’ ಎಂದು ವರ್ಗೀಕರಿಸಿದ ಬಗ್ಗೆ ಟ್ವಿಟರ್‌ನಿಂದ ಸ್ಪಷ್ಟನೆ ಕೋರಲಾಗಿದೆ. ಟ್ವಿಟರ್ ನಮಗೆ ತಿಳಿದಿಲ್ಲದ ಕೆಲವು ಮಾಹಿತಿಯನ್ನು ಹೊಂದಿದೆ, ಅದರ ಆಧಾರದ ಮೇಲೆ ಅವರು ಅದನ್ನು ಈ ರೀತಿ ವರ್ಗೀಕರಿಸಿದ್ದಾರೆ. ಈ ಮಾಹಿತಿಯು ವಿಚಾರಣೆಗೆ ಸಂಬಂಧಿಸಿದೆ. ವಿಚಾರಣೆಯನ್ನು ನಡೆಸುತ್ತಿರುವ ವಿಶೇಷ ಘಟಕವು ಸತ್ಯವನ್ನು ಕಂಡುಹಿಡಿಯಲು ಬಯಸುತ್ತದೆ. ಟ್ಯಾಗ್ ನೀಡಲು ತಾನು ಕಂಡುಕೊಂಡ ಆಧಾರಗಳನ್ನು ಟ್ವಿಟರ್ ಸ್ಪಷ್ಟಪಡಿಸಬೇಕು” ಎಂದು ದೆಹಲಿ ಪೊಲೀಸ್ ವಕ್ತಾರರು ಹೇಳಿದ್ದಾರೆ. ಆದರೆ ಪೊಲೀಸರು ದೂರು ಅಥವಾ ದೂರುದಾರರ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ದಾಖಲೆಗಳನ್ನು ಹಂಚಿಕೊಂಡಿದ್ದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರುಗಳನ್ನು ದಾಖಲಿಸಿದೆ. ಛತ್ತೀಸಘಡದಲ್ಲಿ ಬಿಜೆಪಿ ನಾಯಕರಾದ ಸಂಬಿತ್ ಪಾತ್ರಾ ಮತ್ತು ರಮಣಸಿಂಗ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಸಮನ್ಸ್ ನೀಡಲಾಗಿದೆ.


ಇದನ್ನೂ ಓದಿ: ಕೊರೊನಾ ನಡುವೆಯೂ ನಿಲ್ಲದ ಗೋ ರಕ್ಷಕರ ಗೂಂಡಾ ವರ್ತನೆ : ಉತ್ತರ ಪ್ರದೇಶದಲ್ಲಿ ಮುಸ್ಲೀಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...