Homeಮುಖಪುಟಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

- Advertisement -
- Advertisement -

“ಕಾಂಗ್ರೆಸ್ ಟೂಲ್‌ಕಿಟ್” ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರಾ  ಮಾಡಿದ್ದ ಟ್ವೀಟ್‌ಗೆ “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ವಿಟರ್ ಟ್ಯಾಗ್ ಮಾಡಿದ್ದಕ್ಕೆ ವಿವರಣೆ ಪಡೆಯಲು ದೆಹಲಿ ಪೊಲೀಸರು ಸೋಮವಾರ ಸಂಜೆ ದೆಹಲಿಯ ಟ್ವಿಟರ್ ಕಚೇರಿಗೆ ಭೇಟಿ ನೀಡಿದ್ದರು.

ಆದರೆ, ಕೋವಿಡ್ ಲಾಕ್‌ಡೌನ್ ಕಾರಣದಿಂದ ಎಲ್ಲರೂ ಮನೆಯಿಂದ ಕೆಲಸ ಮಾಡುತ್ತಿರುವ ಕಾರಣಕ್ಕೆ ಟ್ವಿಟರ್ ಕಚೇರಿಯಲ್ಲಿ ಯಾರೂ ಪೊಲೀಸರಿಗೆ ಲಭ್ಯವಾಗಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಟ್ಯಾಗ್ ಮಾಡಿದ್ದು ಪೂರ್ವಗ್ರಹಪೀಡಿತ ಎಂದು ಸರ್ಕಾರ ಆರೋಪಿಸಿತ್ತು. ನಂತರ ಟ್ವಿಟರ್ ಕಚೇರಿಗೆ ವಿವರ ಕೇಳಿ ನೋಟಿಸ್ ನಿಡಿದ್ದ ದೆಹಲಿ ಪೊಲೀಸರು ಸೋಮವಾರ ಸಂಜೆ ಟ್ವಿಟರ್ ಇಂಡಿಯಾ ಕಚೇರಿಗೆ ಭೇಟಿ ನೀಡಿದ್ದಾರೆ. ಆದರೆ ಲಾಕ್‌ಡೌನ್ ಕಾರಣ ಕಚೇರಿಯಲ್ಲಿ ಯಾರು ಸಿಕ್ಕಿಲ್ಲ.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

ಸಂಬಿತ್ ಪಾತ್ರಾ ಟ್ವೀಟ್‌ಗೆ “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಟ್ಯಾಗ್ ಹಾಕಿದ್ದಕ್ಕೆ ಕಂಪನಿ ನೀಡಿರುವ ವಿವರಣೆ  ಅಸ್ಪಷ್ಟ ಎಂದು ಹೇಳಿದ್ದ ಪೊಲೀಸರು, ನೋಟಿಸ್ ಅನ್ನು ಖುದ್ದಾಗಿ ಹಸ್ತಾಂತರಿಸಲು ಟ್ವಿಟರ್ ಇಂಡಿಯಾ ಕಚೇರಿಗೆ ಹೋಗಿದ್ದಾಗಿ ತಿಳಿಸಿದ್ದಾರೆ.

ಈ ಕ್ರಮದ ಬಗ್ಗೆ ಬಂದ ಟೀಕೆಗಳನ್ನು ಸಮರ್ಥಿಸಿಕೊಂಡಿರುವ ಸರ್ಕಾರವು, “ಮೂರು ನೋಟಿಸ್ ನೀಡಿದರೂ ಟ್ವಿಟರ್ ಸ್ಪಷ್ಟ ಉತ್ತರ ನೀಡದೇ ಹುಡುಗಾಟ ಆಡುತ್ತ ತಾನೇ ಬಲಿಪಶು ಎಂದು ತೋರಿಸಲು ಪ್ರಯತ್ನಿಸಿದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರ ಉತ್ತರಗಳು ಬಹಳ ಅಸ್ಪಷ್ಟವಾಗಿರುವುದರಿಂದ, ನೋಟಿಸ್ ನೀಡಲು ಸರಿಯಾದ ವ್ಯಕ್ತಿ ಯಾರು ಎಂದು ಗುರುತಿಸಲು ಈ ಭೇಟಿ ಅಗತ್ಯವಾಗಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಮೇ 18 ರಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಮಾಡಿದ ಟ್ವೀಟ್ ಅನ್ನು ಆಡಳಿತ ಪಕ್ಷದ ಹಲವಾರು ನಾಯಕರು ಹಂಚಿಕೊಂಡಿದ್ದಾರೆ. ಇದರಲ್ಲಿ ’ಕೋವಿಡ್ ನಿರ್ವಹಣೆ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅಪಖ್ಯಾತಿಗೊಳಿಸುವ’ ಉದ್ದೇಶದಿಂದ ಕಾಂಗ್ರೆಸ್ ಟೂಲ್‌ಕಿಟ್ ರಚಿಸಿದೆ ಎಂದು ಆರೋಪಿಸಿದ್ದರು. “ಟೂಲ್‌ಕಿಟ್” ನಕಲಿ ಮತ್ತು ಇದನ್ನು ನಕಲಿ ಲೆಟರ್ ಹೆಡ್ ಬಳಸಿ ಮಾಡಲಾಗಿದೆ ಎಂದು ಕಾಂಗ್ರೆಸ್ ಟ್ವಿಟ್‌ರ್‌ಗೆ ಪತ್ರ ಬರೆದಿತ್ತು.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಗುರುವಾರ ಸಂಜೆ, ಟ್ವಿಟರ್ ಸಂಬಿತ್ ಪಾತ್ರಾ ಅವರ ಟ್ವೀಟ್ ಅನ್ನು “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ಯಾಗ್ ಮಾಡಿತ್ತು. ಮರುದಿನ ಸರ್ಕಾರವು, “ಟೂಲ್‌ಕಿಟ್” ಬಗ್ಗೆ ಇನ್ನೂ ತನಿಖೆ ನಡೆಸುತ್ತಿರುವುದರಿಂದ ಟ್ಯಾಗ್ ಅನ್ನು ತೆಗೆದುಹಾಕುವಂತೆ ಟ್ವಿಟರ್‌ಗೆ ಕಠಿಣ ಪತ್ರ ಬರೆದಿತ್ತು. ಸೋಮವಾರ ದೆಹಲಿ ಪೊಲೀಸರ ವಿಶೇಷ ಘಟಕ ಸ್ಪಷ್ಟೀಕರಣ ಕೋರಿ ಟ್ವಿಟರ್‌ಗೆ ನೋಟಿಸ್ ಕಳುಹಿಸಿದೆ.

“ದೆಹಲಿ ಪೊಲೀಸರು ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಇದರಲ್ಲಿ ಸಂಬಿತ್ ಪಾತ್ರಾ ಅವರ ಟ್ವೀಟ್ ಅನ್ನು ’ಮ್ಯಾನಿಪ್ಯುಲೇಟಿವ್’ ಎಂದು ವರ್ಗೀಕರಿಸಿದ ಬಗ್ಗೆ ಟ್ವಿಟರ್‌ನಿಂದ ಸ್ಪಷ್ಟನೆ ಕೋರಲಾಗಿದೆ. ಟ್ವಿಟರ್ ನಮಗೆ ತಿಳಿದಿಲ್ಲದ ಕೆಲವು ಮಾಹಿತಿಯನ್ನು ಹೊಂದಿದೆ, ಅದರ ಆಧಾರದ ಮೇಲೆ ಅವರು ಅದನ್ನು ಈ ರೀತಿ ವರ್ಗೀಕರಿಸಿದ್ದಾರೆ. ಈ ಮಾಹಿತಿಯು ವಿಚಾರಣೆಗೆ ಸಂಬಂಧಿಸಿದೆ. ವಿಚಾರಣೆಯನ್ನು ನಡೆಸುತ್ತಿರುವ ವಿಶೇಷ ಘಟಕವು ಸತ್ಯವನ್ನು ಕಂಡುಹಿಡಿಯಲು ಬಯಸುತ್ತದೆ. ಟ್ಯಾಗ್ ನೀಡಲು ತಾನು ಕಂಡುಕೊಂಡ ಆಧಾರಗಳನ್ನು ಟ್ವಿಟರ್ ಸ್ಪಷ್ಟಪಡಿಸಬೇಕು” ಎಂದು ದೆಹಲಿ ಪೊಲೀಸ್ ವಕ್ತಾರರು ಹೇಳಿದ್ದಾರೆ. ಆದರೆ ಪೊಲೀಸರು ದೂರು ಅಥವಾ ದೂರುದಾರರ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ದಾಖಲೆಗಳನ್ನು ಹಂಚಿಕೊಂಡಿದ್ದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರುಗಳನ್ನು ದಾಖಲಿಸಿದೆ. ಛತ್ತೀಸಘಡದಲ್ಲಿ ಬಿಜೆಪಿ ನಾಯಕರಾದ ಸಂಬಿತ್ ಪಾತ್ರಾ ಮತ್ತು ರಮಣಸಿಂಗ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಸಮನ್ಸ್ ನೀಡಲಾಗಿದೆ.


ಇದನ್ನೂ ಓದಿ: ಕೊರೊನಾ ನಡುವೆಯೂ ನಿಲ್ಲದ ಗೋ ರಕ್ಷಕರ ಗೂಂಡಾ ವರ್ತನೆ : ಉತ್ತರ ಪ್ರದೇಶದಲ್ಲಿ ಮುಸ್ಲೀಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...