Homeಮುಖಪುಟಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

- Advertisement -
- Advertisement -

“ಕಾಂಗ್ರೆಸ್ ಟೂಲ್‌ಕಿಟ್” ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರಾ  ಮಾಡಿದ್ದ ಟ್ವೀಟ್‌ಗೆ “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ವಿಟರ್ ಟ್ಯಾಗ್ ಮಾಡಿದ್ದಕ್ಕೆ ವಿವರಣೆ ಪಡೆಯಲು ದೆಹಲಿ ಪೊಲೀಸರು ಸೋಮವಾರ ಸಂಜೆ ದೆಹಲಿಯ ಟ್ವಿಟರ್ ಕಚೇರಿಗೆ ಭೇಟಿ ನೀಡಿದ್ದರು.

ಆದರೆ, ಕೋವಿಡ್ ಲಾಕ್‌ಡೌನ್ ಕಾರಣದಿಂದ ಎಲ್ಲರೂ ಮನೆಯಿಂದ ಕೆಲಸ ಮಾಡುತ್ತಿರುವ ಕಾರಣಕ್ಕೆ ಟ್ವಿಟರ್ ಕಚೇರಿಯಲ್ಲಿ ಯಾರೂ ಪೊಲೀಸರಿಗೆ ಲಭ್ಯವಾಗಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಟ್ಯಾಗ್ ಮಾಡಿದ್ದು ಪೂರ್ವಗ್ರಹಪೀಡಿತ ಎಂದು ಸರ್ಕಾರ ಆರೋಪಿಸಿತ್ತು. ನಂತರ ಟ್ವಿಟರ್ ಕಚೇರಿಗೆ ವಿವರ ಕೇಳಿ ನೋಟಿಸ್ ನಿಡಿದ್ದ ದೆಹಲಿ ಪೊಲೀಸರು ಸೋಮವಾರ ಸಂಜೆ ಟ್ವಿಟರ್ ಇಂಡಿಯಾ ಕಚೇರಿಗೆ ಭೇಟಿ ನೀಡಿದ್ದಾರೆ. ಆದರೆ ಲಾಕ್‌ಡೌನ್ ಕಾರಣ ಕಚೇರಿಯಲ್ಲಿ ಯಾರು ಸಿಕ್ಕಿಲ್ಲ.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

ಸಂಬಿತ್ ಪಾತ್ರಾ ಟ್ವೀಟ್‌ಗೆ “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಟ್ಯಾಗ್ ಹಾಕಿದ್ದಕ್ಕೆ ಕಂಪನಿ ನೀಡಿರುವ ವಿವರಣೆ  ಅಸ್ಪಷ್ಟ ಎಂದು ಹೇಳಿದ್ದ ಪೊಲೀಸರು, ನೋಟಿಸ್ ಅನ್ನು ಖುದ್ದಾಗಿ ಹಸ್ತಾಂತರಿಸಲು ಟ್ವಿಟರ್ ಇಂಡಿಯಾ ಕಚೇರಿಗೆ ಹೋಗಿದ್ದಾಗಿ ತಿಳಿಸಿದ್ದಾರೆ.

ಈ ಕ್ರಮದ ಬಗ್ಗೆ ಬಂದ ಟೀಕೆಗಳನ್ನು ಸಮರ್ಥಿಸಿಕೊಂಡಿರುವ ಸರ್ಕಾರವು, “ಮೂರು ನೋಟಿಸ್ ನೀಡಿದರೂ ಟ್ವಿಟರ್ ಸ್ಪಷ್ಟ ಉತ್ತರ ನೀಡದೇ ಹುಡುಗಾಟ ಆಡುತ್ತ ತಾನೇ ಬಲಿಪಶು ಎಂದು ತೋರಿಸಲು ಪ್ರಯತ್ನಿಸಿದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರ ಉತ್ತರಗಳು ಬಹಳ ಅಸ್ಪಷ್ಟವಾಗಿರುವುದರಿಂದ, ನೋಟಿಸ್ ನೀಡಲು ಸರಿಯಾದ ವ್ಯಕ್ತಿ ಯಾರು ಎಂದು ಗುರುತಿಸಲು ಈ ಭೇಟಿ ಅಗತ್ಯವಾಗಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಮೇ 18 ರಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಮಾಡಿದ ಟ್ವೀಟ್ ಅನ್ನು ಆಡಳಿತ ಪಕ್ಷದ ಹಲವಾರು ನಾಯಕರು ಹಂಚಿಕೊಂಡಿದ್ದಾರೆ. ಇದರಲ್ಲಿ ’ಕೋವಿಡ್ ನಿರ್ವಹಣೆ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅಪಖ್ಯಾತಿಗೊಳಿಸುವ’ ಉದ್ದೇಶದಿಂದ ಕಾಂಗ್ರೆಸ್ ಟೂಲ್‌ಕಿಟ್ ರಚಿಸಿದೆ ಎಂದು ಆರೋಪಿಸಿದ್ದರು. “ಟೂಲ್‌ಕಿಟ್” ನಕಲಿ ಮತ್ತು ಇದನ್ನು ನಕಲಿ ಲೆಟರ್ ಹೆಡ್ ಬಳಸಿ ಮಾಡಲಾಗಿದೆ ಎಂದು ಕಾಂಗ್ರೆಸ್ ಟ್ವಿಟ್‌ರ್‌ಗೆ ಪತ್ರ ಬರೆದಿತ್ತು.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಗುರುವಾರ ಸಂಜೆ, ಟ್ವಿಟರ್ ಸಂಬಿತ್ ಪಾತ್ರಾ ಅವರ ಟ್ವೀಟ್ ಅನ್ನು “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ಯಾಗ್ ಮಾಡಿತ್ತು. ಮರುದಿನ ಸರ್ಕಾರವು, “ಟೂಲ್‌ಕಿಟ್” ಬಗ್ಗೆ ಇನ್ನೂ ತನಿಖೆ ನಡೆಸುತ್ತಿರುವುದರಿಂದ ಟ್ಯಾಗ್ ಅನ್ನು ತೆಗೆದುಹಾಕುವಂತೆ ಟ್ವಿಟರ್‌ಗೆ ಕಠಿಣ ಪತ್ರ ಬರೆದಿತ್ತು. ಸೋಮವಾರ ದೆಹಲಿ ಪೊಲೀಸರ ವಿಶೇಷ ಘಟಕ ಸ್ಪಷ್ಟೀಕರಣ ಕೋರಿ ಟ್ವಿಟರ್‌ಗೆ ನೋಟಿಸ್ ಕಳುಹಿಸಿದೆ.

“ದೆಹಲಿ ಪೊಲೀಸರು ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಇದರಲ್ಲಿ ಸಂಬಿತ್ ಪಾತ್ರಾ ಅವರ ಟ್ವೀಟ್ ಅನ್ನು ’ಮ್ಯಾನಿಪ್ಯುಲೇಟಿವ್’ ಎಂದು ವರ್ಗೀಕರಿಸಿದ ಬಗ್ಗೆ ಟ್ವಿಟರ್‌ನಿಂದ ಸ್ಪಷ್ಟನೆ ಕೋರಲಾಗಿದೆ. ಟ್ವಿಟರ್ ನಮಗೆ ತಿಳಿದಿಲ್ಲದ ಕೆಲವು ಮಾಹಿತಿಯನ್ನು ಹೊಂದಿದೆ, ಅದರ ಆಧಾರದ ಮೇಲೆ ಅವರು ಅದನ್ನು ಈ ರೀತಿ ವರ್ಗೀಕರಿಸಿದ್ದಾರೆ. ಈ ಮಾಹಿತಿಯು ವಿಚಾರಣೆಗೆ ಸಂಬಂಧಿಸಿದೆ. ವಿಚಾರಣೆಯನ್ನು ನಡೆಸುತ್ತಿರುವ ವಿಶೇಷ ಘಟಕವು ಸತ್ಯವನ್ನು ಕಂಡುಹಿಡಿಯಲು ಬಯಸುತ್ತದೆ. ಟ್ಯಾಗ್ ನೀಡಲು ತಾನು ಕಂಡುಕೊಂಡ ಆಧಾರಗಳನ್ನು ಟ್ವಿಟರ್ ಸ್ಪಷ್ಟಪಡಿಸಬೇಕು” ಎಂದು ದೆಹಲಿ ಪೊಲೀಸ್ ವಕ್ತಾರರು ಹೇಳಿದ್ದಾರೆ. ಆದರೆ ಪೊಲೀಸರು ದೂರು ಅಥವಾ ದೂರುದಾರರ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ದಾಖಲೆಗಳನ್ನು ಹಂಚಿಕೊಂಡಿದ್ದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರುಗಳನ್ನು ದಾಖಲಿಸಿದೆ. ಛತ್ತೀಸಘಡದಲ್ಲಿ ಬಿಜೆಪಿ ನಾಯಕರಾದ ಸಂಬಿತ್ ಪಾತ್ರಾ ಮತ್ತು ರಮಣಸಿಂಗ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಸಮನ್ಸ್ ನೀಡಲಾಗಿದೆ.


ಇದನ್ನೂ ಓದಿ: ಕೊರೊನಾ ನಡುವೆಯೂ ನಿಲ್ಲದ ಗೋ ರಕ್ಷಕರ ಗೂಂಡಾ ವರ್ತನೆ : ಉತ್ತರ ಪ್ರದೇಶದಲ್ಲಿ ಮುಸ್ಲೀಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...