Homeಮುಖಪುಟಯಾವ ಬಲೆಗೂ ಬೀಳದ ಸಿಂಹ; ರಾಸ್ ಬಿಹಾರಿ ಬೋಸ್ - ಎಲ್ದೋ ಹೊನ್ನೇಕುಡಿಗೆ ಬರಹ

ಯಾವ ಬಲೆಗೂ ಬೀಳದ ಸಿಂಹ; ರಾಸ್ ಬಿಹಾರಿ ಬೋಸ್ – ಎಲ್ದೋ ಹೊನ್ನೇಕುಡಿಗೆ ಬರಹ

- Advertisement -
- Advertisement -

ಅದೊಂದು ಸಂಜೆ ಗುರುಗಳಾದ ಚಾರುಚಂದರಾಯ್ ತಮ್ಮ ಮೂವರು ವಿದ್ಯಾರ್ಥಿಗಳೊಂದಿಗೆ ಭಾರತ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಮಾತನಾಡಿದ ನಂತರ “ನಿನ್ನ ಬಳಿ ಒಂದೇ ಗುಂಡು ಇದ್ದಾಗ ನೀನು ಬ್ರಿಟಿಷರ ಕೈಗೆ ಸಿಕ್ಕಿ ಬಿದ್ದರೆ ಏನು ಮಾಡುವೆ”? ಎಂಬ ಪ್ರಶ್ನೆಯನ್ನು ಶಿಷ್ಯರ ಮುಂದಿಟ್ಟರು.
ಮೊದಲನೆಯ ಶಿಷ್ಯ: ಬ್ರಿಟಿಷರ ಕೈಗೆ ಸಿಕ್ಕಿ ಹಾಕಿಕೊಳ್ಳುವದಕ್ಕಿಂತ ನಾನೇ ಆ ಗುಂಡಿನಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದ.
ಎರಡನೆಯ ಶಿಷ್ಯ: ನಾನು ಆ ಗುಂಡಿನಿಂದ ದೇಶದ್ರೋಹಿಯನ್ನು ಮುಗಿಸುತ್ತೇನೆಂದ.
ಮೂರನೆಯ ಶಿಷ್ಯ: ಏನೂ ಉತ್ತರ ನೀಡದೆ ಸುಮ್ಮನಿದ್ದ.

ಮರುದಿನ ಶಿಷ್ಯನನ್ನು ಭೇಟಿ ಮಾಡಿ ಗುರುಗಳು “ನನ್ನ ಪ್ರಶ್ನೆಗೆ ನೀನೇಕೆ ಉತ್ತರ ನೀಡಲಿಲ್ಲ”? ಎಂದು ಕೇಳಿದರು. ಅದಕ್ಕುತ್ತರಿಸಿದ ಶಿಷ್ಯ ”ನಾನು ಬ್ರಿಟಿಷ್ ಸೈನ್ಯ ಸೇರಿ ಅವರಿಂದ ತರಬೇತಿ ಪಡೆದು ಭಾರತೀಯರ ಸೈನ್ಯವನ್ನು ಕಟ್ಟುತ್ತೇನೆ, ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟ ಕಟ್ಟುತ್ತೇನೆ” ಎಂದ!. ತಮ್ಮ ಗುರುಗಳಿಗೆ ನೀಡಿದ ಮಾತಿನಂತೆ ಈ ಮೂರು ಶಿಷ್ಯರು ನುಡಿದಂತೆ ನಡೆದರು. ಮೊದಲ ಶಿಷ್ಯ ಪ್ರಪುಲ್ಲ ಚಾಕಿ, ಎರಡನೇ ಶಿಷ್ಯ ಕನೈಲಾಲ್, ಹಾಗೂ ಮೂರನೆಯ ಶಿಷ್ಯನೇ ರಾಸ್ ಬಿಹಾರಿ ಬೋಸ್!

ರಾಸ್‌ ಬಿಹಾರಿ ಬೋಸ್‌

ಈ ಮೂರನೆ ಶಿಷ್ಯ1886 ಮೇ 25ರಂದು ಪಶ್ಚಿಮಬಂಗಾಳದ ಹೂಗ್ಲಿ ಜಿಲ್ಲೆಯ ಪಲರಾಬಿಘಾಟಿ ಎಂಬ ಹಳ್ಳಿಯಲ್ಲಿ ಬಿನೋದ್ ಬಿಹಾರಿ ಬೋಸ್ ಮತ್ತು ಭುವನೇಶ್ವರಿ ದಂಪತಿಗಳ ಮಗನಾಗಿ ಜನಿಸಿದರು.

ಇದನ್ನೂ ಓದಿ: ‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

ಒಮ್ಮೆ ರಾಸ್ ಬಿಹಾರಿ ಬೋಸ್ ತಮ್ಮ ಸಹ ಕ್ರಾಂತಿಕಾರಿಗಳೊಂದಿಗೆ ಸಭೆ ಸೇರಿದ್ದ ಮನೆಯನ್ನು ಶಸ್ತ್ರಸಜ್ಜಿತ ಬ್ರಿಟಿಷ್ ಪೊಲೀಸ್ ಪಡೆ ಸುತ್ತುವರಿಯಿತು. ಕೆಲವು ಕ್ಷಣಗಳ ಹಿಂದೆ ಪ್ರಶಾಂತವಾಗಿದ್ದ ವಾತಾವರಣ ಒಮ್ಮೆಲೆ ಆತಂಕ ಗಾಬರಿಗಳಿಂದ ತುಂಬಿ ಹೋಯಿತು. ಕಾರಣ ಅವರು ಹಿಡಿಯ ಹೊರಟಿದ್ದು ಬ್ರಿಟಿಷರಿಗೆ ಸಿಂಹಸ್ವಪ್ನನಾದ ಕ್ರಾಂತಿಕಾರಿಯನ್ನು.

ಈ ಮಧ್ಯೆ ಮಲ ಹೊರುವವನೊಬ್ಬ ತಲೆಯ ಮೇಲೆ ಗೊಬ್ಬರದ ಮಂಕರಿಯನ್ನು ಹೊತ್ತು ಆ ಮನೆಯಿಂದ ಹೊರಬಂದ. ಪೊಲೀಸರು ಮೂಗು ಮುಚ್ಚಿಕೊಂಡು ಪಕ್ಕಕ್ಕೆ ಸರಿದರು. ನಂತರ ಪೊಲೀಸರು ಆ ಮನೆಯ ಕೋಣೆ ಕೋಣೆಗೂ ನುಗ್ಗಿ ಅಲ್ಲಿದ್ದವರನ್ನೆಲ್ಲಾ ಹೊರಗೆಳೆದು ತಂದರು. ಆದರೆ ಅವರಲ್ಲಿ ರಾಸ್ ಬಿಹಾರಿ ಇರಲಿಲ್ಲ. ನಂಬಿಗಸ್ತ ಮಾಹಿತಿದಾರ ರವಾನಿಸಿದ್ದ ಸುದ್ದಿ ತಪ್ಪಂದೆಣಿಸಿ ಪೊಲೀಸರು ಬರಿಗೈಯಲ್ಲಿ ಹಿಂತಿರುಗಿದರು. ಕೆಲವು ದಿನಗಳ ನಂತರ ಪೊಲೀಸರಿಗೆ ಸುದ್ದಿ ಮುಟ್ಟಿತು ಮಲಹೊರುವವನ ವೇಷಧರಿಸಿ ಹೊರಬಂದ ವ್ಯಕ್ತಿಯೇ ರಾಸ್ ಬಿಹಾರಿ ಬೋಸ್ ಎಂದು!

ತಮ್ಮ ಮಾತೃಭಾಷೆ ಬಂಗಾಳಿಯೊಂದಿಗೆ ಹಿಂದಿ, ಪಂಜಾಬಿ, ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳ ಮೇಲೆ ರಾಸ್ ಬಿಹಾರಿಯವರು ಸಾಧಿಸಿದ್ದ ಹಿಡಿತ ಪೊಲೀಸರಿಂದ ತಪ್ಪಿಸಿಕೊಳ್ಳಲು ನೆರವಾಗುತ್ತಿದ್ದವು. ಒಂದರ ಮೇಲೊಂದರಂತೆ ಕ್ರಾಂತಿಕಾರಿ ಚಟುವಟಿಕೆಯನ್ನು ಸಂಘಟಿಸಿ ಕಾರ್ಯರೂಪಕ್ಕೆ ತರುತ್ತಿದ್ದ ರಾಸ್ ಬಿಹಾರಿಯವರು ಬ್ರಿಟಿಷರ ವಾಂಟೆಡ್ ಪಟ್ಟಿಯ ಬಹುಮುಖ್ಯ ಕ್ರಾಂತಿಕಾರಿಯಾಗಿದ್ದರು.

ಇದಕ್ಕಾಗಿಯೆ ಬ್ರಿಟಿಷರು ಅವರನ್ನು ಜೀವಂತವಾಗಿ ಅಥವಾ ಮೃತವಾಗಿಯಾದರು ಹಿಡಿಯಬೇಕೆಂದು ಅತ್ಯಂತ ಪ್ರಬಲವಾದ ಬಲೆಯನ್ನು ಹಣೆದರು. ಪರಿಸ್ಥಿತಿಯ ಗಂಭೀರತೆಯನ್ನು ಅರಿಯುತ್ತಿದ್ದಂತೆಯೇ ಅವರ ಸ್ನೇಹಿತರು ರಾಸ್ ಬಿಹಾರಿಯವರನ್ನು ಭಾರತ ಬಿಟ್ಟುಹೋಗುವುದು ಕ್ಷೇಮವೆಂದು ಒತ್ತಾಯಿಸಿದರು. ಹಾಗಾಗಿ ಅವರು 1915 ಮೇ 12ರಂದು ದೇಶ ಬಿಟ್ಟು ಹೊರಟು ಹೋದರು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ದೇಶದ ಒಳಗಿದ್ದರೇನು ಹೊರಗಿದ್ದರೇನು ಹೋರಾಟ ಮಾತ್ರ ನಿರಂತರ! ಮೊದಲು ಸಿಂಗಾಪುರ ತಲುಪಿದ ರಾಸ್ ಬಿಹಾರಿಯವರು ಅಲ್ಲಿಂದ ಜಪಾನಿಗೆ ಪ್ರಯಾಣಿಸುತ್ತಾರೆ. ಜಪಾನಿನಲ್ಲೂ ಹಲವಾರು ಸಭೆಗಳನ್ನು ಸಂಘಟಿಸಿ ತಾಯ್ನಾಡನ್ನು ಸ್ವತಂತ್ರಗೊಳಿಸುವ ಕಾಯಕದಲ್ಲಿ ನಿರತರಾಗುತ್ತಾರೆ. ಇವರು ಬ್ರಿಟಿಷರಿಂದ ತಲೆಮರೆಸಿಕೊಂಡು ಬಂದಿರುವ ಕ್ರಾಂತಿಕಾರಿಯೆಂದು ತಿಳಿಯುತ್ತಿದ್ದಂತೆ ಜಪಾನಿನ ಸರ್ಕಾರವು ಇವರನ್ನು ಜಪಾನ್ ಬಿಟ್ಟು ತೊಲಗುವಂತೆ ಬಹಿಷ್ಕಾರ ಆದೇಶವನ್ನು ಹೊರಡಿಸುತ್ತದೆ. ಆಗ ಅಲ್ಲಿನ  ಟೊಯಮ ಎಂಬ ರಾಜಕಾರಣಿಯೊಬ್ಬರು ಅವರ ಸ್ನೇಹಿತ ಅಯ್ಜೊಸೊಮ ಎಂಬುವರ ಮನೆಯಲ್ಲಿ ರಾಸ್ ಬಿಹಾರಿಯವರಿಗೆ  ಆಶ್ರಯ ಒದಗಿಸುತ್ತಾರೆ.

ತದನಂತರ ಕೇವಲ ನಾಲ್ಕು ತಿಂಗಳಲ್ಲಿ ಜಪಾನಿ ಭಾಷೆಯನ್ನು ಕಲಿತು ಅಯ್ಜೊಸೊಮ  ಅವರ ಪುತ್ರಿ ಟೊಶಿಕೊ ಅವರನ್ನು ವರಿಸುತ್ತಾರೆ. ಅವರಿಗೆ ಇಬ್ಬರು ಮಕ್ಕಳು ಜನಿಸುತ್ತಾರೆ. ಮುಂದಿನ ಕೆಲವೇ ವರ್ಷಗಳಲ್ಲಿ ಅವರ ಪತ್ನಿ ಮೃತರಾಗುತ್ತಾರೆ. ಆ ನೋವೂ ಅವರನ್ನು ತಮ್ಮ ಗುರಿಯಿಂದ  ಎಳ್ಳಷ್ಟೂ ವಿಚಲಿತಗೊಳಿಸಲಿಲ್ಲ.

1942ರ  ಸೆಪ್ಟೆಂಬರ್‌‌ನಲ್ಲಿ ಐತಿಹಾಸಿಕ ಇಂಡಿಯನ್ ನ್ಯಾಷನಲ್ ಆರ್ಮಿ(INA)ಯನ್ನು ಅಧಿಕೃತವಾಗಿ ಸ್ಥಾಪಿಸಿದ ರಾಸ್ ಬಿಹಾರಿ ಬೋಸ್‌‌ರು ನೇತಾಜಿ ಸುಭಾಷ್ಚಂದ್ರ ಬೋಸ್‌ರವರನ್ನು ಪೂರ್ವ ಏಷ್ಯಾಕ್ಕೆ ಬಂದು INA ಯ ನೇತೃತ್ವ ವಹಿಸಬೇಕೆಂದು ಆಮಂತ್ರಿಸಿದರು. ನೇತಾಜಿಯವರು ಹರ್ಷದಿಂದ ಇದನ್ನು ಸ್ವೀಕರಿಸಿದರು.

1943 ಜುಲೈ 4 ರಂದು ಸಿಂಗಾಪುರದಲ್ಲಿ ನಡೆದ ಐತಿಹಾಸಿಕ ಅಧಿವೇಶನದಲ್ಲಿ ರಾಸ್ ಬಿಹಾರಿ ಬೋಸ್ ಮತ್ತು  ಸುಭಾಷ್ ಚಂದ್ರ ಬೋಸರು ಅಕ್ಕ ಪಕ್ಕದಲ್ಲಿ ನಿಂತು ನೆರೆದಿದ್ದ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದರು. ರಾಸ್ ಬಿಹಾರಿಯವರು “ಸ್ನೇಹಿತರೆ ಮತ್ತು ಸಹಯೋಧ ಕಾಮ್ರೇಡರೆ, ಇಂದು ನಾನು ನಿಮ್ಮೆಲ್ಲರ  ಉಪಸ್ಥಿತಿಯಲ್ಲಿ ರಾಜೀನಾಮೆ ನೀಡುತ್ತಿದ್ದೇನೆ ಮತ್ತು  ಸುಭಾಷ್ಚಂದ್ರ ಬೋಸ್‌ರನ್ನು ಪೂರ್ವ ಏಷ್ಯಾದಲ್ಲಿ  ಇಂಡಿಯನ್ ಇಂಡಿಪೆಂಡೆನ್ಸ್‌ ಲೀಗ್‌ನ ಅಧ್ಯಕ್ಷರಾಗಿ ನೇಮಿಸುತ್ತಿದ್ದೇನೆ” ಎಂದು ಘೋಷಿಸಿಸುತ್ತಾರೆ. ನೇತಾಜಿಯವರು ಆ ದೊಡ್ಡ ಜವಾಬ್ದಾರಿಯನ್ನು ಎಲ್ಲ ಗೌರವಾದರಗಳಿಂದ, ನಮ್ರತೆಯಿಂದ ಸ್ವೀಕರಿಸುತ್ತಾರೆ.

ಸಕ್ಕರೆ ಕಾಯಿಲೆ ಮತ್ತಿತರ ತೊಂದರೆಗಳಿಂದಾಗಿ ಹಾಸಿಗೆ ಹಿಡಿದಿದ್ದ ರಾಸ್ ಬಿಹಾರಿಯವರು 1945 ಜನವರಿ 21ರಂದು ಕೊನೆಯುಸಿರೆಳೆದರು.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ರಾಸ್ ಬಿಹಾರಿಯವರ ದೇಹಕ್ಕೆ ಹೂಗುಚ್ಚವಿರಿಸಿ ಅತಿ ಭಾವುಕತೆಯಿಂದ ನೇತಾಜಿಯವರು ಹೀಗೆಂದಿದ್ದರು, “ಭಾರತದಲ್ಲಿ ರಾಸ್ ಬಿಹಾರಿಯವರು ಬ್ರಿಟಿಷರ ವಿರುದ್ಧ ಎಸಗುತ್ತಿದ್ದ ಸಾಹಸಮಯ ಕೃತ್ಯಗಳನ್ನು ಕೇಳಿ ನಾ ಪುಳಕಿತಗೊಳ್ಳುತ್ತಿದ್ದೆ. ಈಗ ಮೂವತ್ತು ವರ್ಷಗಳ ನಂತರ ಪೂರ್ವ ಏಷ್ಯಾದಲ್ಲಿ ಅವರ ನಿಕಟ  ಸಂಪರ್ಕಕ್ಕೆ ಬಂದಾಗ ಅವರ ಅದಮ್ಯ ಉತ್ಸಾಹ ಮತ್ತು ಅಪಾರ ಆಶಾವಾದದಿಂದ ನಾನು ಪ್ರಭಾವಿತನಾದೆ. ಅವರ ಇಳಿ ವಯಸ್ಸಾಗಲಿ ಅಥವಾ ಅನಾರೋಗ್ಯವಾಗಲಿ ಅವರ ಹೋರಾಟದ ಕೆಚ್ಚನ್ನು ಕುಗ್ಗಿಸಲಿಲ್ಲ!”

ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿಯಲ್ಲಿದ್ದ ಕ್ರಾಂತಿಕಾರಿಗಳಲ್ಲಿ ಭಾರತದ ಒಳಗಾಗಲಿ, ಭಾರತದ ಹೊರಗಾಗಲಿ, ಬ್ರಿಟಿಷ್ ಸಾಮ್ರಾಜ್ಯದ ದಕ್ಷ ಪೊಲೀಸ್ ಪಡೆಗೆ ಸೆರೆಯಳಾಗದೆ ಒಂದು ದಿನವೂ ಲಾಕಪ್‌ನಲ್ಲಿ ಕಳೆಯದೆ ಕಾರ್ಯನಿರ್ವಹಿಸಿದ ಅದ್ವಿತೀಯ ಹೆಗ್ಗಳಿಕೆ ರಾಸ್ ಬಿಹಾರಿಯವರಿಗೆ ಸಲ್ಲುತ್ತದೆ. ಸಚೀಂದ್ರನಾಥ್ ಸನ್ಯಾಲ್, ಕರ್ತಾರ್ ಸಿಂಗ್ ಸರಬ, ವಿಷ್ಣುಗಣೇಶ್ ಪಿಂಗ್ಲೆ,  ಅಮೀರ್ ಚಾಂದ್, ವಿನಾಯಕ್ ರಾವ್ ಕಾಪ್ಲೆ, ಅಬಾದ್ ಬಿಹಾರಿ, ಬಲ್ಮೊಕಂಡ್, ಬಸಂತ್ ಕುಮಾರ್ ಬಿಶ್ವಾಸ್, ಕುನ್ವರ್ ಪ್ರತಾಪ್ ಸಿಂಗ್ ಹೀಗೆ ರಾಸ್ ಬಿಹಾರಿಯವರ ಮೂಲಕ ಸ್ವಾತಂತ್ರ್ಯ ಹೋರಾಟಕ್ಕಿಳಿದವರ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.

ನಯವಂಚನೆ, ಶೋಷಣೆಗೊಳಗಾದ ಜನರ ಬಗ್ಗೆ ಅವರಿಗಿದ್ದ ಪ್ರೀತಿ-ಅನುಕಂಪ ಹಾಗೂ ಆಳುವ ವರ್ಗ ನಡೆಸುವ ಅನ್ಯಾಯ-ಅಕ್ರಮಗಳ ವಿರುದ್ಧ ಅವರಿಗಿದ್ದ ಆಕ್ರೋಶ, ಅಸಹನೆಗಳು ಅವರಲ್ಲಿ ಆ ಅಪ್ರತಿಮ ಕೆಚ್ಚನ್ನು ಎದೆಗಾರಿಕೆಯನ್ನೂ ಬೆಳೆಸಿತ್ತು.  ಪರಕೀಯರ ಆಳ್ವಿಕೆ ಕಾಲದಲ್ಲಿ ರಾಜಿರಹಿತವಾಗಿ ಅಂದಿನ ಕ್ರಾಂತಿಕಾರಿಗಳು ಹೋರಾಡಿದಂತೆ ಇಂದಿನ ಸಮಾಜದಲ್ಲಿರುವ ಸಮಸ್ಯೆಗಳ ವಿರುದ್ಧ ಜಾತಿ, ಧರ್ಮ, ಪ್ರಾದೇಶಿಕತೆಯ ಭೇದಕ್ಕೊಳಗಾದೇ ಯುವಕರು ಸಂಘಟಿತರಾಗಿ ಹೋರಾಡುವುದೇ ನಾವು ರಾಸ್ ಬಿಹಾರಿ ಬೋಸ್ ರವರಿಗೆ  ಸಲ್ಲಿಸಬಹುದಾದ ನೈಜ ಗೌರವ!

ಇದನ್ನೂ ಓದಿ: ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? – ವಿವರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...