Homeಅಂತರಾಷ್ಟ್ರೀಯ14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

- Advertisement -
- Advertisement -

14 ಸಾವಿರ ಕೋಟಿ ರೂ. ಪಿಎನ್‌ಬಿ (ಪಂಜಾಬ್ ನ್ಯಾಷನಲ್ ಬ್ಯಾಂಕ್) ಸಾಲ ವಂಚನೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ವಾಂಟೆಡ್ ಲಿಸ್ಟ್‌ನಲ್ಲಿರುವ, 2018 ರಲ್ಲಿ ಭಾರತದಿಂದ ಓಡಿ ಹೋಗಿರುವ ಗುಜರಾತಿನ ವಜ್ರ ವ್ಯಾಪಾರಿ ಮೆಹೂಲ್ ಚೋಕ್ಸಿ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಅವರ ವಕೀಲರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಚೋಕ್ಸಿ ಅವರ ವಕೀಲ ವಿಜಯ್ ಅಗರ್‌ವಾಲ್ ಅವರು ಮಂಗಳವಾರ ಬೆಳಿಗ್ಗೆ ಎನ್‌ಡಿಟಿವಿಗೆ ತಮ್ಮ ಕಕ್ಷಿದಾರ ಕಾಣೆಯಾಗಿದ್ದಾರೆ ಮತ್ತು ಅವರ ಕುಟುಂಬವು ಅವರನ್ನು ಹುಡುಕುತ್ತಿದೆ ಎಂದು ದೃಢಪಡಿಸಿದ್ದಾರೆ. ಆಂಟಿಗುವಾ ಪೊಲೀಸರು ಪತ್ತೆ ಕಾರ್ಯ ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ವಿರುದ್ಧ ಹಮಾಸ್ ದಾಳಿಗೆ ವಿರೋಧ: ಪ್ಯಾಲೆಸ್ಟೈನ್ ಬೆಂಬಲಿಸಿದ ಭಾರತ ಸರ್ಕಾರ

ಸ್ಥಳೀಯ ಮಾಧ್ಯಮ ಆಂಟಿಗುವಾ ನ್ಯೂಸ್‌ರೂಮ್, ಪೊಲೀಸ್ ಆಯುಕ್ತ ಅಟ್ಲೀ ರೊಡ್ನಿ ಅವರನ್ನು ಉಲ್ಲೇಖಿಸಿ, ಅಧಿಕಾರಿಗಳು ಭಾರತೀಯ ಉದ್ಯಮಿ ಮೆಹುಲ್ ಚೋಕ್ಸಿ ಇರುವ ಸ್ಥಳವನ್ನು ಅನುಸರಿಸುತ್ತಿದ್ದಾರೆ ಎಂದು ತಿಳಿಸಿದೆ.

ಚೋಕ್ಸಿ ಕಾಣೆಯಾಗಿದ್ದಾರೆ ಎಂದು ಅಧಿಕೃತವಾಗಿ ತಿಳಿಸಲಾಗಿಲ್ಲ ಎಂದು ಸಿಬಿಐನ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ. ದೃಢೀಕರಣ ಮತ್ತು ಹೆಚ್ಚಿನ ಮಾಹಿತಿಗಾಗಿ ಭಾರತದ ಆಂಟಿಗುವಾನ್ ರಾಯಭಾರ ಕಚೇರಿಗೆ ಸಿಬಿಐ ಪತ್ರ ಬರೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

2018 ರಲ್ಲಿ ಜಾಗತಿಕ ಪೊಲೀಸ್ ಸಂಸ್ಥೆ ಇಂಟರ್‌ಪೋಲ್ ಚೋಕ್ಸಿ ವಿರುದ್ಧ ರೆಡ್ ನೋಟಿಸ್ ಹೊರಡಿಸಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಅಂದರೆ ಅವರು ಜಗತ್ತಿನ ಎಲ್ಲಿಯಾದರೂ ಯಾವುದೇ ದೇಶವನ್ನು ಪ್ರವೇಶಿಸಿದರೆ ಸಿಬಿಐಗೆ ಇಂಟರ್‌ಪೋಲ್ ಸೂಚನೆ ನೀಡಲಿದೆ.

ಆಂಟಿಗುವಾದಲ್ಲಿನ ಸ್ಥಳೀಯ ಮಾಧ್ಯಮವನ್ನು ಉಲ್ಲೇಖಿಸಿ ಗುಪ್ತಚರ ಮೂಲಗಳು, ಚೋಕ್ಸಿ ಅವರು ಕ್ಯೂಬಾದಲ್ಲಿ ನೆಲೆಸಿದ್ದಾರೆ ಎಂದು ಹೇಳುತ್ತಿವೆ. “ನಾವು ಅಂತಹ ವರದಿಗಳನ್ನು ಪಡೆದುಕೊಂಡಿದ್ದೇವೆ. ನಾವು ಅದನ್ನು ಪತ್ತೆ ಮಾಡುತ್ತಿದ್ದೇವೆ” ಎಂದು ಹಿರಿಯ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಆಂಟಿಗುವಾದಂತೆ, ಕ್ಯೂಬಾ ಜೊತೆಗೂ ಭಾರತದ ಹಸ್ತಾಂತರ ಒಪ್ಪಂದವಿಲ್ಲ.

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಚೋಕ್ಸಿ ಸೋಮವಾರ ಸಂಜೆ ದ್ವೀಪದ ದಕ್ಷಿಣ ಭಾಗದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಊಟಕ್ಕೆ ಹೋಗಲು ತಮ್ಮ ಮನೆಯಿಂದ ಹೊರಟರು. ಆಮೇಲೆ ಅವರು ಕಾಣಿಸಿಕೊಂಡಿಲ್ಲ. ಅವರ ವಾಹನವು ನಂತರ ಪತ್ತೆಯಾಗಿದೆ. ಆದರೆ ಅವರ ಯಾವುದೇ ಸುಳಿವು ಇಲ್ಲ ಎಂದು ಸ್ಥಳೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ.

ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ಮೆಹುಲ್ ಚೋಕ್ಸಿ ದೀರ್ಘಕಾಲದ ಕಾನೂನು ಹೋರಾಟದಲ್ಲಿ ತೊಡಗಿದ್ದಾರೆ.

ಅವರು ಪ್ರಸ್ತುತ ಆಂಟಿಗುವಾನ್ ಪೌರತ್ವವನ್ನು ಹೊಂದಿದ್ದಾರೆ. ಕಳೆದ ವರ್ಷ ಆಂಟಿಗುವಾ ಪ್ರಧಾನಿ ಗ್ಯಾಸ್ಟನ್ ಬ್ರೌನ್, ಚೋಸ್ಕಿ ಅವರ ಎಲ್ಲಾ ಕಾನೂನು ಆಯ್ಕೆಗಳು ಮುಗಿದ ನಂತರ ಪೌರತ್ವವನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದರು.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

“ಕೆರಿಬಿಯನ್‌ನ ಅನೇಕ ದೇಶಗಳಂತೆ ತಮ್ಮ ದೇಶವು ಅಪರಾಧಿಗಳಿಗೆ, ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿರುವವರಿಗೆ ಸುರಕ್ಷಿತ ತಾಣ ಒದಗಿಸುವುದಿಲ್ಲ” ಎಂದು ಬ್ರೌನ್ ಸ್ಪಷ್ಟಪಡಿಸುತ್ತ ಬಂದಿದ್ದಾರೆ.

“ಪೌರತ್ವದ ಪ್ರಕ್ರಿಯೆ ನಡೆದ ಬಳಿಕ ಚೋಸ್ಕಿ ಪ್ರವೇಶಿಸಿದ್ದಾರೆ. ನಮಗೆ ಬೇರೆ ಪ್ರಕ್ರಿಯೆ ಕೂಡ ಇವೆ. ವಾಸ್ತವವೆಂದರೆ ಅವರ ಪೌರತ್ವವನ್ನು ಹಿಂತೆಗೆದುಕೊಳ್ಳಲಾಗುವುದು ಮತ್ತು ಅವರನ್ನು ಭಾರತಕ್ಕೆ ಗಡೀಪಾರು ಮಾಡಲಾಗುವುದು” ಎಂದು ಬ್ರೌನ್ ಹೇಳಿದ್ದಾರೆ ಎಂದು ಆಂಟಿಗುವಾ ಅಬ್ಸರ್ವರ್ ವರದಿ ಮಾಡಿದೆ.

ಆಂಟಿಗುವಾನ್ ಸಿವಿಲ್ ನ್ಯಾಯಾಲಯವು ಪೌರತ್ವವನ್ನು ರದ್ದುಪಡಿಸಿದೆ ಎಂಬ ಮಾಧ್ಯಮ ವರದಿಗಳು ಸುಳ್ಳು ಎಂದು ಮಾರ್ಚ್‌ನಲ್ಲಿ ಚೋಕ್ಸಿ ಅವರ ವಕೀಲರು ಹೇಳಿದ್ದರು. ಮೆಹುಲ್ ಚೋಕ್ಸಿ ಆಂಟಿಗುವಾನ್ ಪ್ರಜೆಯಾಗಿ ಉಳಿದಿದ್ದಾರೆ ಎಂದು ವಕೀಲ ಅಗರವಾಲ್ ಹೇಳಿದ್ದರು. ಎಎನ್‌ಐ ಜೊತೆಗಿನ ತಮ್ಮ ಹಿಂದಿನ ಸಂದರ್ಶನದಲ್ಲಿ ಚೋಕ್ಸಿ, ತಮ್ಮ ವಿರುದ್ಧದ ಆರೋಪಗಳು ಸುಳ್ಳು, ಆಧಾರರಹಿತ ಮತ್ತು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಪಿಎನ್‌ಬಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಕ್ಸಿಯ ಸಂಬಂಧಿಕ (ಸೋದರಳಿಯ), ಬಿಲಿಯನೇರ್ ಆಭರಣ ವ್ಯಾಪಾರಿ ನೀರವ್ ಮೋದಿ (50) ಕೂಡ ವಾಂಟೆಡ್ ಲಿಸ್ಟ್‌ನಲ್ಲಿದ್ದಾರೆ. ಚೋಕ್ಸಿ ಅವರಂತೆಯೇ ಮೋದಿ ಕೂಡ 2018 ರಲ್ಲಿ ಭಾರತದಿಂದ ಪಲಾಯನ ಮಾಡಿ, ಪ್ರಸ್ತುತ ಬ್ರಿಟನ್ ದೇಶದಲ್ಲಿದ್ದಾರೆ.

ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ಕಳೆದ ತಿಂಗಳು ಬ್ರಿಟಿಷ್‌ ಸರ್ಕಾರ ಅನುಮತಿಸಿತ್ತು. ಆದರೆ ನೀರವ್ ಮೋದಿ ಬ್ರಿಟಿಷ್ ಹಸ್ತಾಂತರದ ಆದೇಶವನ್ನು ಯುಕೆ ಹೈಕೋರ್ಟ್ ಮುಂದೆ ಪ್ರಶ್ನಿಸಬಹುದು.

2019 ರ ಫೆಬ್ರವರಿಯಲ್ಲಿ ಸಹಿ ಮಾಡಿದ ಹಸ್ತಾಂತರ ಆದೇಶದ ವಿರುದ್ಧ ನ್ಯಾಯಾಲಯಕ್ಕೆ ಹೋದ ಮದ್ಯದ ದೊರೆ ವಿಜಯ್ ಮಲ್ಯ ಅವರ ಪ್ರಕರಣದಲ್ಲಿ ಕಂಡುಬರುವಂತೆ, ಈ ಪ್ರಕ್ರಿಯೆಯು ತಿಂಗಳುಗಳು ಅಥವಾ ವರ್ಷಗಳನ್ನು ತೆಗೆದುಕೊಳ್ಳಬಹುದು ಎನ್ನಲಾಗಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...