Homeಮುಖಪುಟಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ದಶಕಗಳಿಂದ ಜಿದ್ದಾಜಿದ್ದಿ ನಡೆಸಿದ ಎರಡು ದ್ರಾವಿಡ ಪಕ್ಷಗಳ ನಡುವೆ ಕೋವಿಡ್ ನಿರ್ವಹಣೆ ವಿಷಯದಲ್ಲಿ ಆ ಹಮ್ಮು ಕಳಚಬಹುದಾದರೆ, ಕರ್ನಾಟಕದಲ್ಲೂ ಅದು ಸುಲಭಕ್ಕೆ ಸಾಧ್ಯವಿದೆ. ಕೇಂದ್ರದಲ್ಲಿ ಸದ್ಯದ ಸ್ಥಿತಿ ನೋಡಿದರೆ ಅದು ಅಸಾಧ್ಯ.

- Advertisement -
- Advertisement -

ಎರಡು ಅವಧಿಗಳ ನಂತರ ಈಗ ಮತ್ತೆ ಅಧಿಕಾರಕ್ಕೆ ಬಂದಿರುವ ಡಿಎಂಕೆಯ ಮುಖ್ಯಮಂತ್ರಿ ಸ್ಟಾಲಿನ್ ಅಲ್ಲೀಗ ಕೋವಿಡ್ ನಿರ್ವಹಣೆಗೆ 13 ಪಕ್ಷಗಳ ಸದಸ್ಯರ ಸರ್ವಪಕ್ಷ ಸಮಿತಿ ರಚಿಸಿದ್ದಾರೆ. ಪ್ರತಿ ವಾರಕ್ಕೊಮ್ಮೆ ಈ ಸಮಿತಿ ಸಭೆ ಸೇರಿ ಕೋವಿಡ್ ನಿರ್ವಹಣೆಯ ಪರಿಶೀಲನೆ ನಡೆಸಿ, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಿದೆ.
ಜಯಲಲಿತಾ, ಕರುಣಾನಿಧಿ ಕಾಲದಲ್ಲಿ ಸದನದಲ್ಲೇ ಬಡಿದಾಟವಾಗಿದ್ದವು. ಡಿಎಂಕೆ ಶಾಸಕನೊಬ್ಬ ಜಯಲಲಿತಾರ ಸೀರೆಯನ್ನೂ ಜಗ್ಗಿದ್ದ. ಜಯಲಲಿತಾ ಮತ್ತು ಕರುಣಾನಿಧಿ ಒಬ್ಬರನ್ನೊಬ್ಬರು ಜೈಲಿಗೆ ಕಳಿಸುವ ಬಗ್ಗೆಯೇ ತಂತ್ರ ಹೆಣೆಯುತ್ತಿದ್ದರು.

ಆದರೆ, ಕಾಲ ಸ್ಟಾಲಿನ್ ಅವರನ್ನು ಹೆಚ್ಚು ಪಕ್ವಗೊಳಿಸಿದಂತೆ ಅಥವಾ ಸ್ಪಷ್ಟ ಬಹುಮತ ಕೊಟ್ಟ ರಾಜ್ಯದ ಜನತೆಯನ್ನು ಕೋವಿಡ್‌ನಿಂದ ಕಾಪಾಡುವ ತುಮುಲವಿದ್ದಂತೆ ಕಾಣುತ್ತಿದೆ. ಎರಡು ಅವಧಿಯವರೆಗೆ ವಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತಿದ್ದು ವಾಸ್ತವ ಅರಿಯಲು ಸಾಧ್ಯವಾಗಿದೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಕೇರಳದಲ್ಲಿ ಕೋವಿಡ್ ಒಂದನೇ ಅಲೆಯ ಸಮಯದಿಂದಲೂ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತ ಬಂದಿದ್ದಾರೆ.

ಅಂತಹ ಜಿದ್ದಾಜಿದ್ದಿಯಿಲ್ಲದ ಕರ್ನಾಟಕದಲ್ಲೂ ಇದು ಸಾಧ್ಯವಾಗಬೇಕಿತ್ತು. ಇಲ್ಲಿ ಸಿದ್ದರಾಮಯ್ಯರ ಅನುಭವ, ಕುಮಾರಸ್ವಾಮಿ ಹೊಂದಾಣಿಕೆ ಎಲ್ಲವೂ ಇವೆ ಮತ್ತು ತಮಿಳುನಾಡಿನಂತೆ ಇಲ್ಲೇನೂ ಹಲವು ಪಕ್ಷಗಳಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿ, ಎಚ್.ಕೆ. ಪಾಟೀಲ್, ರಮೇಶ್‌ಕುಮಾರ್ ಕೃಷ್ಣ ಬೈರೆಗೌಡ…ಅಷ್ಟೇಕೆ ಕೆಂದ್ರ ಬಿಜೆಪಿಯಿಂದ ಸಾಕಷ್ಟು ದುರುದ್ದೇಶದ ಕಿರುಕುಳ ಅನುಭವಿಸಿದ ಡಿ.ಕೆ. ಶಿವಕುಮಾರ್ ಕೂಡ ಸರ್ಕಾರದೊಡನೆ ಸಹಕರಿಸುತ್ತಿದ್ದರು.

ಸಿಪಿಐ, ಸಿಪಿಎಂ, ರೈತಸಂಘ ಎಲ್ಲವನ್ನೂ ಒಳಗೊಂಡ ಸಮಿತಿ ಮಾಡಬಹುದಿತ್ತು. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಬಹುದಾದರೂ, ಕೂಗುಮಾರಿಗಳಂತಿರುವ ಸಂಘ ಮೂಲದ ಬಿಜೆಪಿ ಶಾಸಕರು ಮತ್ತು ರಾಜಕೀಯ ನಾಯಕರು ಇದಕ್ಕೆ ಅಡ್ಡಿ ಮಾಡುತ್ತಿದ್ದರು. ಬಿ.ಎಲ್ ಸಂತೋಷ್ ಪಡೆಯ ಕಾರಣಕ್ಕೇ ಇಂತದ್ದೆಲ್ಲ ಇಲ್ಲಿ ಅಸಾಧ್ಯ. ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಮುಂತಾದವರು ಸಹಜವಾಗಿಯೇ ಈ ನಡೆ ಸ್ವಾಗತಿಸುತ್ತಿದ್ದರು.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಆದರೆ ಈಗೇನಾಗುತ್ತಿದೆ ನೋಡಿ. ಸರ್ಕಾರಕ್ಕೆ ಸಲಹೆ ರೂಪದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಚ್.ಕೆ. ಪಾಟೀಲ, ಕುಮಾರಸ್ವಾಮಿ ಹೇಳಿಕೆ ನೀಡಿದರೆ, ಅದನ್ನು ಸ್ವಾಗತಿಸುವ ಬದಕು ಬಿಜೆಪಿಯ ಕೆಲವರು ಕೊಂಕು ಹೇಳಿಕೆಗಳನ್ನು ಕೊಡುತ್ತಾರೆ.

ಇಲ್ಲಿ ಇನ್ನೊಂದು ಕಾರಣವಿದೆ. ದೇಶದ ಕಾಂಗ್ರೆಸ್ ನಾಯಕರ ಪೈಕಿ ಮೋದಿಯ ಆಡಳಿತವನ್ನು ಯಾವ ಮುಲಾಜೂ ಇಲ್ಲದೇ ಕಟುವಾಗಿ ಟೀಕಿಸುತ್ತ ಬಂದ ಸಿದ್ದರಾಮಯ್ಯರು ಇಲ್ಲಿನ ಸಂಘಪರಿವಾರದ ಶಾಸಕರಿಗೆ ಇಷ್ಟವಾಗುವುದು ಕಷ್ಟ.

ಕೇಂದ್ರದಲ್ಲಿ ಸರ್ವಾಧಿಕಾರ!

ಕೇಂದ್ರ ಸರ್ಕಾರ ಕೋವಿಡ್ ಮೊದಲ ಸಂದರ್ಭದಲ್ಲೇ ಸರ್ವಪಕ್ಷ ಸಮಿತಿ ಮಾಡಿ ಸಲಹೆಗಳನ್ನು ಕೇಳಿದ್ದರೆ, ತಜ್ಞರ ವೈಜ್ಞಾನಿಕ ನೆಲೆಗಟ್ಟಿನ ಸಲಹೆಗಳಿಗೆ ಮಾನ್ಯತೆ ನೀಡಿದ್ದರೆ ಕೋವಿಡ್ ಎರಡನೆ ಅಲೆ ಈ ಮಟ್ಟದ ವಿಕೋಪಕ್ಕೆ ಹೋಗುತ್ತಿರಲಿಲ್ಲ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಆದರೆ ಅಲ್ಲಿರುವುದು ಸರ್ವಾಧಿಕಾರ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಪ್ರಧಾನಿ ಸುತ್ತಲಿನ ಭಟ್ಟಂಗಿ ಅಧಿಕಾರಿಗಳೇ ನಿರ್ಣಯ ಮಾಡುವುದರಿಂದ ಅಲ್ಲಿ ಸರ್ವಪಕ್ಷ ಸಮಿತಿ ಅಸಾಧ್ಯದ ಮಾತೇ. ರಾಹುಲ್ ಗಾಂಧಿ ಮೊದಲ ಅಲೆ ಸಂದರ್ಭದಲ್ಲಿ, ಯಾವ ಹಮ್ಮೂ ಇಲ್ಲದೇ ವಿವಿಧ ತಜ್ಞರ ಜೊತೆ ಚರ್ಚಿಸಿ ಗ್ರಾಫ್‌ಗಳ ಮೂಲಕ ಮುಂದಿನ ಅಪಾಯವನ್ನು ವಿವರಿಸುತ್ತ ಬಂದಾಗ, ಬಿಜೆಪಿಯ ಹಲವು ನಾಯಕರು ಮತ್ತು ಐಟಿಸೆಲ್ ಪಡ್ಡೆಗಳು ಅವರನ್ನು ಗೇಲಿ ಮಾಡುತ್ತ ಬಂದಿದ್ದವು.

ರಾಹುಲ್ ವ್ಯಕ್ತಪಡಿಸಿದ ಆತಂಕ ನಿಜವಾಗುತ್ತ ಬಂತು. ರಾಹುಲ್ ಗಾಂಧಿ ನೀಡುತ್ತಿದ್ದುದು ತಜ್ಞರ ಜೊತೆ ಚರ್ಚಿಸಿ ನೀಡುತ್ತಿದ್ದ ಸಲಹೆಗಳಾಗಿದ್ದವು. ಅಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಮಾತಿಗೇ ಬೆಲೆಯಿಲ್ಲ, ಇನ್ನು ಸರ್ವಪಕ್ಷ ಸಮಿತಿ ಕನಸಿನ ಮಾತೇ ಸರಿ.

ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...