Homeಮುಖಪುಟಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ದಶಕಗಳಿಂದ ಜಿದ್ದಾಜಿದ್ದಿ ನಡೆಸಿದ ಎರಡು ದ್ರಾವಿಡ ಪಕ್ಷಗಳ ನಡುವೆ ಕೋವಿಡ್ ನಿರ್ವಹಣೆ ವಿಷಯದಲ್ಲಿ ಆ ಹಮ್ಮು ಕಳಚಬಹುದಾದರೆ, ಕರ್ನಾಟಕದಲ್ಲೂ ಅದು ಸುಲಭಕ್ಕೆ ಸಾಧ್ಯವಿದೆ. ಕೇಂದ್ರದಲ್ಲಿ ಸದ್ಯದ ಸ್ಥಿತಿ ನೋಡಿದರೆ ಅದು ಅಸಾಧ್ಯ.

- Advertisement -
- Advertisement -

ಎರಡು ಅವಧಿಗಳ ನಂತರ ಈಗ ಮತ್ತೆ ಅಧಿಕಾರಕ್ಕೆ ಬಂದಿರುವ ಡಿಎಂಕೆಯ ಮುಖ್ಯಮಂತ್ರಿ ಸ್ಟಾಲಿನ್ ಅಲ್ಲೀಗ ಕೋವಿಡ್ ನಿರ್ವಹಣೆಗೆ 13 ಪಕ್ಷಗಳ ಸದಸ್ಯರ ಸರ್ವಪಕ್ಷ ಸಮಿತಿ ರಚಿಸಿದ್ದಾರೆ. ಪ್ರತಿ ವಾರಕ್ಕೊಮ್ಮೆ ಈ ಸಮಿತಿ ಸಭೆ ಸೇರಿ ಕೋವಿಡ್ ನಿರ್ವಹಣೆಯ ಪರಿಶೀಲನೆ ನಡೆಸಿ, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಿದೆ.
ಜಯಲಲಿತಾ, ಕರುಣಾನಿಧಿ ಕಾಲದಲ್ಲಿ ಸದನದಲ್ಲೇ ಬಡಿದಾಟವಾಗಿದ್ದವು. ಡಿಎಂಕೆ ಶಾಸಕನೊಬ್ಬ ಜಯಲಲಿತಾರ ಸೀರೆಯನ್ನೂ ಜಗ್ಗಿದ್ದ. ಜಯಲಲಿತಾ ಮತ್ತು ಕರುಣಾನಿಧಿ ಒಬ್ಬರನ್ನೊಬ್ಬರು ಜೈಲಿಗೆ ಕಳಿಸುವ ಬಗ್ಗೆಯೇ ತಂತ್ರ ಹೆಣೆಯುತ್ತಿದ್ದರು.

ಆದರೆ, ಕಾಲ ಸ್ಟಾಲಿನ್ ಅವರನ್ನು ಹೆಚ್ಚು ಪಕ್ವಗೊಳಿಸಿದಂತೆ ಅಥವಾ ಸ್ಪಷ್ಟ ಬಹುಮತ ಕೊಟ್ಟ ರಾಜ್ಯದ ಜನತೆಯನ್ನು ಕೋವಿಡ್‌ನಿಂದ ಕಾಪಾಡುವ ತುಮುಲವಿದ್ದಂತೆ ಕಾಣುತ್ತಿದೆ. ಎರಡು ಅವಧಿಯವರೆಗೆ ವಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತಿದ್ದು ವಾಸ್ತವ ಅರಿಯಲು ಸಾಧ್ಯವಾಗಿದೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಕೇರಳದಲ್ಲಿ ಕೋವಿಡ್ ಒಂದನೇ ಅಲೆಯ ಸಮಯದಿಂದಲೂ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತ ಬಂದಿದ್ದಾರೆ.

ಅಂತಹ ಜಿದ್ದಾಜಿದ್ದಿಯಿಲ್ಲದ ಕರ್ನಾಟಕದಲ್ಲೂ ಇದು ಸಾಧ್ಯವಾಗಬೇಕಿತ್ತು. ಇಲ್ಲಿ ಸಿದ್ದರಾಮಯ್ಯರ ಅನುಭವ, ಕುಮಾರಸ್ವಾಮಿ ಹೊಂದಾಣಿಕೆ ಎಲ್ಲವೂ ಇವೆ ಮತ್ತು ತಮಿಳುನಾಡಿನಂತೆ ಇಲ್ಲೇನೂ ಹಲವು ಪಕ್ಷಗಳಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿ, ಎಚ್.ಕೆ. ಪಾಟೀಲ್, ರಮೇಶ್‌ಕುಮಾರ್ ಕೃಷ್ಣ ಬೈರೆಗೌಡ…ಅಷ್ಟೇಕೆ ಕೆಂದ್ರ ಬಿಜೆಪಿಯಿಂದ ಸಾಕಷ್ಟು ದುರುದ್ದೇಶದ ಕಿರುಕುಳ ಅನುಭವಿಸಿದ ಡಿ.ಕೆ. ಶಿವಕುಮಾರ್ ಕೂಡ ಸರ್ಕಾರದೊಡನೆ ಸಹಕರಿಸುತ್ತಿದ್ದರು.

ಸಿಪಿಐ, ಸಿಪಿಎಂ, ರೈತಸಂಘ ಎಲ್ಲವನ್ನೂ ಒಳಗೊಂಡ ಸಮಿತಿ ಮಾಡಬಹುದಿತ್ತು. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಬಹುದಾದರೂ, ಕೂಗುಮಾರಿಗಳಂತಿರುವ ಸಂಘ ಮೂಲದ ಬಿಜೆಪಿ ಶಾಸಕರು ಮತ್ತು ರಾಜಕೀಯ ನಾಯಕರು ಇದಕ್ಕೆ ಅಡ್ಡಿ ಮಾಡುತ್ತಿದ್ದರು. ಬಿ.ಎಲ್ ಸಂತೋಷ್ ಪಡೆಯ ಕಾರಣಕ್ಕೇ ಇಂತದ್ದೆಲ್ಲ ಇಲ್ಲಿ ಅಸಾಧ್ಯ. ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಮುಂತಾದವರು ಸಹಜವಾಗಿಯೇ ಈ ನಡೆ ಸ್ವಾಗತಿಸುತ್ತಿದ್ದರು.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಆದರೆ ಈಗೇನಾಗುತ್ತಿದೆ ನೋಡಿ. ಸರ್ಕಾರಕ್ಕೆ ಸಲಹೆ ರೂಪದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಚ್.ಕೆ. ಪಾಟೀಲ, ಕುಮಾರಸ್ವಾಮಿ ಹೇಳಿಕೆ ನೀಡಿದರೆ, ಅದನ್ನು ಸ್ವಾಗತಿಸುವ ಬದಕು ಬಿಜೆಪಿಯ ಕೆಲವರು ಕೊಂಕು ಹೇಳಿಕೆಗಳನ್ನು ಕೊಡುತ್ತಾರೆ.

ಇಲ್ಲಿ ಇನ್ನೊಂದು ಕಾರಣವಿದೆ. ದೇಶದ ಕಾಂಗ್ರೆಸ್ ನಾಯಕರ ಪೈಕಿ ಮೋದಿಯ ಆಡಳಿತವನ್ನು ಯಾವ ಮುಲಾಜೂ ಇಲ್ಲದೇ ಕಟುವಾಗಿ ಟೀಕಿಸುತ್ತ ಬಂದ ಸಿದ್ದರಾಮಯ್ಯರು ಇಲ್ಲಿನ ಸಂಘಪರಿವಾರದ ಶಾಸಕರಿಗೆ ಇಷ್ಟವಾಗುವುದು ಕಷ್ಟ.

ಕೇಂದ್ರದಲ್ಲಿ ಸರ್ವಾಧಿಕಾರ!

ಕೇಂದ್ರ ಸರ್ಕಾರ ಕೋವಿಡ್ ಮೊದಲ ಸಂದರ್ಭದಲ್ಲೇ ಸರ್ವಪಕ್ಷ ಸಮಿತಿ ಮಾಡಿ ಸಲಹೆಗಳನ್ನು ಕೇಳಿದ್ದರೆ, ತಜ್ಞರ ವೈಜ್ಞಾನಿಕ ನೆಲೆಗಟ್ಟಿನ ಸಲಹೆಗಳಿಗೆ ಮಾನ್ಯತೆ ನೀಡಿದ್ದರೆ ಕೋವಿಡ್ ಎರಡನೆ ಅಲೆ ಈ ಮಟ್ಟದ ವಿಕೋಪಕ್ಕೆ ಹೋಗುತ್ತಿರಲಿಲ್ಲ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಆದರೆ ಅಲ್ಲಿರುವುದು ಸರ್ವಾಧಿಕಾರ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಪ್ರಧಾನಿ ಸುತ್ತಲಿನ ಭಟ್ಟಂಗಿ ಅಧಿಕಾರಿಗಳೇ ನಿರ್ಣಯ ಮಾಡುವುದರಿಂದ ಅಲ್ಲಿ ಸರ್ವಪಕ್ಷ ಸಮಿತಿ ಅಸಾಧ್ಯದ ಮಾತೇ. ರಾಹುಲ್ ಗಾಂಧಿ ಮೊದಲ ಅಲೆ ಸಂದರ್ಭದಲ್ಲಿ, ಯಾವ ಹಮ್ಮೂ ಇಲ್ಲದೇ ವಿವಿಧ ತಜ್ಞರ ಜೊತೆ ಚರ್ಚಿಸಿ ಗ್ರಾಫ್‌ಗಳ ಮೂಲಕ ಮುಂದಿನ ಅಪಾಯವನ್ನು ವಿವರಿಸುತ್ತ ಬಂದಾಗ, ಬಿಜೆಪಿಯ ಹಲವು ನಾಯಕರು ಮತ್ತು ಐಟಿಸೆಲ್ ಪಡ್ಡೆಗಳು ಅವರನ್ನು ಗೇಲಿ ಮಾಡುತ್ತ ಬಂದಿದ್ದವು.

ರಾಹುಲ್ ವ್ಯಕ್ತಪಡಿಸಿದ ಆತಂಕ ನಿಜವಾಗುತ್ತ ಬಂತು. ರಾಹುಲ್ ಗಾಂಧಿ ನೀಡುತ್ತಿದ್ದುದು ತಜ್ಞರ ಜೊತೆ ಚರ್ಚಿಸಿ ನೀಡುತ್ತಿದ್ದ ಸಲಹೆಗಳಾಗಿದ್ದವು. ಅಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಮಾತಿಗೇ ಬೆಲೆಯಿಲ್ಲ, ಇನ್ನು ಸರ್ವಪಕ್ಷ ಸಮಿತಿ ಕನಸಿನ ಮಾತೇ ಸರಿ.

ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...