Homeಮುಖಪುಟಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ದಶಕಗಳಿಂದ ಜಿದ್ದಾಜಿದ್ದಿ ನಡೆಸಿದ ಎರಡು ದ್ರಾವಿಡ ಪಕ್ಷಗಳ ನಡುವೆ ಕೋವಿಡ್ ನಿರ್ವಹಣೆ ವಿಷಯದಲ್ಲಿ ಆ ಹಮ್ಮು ಕಳಚಬಹುದಾದರೆ, ಕರ್ನಾಟಕದಲ್ಲೂ ಅದು ಸುಲಭಕ್ಕೆ ಸಾಧ್ಯವಿದೆ. ಕೇಂದ್ರದಲ್ಲಿ ಸದ್ಯದ ಸ್ಥಿತಿ ನೋಡಿದರೆ ಅದು ಅಸಾಧ್ಯ.

- Advertisement -
- Advertisement -

ಎರಡು ಅವಧಿಗಳ ನಂತರ ಈಗ ಮತ್ತೆ ಅಧಿಕಾರಕ್ಕೆ ಬಂದಿರುವ ಡಿಎಂಕೆಯ ಮುಖ್ಯಮಂತ್ರಿ ಸ್ಟಾಲಿನ್ ಅಲ್ಲೀಗ ಕೋವಿಡ್ ನಿರ್ವಹಣೆಗೆ 13 ಪಕ್ಷಗಳ ಸದಸ್ಯರ ಸರ್ವಪಕ್ಷ ಸಮಿತಿ ರಚಿಸಿದ್ದಾರೆ. ಪ್ರತಿ ವಾರಕ್ಕೊಮ್ಮೆ ಈ ಸಮಿತಿ ಸಭೆ ಸೇರಿ ಕೋವಿಡ್ ನಿರ್ವಹಣೆಯ ಪರಿಶೀಲನೆ ನಡೆಸಿ, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಿದೆ.
ಜಯಲಲಿತಾ, ಕರುಣಾನಿಧಿ ಕಾಲದಲ್ಲಿ ಸದನದಲ್ಲೇ ಬಡಿದಾಟವಾಗಿದ್ದವು. ಡಿಎಂಕೆ ಶಾಸಕನೊಬ್ಬ ಜಯಲಲಿತಾರ ಸೀರೆಯನ್ನೂ ಜಗ್ಗಿದ್ದ. ಜಯಲಲಿತಾ ಮತ್ತು ಕರುಣಾನಿಧಿ ಒಬ್ಬರನ್ನೊಬ್ಬರು ಜೈಲಿಗೆ ಕಳಿಸುವ ಬಗ್ಗೆಯೇ ತಂತ್ರ ಹೆಣೆಯುತ್ತಿದ್ದರು.

ಆದರೆ, ಕಾಲ ಸ್ಟಾಲಿನ್ ಅವರನ್ನು ಹೆಚ್ಚು ಪಕ್ವಗೊಳಿಸಿದಂತೆ ಅಥವಾ ಸ್ಪಷ್ಟ ಬಹುಮತ ಕೊಟ್ಟ ರಾಜ್ಯದ ಜನತೆಯನ್ನು ಕೋವಿಡ್‌ನಿಂದ ಕಾಪಾಡುವ ತುಮುಲವಿದ್ದಂತೆ ಕಾಣುತ್ತಿದೆ. ಎರಡು ಅವಧಿಯವರೆಗೆ ವಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತಿದ್ದು ವಾಸ್ತವ ಅರಿಯಲು ಸಾಧ್ಯವಾಗಿದೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಕೇರಳದಲ್ಲಿ ಕೋವಿಡ್ ಒಂದನೇ ಅಲೆಯ ಸಮಯದಿಂದಲೂ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತ ಬಂದಿದ್ದಾರೆ.

ಅಂತಹ ಜಿದ್ದಾಜಿದ್ದಿಯಿಲ್ಲದ ಕರ್ನಾಟಕದಲ್ಲೂ ಇದು ಸಾಧ್ಯವಾಗಬೇಕಿತ್ತು. ಇಲ್ಲಿ ಸಿದ್ದರಾಮಯ್ಯರ ಅನುಭವ, ಕುಮಾರಸ್ವಾಮಿ ಹೊಂದಾಣಿಕೆ ಎಲ್ಲವೂ ಇವೆ ಮತ್ತು ತಮಿಳುನಾಡಿನಂತೆ ಇಲ್ಲೇನೂ ಹಲವು ಪಕ್ಷಗಳಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿ, ಎಚ್.ಕೆ. ಪಾಟೀಲ್, ರಮೇಶ್‌ಕುಮಾರ್ ಕೃಷ್ಣ ಬೈರೆಗೌಡ…ಅಷ್ಟೇಕೆ ಕೆಂದ್ರ ಬಿಜೆಪಿಯಿಂದ ಸಾಕಷ್ಟು ದುರುದ್ದೇಶದ ಕಿರುಕುಳ ಅನುಭವಿಸಿದ ಡಿ.ಕೆ. ಶಿವಕುಮಾರ್ ಕೂಡ ಸರ್ಕಾರದೊಡನೆ ಸಹಕರಿಸುತ್ತಿದ್ದರು.

ಸಿಪಿಐ, ಸಿಪಿಎಂ, ರೈತಸಂಘ ಎಲ್ಲವನ್ನೂ ಒಳಗೊಂಡ ಸಮಿತಿ ಮಾಡಬಹುದಿತ್ತು. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಬಹುದಾದರೂ, ಕೂಗುಮಾರಿಗಳಂತಿರುವ ಸಂಘ ಮೂಲದ ಬಿಜೆಪಿ ಶಾಸಕರು ಮತ್ತು ರಾಜಕೀಯ ನಾಯಕರು ಇದಕ್ಕೆ ಅಡ್ಡಿ ಮಾಡುತ್ತಿದ್ದರು. ಬಿ.ಎಲ್ ಸಂತೋಷ್ ಪಡೆಯ ಕಾರಣಕ್ಕೇ ಇಂತದ್ದೆಲ್ಲ ಇಲ್ಲಿ ಅಸಾಧ್ಯ. ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಮುಂತಾದವರು ಸಹಜವಾಗಿಯೇ ಈ ನಡೆ ಸ್ವಾಗತಿಸುತ್ತಿದ್ದರು.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಆದರೆ ಈಗೇನಾಗುತ್ತಿದೆ ನೋಡಿ. ಸರ್ಕಾರಕ್ಕೆ ಸಲಹೆ ರೂಪದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಚ್.ಕೆ. ಪಾಟೀಲ, ಕುಮಾರಸ್ವಾಮಿ ಹೇಳಿಕೆ ನೀಡಿದರೆ, ಅದನ್ನು ಸ್ವಾಗತಿಸುವ ಬದಕು ಬಿಜೆಪಿಯ ಕೆಲವರು ಕೊಂಕು ಹೇಳಿಕೆಗಳನ್ನು ಕೊಡುತ್ತಾರೆ.

ಇಲ್ಲಿ ಇನ್ನೊಂದು ಕಾರಣವಿದೆ. ದೇಶದ ಕಾಂಗ್ರೆಸ್ ನಾಯಕರ ಪೈಕಿ ಮೋದಿಯ ಆಡಳಿತವನ್ನು ಯಾವ ಮುಲಾಜೂ ಇಲ್ಲದೇ ಕಟುವಾಗಿ ಟೀಕಿಸುತ್ತ ಬಂದ ಸಿದ್ದರಾಮಯ್ಯರು ಇಲ್ಲಿನ ಸಂಘಪರಿವಾರದ ಶಾಸಕರಿಗೆ ಇಷ್ಟವಾಗುವುದು ಕಷ್ಟ.

ಕೇಂದ್ರದಲ್ಲಿ ಸರ್ವಾಧಿಕಾರ!

ಕೇಂದ್ರ ಸರ್ಕಾರ ಕೋವಿಡ್ ಮೊದಲ ಸಂದರ್ಭದಲ್ಲೇ ಸರ್ವಪಕ್ಷ ಸಮಿತಿ ಮಾಡಿ ಸಲಹೆಗಳನ್ನು ಕೇಳಿದ್ದರೆ, ತಜ್ಞರ ವೈಜ್ಞಾನಿಕ ನೆಲೆಗಟ್ಟಿನ ಸಲಹೆಗಳಿಗೆ ಮಾನ್ಯತೆ ನೀಡಿದ್ದರೆ ಕೋವಿಡ್ ಎರಡನೆ ಅಲೆ ಈ ಮಟ್ಟದ ವಿಕೋಪಕ್ಕೆ ಹೋಗುತ್ತಿರಲಿಲ್ಲ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಆದರೆ ಅಲ್ಲಿರುವುದು ಸರ್ವಾಧಿಕಾರ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಪ್ರಧಾನಿ ಸುತ್ತಲಿನ ಭಟ್ಟಂಗಿ ಅಧಿಕಾರಿಗಳೇ ನಿರ್ಣಯ ಮಾಡುವುದರಿಂದ ಅಲ್ಲಿ ಸರ್ವಪಕ್ಷ ಸಮಿತಿ ಅಸಾಧ್ಯದ ಮಾತೇ. ರಾಹುಲ್ ಗಾಂಧಿ ಮೊದಲ ಅಲೆ ಸಂದರ್ಭದಲ್ಲಿ, ಯಾವ ಹಮ್ಮೂ ಇಲ್ಲದೇ ವಿವಿಧ ತಜ್ಞರ ಜೊತೆ ಚರ್ಚಿಸಿ ಗ್ರಾಫ್‌ಗಳ ಮೂಲಕ ಮುಂದಿನ ಅಪಾಯವನ್ನು ವಿವರಿಸುತ್ತ ಬಂದಾಗ, ಬಿಜೆಪಿಯ ಹಲವು ನಾಯಕರು ಮತ್ತು ಐಟಿಸೆಲ್ ಪಡ್ಡೆಗಳು ಅವರನ್ನು ಗೇಲಿ ಮಾಡುತ್ತ ಬಂದಿದ್ದವು.

ರಾಹುಲ್ ವ್ಯಕ್ತಪಡಿಸಿದ ಆತಂಕ ನಿಜವಾಗುತ್ತ ಬಂತು. ರಾಹುಲ್ ಗಾಂಧಿ ನೀಡುತ್ತಿದ್ದುದು ತಜ್ಞರ ಜೊತೆ ಚರ್ಚಿಸಿ ನೀಡುತ್ತಿದ್ದ ಸಲಹೆಗಳಾಗಿದ್ದವು. ಅಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಮಾತಿಗೇ ಬೆಲೆಯಿಲ್ಲ, ಇನ್ನು ಸರ್ವಪಕ್ಷ ಸಮಿತಿ ಕನಸಿನ ಮಾತೇ ಸರಿ.

ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...