Homeಮುಖಪುಟಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

ಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

- Advertisement -
- Advertisement -

ದೆಹಲಿ ಪೊಲೀಸರು ಟ್ವಿಟರ್ ಇಂಡಿಯಾದ ದೆಹಲಿ ಮತ್ತು ಗುರಗಾಂವ್ ಕಚೇರಿಗಳಿಗೆ ಭೇಟಿ ನೀಡಿದ ಒಂದು ದಿನದ ನಂತರ, ಬಿಜೆಪಿಯ ಟೂಲ್‌ಕಿಟ್ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಘಟಕ ಮಂಗಳವಾರ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥ ರೋಹನ್ ಗುಪ್ತಾ ಮತ್ತು ಪಕ್ಷದ ವಕ್ತಾರ ಎಂ.ವಿ ರಾಜೀವ್ ಗೌಡ ಅವರಿಗೆ ನೋಟಿಸ್ ನೀಡಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರನ್ನು ವಿಚಾರಣೆಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೋವಿಡ್ ನಿರ್ವಹಣೆ ವಿಷಯ ಬಳಸಿಕೊಂಡು, ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರ್ಕಾರವನ್ನು ನಿಂದಿಸಲು ಕಾಂಗ್ರೆಸ್ ಸಂಚು ರೂಪಿಸಿದೆ ಎಂದು ಆರೋಪಿಸಿ ಆಡಳಿತ ಪಕ್ಷದ ಮುಖಂಡರು ಮಾಡಿದ್ದ ಕೆಲವು ಪೋಸ್ಟ್‌ಗಳನ್ನು ’ತಿರುಚಿದ ಸಂಗತಿ’ (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ವಿಟರ್ ಕಂಪನಿ ಫ್ಲ್ಯಾಗ್ ಮಾಡಿದ ಕೆಲವು ದಿನಗಳ ನಂತರ, ಟ್ವೀಟರ್‌ಗೆ ಎರಡು ನೋಟಿಸ್ ಕಳಿಸಲಾಗಿತ್ತು. ನಿನ್ನೆ ಸೋಮವಾರ ಈ ನೋಟಿಸ್ ಅನ್ನು ನೇರವಾಗಿ ನೀಡಲು ಟ್ವೀಟರ್ ಕಚೇರಿಗಳಿಗೆ ಹೋದ ದೆಹಲಿ ಪೊಲೀಸರಿಗೆ ಅಲ್ಲಿ ಸಂಬಂಧಿಸಿದ ಅಧಿಕಾರಿಗಳು ಸಿಕ್ಕಿರಲಿಲ್ಲ.

ಇದನ್ನೂ ಓದಿ: ನಾಳೆ ಕರಾಳ ದಿನ ಆಚರಣೆ: ರೈತರಿಗೆ ಕಾಂಗ್ರೆಸ್ ಸೇರಿ 12 ಪಕ್ಷಗಳ ಬೆಂಬಲ

ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರ ಪೋಸ್ಟ್ ಅನ್ನು ಟ್ವೀಟರ್ ’ತಿರುಚಿದ ಸಂಗತಿ’ (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ಯಾಗ್ ಮಾಡಿದ್ದನ್ನು ಕೇಂದ್ರವು ಆಕ್ಷೇಪಿಸಿತ್ತು. “ಯಾವುದೇ ಎಫ್‌ಐಆರ್ ದಾಖಲಿಸುವ ಮೊದಲು ನಡೆಸುವ ಸಹಜ ಕ್ರಮದಂತೆ ಪ್ರಾಥಮಿಕ ವಿಚಾರಣೆ ನಡೆಸುತ್ತಿದ್ದೇವೆ ಮತ್ತು ಈ ವಿಷಯದಲ್ಲಿ ಭಾಗಿಯಾಗಿರುವ ಎಲ್ಲ ಸಂಬಂಧಪಟ್ಟ ಜನರು ಮತ್ತು ಸಂಸ್ಥೆಗಳಿಗೆ ಸಮನ್ಸ್ ನೀಡಿದ್ದೇವೆ. ಟೂಲ್‌ಕಿಟ್‌ನ ಬಗ್ಗೆ ಟ್ವಿಟರ್‌ಗೆ ಯಾವ ಮಾಹಿತಿ ಇದೆ ಎಂದು ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

“ಅವರು ’ಮ್ಯಾನಿಪ್ಯುಲೇಟೆಡ್ ಮೀಡಿಯಾ ’ಲೇಬಲ್ ನೀಡಲು ಏಕೆ ಆಯ್ಕೆ ಮಾಡಿದ್ದಾರೆಂದು ತಿಳಿಯಲು ನಾವು ಟ್ವಿಟರ್‌ಗೆ ಸೂಚನೆ ನೀಡಿದ್ದೇವೆ. ಟ್ವಿಟರ್ ಹೊರತುಪಡಿಸಿ, ದೂರುದಾರರಾದ ಕಾಂಗ್ರೆಸ್ ಪ್ರತಿನಿಧಿಗಳಿಗೆ ನಾವು ನೋಟಿಸ್ ನೀಡಿದ್ದೇವೆ, ಘಟನೆಗಳ ಸಂಪೂರ್ಣ ಅನುಕ್ರಮವನ್ನು ವಿವರಿಸಲು ತನಿಖೆಗೆ ಸಹಕರಿಸಲು ಕೇಳಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ವಿಚಾರಣೆಗಾಗಿ ನಾವು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾರಿಗೆ ನೋಟಿಸ್/ಸಮನ್ಸ್ ನೀಡಲಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಸೋಮವಾರ, ದೆಹಲಿ ಪೊಲೀಸ್ ಪಿಆರ್‌ಒ ಚಿನ್ಮಯ್ ಬಿಸ್ವಾಲ್, ಈ ಕ್ರಮವು “ದಿನ ನಿತ್ಯದ ಪ್ರಕ್ರಿಯೆಯ ಒಂದು ಭಾಗವಾಗಿದೆ” ಎಂದು ಹೇಳಿದ್ದರು.

“ಟ್ವಿಟರ್ ಇಂಡಿಯಾ ಎಂ.ಡಿ ನೀಡಿದ ಉತ್ತರಗಳು ಬಹಳ ಅಸ್ಪಷ್ಟವಾಗಿರುವುದರಿಂದ, ನೋಟಿಸ್ ನೀಡಲು ಸರಿಯಾದ ವ್ಯಕ್ತಿ ಯಾರು ಎಂದು ನಾವು ತಿಳಿಯಲು ಟ್ವಿಟರ್ ಕಚೇರಿಗೆ ನೇರವಾಗಿ ನೋಟಿಸ್ ನೀಡಲು ಹೋಗಲಾಗಿತ್ತು” ಎಂದು ಅವರು ಹೇಳಿದ್ದರು.

ದೆಹಲಿ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಕಾಂಗ್ರೆಸ್ ದೂರಿನಲ್ಲಿ, ಲೆಟರ್‌ಹೆಡ್‌ನಲ್ಲಿನ ವಿಷಯ ಮತ್ತು ಇತರರು ಮಾಡಿದ ಟ್ವೀಟ್‌ಗಳನ್ನು ಉಲ್ಲೇಖಿಸಿದ್ದಾರೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರು ಮತ್ತು ಟ್ವಿಟರ್‌ಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೂರ್ಕರ ಕೈಗೆ ಅಧಿಕಾರ ಸಿಕ್ಕಿದರೆ ಆಗುವುದು ಹೀಗೆ. ಅಯೋಗ್ಯರಿಗೆ ಯಾವ ಸಂದರ್ಭದಲ್ಲಿ ಏನು ಮಾಡಬೇಕೆಂಬ ಸಾಮಾನ್ಯ ಜ್ಞಾನವೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...