Homeಮುಖಪುಟಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

ಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

- Advertisement -
- Advertisement -

ದೆಹಲಿ ಪೊಲೀಸರು ಟ್ವಿಟರ್ ಇಂಡಿಯಾದ ದೆಹಲಿ ಮತ್ತು ಗುರಗಾಂವ್ ಕಚೇರಿಗಳಿಗೆ ಭೇಟಿ ನೀಡಿದ ಒಂದು ದಿನದ ನಂತರ, ಬಿಜೆಪಿಯ ಟೂಲ್‌ಕಿಟ್ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಘಟಕ ಮಂಗಳವಾರ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥ ರೋಹನ್ ಗುಪ್ತಾ ಮತ್ತು ಪಕ್ಷದ ವಕ್ತಾರ ಎಂ.ವಿ ರಾಜೀವ್ ಗೌಡ ಅವರಿಗೆ ನೋಟಿಸ್ ನೀಡಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರನ್ನು ವಿಚಾರಣೆಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೋವಿಡ್ ನಿರ್ವಹಣೆ ವಿಷಯ ಬಳಸಿಕೊಂಡು, ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರ್ಕಾರವನ್ನು ನಿಂದಿಸಲು ಕಾಂಗ್ರೆಸ್ ಸಂಚು ರೂಪಿಸಿದೆ ಎಂದು ಆರೋಪಿಸಿ ಆಡಳಿತ ಪಕ್ಷದ ಮುಖಂಡರು ಮಾಡಿದ್ದ ಕೆಲವು ಪೋಸ್ಟ್‌ಗಳನ್ನು ’ತಿರುಚಿದ ಸಂಗತಿ’ (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ವಿಟರ್ ಕಂಪನಿ ಫ್ಲ್ಯಾಗ್ ಮಾಡಿದ ಕೆಲವು ದಿನಗಳ ನಂತರ, ಟ್ವೀಟರ್‌ಗೆ ಎರಡು ನೋಟಿಸ್ ಕಳಿಸಲಾಗಿತ್ತು. ನಿನ್ನೆ ಸೋಮವಾರ ಈ ನೋಟಿಸ್ ಅನ್ನು ನೇರವಾಗಿ ನೀಡಲು ಟ್ವೀಟರ್ ಕಚೇರಿಗಳಿಗೆ ಹೋದ ದೆಹಲಿ ಪೊಲೀಸರಿಗೆ ಅಲ್ಲಿ ಸಂಬಂಧಿಸಿದ ಅಧಿಕಾರಿಗಳು ಸಿಕ್ಕಿರಲಿಲ್ಲ.

ಇದನ್ನೂ ಓದಿ: ನಾಳೆ ಕರಾಳ ದಿನ ಆಚರಣೆ: ರೈತರಿಗೆ ಕಾಂಗ್ರೆಸ್ ಸೇರಿ 12 ಪಕ್ಷಗಳ ಬೆಂಬಲ

ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರ ಪೋಸ್ಟ್ ಅನ್ನು ಟ್ವೀಟರ್ ’ತಿರುಚಿದ ಸಂಗತಿ’ (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ಯಾಗ್ ಮಾಡಿದ್ದನ್ನು ಕೇಂದ್ರವು ಆಕ್ಷೇಪಿಸಿತ್ತು. “ಯಾವುದೇ ಎಫ್‌ಐಆರ್ ದಾಖಲಿಸುವ ಮೊದಲು ನಡೆಸುವ ಸಹಜ ಕ್ರಮದಂತೆ ಪ್ರಾಥಮಿಕ ವಿಚಾರಣೆ ನಡೆಸುತ್ತಿದ್ದೇವೆ ಮತ್ತು ಈ ವಿಷಯದಲ್ಲಿ ಭಾಗಿಯಾಗಿರುವ ಎಲ್ಲ ಸಂಬಂಧಪಟ್ಟ ಜನರು ಮತ್ತು ಸಂಸ್ಥೆಗಳಿಗೆ ಸಮನ್ಸ್ ನೀಡಿದ್ದೇವೆ. ಟೂಲ್‌ಕಿಟ್‌ನ ಬಗ್ಗೆ ಟ್ವಿಟರ್‌ಗೆ ಯಾವ ಮಾಹಿತಿ ಇದೆ ಎಂದು ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

“ಅವರು ’ಮ್ಯಾನಿಪ್ಯುಲೇಟೆಡ್ ಮೀಡಿಯಾ ’ಲೇಬಲ್ ನೀಡಲು ಏಕೆ ಆಯ್ಕೆ ಮಾಡಿದ್ದಾರೆಂದು ತಿಳಿಯಲು ನಾವು ಟ್ವಿಟರ್‌ಗೆ ಸೂಚನೆ ನೀಡಿದ್ದೇವೆ. ಟ್ವಿಟರ್ ಹೊರತುಪಡಿಸಿ, ದೂರುದಾರರಾದ ಕಾಂಗ್ರೆಸ್ ಪ್ರತಿನಿಧಿಗಳಿಗೆ ನಾವು ನೋಟಿಸ್ ನೀಡಿದ್ದೇವೆ, ಘಟನೆಗಳ ಸಂಪೂರ್ಣ ಅನುಕ್ರಮವನ್ನು ವಿವರಿಸಲು ತನಿಖೆಗೆ ಸಹಕರಿಸಲು ಕೇಳಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ವಿಚಾರಣೆಗಾಗಿ ನಾವು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾರಿಗೆ ನೋಟಿಸ್/ಸಮನ್ಸ್ ನೀಡಲಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಸೋಮವಾರ, ದೆಹಲಿ ಪೊಲೀಸ್ ಪಿಆರ್‌ಒ ಚಿನ್ಮಯ್ ಬಿಸ್ವಾಲ್, ಈ ಕ್ರಮವು “ದಿನ ನಿತ್ಯದ ಪ್ರಕ್ರಿಯೆಯ ಒಂದು ಭಾಗವಾಗಿದೆ” ಎಂದು ಹೇಳಿದ್ದರು.

“ಟ್ವಿಟರ್ ಇಂಡಿಯಾ ಎಂ.ಡಿ ನೀಡಿದ ಉತ್ತರಗಳು ಬಹಳ ಅಸ್ಪಷ್ಟವಾಗಿರುವುದರಿಂದ, ನೋಟಿಸ್ ನೀಡಲು ಸರಿಯಾದ ವ್ಯಕ್ತಿ ಯಾರು ಎಂದು ನಾವು ತಿಳಿಯಲು ಟ್ವಿಟರ್ ಕಚೇರಿಗೆ ನೇರವಾಗಿ ನೋಟಿಸ್ ನೀಡಲು ಹೋಗಲಾಗಿತ್ತು” ಎಂದು ಅವರು ಹೇಳಿದ್ದರು.

ದೆಹಲಿ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಕಾಂಗ್ರೆಸ್ ದೂರಿನಲ್ಲಿ, ಲೆಟರ್‌ಹೆಡ್‌ನಲ್ಲಿನ ವಿಷಯ ಮತ್ತು ಇತರರು ಮಾಡಿದ ಟ್ವೀಟ್‌ಗಳನ್ನು ಉಲ್ಲೇಖಿಸಿದ್ದಾರೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರು ಮತ್ತು ಟ್ವಿಟರ್‌ಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೂರ್ಕರ ಕೈಗೆ ಅಧಿಕಾರ ಸಿಕ್ಕಿದರೆ ಆಗುವುದು ಹೀಗೆ. ಅಯೋಗ್ಯರಿಗೆ ಯಾವ ಸಂದರ್ಭದಲ್ಲಿ ಏನು ಮಾಡಬೇಕೆಂಬ ಸಾಮಾನ್ಯ ಜ್ಞಾನವೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...