Homeಕರ್ನಾಟಕಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ...

ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ ಜನ

- Advertisement -
- Advertisement -

ಬೆಡ್ ಬ್ಲಾಕಿಂಗ್ ಹಗರಣ ನಡೆಯುತ್ತಿದೆ ಅದನ್ನು ಬಹಿರಂಗ ಪಡಿಸಿದ್ದೇನೆ ಎಂದು ಮಾಧ್ಯಮಗಳ ಮುಂದೆ ಒಂದು ಸಮುದಾಯದ ಜನರ ಪಟ್ಟಿ ಓದಿ ಟೀಕೆಗೆ ಒಳಗಾಗಿದ್ದ ಸಂಸದ ತೇಜಸ್ವಿ ಸೂರ್ಯ ಮತ್ತೆ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳಿ ಎಂಬ ವಿಚಾರದಲ್ಲಿ ಜನರ ಟೀಕೆಗೆ ಗುರಿಯಾಗಿದ್ದಾರೆ.

ದೇಶವು ಪ್ರಸ್ತುತ ಎದುರಿಸುತ್ತಿರುವ ಪ್ರಮುಖ ಬಿಕ್ಕಟ್ಟಿನ ಮಧ್ಯೆ, ಲಸಿಕೆ ಇಲ್ಲದಿರುವುದು ಒಂದು. ಲಸಿಕೆ ಲಭ್ಯವಿಲ್ಲದ ಬಗ್ಗೆ, ಪೂರೈಕೆ ಬೇಕು ಎಂದು ರಾಜ್ಯಗಳು ಕೇಂದ್ರವನ್ನು ಒತ್ತಾಯಿಸುತ್ತಿವೆ. ಇವುಗಳ ಮಧ್ಯೆ ಸಂಸದ ತೇಜಸ್ವಿ ಸೂರ್ಯ, ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಪಡೆದುಕೊಳ್ಳಿ ಎಂದು ಪ್ರಚಾರ ನಡೆಸಿದ್ದಾರೆ. ಈ ಬ್ಯಾನರ್‌ಗಳು ಜಯನಗರದ ಮೈದಾನದಲ್ಲಿ ಹಾಕಲಾಗಿವೆ.

ರಾಜ್ಯದಲ್ಲಿ ಲಸಿಕೆ ರಾಜಕೀಯ ಮುಂದುವರೆದಿದ್ದು, ‘ತೇಜಸ್ವಿ ಸೂರ್ಯ ಕಚೇರಿಯಿಂದ ಬೆಂಬಲಿತವಾಗಿದೆ’ ಎಂಬ ಪೋಸ್ಟರ್ ಜಯನಗರದ ಬಿಬಿಎಂಪಿ ಕೇಂದ್ರದ ಪಕ್ಕದಲ್ಲಿ ಕಾಣಿಸಿಕೊಂಡಿವೆ. ಶಾಲಿನಿ ಮೈದಾನದಲ್ಲಿ ವಾಸವಿ ಆಸ್ಪತ್ರೆಯಲ್ಲಿ 900 ರೂಪಾಯಿಗೆ ಲಸಿಕೆ ನೀಡಲಾಗುತ್ತದೆ ಎಂಬ ಬ್ಯಾನರ್‌ಗಳು ಕಾಣಿಸಿಕೊಂಡಿವೆ. ಎಲ್ಲಾ ಬ್ಯಾನರ್‌ಗಳಲ್ಲಿಯೂ ಸಂಸದ ತೇಜಸ್ವಿ ಸೂರ್ಯ ಬೆಂಬಲಿತ ಎಂಬ ಬರಹ ಮತ್ತು ಅವರ ಫೋಟೋ ಹಾಕಲಾಗಿದೆ. ಈ ಪೋಸ್ಟರ್‌ಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಂ ಪಟ್ಟಿ: ಸಂತ್ರಸ್ತರು ಆರೋಪ ಮುಕ್ತರಾದರೂ ಇನ್ನೂ ಮರಳಿ ಸಿಗದ ಉದ್ಯೋಗ

ಹಲವು ನೆಟ್ಟಿಗರು ತಮ್ಮ ಖಾತೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಇರುವ ಬ್ಯಾನರ್‌ಗಳನ್ನು ಹಂಚಿಕೊಂಡು, ಇಂತಹ ರಾಜಕಾರಣ ಬಿಡಿ, ಜನರು ಲಸಿಕೆ ಇಲ್ಲದೆ ಆತಂಕದಲ್ಲಿರುವಾಗ ಖಾಸಗಿ ಆಸ್ಪತ್ರೆಯ ಲಸಿಕೆ ಅಭಿಯಾನ ಹೇಗೆ ಬೆಂಬಲಿಸುತ್ತಿರಿ ಎಂದು ಪ್ರಶ್ನಿಸಿದ್ದಾರೆ.

 

“ಶಾಲಿನಿ ಮೈದಾನದಲ್ಲಿ ವಾಸವಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ 900 ರೂಪಾಯಿ ತೆಗೆದುಕೊಳ್ಳುವ ಮೂಲಕ ಲಸಿಕೆ ಹಾಕುತ್ತಾರೆ. ಸಂಪೂರ್ಣ ಕಾರ್ಯಕ್ರಮದ ಕ್ರೆಡಿಟ್ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೆಗೆದುಕೊಳ್ಳುತ್ತಾರೆ. ಬಿಬಿಎಂಪಿಯಲ್ಲಿ ಲಸಿಕೆ ಇಲ್ಲದಿದ್ದಾಗ ಖಾಸಗಿ ಆಸ್ಪತ್ರೆಯನ್ನು ಸಂಸದರು ಹೇಗೆ ಉತ್ತೇಜಿಸಬಹುದು..? ಈ ಕೆಲಸಕ್ಕೆ ಅವರು ಎಷ್ಟು ಕಮಿಷನ್ ಪಡೆಯುತ್ತಿದ್ದಾರೆ..? ವಾಸವಿ ಆಸ್ಪತ್ರೆ ಲಸಿಕೆ ಖರೀದಿ ಸರಕುಪಟ್ಟಿ ತೋರಿಸಬೇಕು” ಎಂದು ಭೂಷಣ್ ಎಂಬುವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

“ತೇಜಸ್ವಿ ಸೂರ್ಯನಂತಹ ಬಿಜೆಪಿ ಸಂಸದರು ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬಹುದು ಮತ್ತು ಪ್ರತಿ ಡೋಸ್‌ಗೆ 900 ರೂಪಾಯಿ ಶುಲ್ಕ ವಿಧಿಸಬಹುದು. ಆದರೆ ಕಾಂಗ್ರೆಸ್ ಸಂಸದರು, ಶಾಸಕರು, ಸಂಸದರು, ಎಂಎಲ್‌ಎಡಿಎಸ್ ಮತ್ತು ಪಾರ್ಟಿ ಫಂಡ್‌ಗಳನ್ನು ಬಳಸಿಕೊಂಡು ಲಸಿಕೆ ಖರೀದಿಸಲು ಸರ್ಕಾರ ಏಕೆ ಅವಕಾಶ ನೀಡುತ್ತಿಲ್ಲ..? ಈ ಪಕ್ಷಪಾತ ಏಕೆ..?” ಎಂದು ಕಾಂಗ್ರೆಸ್ ಯುವ ನಾಯಕ ಶ್ರೀವತ್ಸಾ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತೇಜಸ್ವಿ ಸೂರ್ಯ ಒಬ್ಬ ಗ್ರಾಮ ಪಂಚಾಯತಿ ಸದಸ್ಯನಾಗಿರಲಿಕ್ಕೂ ನಾಲಾಯಕ್.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...