Homeಮುಖಪುಟ’ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

’ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

"ಪುಸ್ತಕವು 420 ವ್ಯಕ್ತಿಯ 420 ರಹಸ್ಯಗಳನ್ನು ಹೇಳುತ್ತದೆ, 2014 ರಿಂದ ದೇಶವು ಹೇಗೆ ಪ್ರಗತಿ ಸಾಧಿಸಿದೆ ಎಂಬುದರ ಬಗ್ಗೆ ವಿವರಿಸುತ್ತದೆ. ಈ ಪುಸ್ತಕ ನೊಬೆಲ್ ಪ್ರಶಸ್ತಿಯನ್ನು ಪಡೆಯಬೇಕು"

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಅಮೆಜಾನ್‌ನಲ್ಲಿ ಪುಸ್ತಕವೊಂದು ಬಿಡುಗಡೆಯಾಗಿದೆ. ಮೇ 23 ರಂದು ಬಿಡುಗಡೆಯಾಗಿರುವ ಈ ಪುಸ್ತಕದ ಹೆಸರು “ಮಾಸ್ಟರ್‌ಸ್ಟ್ರೋಕ್: ಭಾರತದ ಉದ್ಯೋಗ ಬೆಳವಣಿಗೆಯಲ್ಲಿ ಪ್ರಧಾನ ಮಂತ್ರಿಗೆ ಸಹಾಯ ಮಾಡಿದ 420 ರಹಸ್ಯಗಳು!”.

ಪುಸ್ತಕದ ಲೇಖಕನ ಹೆಸರು ನಿರುದ್ಯೋಗಿ ಭಕ್ತ (ಬೆರೋಜ್ಗರ್ ಭಕ್ತ್) ಎಂದಿದ್ದು. ಈ ಪುಸ್ತಕದಲ್ಲಿ 56 ಪುಟಗಳಿದ್ದು, ಎಲ್ಲವೂ ಖಾಲಿ ಪುಟಗಳಾಗಿವೆ. ಪುಸ್ತಕದ ಬಗ್ಗೆ ಹಲವು ಮಂದಿ ಕಾಮೆಂಟ್ ಮಾಡಿದ್ದು, ಪುಸ್ತಕದೊಳಗಿರುವ ವಿಷಯ ಅದ್ಭುತವಾಗಿದೆ ಎಂದಿದ್ದಾರೆ.

ಪುಸ್ತಕದ ವಿವರಣೆಯಲ್ಲಿ, “ಕೊರೊನಾ ವಿರುದ್ಧದ ಹೋರಾಟದಲ್ಲಿ ಅದ್ಭುತವಾಗಿ ಗೆಲುವು ಸಾಧಿಸಲು ಮತ್ತು ಸಮೃದ್ಧಿಯ ಹಾದಿಯಲ್ಲಿ ನಡೆಯಲು ಹೆಣಗಾಡುತ್ತಿರುವ ರಾಷ್ಟ್ರಕ್ಕೆ ಒಬ್ಬ ಮಹಾನ್ ನಾಯಕ ಹೇಗೆ ಸಹಾಯ ಮಾಡಿದನು” ಎಂಬುದರ ಬಗ್ಗೆ ಬರೆಯಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಕೇಂದ್ರದ ದಮನಕಾರಿ ರಾಜಕೀಯ ತಂತ್ರ ಮತ್ತು ಕೋವಿಡ್‌ ನಂತರದಲ್ಲಿ ಸಂಭವಿಸಬಹುದಾದ ಹೊಸ ಬದಲಾವಣೆಗಳು

 

ಇಂತಹ ಒಂದು ಪುಸ್ತಕವನ್ನು ಅಮೆಜಾನ್ ಒಪ್ಪಿಕೊಂಡಿದ್ದರ ಬಗ್ಗೆಯೂ ಮೆಚ್ಚುಗೆ ವ್ಯಕ್ತವಾಗಿದೆ.

ಭಯಂಕರ್‌ ಲೋಗ್ ಎಂಬ ಟ್ವಿಟ್ಟರ್‌ ಖಾತೆ ಬಳಕೆದಾರರು, “ಭಾರತದಲ್ಲಿ ಅಮೆಜಾನ್ ಶೀಘ್ರದಲ್ಲೇ ಮುಚ್ಚಲಿದೆ ಎಂದು ತೋರುತ್ತಿದೆ. ಯಾರೋ ಒಬ್ಬರು ಅಮೆಜಾನ್‌ನಲ್ಲಿ ಮಾಸ್ಟರ್‌ಸ್ಟ್ರೋಕ್ ಎಂಬ ಪುಸ್ತಕವನ್ನು ಪ್ರಕಟಿಸಿದ್ದಾರೆ. ಇದು ಪೂರ್ತಿ ಖಾಲಿ ಪುಟಗಳನ್ನು ಹೊಂದಿದೆ” ಎಂದು ಕೀಟಲೆ ಮಾಡಿದ್ದಾರೆ.

 

PC: Amazon

ಪುಸ್ತಕದ ವಿಮರ್ಶೆಗಳಲ್ಲಿ ಹಲವು ಮಂದಿ ತುಂಬ ಅದ್ಭುತ ಪುಸ್ತಕ, ಓದಲೇ ಬೇಕು, ಮಾಸ್ಟರ್‌ಪೀಸ್, ಮಾಸ್ಟರ್‌ಸ್ಟ್ರೋಕ್, ಲೇಖಕರಿಗೆ ಧನ್ಯವಾದಗಳು ಎಂಬಂತಹ ಮಾತುಗಳನ್ನು ಹೇಳಿದ್ದಾರೆ.

“ಈ ಪುಸ್ತಕ ತುಂಬಾ ಸೃಜನಶೀಲ ಮತ್ತು ಅದನ್ನು ಓದುವ ಮೋಜನ್ನು ನೀಡಿದೆ. ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ 5-ಸ್ಟಾರ್ ರೇಟಿಂಗ್‌ಗೆ ಈ ಪುಸ್ತಕ ಅರ್ಹವಾಗಿದೆ. ಇದು ಇಲ್ಲಿಯವರೆಗೆ ನಾನು ತುಂಬಾ ವೇಗವಾಗಿ ಓದಿದ ಪುಸ್ತಕ” ಎಂದು ವ್ಯಕ್ತಿಯೊಬ್ಬರು ಬರೆದಿದ್ದಾರೆ.

“ಇದು ಬಹಳ ಉತ್ತಮ ಪುಸ್ತಕ. ಈ ಪುಸ್ತಕವು 420 ವ್ಯಕ್ತಿಯ 420 ರಹಸ್ಯಗಳನ್ನು ಹೇಳುತ್ತದೆ, 2014 ರಿಂದ ದೇಶವು ಹೇಗೆ ಪ್ರಗತಿ ಸಾಧಿಸಿದೆ ಎಂಬುದರ ಬಗ್ಗೆ ವಿವರಿಸುತ್ತದೆ. ಈ ಪುಸ್ತಕ ನೊಬೆಲ್ ಪ್ರಶಸ್ತಿಯನ್ನು ಪಡೆಯಬೇಕು” ಎಂದು ಮತ್ತೊಬ್ಬರು ಹೇಳಿದ್ದಾರೆ.

ನಿರುದ್ಯೋಗಿ ಭಕ್ತನ ಈ ಪುಸ್ತಕಕ್ಕೆ ಫೈವ್ ಸ್ಟಾರ್ ರೇಟೀಂಗ್ ದೊರೆತಿದೆ. 56 ಪುಟಗಳ ಖಾಲಿ ಪುಸ್ತಕದ ಬೆಲೆ 56 ರೂಪಾಯಿ. ಪುಸ್ತಕವನ್ನು ಮಕ್ಕಳಿಂದ 18 ವರ್ಷದವರು ಓದಬಹುದು ಎಂದಿದೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...