Homeಮುಖಪುಟ’ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

’ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

"ಪುಸ್ತಕವು 420 ವ್ಯಕ್ತಿಯ 420 ರಹಸ್ಯಗಳನ್ನು ಹೇಳುತ್ತದೆ, 2014 ರಿಂದ ದೇಶವು ಹೇಗೆ ಪ್ರಗತಿ ಸಾಧಿಸಿದೆ ಎಂಬುದರ ಬಗ್ಗೆ ವಿವರಿಸುತ್ತದೆ. ಈ ಪುಸ್ತಕ ನೊಬೆಲ್ ಪ್ರಶಸ್ತಿಯನ್ನು ಪಡೆಯಬೇಕು"

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಅಮೆಜಾನ್‌ನಲ್ಲಿ ಪುಸ್ತಕವೊಂದು ಬಿಡುಗಡೆಯಾಗಿದೆ. ಮೇ 23 ರಂದು ಬಿಡುಗಡೆಯಾಗಿರುವ ಈ ಪುಸ್ತಕದ ಹೆಸರು “ಮಾಸ್ಟರ್‌ಸ್ಟ್ರೋಕ್: ಭಾರತದ ಉದ್ಯೋಗ ಬೆಳವಣಿಗೆಯಲ್ಲಿ ಪ್ರಧಾನ ಮಂತ್ರಿಗೆ ಸಹಾಯ ಮಾಡಿದ 420 ರಹಸ್ಯಗಳು!”.

ಪುಸ್ತಕದ ಲೇಖಕನ ಹೆಸರು ನಿರುದ್ಯೋಗಿ ಭಕ್ತ (ಬೆರೋಜ್ಗರ್ ಭಕ್ತ್) ಎಂದಿದ್ದು. ಈ ಪುಸ್ತಕದಲ್ಲಿ 56 ಪುಟಗಳಿದ್ದು, ಎಲ್ಲವೂ ಖಾಲಿ ಪುಟಗಳಾಗಿವೆ. ಪುಸ್ತಕದ ಬಗ್ಗೆ ಹಲವು ಮಂದಿ ಕಾಮೆಂಟ್ ಮಾಡಿದ್ದು, ಪುಸ್ತಕದೊಳಗಿರುವ ವಿಷಯ ಅದ್ಭುತವಾಗಿದೆ ಎಂದಿದ್ದಾರೆ.

ಪುಸ್ತಕದ ವಿವರಣೆಯಲ್ಲಿ, “ಕೊರೊನಾ ವಿರುದ್ಧದ ಹೋರಾಟದಲ್ಲಿ ಅದ್ಭುತವಾಗಿ ಗೆಲುವು ಸಾಧಿಸಲು ಮತ್ತು ಸಮೃದ್ಧಿಯ ಹಾದಿಯಲ್ಲಿ ನಡೆಯಲು ಹೆಣಗಾಡುತ್ತಿರುವ ರಾಷ್ಟ್ರಕ್ಕೆ ಒಬ್ಬ ಮಹಾನ್ ನಾಯಕ ಹೇಗೆ ಸಹಾಯ ಮಾಡಿದನು” ಎಂಬುದರ ಬಗ್ಗೆ ಬರೆಯಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಕೇಂದ್ರದ ದಮನಕಾರಿ ರಾಜಕೀಯ ತಂತ್ರ ಮತ್ತು ಕೋವಿಡ್‌ ನಂತರದಲ್ಲಿ ಸಂಭವಿಸಬಹುದಾದ ಹೊಸ ಬದಲಾವಣೆಗಳು

 

ಇಂತಹ ಒಂದು ಪುಸ್ತಕವನ್ನು ಅಮೆಜಾನ್ ಒಪ್ಪಿಕೊಂಡಿದ್ದರ ಬಗ್ಗೆಯೂ ಮೆಚ್ಚುಗೆ ವ್ಯಕ್ತವಾಗಿದೆ.

ಭಯಂಕರ್‌ ಲೋಗ್ ಎಂಬ ಟ್ವಿಟ್ಟರ್‌ ಖಾತೆ ಬಳಕೆದಾರರು, “ಭಾರತದಲ್ಲಿ ಅಮೆಜಾನ್ ಶೀಘ್ರದಲ್ಲೇ ಮುಚ್ಚಲಿದೆ ಎಂದು ತೋರುತ್ತಿದೆ. ಯಾರೋ ಒಬ್ಬರು ಅಮೆಜಾನ್‌ನಲ್ಲಿ ಮಾಸ್ಟರ್‌ಸ್ಟ್ರೋಕ್ ಎಂಬ ಪುಸ್ತಕವನ್ನು ಪ್ರಕಟಿಸಿದ್ದಾರೆ. ಇದು ಪೂರ್ತಿ ಖಾಲಿ ಪುಟಗಳನ್ನು ಹೊಂದಿದೆ” ಎಂದು ಕೀಟಲೆ ಮಾಡಿದ್ದಾರೆ.

 

PC: Amazon

ಪುಸ್ತಕದ ವಿಮರ್ಶೆಗಳಲ್ಲಿ ಹಲವು ಮಂದಿ ತುಂಬ ಅದ್ಭುತ ಪುಸ್ತಕ, ಓದಲೇ ಬೇಕು, ಮಾಸ್ಟರ್‌ಪೀಸ್, ಮಾಸ್ಟರ್‌ಸ್ಟ್ರೋಕ್, ಲೇಖಕರಿಗೆ ಧನ್ಯವಾದಗಳು ಎಂಬಂತಹ ಮಾತುಗಳನ್ನು ಹೇಳಿದ್ದಾರೆ.

“ಈ ಪುಸ್ತಕ ತುಂಬಾ ಸೃಜನಶೀಲ ಮತ್ತು ಅದನ್ನು ಓದುವ ಮೋಜನ್ನು ನೀಡಿದೆ. ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ 5-ಸ್ಟಾರ್ ರೇಟಿಂಗ್‌ಗೆ ಈ ಪುಸ್ತಕ ಅರ್ಹವಾಗಿದೆ. ಇದು ಇಲ್ಲಿಯವರೆಗೆ ನಾನು ತುಂಬಾ ವೇಗವಾಗಿ ಓದಿದ ಪುಸ್ತಕ” ಎಂದು ವ್ಯಕ್ತಿಯೊಬ್ಬರು ಬರೆದಿದ್ದಾರೆ.

“ಇದು ಬಹಳ ಉತ್ತಮ ಪುಸ್ತಕ. ಈ ಪುಸ್ತಕವು 420 ವ್ಯಕ್ತಿಯ 420 ರಹಸ್ಯಗಳನ್ನು ಹೇಳುತ್ತದೆ, 2014 ರಿಂದ ದೇಶವು ಹೇಗೆ ಪ್ರಗತಿ ಸಾಧಿಸಿದೆ ಎಂಬುದರ ಬಗ್ಗೆ ವಿವರಿಸುತ್ತದೆ. ಈ ಪುಸ್ತಕ ನೊಬೆಲ್ ಪ್ರಶಸ್ತಿಯನ್ನು ಪಡೆಯಬೇಕು” ಎಂದು ಮತ್ತೊಬ್ಬರು ಹೇಳಿದ್ದಾರೆ.

ನಿರುದ್ಯೋಗಿ ಭಕ್ತನ ಈ ಪುಸ್ತಕಕ್ಕೆ ಫೈವ್ ಸ್ಟಾರ್ ರೇಟೀಂಗ್ ದೊರೆತಿದೆ. 56 ಪುಟಗಳ ಖಾಲಿ ಪುಸ್ತಕದ ಬೆಲೆ 56 ರೂಪಾಯಿ. ಪುಸ್ತಕವನ್ನು ಮಕ್ಕಳಿಂದ 18 ವರ್ಷದವರು ಓದಬಹುದು ಎಂದಿದೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...