Homeಕರ್ನಾಟಕಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

ಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

- Advertisement -
- Advertisement -

ಮೇ 27 ರ ಬೆಳಗಿನ 10 ಗಂಟೆಯಿಂದ ಜೂನ್ 1ರ ಬೆಳಗಿನ 6 ಗಂಟೆವರೆಗೆ ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಹೇರುವ ಘೋಷಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರು ಘೋಷಿಸಿದ್ದಾರೆ. ಗದಗ ಜಿಲ್ಲೆಯಾದ್ಯಂತ ಸಂಪೂರ್ಣ ಅಂದರೆ ಕಠಿಣ ಲಾಕ್‌ಡೌನ್ ವಿಧಿಸಿದೆ ಜಿಲ್ಲಾಡಳಿತ.

ಈಗಾಗಲೇ ರಾಜ್ಯಾದ್ಯಂತ ಜೂನ್ 7ರ ವರೆಗೆ ಲಾಕ್‌ಡೌನ್ ಮುಂದುವರೆಸಲಾಗಿದೆ. ಈ ನಡುವೆ ಗದಗ ಜಿಲ್ಲೆಯಲ್ಲಿ 5 ದಿನ ಕಂಪ್ಲೀಟ್ ಲಾಕ್‌ಡೌನ್ ಮಾಡುವ ಅಗತ್ಯವಿತ್ತೆ..? ಎಂಬ ಪ್ರಶ್ನೆ ಮೂಡಿದೆ. ಪಕ್ಕದ ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಈ ‘ಸಾಹಸವನ್ನು’ ಈಗಾಗಲೇ ಮಾಡಲಾಗಿದೆ.

ಗದಗ ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಜಿಲ್ಲಾಧಿಕಾರಿ ಸುಂದರೇಶಬಾಬು ಪ್ರತಿನಿತ್ಯ ಪ್ರಕಟಿಸುವ ಕೋವಿಡ್ ಸಂಬಂಧಿತ ಅಂಕಿಅಂಶಗಳ ಪ್ರಕಾರ, ಇಲ್ಲಿ ದೈನಂದಿನ ಪಾಸಿಟಿವ್ ಕೇಸು ಇಳಿಮುಖ ಹಾದಿಯಲ್ಲಿವೆ.  ಮೇ 18 ರಂದು ದೈನಂದಿನ ಪಾಸಿಟಿವ್ ಕೇಸುಗಳ ಸಂಖ್ಯೆ 543 ಇದ್ದರೆ, ಮೇ 24ರಂದು ಅದು 277 ಇದೆ. ಗುಣಮುಖರಾದವರ ಸಂಖ್ಯೆ ಏರುಗತಿಯಲ್ಲಿದೆ. ಮೇ 18 ರಂದು 243 ಜನ ಗುಣಮುಖರಾಗಿದ್ದರೆ, ಮೇ 24ರಂದು 470 ಜನರು ಗುಣಮುಖರಾಗಿದ್ದಾರೆ. ಸಾವುಗಳ ಸಂಖ್ಯೆ ಕೂಡ ಇಳಿಮುಖದಲ್ಲಿದೆ. ಮೇ 18 ರಂದು ದೈನಂದಿನ 5 ಸಾವು ಇದ್ದದ್ದು ಈಗ 3ಕ್ಕೆ ಇಳಿದಿದೆ.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

ಹೀಗಿರುವಾಗ, ಮತ್ತೇಕೆ ಸಂಪೂರ್ಣ ಲಾಕ್‌ಡೌನ್ ಏಕೆ ಬೇಕು.? ತಾವು ತೆಗೆದುಕೊಂಡ ಕ್ರಮದಿಂದಲೇ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿತು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಥವಾ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾರನ್ನು ಮೆಚ್ಚಿಸುವ ತಂತ್ರವೇ..? ಎಂದು ಜನ ಪ್ರಶ್ನಿಸುತ್ತಿದ್ದಾರೆ.

‘ಬಿಜೆಪಿ ನಾಯಕರು ಮನೆ ಬಿಟ್ಟು ಹೊರಬಂದು ಜನರ ನೆರವಿಗೆ ಧಾವಿಸಿ’ ಎಂದು ನಡ್ಡಾ ಈ ಅರ್ಥದಲ್ಲೇ ಹೇಳಿದರೆ..? ತಾವು ಜಿಲ್ಲೆಯಲ್ಲಿಯೇ ಇದ್ದೇವೆ ಎಂದು ತೋರಿಸಲು ಸಚಿವ ಪಾಟೀಲರು ಇಂತಹ ಕ್ರಮಕ್ಕೆ ಮುಂದಾದರೆ..? ಈ ಹುಚ್ಚಾಟದಿಂದ ಈಗಾಗಲೇ ತೊಂದರೆಗೆ ಸಿಲುಕಿರುವ ಬಡಜನರು ಇನ್ನಷ್ಟು ತೊಂದರೆಗೆ ಸಿಲುಕವುದಿಲ್ಲವೇ..? ಈ ಅವಧಿಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗದಿದ್ದಲ್ಲಿ ಲಾಕ್‌ಡೌನ್ ಮುಂದುವರೆಸಲಾಗುವುದು ಎಂದು ಪಾಟೀಲರು ‘ಎಚ್ಚರಿಕೆ’ ನೀಡಿದ್ದಾರೆ.

ಜನರ ಸಹಕಾರ ಇದ್ದಾಗ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದಿರುವ ಸಚಿವ ಸಿ.ಸಿ ಪಾಟೀಲರು ಎಲ್ಲ ಮಾರುಕಟ್ಟೆಗಳನ್ನು ಬಂದ್ ಮಾಡಿದ್ದಾರೆ. ತರಕಾರಿ, ಹಾಗೂ ಹಣ್ಣು ಹೂವು ವ್ಯಾಪಾರಸ್ಥರು ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡಬೇಕು. ಮುಂಜಾನೆ 6 ರ ವರೆಗೆ ಹಾಲಿನ ಅಂಗಡಿ ಓಪನ್. ದಿನಸಿ ಪದಾರ್ಥಗಳನ್ನು ಹೋಂ ಡಿಲೇವರಿ ಮಾಡಬೇಕು ಎಂದು ಆದೇಶ ನೀಡಲಾಗಿದೆ.

ರೈತಾಪಿ ವಸ್ತುಗಳ ಖರೀದಿಗೆ ಬೆಳಿಗ್ಗೆ 10 ರವರೆಗೆ ಮಾತ್ರ ಅವಕಾಶ. ಆದರೆ, ಎಲ್ಲ ಮಾರುಕಟ್ಟೆ, ಸಂಚಾರ ಬಂದ್ ಮಾಡಿದ ಮೇಲೆ ಹಳ್ಳಿಗಳ ರೈತರು ಹೇಗೆ ಖರೀದಿ ಮಾಡಲು ಸಾಧ್ಯ? ಹೋಟೆಲ್, ಮಾಂಸದಂಗಡಿಗಳೂ ಸಂಪೂರ್ಣ ಬಂದ್ ಎಂದಿದ್ದಾರೆ.

ಇದನ್ನೂ ಓದಿ: ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಅಂಚೆ ಕಚೇರಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಬಾಗಿಲು ಮುಚ್ಚಿ ಕಚೇರಿ ಕೆಲಸ ಮಾಡಬೇಕಂತೆ. ಜನರಿಗೆ ಡಿಪಾಸಿಟ್  ಮಾಡಲು ಹಾಗೂ ಹಣ ತೆಗೆಯಲು ಅವಕಾಶವಿಲ್ಲ ಎನ್ನಲಾಗಿದೆ.

ಕೋವ್ಯಾಕ್ಸಿನ್ ಎರಡನೇ ಡೋಸ್‌ಗೆ ಮಾತ್ರ ಅವಕಾಶ, ಕೋವಿಶೀಲ್ಡ್ ತೆಗೆದುಕೊಂಡು 12 ರಿಂದ 16 ವಾರವಾಗಿದ್ದರೆ ಎರಡನೇ ಡೋಸ್‌ಗೆ ಅವಕಾಶ. ವಾಹನ ಸಂಚಾರವೇ ಸಂಪೂರ್ಣ ಲಾಕ್ ಆದಾಗ ಲಸಿಕೆ ಹಾಕಿಸಿಕೊಳ್ಳಲು ಜನರು ಮುಂದೆ ಬರುವರೇ..? ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮನೆ ಮಾಡಿವೆ.

ಕೇಸುಗಳ ಸಂಖ್ಯೆ ಹೆಚ್ಚಿರುವ ಬೆಂಗಳೂರಿನಲ್ಲೇ ಸಂಪೂರ್ಣ ಲಾಕ್‌ಡೌನ್ ಇಲ್ಲ. ಗದಗ ಜಿಲ್ಲೆಯಲ್ಲಿ ಕೇಸುಗಳ ಸಂಖ್ಯೆ ಇಳಿಮುಖದಲ್ಲಿದೆ ಮತ್ತು ಗುಣಮುಖರಾಗುತ್ತಿರುವವರ ಸಂಖ್ಯೆ ದಿನವೂ ಏರುತ್ತಿದೆ. ಹಾಗಿದ್ದರೂ ಈ ಹುಚ್ಚಾಟವೇಕೆ..? ಅಥವಾ ಟೆಸ್ಟಿಂಗ್ ಕಡಿಮೆ ಮಾಡಿದ್ದಾರಲ್ಲವೇ..? ಕೇಸುಗಳ ಸಂಖ್ಯೆ ಕಡಿಮೆಯಾಗಲು ಅದೂ ಕಾರಣವೇ..? ಎಂದು ಗದಗ ಜಿಲ್ಲೆಯ ಜನರು ಕೇಳುತ್ತಿದ್ದಾರೆ.


ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...