Homeಕರ್ನಾಟಕಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

ಪ್ರಕರಣಗಳ ಸಂಖ್ಯೆ ಇಳಿಕೆಯಾದರೂ ಗದಗ ಸಂಪೂರ್ಣ ಲಾಕ್‌ಡೌನ್‌: ಸಚಿವ ಸಿ.ಸಿ ಪಾಟೀಲ್ ಆದೇಶ

- Advertisement -
- Advertisement -

ಮೇ 27 ರ ಬೆಳಗಿನ 10 ಗಂಟೆಯಿಂದ ಜೂನ್ 1ರ ಬೆಳಗಿನ 6 ಗಂಟೆವರೆಗೆ ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಹೇರುವ ಘೋಷಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರು ಘೋಷಿಸಿದ್ದಾರೆ. ಗದಗ ಜಿಲ್ಲೆಯಾದ್ಯಂತ ಸಂಪೂರ್ಣ ಅಂದರೆ ಕಠಿಣ ಲಾಕ್‌ಡೌನ್ ವಿಧಿಸಿದೆ ಜಿಲ್ಲಾಡಳಿತ.

ಈಗಾಗಲೇ ರಾಜ್ಯಾದ್ಯಂತ ಜೂನ್ 7ರ ವರೆಗೆ ಲಾಕ್‌ಡೌನ್ ಮುಂದುವರೆಸಲಾಗಿದೆ. ಈ ನಡುವೆ ಗದಗ ಜಿಲ್ಲೆಯಲ್ಲಿ 5 ದಿನ ಕಂಪ್ಲೀಟ್ ಲಾಕ್‌ಡೌನ್ ಮಾಡುವ ಅಗತ್ಯವಿತ್ತೆ..? ಎಂಬ ಪ್ರಶ್ನೆ ಮೂಡಿದೆ. ಪಕ್ಕದ ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಈ ‘ಸಾಹಸವನ್ನು’ ಈಗಾಗಲೇ ಮಾಡಲಾಗಿದೆ.

ಗದಗ ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಜಿಲ್ಲಾಧಿಕಾರಿ ಸುಂದರೇಶಬಾಬು ಪ್ರತಿನಿತ್ಯ ಪ್ರಕಟಿಸುವ ಕೋವಿಡ್ ಸಂಬಂಧಿತ ಅಂಕಿಅಂಶಗಳ ಪ್ರಕಾರ, ಇಲ್ಲಿ ದೈನಂದಿನ ಪಾಸಿಟಿವ್ ಕೇಸು ಇಳಿಮುಖ ಹಾದಿಯಲ್ಲಿವೆ.  ಮೇ 18 ರಂದು ದೈನಂದಿನ ಪಾಸಿಟಿವ್ ಕೇಸುಗಳ ಸಂಖ್ಯೆ 543 ಇದ್ದರೆ, ಮೇ 24ರಂದು ಅದು 277 ಇದೆ. ಗುಣಮುಖರಾದವರ ಸಂಖ್ಯೆ ಏರುಗತಿಯಲ್ಲಿದೆ. ಮೇ 18 ರಂದು 243 ಜನ ಗುಣಮುಖರಾಗಿದ್ದರೆ, ಮೇ 24ರಂದು 470 ಜನರು ಗುಣಮುಖರಾಗಿದ್ದಾರೆ. ಸಾವುಗಳ ಸಂಖ್ಯೆ ಕೂಡ ಇಳಿಮುಖದಲ್ಲಿದೆ. ಮೇ 18 ರಂದು ದೈನಂದಿನ 5 ಸಾವು ಇದ್ದದ್ದು ಈಗ 3ಕ್ಕೆ ಇಳಿದಿದೆ.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

ಹೀಗಿರುವಾಗ, ಮತ್ತೇಕೆ ಸಂಪೂರ್ಣ ಲಾಕ್‌ಡೌನ್ ಏಕೆ ಬೇಕು.? ತಾವು ತೆಗೆದುಕೊಂಡ ಕ್ರಮದಿಂದಲೇ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿತು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಥವಾ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾರನ್ನು ಮೆಚ್ಚಿಸುವ ತಂತ್ರವೇ..? ಎಂದು ಜನ ಪ್ರಶ್ನಿಸುತ್ತಿದ್ದಾರೆ.

‘ಬಿಜೆಪಿ ನಾಯಕರು ಮನೆ ಬಿಟ್ಟು ಹೊರಬಂದು ಜನರ ನೆರವಿಗೆ ಧಾವಿಸಿ’ ಎಂದು ನಡ್ಡಾ ಈ ಅರ್ಥದಲ್ಲೇ ಹೇಳಿದರೆ..? ತಾವು ಜಿಲ್ಲೆಯಲ್ಲಿಯೇ ಇದ್ದೇವೆ ಎಂದು ತೋರಿಸಲು ಸಚಿವ ಪಾಟೀಲರು ಇಂತಹ ಕ್ರಮಕ್ಕೆ ಮುಂದಾದರೆ..? ಈ ಹುಚ್ಚಾಟದಿಂದ ಈಗಾಗಲೇ ತೊಂದರೆಗೆ ಸಿಲುಕಿರುವ ಬಡಜನರು ಇನ್ನಷ್ಟು ತೊಂದರೆಗೆ ಸಿಲುಕವುದಿಲ್ಲವೇ..? ಈ ಅವಧಿಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗದಿದ್ದಲ್ಲಿ ಲಾಕ್‌ಡೌನ್ ಮುಂದುವರೆಸಲಾಗುವುದು ಎಂದು ಪಾಟೀಲರು ‘ಎಚ್ಚರಿಕೆ’ ನೀಡಿದ್ದಾರೆ.

ಜನರ ಸಹಕಾರ ಇದ್ದಾಗ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದಿರುವ ಸಚಿವ ಸಿ.ಸಿ ಪಾಟೀಲರು ಎಲ್ಲ ಮಾರುಕಟ್ಟೆಗಳನ್ನು ಬಂದ್ ಮಾಡಿದ್ದಾರೆ. ತರಕಾರಿ, ಹಾಗೂ ಹಣ್ಣು ಹೂವು ವ್ಯಾಪಾರಸ್ಥರು ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡಬೇಕು. ಮುಂಜಾನೆ 6 ರ ವರೆಗೆ ಹಾಲಿನ ಅಂಗಡಿ ಓಪನ್. ದಿನಸಿ ಪದಾರ್ಥಗಳನ್ನು ಹೋಂ ಡಿಲೇವರಿ ಮಾಡಬೇಕು ಎಂದು ಆದೇಶ ನೀಡಲಾಗಿದೆ.

ರೈತಾಪಿ ವಸ್ತುಗಳ ಖರೀದಿಗೆ ಬೆಳಿಗ್ಗೆ 10 ರವರೆಗೆ ಮಾತ್ರ ಅವಕಾಶ. ಆದರೆ, ಎಲ್ಲ ಮಾರುಕಟ್ಟೆ, ಸಂಚಾರ ಬಂದ್ ಮಾಡಿದ ಮೇಲೆ ಹಳ್ಳಿಗಳ ರೈತರು ಹೇಗೆ ಖರೀದಿ ಮಾಡಲು ಸಾಧ್ಯ? ಹೋಟೆಲ್, ಮಾಂಸದಂಗಡಿಗಳೂ ಸಂಪೂರ್ಣ ಬಂದ್ ಎಂದಿದ್ದಾರೆ.

ಇದನ್ನೂ ಓದಿ: ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಅಂಚೆ ಕಚೇರಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಬಾಗಿಲು ಮುಚ್ಚಿ ಕಚೇರಿ ಕೆಲಸ ಮಾಡಬೇಕಂತೆ. ಜನರಿಗೆ ಡಿಪಾಸಿಟ್  ಮಾಡಲು ಹಾಗೂ ಹಣ ತೆಗೆಯಲು ಅವಕಾಶವಿಲ್ಲ ಎನ್ನಲಾಗಿದೆ.

ಕೋವ್ಯಾಕ್ಸಿನ್ ಎರಡನೇ ಡೋಸ್‌ಗೆ ಮಾತ್ರ ಅವಕಾಶ, ಕೋವಿಶೀಲ್ಡ್ ತೆಗೆದುಕೊಂಡು 12 ರಿಂದ 16 ವಾರವಾಗಿದ್ದರೆ ಎರಡನೇ ಡೋಸ್‌ಗೆ ಅವಕಾಶ. ವಾಹನ ಸಂಚಾರವೇ ಸಂಪೂರ್ಣ ಲಾಕ್ ಆದಾಗ ಲಸಿಕೆ ಹಾಕಿಸಿಕೊಳ್ಳಲು ಜನರು ಮುಂದೆ ಬರುವರೇ..? ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮನೆ ಮಾಡಿವೆ.

ಕೇಸುಗಳ ಸಂಖ್ಯೆ ಹೆಚ್ಚಿರುವ ಬೆಂಗಳೂರಿನಲ್ಲೇ ಸಂಪೂರ್ಣ ಲಾಕ್‌ಡೌನ್ ಇಲ್ಲ. ಗದಗ ಜಿಲ್ಲೆಯಲ್ಲಿ ಕೇಸುಗಳ ಸಂಖ್ಯೆ ಇಳಿಮುಖದಲ್ಲಿದೆ ಮತ್ತು ಗುಣಮುಖರಾಗುತ್ತಿರುವವರ ಸಂಖ್ಯೆ ದಿನವೂ ಏರುತ್ತಿದೆ. ಹಾಗಿದ್ದರೂ ಈ ಹುಚ್ಚಾಟವೇಕೆ..? ಅಥವಾ ಟೆಸ್ಟಿಂಗ್ ಕಡಿಮೆ ಮಾಡಿದ್ದಾರಲ್ಲವೇ..? ಕೇಸುಗಳ ಸಂಖ್ಯೆ ಕಡಿಮೆಯಾಗಲು ಅದೂ ಕಾರಣವೇ..? ಎಂದು ಗದಗ ಜಿಲ್ಲೆಯ ಜನರು ಕೇಳುತ್ತಿದ್ದಾರೆ.


ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್: ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, ಸಂಬಿತ್ ಪಾತ್ರಾಗೆ ಸಮನ್ಸ್ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...