Homeಮುಖಪುಟಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

ಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

- Advertisement -
- Advertisement -

ಸಿಬಿಐ ಮುಖ್ಯ ನಿರ್ದೇಶಕರ ಸ್ಥಾನಕ್ಕೆ ಕೇಂದ್ರ ಸರ್ಕಾರ ಸಿದ್ದಪಡಿಸಿದ್ದ ಪಟ್ಟಿಯನ್ನು ಕೈಬಿಟ್ಟಿರುವ ತ್ರಿಸದಸ್ಯ ಸಮಿತಿಯು ಈ ಸ್ಥಾನಕ್ಕೆ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದೆ. ಸುಪ್ರೀಂಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ರಮಣ ಅವರು, ಈ ಸ್ಥಾನಕ್ಕೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದ್ದರಿಂದ ಕೇಂದ್ರ ತಯಾರಿಸಿದ್ದ ಪಟ್ಟಿಯು ಹಿನ್ನಲೆಗೆ ಸರಿದಿದೆ.

ಸಿಬಿಐ ಮುಖ್ಯ ನಿರ್ದೇಶಕರ ಸ್ಥಾನಕ್ಕೆ ಆಯ್ಕೆಯಾಗಿರುವ ಜೈಸ್ವಾಲ್ ಅವರು 1985 ರ ಬ್ಯಾಚ್‌ನ ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಧಿಕಾರಿ. ಅವರು ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗಳ ಮುಖ್ಯಸ್ಥರಾಗಿದ್ದಾರೆ. ಅವರನ್ನು ಈಗ ಎರಡು ವರ್ಷಗಳ ಅವಧಿಗೆ ಕೇಂದ್ರ ತನಿಖಾ ವಿಭಾಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಕೇಂದ್ರ ಸರ್ಕಾರವು ಸಿದ್ದಪಡಿಸಿದ್ದ ಪಟ್ಟಿಯಲ್ಲಿ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿ ಅವರ ಹೆಸರುಗಳಿದ್ದವು ಎಂದು ತಿಳಿದು ಬಂದಿದ್ದು, ಈ ಇಬ್ಬರೂ ಬಿಜೆಪಿಗೆ ಆಪ್ತರಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ರಮಣ ಮತ್ತು ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅವರ ನಡುವೆ ಸರಣಿ ಸಭೆಗಳ ನಂತರ ಮಂಗಳವಾರ ಸಂಜೆ ಸರ್ಕಾರದ ಅಧಿಸೂಚನೆ ಬಂದಿದೆ.

ಸಿಜೆಐ ಉಲ್ಲೇಖಿಸಿದ್ದು ಏನು?

ಸಿಬಿಐ ನಿರ್ದೇಶಕ ಅಥವಾ ಮುಖ್ಯಸ್ಥರನ್ನು ಪ್ರಧಾನಮಂತ್ರಿ, ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯಲ್ಲಿನ ವಿಪಕ್ಷ ನಾಯಕ ಇರುವ ತ್ರಿಸದಸ್ಯರ ಸಮಿತಿ ಆಯ್ಕೆ ಮಾಡುತ್ತದೆ. ಕೇಂದ್ರ ಸರ್ಕಾರ ಮೊದಲೇ ಒಂದು ಪಟ್ಟಿ ಸಿದ್ಧಪಡಿಸಿರುತ್ತದೆ. ಈ ಸಮಿತಿಯ ಮೂವರು ಸೇರಿ ಒಂದು ನಿರ್ಧಾರಕ್ಕೆ ಬರುತ್ತಾರೆ. ಚರ್ಚೆಗಳ ಬಳಿಕ ಮೂವರೂ ಸರ್ವಸಮ್ಮತದಿಂದ ಒಬ್ಬರನ್ನು ಆಯ್ಕೆ ಮಾಡುತ್ತಾರೆ. ಇದು ರೂಢಿಗತ ಪ್ರಕ್ರಿಯೆ.

ಫೆಬ್ರವರಿಯಿಂದ ಖಾಲಿಯಿದ್ದ ಸಿಬಿಐ ನಿರ್ದೇಶಕರ ಹುದ್ದೆ ಭರ್ತಿ ಮಾಡಲು ಸೋಮವಾರ ಈ ತ್ರಿಸದಸ್ಯರ ಸಮಿತಿ ಸಬೆ ಸೇರಿತ್ತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಮೂರು ಸದಸ್ಯರ ಸಮಿತಿಯ ಸಭೆಯಲ್ಲಿ ಕೇಂದ್ರ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ವಿಪಕ್ಷ ನಾಯಕ ಕಾಂಗ್ರೆಸ್‌ನ ಅಧೀರ್ ಚೌಧರಿ ಭಾಗವಹಿಸಿದ್ದ ಈ ಸಬೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಉಲ್ಲೇಖಿಸಿದ ಸುಪ್ರಿಂಕೋರ್ಟ್‌ನ ಹಳೆ ತೀರ್ಪು ಒಂದು ಕೇಂದ್ರ ಸರ್ಕಾರ ಸೂಚಿಸಿದ್ದ ಪಟ್ಟಿ ಹಿನ್ನಲೆಗೆ ಸರಿಯಿತು ಎನ್ನಲಾಗಿದೆ.

ಇದನ್ನೂ ಓದಿ: ಸೋಂಕಿತರಿಗೆ ರಾಮದೇವ್‌‌ರ ‘ಕೊರೊನಿಲ್’ನ 1 ಲಕ್ಷ ಕಿಟ್: ಹರಿಯಾಣ ನಿರ್ಧಾರಕ್ಕೆ ವ್ಯಾಪಕ ವಿರೋಧ

90 ನಿಮಿಷ ಕಾಲ ನಡೆದ ಚರ್ಚೆಯಲ್ಲಿ ರಮಣ ಅವರು ಪ್ರಸ್ತಾಪಿಸಿದ ವಿಷಯ ತೀವ್ರ ಚರ್ಚೆಗೆ ಒಳಗಾಯಿತು ಎಂದು ಎನ್‌ಡಿಟಿವಿ ಸೇರಿದಂತೆ ವಿವಿಧ ಮಾಧ್ಯಮಗಳು ವರದಿ ಮಾಡಿವೆ.

ನಿರ್ದಿಷ್ಟವಾಗಿ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಸಿಜೆಐ ರಮಣ ಅವರು, ಪ್ರಮುಖ ಹುದ್ದೆಗೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಹೊಸ ಸಿಬಿಐ ನಿರ್ದೇಶಕರ ಆಯ್ಕೆಯ ಸಮಯದಲ್ಲಿ ಇಂತಹ ನಿಯಮವನ್ನು ಮೊದಲ ಬಾರಿಗೆ ಮುಂದಿಡಲಾಗಿದೆ ಮತ್ತು ನ್ಯಾಯಮೂರ್ತಿ ರಮಣ ನಿಯಮವನ್ನು ಪಾಲಿಸಬೇಕು ಎಂದು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಕೂಡ ಇದನ್ನು ಬೆಂಬಲಿಸಿದ್ದಾರೆ.

ಇದರ ಪರಿಣಾಮವಾಗಿ, ಆಗಸ್ಟ್ 31 ರಂದು ನಿವೃತ್ತಿಯಾಗುತ್ತಿರುವ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ಮೇ 31 ರಂದು ನಿವೃತ್ತರಾಗಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿಯ ಹೆಸರುಗಳು ಹಿನ್ನಲೆಗೆ ಸರಿಯಿತು.

ನಂತರ ಸಮಿತಿಯು ಮಹಾರಾಷ್ಟ್ರದ ಮಾಜಿ ಪೊಲೀಸ್ ಮಹಾನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್, ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಮಹಾನಿರ್ದೇಶಕ ಕೆ.ಆರ್. ಚಂದ್ರ ಮತ್ತು ಗೃಹ ಸಚಿವಾಲಯದ ವಿಶೇಷ ಕಾರ್ಯದರ್ಶಿ ವಿ.ಎಸ್.ಕೆ. ಕೌಮುದಿ ಅವರ ಹೆಸರನ್ನು ಪರಿಗಣಿಸಿ, ಹಿರಿಯರಾದ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಸೋಮವಾರ ಕೇವಲ 16 ಸಂಭಾವ್ಯ ಹೆಸರುಗಳನ್ನು ನೀಡಿದೆ ಎಂದು ಸಮಿತಿ ಸದಸ್ಯ ಕಾಂಗ್ರೆಸ್‌ನ ಚೌಧರಿ ಹೇಳಿದ್ದಾರೆ. ಆದರೆ ಮೇ 11 ರಂದು 109 ಹೆಸರುಗಳ ಪಟ್ಟಿಯನ್ನು ಅವರಿಗೆ ನೀಡಲಾಗಿತ್ತು. ಸಮಿತಿಯ ಸದಸ್ಯರನ್ನು ಬಹಳ ಲಘುವಾಗಿ ತೆಗೆದುಕೊಂಡ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಪಟ್ಟಿಯನ್ನು ಕತ್ತರಿಸಿ 16ಕ್ಕೆ ಇಳಿಸಿದ್ದನ್ನು ಆಕ್ಷೇಪಿಸಿದ್ದಾರೆ. ಆ 16 ಜನರಲ್ಲಿ ಈಗಾಗಲೇ ಐವರು ನಿವೃತ್ತರು ಎಂಬುದನ್ನು ಚೌಧರಿ ಗಮನ ಸೆಳೆದಿದ್ದಾರೆ.

ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಲು, ಚೌಧರಿ ಅವರು ಸಮಿತಿ ಸಭೆಯನ್ನು ಮುಂದೂಡಲು ಪ್ರಯತ್ನಿಸಿದರು. ಆದರೆ, ಅವರ ಬೇಡಿಕೆಯನ್ನು ಸರ್ಕಾರ ಒಪ್ಪಲಿಲ್ಲ. ವಾಸ್ತವವಾಗಿ, ನಾಲ್ಕು ತಿಂಗಳ ವಿಳಂಬದ ನಂತರ ಸಮಿತಿ ಸಭೆ ಸೇರಿತ್ತು. ಸಮಿತಿ ಅಂತಿಮವಾಗಿ ಮೇಲೆ ತಿಳಿಸಿದ ಮೂರು ಹೆಸರುಗಳನ್ನು ಕಿರುಪಟ್ಟಿ ಮಾಡಿತು. ಮಂಗಳವಾರ ಸಂಜೆ ಸುಬೋಧ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ಪ್ರಸ್ತುತ ಸುಬೋಧ್ ಅವರು ಸಿಐಎನ್‌ಎಫ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಅವರು ಈ ವರ್ಷದ ಆರಂಭದಲ್ಲಿ ಕೇಂದ್ರ ಡೆಪ್ಯುಟೇಷನ್‌ಗೆ ಕರೆಸಿಕೊಳ್ಳುವ ಮೊದಲು ಮುಂಬೈ ಪೊಲೀಸ್ ಆಯುಕ್ತ ಮತ್ತು ಮಹಾರಾಷ್ಟ್ರ ಡಿಜಿಪಿ ಹುದ್ದೆಗಳನ್ನು ಅಲಂಕರಿಸಿದ್ದರು. ಸಿಬಿಐನಲ್ಲಿ ಸೇವೆ ಸಲ್ಲಿಸಿದ ಅನುಭವವಿಲ್ಲದಿದ್ದರೂ, ಇಂಟೆಲಿಜೆನ್ಸ್ ಬ್ಯೂರೋ ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ)ನಲ್ಲಿ ಅವರು ಸುದೀರ್ಘ ಅವಧಿಯನ್ನು ಹೊಂದಿದ್ದಾರೆ.

ಇದನ್ನೂ ಓದಿ: 14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...