Homeಚಳವಳಿರೈತರ ಕರಾಳ ದಿನ ಆಚರಣೆಗೆ ಭಾರಿ ಬೆಂಬಲ- ಎಲ್ಲೆಡೆ ಕಪ್ಪು ಧ್ವಜಗಳ ಹಾರಾಟ

ರೈತರ ಕರಾಳ ದಿನ ಆಚರಣೆಗೆ ಭಾರಿ ಬೆಂಬಲ- ಎಲ್ಲೆಡೆ ಕಪ್ಪು ಧ್ವಜಗಳ ಹಾರಾಟ

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳ ವಿರುದ್ಧ ತಮ್ಮ ಹೋರಾಟ ಮುಂದುವರೆಸಿರುವ ರೈತರು ಇಂದು ಕರಾಳ ದಿನ ಆಚರಣೆಗೆ ಕರೆ ನೀಡಿದ್ದು, ಭಾರಿ ಬೆಂಬಲ ವ್ಯಕ್ತವಾಗಿದೆ. ಪಂಜಾಬ್, ಹರಿಯಾಣ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಪ್ಪು ಬಾವುಟಗಳು ಹಾರಾಡುತ್ತಿವೆ.

ದೆಹಲಿಯ ಪ್ರತಿಭಟನಾ ಸ್ಥಳಗಳಲ್ಲಿನ ಗಡಿಗಳಿಗೆ ಈಗಾಗಲೇ ಸಾವಿರಾರು ರೈತರು ಸೇರಿಕೊಂಡಿದ್ದಾರೆ. ದೇಶದಲ್ಲಿ ಕೊರೊನಾ ಪರಿಸ್ಥಿತಿಯಿಂದ ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಇದರ ನಡುವೆಯೇ ರೈತರು ಕರಾಳ ದಿನ ಆಚರಣೆಗೆ ಕರೆ ನೀಡಿದ್ದಾರೆ. ರೈತರ ಕರೆಗೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಕೊರೊನಾ ಘಜಿಯಾಬಾದ್‌ನ ಗಾಝಿಪುರ್‌ ಗಡಿಯಲ್ಲಿನ ರೈತರು ಕರಾಳ ದಿನ ಆಚರಿಸಿ ಪ್ರತಿಭಟನೆ ನಡೆಸಿದ್ದಾರೆ.

“ನಾವು ಕಪ್ಪು ಧ್ವಜದ ಜೊತೆಗೆ ತ್ರಿವರ್ಣವನ್ನು ಸಹ ಹಾರಿಸುತ್ತಿದ್ದೇವೆ. ಪ್ರತಿಭಟನೆಗೆ 6 ತಿಂಗಳು ತುಂಬುತ್ತಿವೆ. ಆದರೆ ಸರ್ಕಾರ ನಮ್ಮ ಬೇಡಿಕೆಯನ್ನು ಕೇಳುತ್ತಿಲ್ಲ. ಆದ್ದರಿಂದ ರೈತರು ಕಪ್ಪು ಧ್ವಜಗಳನ್ನು ಹಾರಿಸುತ್ತಿದ್ದಾರೆ. ಪ್ರತಿಭಟನೆ ಶಾಂತಿಯುತವಾಗಿ ನಡೆಸಲಾಗುತ್ತಿದೆ. ನಾವು ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿದ್ದೇವೆ. ಜನರು ಎಲ್ಲಿದ್ದಾರೋ ಅಲ್ಲಿಂದಲೇ ಧ್ವಜಗಳನ್ನು ಹಾರಿಸುತ್ತಾ ಪ್ರತಿಭಟನೆಗೆ ಬೆಂಬಲ ನೀಡುತ್ತಿದ್ದಾರೆ” ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಇದನ್ನೂ ಓದಿ: ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬ್‌ನ ರೈತರು ಇಂದು ‘ಕಪ್ಪು ದಿನ’ ಆಚರಿಸಿ, ತಮ್ಮ ಮನೆಗಳ ಮೇಲೆ ಮತ್ತು ತಮ್ಮ ಟ್ರಾಕ್ಟರುಗಳಲ್ಲಿ ಕಪ್ಪು ಧ್ವಜಗಳನ್ನು ಹಾರಿಸಿದ್ದಾರೆ.

Punjab: People put up black flags at their houses and on their tractors in Chabba village of Amritsar, as the farmers protesting against the Farm Laws, observe 'Black Day' today.
PC: ANI

ಟ್ವಿಟರ್‌ನಲ್ಲಿ ರೈತರಿಗೆ ಕರಾಳದಿನ (#Black_Day_Of_Farmers) ಮತ್ತು ರಾಷ್ಟ್ರೀಯ ಕರಾಳ ದಿನ ( #NationalBlackDay) ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್ ಆಗಿದದೆ. ಲಕ್ಷಾಂತರ ಮಂದಿ ಟ್ವೀಟ್ ಮಾಡಿ, ವಿವಾದಿತ ಕೃಷಿ ಕಾನೂನುಗಳನ್ನು ರದ್ದು ಮಾಡಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

’ಕಾನೂನನ್ನು ಪಾಲನೆ ಮಾಡದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾನೂನುಬಾಹಿರ ಚಟುವಟಿಕ ಅವಕಾಶವಿಲ್ಲ’ ಎಂದು ದೆಹಲಿ ಪೊಲೀಸ್ ಪಿಆರ್‌ಒ ಚಿನ್ಮಯ್ ಬಿಸ್ವಾಲ್ ಹೇಳಿದ್ದಾರೆ. ಸಿಂಘು, ಟಿಕ್ರಿ ಮತ್ತು ಗಾಜಿಪುರದ ಪ್ರತಿಭಟನಾ ಸ್ಥಳಗಳು ಸೇರಿದಂತೆ ಎಲ್ಲಾ ಗಡಿ ಕೇಂದ್ರಗಳಲ್ಲಿ ಪೊಲೀಸ್ ಪಡೆಗಳನ್ನು ಈಗಾಗಲೇ ನಿಯೋಜಿಸಲಾಗಿದೆ ಎಂದಿದ್ದಾರೆ.


ಇದನ್ನೂ ಓದಿ: ಸೆಂಟ್ರಲ್‌ ವಿಸ್ತಾ ಯೋಜನೆ ಮತ್ತು ದೆಹಲಿಯ ಮೂಲಕ ಭಾರತವನ್ನು ವಶಪಡಿಸಿಕೊಳ್ಳುವ ಬಿಜೆಪಿ ಸರ್ಕಾರದ ಆಕ್ರಮಣಕಾರಿ ತಂತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...