Homeಕರೋನಾ ತಲ್ಲಣಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

ಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

- Advertisement -
- Advertisement -

ಕೋವಿಡ್ ಎರಡನೇ ಅಲೆಯಿಂದಾಗಿ ಕಳೆದ 55 ದಿನಗಳಲ್ಲಿ ದೇಶಾದ್ಯಂತ 577 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮಂಗಳವಾರ ತಿಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಹಿರಿಯ ಅಧಿಕಾರಿಗಳ ಪ್ರಕಾರ, ಕೋವಿಡ್ ಅನಾಥ ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಸಂದೇಶಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ನಂತರ ಸಚಿವಾಲಯವು ತನಿಖೆ ನಡೆಸಲು ಪ್ರಾರಂಭಿಸಿತು.

“ನಾವು ಎಲ್ಲಾ ರಾಜ್ಯಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಆ ರಾಜ್ಯಗಳ ಎಲ್ಲ ಜಿಲ್ಲೆಗಳಿಂದ ಕೋವಿಡ್ ಅನಾಥರನ್ನು ಗುರುತಿಸಲು ಕೇಳಿಕೊಂಡಿದ್ದೇವೆ. ಇಲ್ಲಿವರೆಗೆ ಸ್ವೀಕರಿಸಿದ ಮಾಹಿತಿ ಪ್ರಕಾರ. 577 ಮಕ್ಕಳು ಇಂತಹ ಸ್ಥಿತಿಯಲ್ಲಿವೆ ಎಂಬುದು ಖಚಿತವಾಗಿದೆ. ಉದಾಹರಣೆಗೆ, ದೆಹಲಿಯಲ್ಲಿ ಈ ಅವಧಿಯಲ್ಲಿ ಒಂದು ಕೋವಿಡ್ ಅನಾಥ ಮಗು ಗುರುತಿಸಲ್ಪಟ್ಟಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕಾರಿಗಳು ರಾಜ್ಯವಾರು ವಿಘಟನೆಯನ್ನು ಬಹಿರಂಗಪಡಿಸಲಿಲ್ಲ. ಆದರೆ ಹಲವಾರು ರಾಜ್ಯಗಳು ಒಂದು ಪ್ರಕರಣವನ್ನು ಸಹ ವರದಿ ಮಾಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, “ಕೋವಿಡ್‌ಗೆ ಪೋಷಕರನ್ನು ಕಳೆದುಕೊಂಡಿರುವ ಪ್ರತಿ ಅತಂತ್ರ ಮಗುವನ್ನು ಬೆಂಬಲಿಸಲು ಮತ್ತು ರಕ್ಷಿಸಲು ಸರ್ಕಾರ ಬದ್ಧವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ. “ಏಪ್ರಿಲ್ 1, 2021 ರಿಂದ ಮಂಗಳವಾರ ಮಧ್ಯಾಹ್ನ 2 ರವರೆಗೆ, ದೇಶಾದ್ಯಂತ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಇಂತಹ 577 ಪ್ರಕರಣ ದಾಖಲಾಗಿವೆ” ಎಂದು ಸ್ಮೃತಿ ಇರಾನಿ ತಿಳಿಸಿದ್ದಾರೆ.

ಈ ಅನಾಥರ ಸಾಂಸ್ಥಿಕೇತರ ಆರೈಕೆಗಾಗಿ ನಾವು ಪ್ರತಿ ಜಿಲ್ಲೆಗೆ 10 ಲಕ್ಷ ರೂ. ನಿಗದಿಪಡಿಸಿದ್ದೇವೆ. ಇದನ್ನು ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಜಿಲ್ಲಾ ನ್ಯಾಯಾಧೀಶರು ವಿತರಿಸುತ್ತಾರೆ. ಒಂದು ಮಗು ಕೂಡ ಅನಾಥ ಸ್ಥಿತಿಯಲ್ಲಿ ಇರಬಾರದು ಎಂಬುದು ನಮ್ಮ ಗುರಿ. ನಮ್ಮ ಆದ್ಯತೆಯೆಂದರೆ, ಮಕ್ಕಳನ್ನು ಅವರ ಕುಟುಂಬ ಮತ್ತು ಸಮುದಾಯ ರಚನೆಗಳಲ್ಲಿ ಉಳಿಸಿಕೊಳ್ಳಬೇಕು. ಈ ಸಂರಚನೆಗಳಿಂದ ದೂರವಾಗದಂತೆ ನೋಡಿಕೊಳ್ಳಬೇಕು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಸಾಂಕ್ರಾಮಿಕ ರೋಗದಿಂದ ಅನಾಥವಾಗಿರುವ ಮಕ್ಕಳಿಗೆ ಕಲ್ಯಾಣ ಕ್ರಮಗಳನ್ನು ಹಲವಾರು ರಾಜ್ಯಗಳು ಘೋಷಿಸಿರುವ ಸಮಯದಲ್ಲಿ ಕೇಂದ್ರ ಸಚಿವಾಲಯದ ಈ ಕಾಳಜಿ ವ್ಯಕ್ತವಾಗಿದೆ. ದೆಹಲಿ, ಪಂಜಾಬ್ ಮತ್ತು ಮಧ್ಯಪ್ರದೇಶಗಳು ಹಣಕಾಸಿನ ನೆರವಿನ ಹೊರತಾಗಿ ಉಚಿತ ಶಿಕ್ಷಣದ ಭರವಸೆ ನೀಡಿದರೆ, ಉತ್ತರಾಖಂಡ, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳು ವಿವಿಧ ಕಲ್ಯಾಣ ಯೋಜನೆಗಳನ್ನು ಘೋಷಿಸಿವೆ.

ಇದನ್ನೂ ಓದಿ: ಗೌರಿ ಕಣ್ಣೋಟ: ’ಸೀತಾ ಸಿಂಗ್ಸ್ ದ ಬ್ಲೂಸ್’ – ನೀನಾ ಮತ್ತು ಸೀತೆಯರ ದುಃಖ

ಈ ಮಕ್ಕಳನ್ನು ಪತ್ತೆ ಹಚ್ಚಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಗಳಲ್ಲಿನ ಕಲ್ಯಾಣ ಸಮಿತಿಗಳಿಂದ ಹಿಡಿದು ನಿಮ್ಹಾನ್ಸ್ ಸಹಯೋಗದೊಂದಿಗೆ ಈ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

“ಈ ಮಕ್ಕಳನ್ನು ದತ್ತು ಪಡೆಯಲು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಪ್ರಸಾರ ಮಾಡುವುದರ ವಿರುದ್ಧ ಮೇ 17 ರಂದು ಸಚಿವಾಲಯ ಸಾರ್ವಜನಿಕ ನೋಟಿಸ್ ನೀಡಿದೆ. ಇದು ಮಕ್ಕಳ ಕಳ್ಳಸಾಗಣೆಗೆ ಕಾರಣವಾಗಬಹುದು ಎಂಬ ಆತಂಕಗಳು ಇದ್ದವು. ನಾವು ಹೆಚ್ಚಿನ ಸಂಖ್ಯೆಯ ಈ ಸಂದೇಶಗಳ ಬಗ್ಗೆ ತನಿಖೆ ನಡೆಸಿದ್ದೇವೆ ಮತ್ತು ಅವೆಲ್ಲವೂ ಇಲ್ಲಿಯವರೆಗೆ ನಕಲಿ ಎಂದು ನಾವು ಕಂಡುಕೊಂಡಿದ್ದೇವೆ. ಇವುಗಳನ್ನು ರಾಜ್ಯ ಪೊಲೀಸ್ ಇಲಾಖೆಗಳಿಗೆ ಹಸ್ತಾಂತರಿಸಲಾಗಿದೆ, ಅವರು ಸೈಬರ್ ಸೆಲ್‌ಗಳ ಜೊತೆಗೆ ಈ ತನಿಖೆಯನ್ನು ಮುಂದುವರಿಸುತ್ತಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂತಹ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುವಂತೆ ಮತ್ತು ಈ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗಳ ಮುಂದೆ ಹಾಜರುಪಡಿಸುವುದನ್ನು ನೋಡಿಕೊಳ್ಳುವಂತೆ ಸಚಿವಾಲಯವು ಈ ಹಿಂದೆ ರಾಜ್ಯಗಳಿಗೆ ಪತ್ರ ಬರೆದಿದೆ.

ಸಿಡಬ್ಲ್ಯುಸಿ ದತ್ತು ಪಡೆಯಲು ಸೂಕ್ತವೆಂದು ನೋಡುವ ಪ್ರಕರಣಗಳನ್ನು ಕೇಂದ್ರ ದತ್ತು ಸಂಪನ್ಮೂಲ ಏಜೆನ್ಸಿ ಪರಿಶೀಲಿಸಿ ಪ್ರಕ್ರಿಯೆ ನಡೆಸುತ್ತದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಹೆಚ್ಚಿನ ಮಾಹಿತಿಯನ್ನು ಮಕ್ಕಳ ಸಹಾಯವಾಣಿ – 1098 ನಲ್ಲಿ ಹಂಚಿಕೊಳ್ಳಬಹುದು ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...