Homeಮುಖಪುಟಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

ಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

- Advertisement -
- Advertisement -

ದೇಶವು ಕಳೆದ ಒಂದು ವರ್ಷದಿಂದ ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟಿನಿಂದ ಬಳಲುತ್ತಿದೆ. ಒಂದು ವರ್ಷ ಕಳೆದರು ಕೊರೊನಾ ವಿರುದ್ದ ಹೋರಾಟವನ್ನು ಸರಿಯಾಗಿ ನಿರ್ವಹಿಸುವಲ್ಲಿ ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಇತ್ತೀಚೆಗೆ ಆಕ್ರಮಿಸಿಕೊಂಡಿರುವ ಕೊರೊನಾ ಎರಡನೇ ಅಲೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಮೋದಿಯವರ ಜನಪ್ರಿಯತೆ ಕುಸಿಯುತ್ತಿದೆ. ಅವರ ವರ್ಚಸ್ಸನ್ನು ಉಳಿಸಿಕೊಳ್ಳಲು ಬಿಜೆಪಿ ಕೆಲವರ ತಲೆದಂಡಕ್ಕೆ ಮುಂದಾಗಿದೆ ಎಂದು ತಿಳಿದು ಬಂದಿದೆ.

ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ವಿಫಲಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೋವಿಡ್‌ ವೈಫಲ್ಯವನ್ನು ಕೆಲವರ ತಲೆಗೆ ಕಟ್ಟಿ ಪೊಲಿಟಿಕಲ್‌ ಸರ್ಜರಿ ಮಾಡಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಬಿಜೆಪಿ ಚಿಂತಿಸಿದೆ. ಅಲ್ಲದೆ, ರಾಜ್ಯದ ಸಿಎಂ ಯಡಿಯೂರಪ್ಪ ಅವರನ್ನೂ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ, ಬೇರೊಬ್ಬರನ್ನು ಸಿಎಂ ಮಾಡಲು ಮುಂದಾಗಿದ್ದು, ಇದಕ್ಕಾಗಿ ಯಾರು ಸೂಕ್ತ ಎಂದು ಹುಡುಕಾಟ ಆರಂಭಿಸಿದೆ ಎಂದು ಚರ್ಚೆಯಾಗುತ್ತಿದೆ.

ಇದನ್ನೂ ಓದಿ: ಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಬಿಜೆಪಿ ಅಧಿಕಾರದಲ್ಲಿರುವ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕನ್ನು ಆಕ್ರಮಣ ಹೆಚ್ಚಾಗಿದ್ದು, ರಾಜ್ಯ ಸರ್ಕಾರಗಳು ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ವಿಫಲವಾಗಿದೆ. ಉತ್ತರ ಪ್ರದೇಶದಿಂದ ಕೋವಿಡ್‌ನಿಂದ ಮೃತಪಟ್ಟವರ ಶವಗಳು ಗಂಗಾ ನದಿಯ ತಡದಲ್ಲಿ ತೇಲುತ್ತಿವೆ. ಕರ್ನಾಟಕದಲ್ಲಿ ಆಕ್ಸಿಜನ್‌ ಕೊರತೆಯಿಂದ ಸಾಕಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ದಿನ ನಿತ್ಯದ ಕೊರೊನಾ ಪ್ರಕರಣಗಳು ದಾಖಲಾಗುವ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಉತ್ತರಾಖಂಡ್‌ನಲ್ಲಿ ಕುಂಭಮೇಳ ನಡೆದ ನಂತರ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ. ಅದರೆ, ರಾಜ್ಯ ಸರ್ಕಾರ ತಪ್ಪು ಮಾಹಿತಿಯನ್ನು ನೀಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಈ ಎಲ್ಲಾ ಕಾರಣಗಳಿಂದ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ದ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಮೋದಿಯವರ ವರ್ಚಸ್ಸು ಕುಸಿಯುತ್ತಿದೆ. ಇದನ್ನು ತಪ್ಪಿಸಿ, ಮೋದಿಯನ್ನು ಮತ್ತೆ ವೈಭವೀಕರಿಸಲು ಮುಂದಾಗಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪೊಲಿಟಕ್‌ ಸರ್ಜರಿ ನಡೆಸಿ, ಕೆಲವರ ತಲೆದಂಡಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.

ಇದಕ್ಕಾಗಿ, ಈಗಾಗಲೇ ಮೋದಿ ಹಾಗೂ ಅಮಿತ್ ಷಾ ಅವರು ಆರ್‌ಎಸ್‌ಎಸ್‌ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಕೋವಿಡ್‌ ವೈಫಲ್ಯವನ್ನು ಕೆಲವರ ತಲೆಗೆ ಕಟ್ಟಿ, ಅವರಿಂದ ರಾಜೀನಾಮೆ ಪಡೆದು, ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮೋದಿ-ಶಾ ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಸಾವಿನ ಸುನಾಮಿ ಮತ್ತು ಸರ್ಕಾರದ ವೈಫಲ್ಯವೆಂಬ ವೈರಸ್

ಈ ಪೈಕಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸುವುದು. ಕರ್ನಾಟಕದ ಸಿಎಂ ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೊಬ್ಬರನ್ನು ಕೂರಿಸಲು ಬಿಜೆಪಿ ಹೈಕಮಾಂಡ್‌ ಚಿಂತನೆ ನಡೆಸಿದೆ.

ಈ ಹಿಂದೆಯೂ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಆರ್‌ಎಸ್‌ಎಸ್‌ ಹಿನ್ನೆಲೆ ಇರುವವರನ್ನು ಸಿಎಂ ಮಾಡಲು ಬಿಜೆಪಿ ಮುಂದಾಗಿತ್ತು. ಅದಕ್ಕಾಗಿ ರಾಜ್ಯ ಸರ್ಕಾರ ಕೆಲಸಗಳಲ್ಲಿ ರಾಜ್ಯಪಾಲರನ್ನು ಮಧ್ಯ ಪ್ರವೇಶಿಸಿ, ಸಭೆಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೀಗ ಮತ್ತೆ ಸಿಎಂ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದ್ದು, ಯಡಿಯೂರಪ್ಪ ಅವರ ಸಿಎಂ ಖುರ್ಚಿ ಮತ್ತೆ ಅಲುಗಾಡುತ್ತಿದೆ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ತನ್ನ ಜವಾಬ್ದಾರಿಯಿಂದ ನುಣುಚಿಕೊಂಡು, ತಮ್ಮ ವರ್ಚಸ್ಸನ್ನು ಉಳಿಸಿಕೊಳ್ಳುವುದಕ್ಕಾಗಿ ಸರ್ಜಿಕಲ್ ಸ್ಟ್ರೈಕ್ ಶುರು ಮಾಡಿದ್ದಾರೆ. ತಮ್ಮ ಜನಪ್ರಿಯತೆಯನ್ನು ಉಳಿಸಿಕೊಳ್ಳಲು ಕೆಲವರ ತಲೆದಂಡವಾಗಲಿದೆ. ಈ ತಲೆದಂಡವನ್ನೇ ಅಸ್ತ್ರವಾಗಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ಮತ್ತೆ ಮೋದಿಯವರನ್ನು ಅಟ್ಟಕ್ಕೇರಿಸಲಿದೆ ಎಂದು ರಾಜಕೀಯ ವಿಮರ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕೋವಿಡ್ ನಿರ್ವಹಣೆಯ ವಿಫಲತೆ, ಚುನಾವಣಾ ಫಲಿತಾಂಶಗಳಲ್ಲಿ ಹಿನ್ನಡೆ: BJP-RSS ನಲ್ಲಿ ಈಗ ಆಂತರಿಕ ಆಕ್ರೋಶ, ತಳಮಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೆಹಲಿ ಸರ್ಕಾರದ ಕೆಲಸಗಳಿಗೆ ಉಪರಾಜ್ಯಪಾಲರುಗಳ ಮೂಲಕ ಒಕ್ಕೂಟ ಸರ್ಕಾರ ಹೇಗೆ ತೊಡರುಗಾಲು ಕೊಡುತ್ತ ಬಂದಿದೆ ಎಂಬುದನ್ನು ನಾವೆಲ್ಲಾ ನೋಡುತ್ತಾ ಬಂದಿದ್ದೇವೆ. ಕರ್ನಾಟಕದ ಮು.ಮ. ಯಡ್ಯೂರಪ್ಪನವರ ಕೊರೋನಾ ವೈಫಲ್ಯವೂ ಸಹ ಅವರ ತಲೆದಂಡಕ್ಕೆಂದೇ ಹೆಣೆಯಲಾದ ಅಂತಹುದೇ ಕುತಂತ್ರ ಎಂಬುದು ನನ್ನ ನಂಬಿಕೆ. ಇದೇ ರೀತಿಯಲ್ಲಿ ಪಶ್ಚಿಮ ಬಂಗಾಳದ ಚುನಾವಣೋತ್ತರ ಗಲಭೆಗಳ ವಿಚಾರದಲ್ಲೂ ಕುತಂತ್ರ ಮಾಡಲಾಗಿದೆ ಎಂಬುದು ನನ್ನ ನಂಬಿಕೆ. ಒಟ್ಟಾರೆಯಾಗಿ ತಮಗೆ ಬೇಡದವರನ್ನು, ಅಸಂವೈಧಾನಿಕವಾಗಿಯಾದರೂ ಸರಿಯೇ, ಹೇಗಾದರೂ ತೊಲಗಿಸಿಕೊಳ್ಳುವ ಸರ್ವಾಧಿಕಾರದ ಒಂದು ಸ್ವರೂಪವನ್ನು ಒಕ್ಕೂಟ ಪ್ರದರ್ಶಿಸುತ್ತಿದೆ ಎಂಬುದನ್ನು ಯಾರೂ ಅಲ್ಲಗೆಳೆಯಲಾರರು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...