Homeಮುಖಪುಟಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

ಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

- Advertisement -
- Advertisement -

ದೇಶವು ಕಳೆದ ಒಂದು ವರ್ಷದಿಂದ ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟಿನಿಂದ ಬಳಲುತ್ತಿದೆ. ಒಂದು ವರ್ಷ ಕಳೆದರು ಕೊರೊನಾ ವಿರುದ್ದ ಹೋರಾಟವನ್ನು ಸರಿಯಾಗಿ ನಿರ್ವಹಿಸುವಲ್ಲಿ ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಇತ್ತೀಚೆಗೆ ಆಕ್ರಮಿಸಿಕೊಂಡಿರುವ ಕೊರೊನಾ ಎರಡನೇ ಅಲೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಮೋದಿಯವರ ಜನಪ್ರಿಯತೆ ಕುಸಿಯುತ್ತಿದೆ. ಅವರ ವರ್ಚಸ್ಸನ್ನು ಉಳಿಸಿಕೊಳ್ಳಲು ಬಿಜೆಪಿ ಕೆಲವರ ತಲೆದಂಡಕ್ಕೆ ಮುಂದಾಗಿದೆ ಎಂದು ತಿಳಿದು ಬಂದಿದೆ.

ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ವಿಫಲಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೋವಿಡ್‌ ವೈಫಲ್ಯವನ್ನು ಕೆಲವರ ತಲೆಗೆ ಕಟ್ಟಿ ಪೊಲಿಟಿಕಲ್‌ ಸರ್ಜರಿ ಮಾಡಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಬಿಜೆಪಿ ಚಿಂತಿಸಿದೆ. ಅಲ್ಲದೆ, ರಾಜ್ಯದ ಸಿಎಂ ಯಡಿಯೂರಪ್ಪ ಅವರನ್ನೂ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ, ಬೇರೊಬ್ಬರನ್ನು ಸಿಎಂ ಮಾಡಲು ಮುಂದಾಗಿದ್ದು, ಇದಕ್ಕಾಗಿ ಯಾರು ಸೂಕ್ತ ಎಂದು ಹುಡುಕಾಟ ಆರಂಭಿಸಿದೆ ಎಂದು ಚರ್ಚೆಯಾಗುತ್ತಿದೆ.

ಇದನ್ನೂ ಓದಿ: ಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಬಿಜೆಪಿ ಅಧಿಕಾರದಲ್ಲಿರುವ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕನ್ನು ಆಕ್ರಮಣ ಹೆಚ್ಚಾಗಿದ್ದು, ರಾಜ್ಯ ಸರ್ಕಾರಗಳು ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ವಿಫಲವಾಗಿದೆ. ಉತ್ತರ ಪ್ರದೇಶದಿಂದ ಕೋವಿಡ್‌ನಿಂದ ಮೃತಪಟ್ಟವರ ಶವಗಳು ಗಂಗಾ ನದಿಯ ತಡದಲ್ಲಿ ತೇಲುತ್ತಿವೆ. ಕರ್ನಾಟಕದಲ್ಲಿ ಆಕ್ಸಿಜನ್‌ ಕೊರತೆಯಿಂದ ಸಾಕಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ದಿನ ನಿತ್ಯದ ಕೊರೊನಾ ಪ್ರಕರಣಗಳು ದಾಖಲಾಗುವ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಉತ್ತರಾಖಂಡ್‌ನಲ್ಲಿ ಕುಂಭಮೇಳ ನಡೆದ ನಂತರ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ. ಅದರೆ, ರಾಜ್ಯ ಸರ್ಕಾರ ತಪ್ಪು ಮಾಹಿತಿಯನ್ನು ನೀಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಈ ಎಲ್ಲಾ ಕಾರಣಗಳಿಂದ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ದ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಮೋದಿಯವರ ವರ್ಚಸ್ಸು ಕುಸಿಯುತ್ತಿದೆ. ಇದನ್ನು ತಪ್ಪಿಸಿ, ಮೋದಿಯನ್ನು ಮತ್ತೆ ವೈಭವೀಕರಿಸಲು ಮುಂದಾಗಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪೊಲಿಟಕ್‌ ಸರ್ಜರಿ ನಡೆಸಿ, ಕೆಲವರ ತಲೆದಂಡಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.

ಇದಕ್ಕಾಗಿ, ಈಗಾಗಲೇ ಮೋದಿ ಹಾಗೂ ಅಮಿತ್ ಷಾ ಅವರು ಆರ್‌ಎಸ್‌ಎಸ್‌ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಕೋವಿಡ್‌ ವೈಫಲ್ಯವನ್ನು ಕೆಲವರ ತಲೆಗೆ ಕಟ್ಟಿ, ಅವರಿಂದ ರಾಜೀನಾಮೆ ಪಡೆದು, ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮೋದಿ-ಶಾ ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಸಾವಿನ ಸುನಾಮಿ ಮತ್ತು ಸರ್ಕಾರದ ವೈಫಲ್ಯವೆಂಬ ವೈರಸ್

ಈ ಪೈಕಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸುವುದು. ಕರ್ನಾಟಕದ ಸಿಎಂ ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೊಬ್ಬರನ್ನು ಕೂರಿಸಲು ಬಿಜೆಪಿ ಹೈಕಮಾಂಡ್‌ ಚಿಂತನೆ ನಡೆಸಿದೆ.

ಈ ಹಿಂದೆಯೂ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಆರ್‌ಎಸ್‌ಎಸ್‌ ಹಿನ್ನೆಲೆ ಇರುವವರನ್ನು ಸಿಎಂ ಮಾಡಲು ಬಿಜೆಪಿ ಮುಂದಾಗಿತ್ತು. ಅದಕ್ಕಾಗಿ ರಾಜ್ಯ ಸರ್ಕಾರ ಕೆಲಸಗಳಲ್ಲಿ ರಾಜ್ಯಪಾಲರನ್ನು ಮಧ್ಯ ಪ್ರವೇಶಿಸಿ, ಸಭೆಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೀಗ ಮತ್ತೆ ಸಿಎಂ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದ್ದು, ಯಡಿಯೂರಪ್ಪ ಅವರ ಸಿಎಂ ಖುರ್ಚಿ ಮತ್ತೆ ಅಲುಗಾಡುತ್ತಿದೆ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ತನ್ನ ಜವಾಬ್ದಾರಿಯಿಂದ ನುಣುಚಿಕೊಂಡು, ತಮ್ಮ ವರ್ಚಸ್ಸನ್ನು ಉಳಿಸಿಕೊಳ್ಳುವುದಕ್ಕಾಗಿ ಸರ್ಜಿಕಲ್ ಸ್ಟ್ರೈಕ್ ಶುರು ಮಾಡಿದ್ದಾರೆ. ತಮ್ಮ ಜನಪ್ರಿಯತೆಯನ್ನು ಉಳಿಸಿಕೊಳ್ಳಲು ಕೆಲವರ ತಲೆದಂಡವಾಗಲಿದೆ. ಈ ತಲೆದಂಡವನ್ನೇ ಅಸ್ತ್ರವಾಗಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ಮತ್ತೆ ಮೋದಿಯವರನ್ನು ಅಟ್ಟಕ್ಕೇರಿಸಲಿದೆ ಎಂದು ರಾಜಕೀಯ ವಿಮರ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕೋವಿಡ್ ನಿರ್ವಹಣೆಯ ವಿಫಲತೆ, ಚುನಾವಣಾ ಫಲಿತಾಂಶಗಳಲ್ಲಿ ಹಿನ್ನಡೆ: BJP-RSS ನಲ್ಲಿ ಈಗ ಆಂತರಿಕ ಆಕ್ರೋಶ, ತಳಮಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೆಹಲಿ ಸರ್ಕಾರದ ಕೆಲಸಗಳಿಗೆ ಉಪರಾಜ್ಯಪಾಲರುಗಳ ಮೂಲಕ ಒಕ್ಕೂಟ ಸರ್ಕಾರ ಹೇಗೆ ತೊಡರುಗಾಲು ಕೊಡುತ್ತ ಬಂದಿದೆ ಎಂಬುದನ್ನು ನಾವೆಲ್ಲಾ ನೋಡುತ್ತಾ ಬಂದಿದ್ದೇವೆ. ಕರ್ನಾಟಕದ ಮು.ಮ. ಯಡ್ಯೂರಪ್ಪನವರ ಕೊರೋನಾ ವೈಫಲ್ಯವೂ ಸಹ ಅವರ ತಲೆದಂಡಕ್ಕೆಂದೇ ಹೆಣೆಯಲಾದ ಅಂತಹುದೇ ಕುತಂತ್ರ ಎಂಬುದು ನನ್ನ ನಂಬಿಕೆ. ಇದೇ ರೀತಿಯಲ್ಲಿ ಪಶ್ಚಿಮ ಬಂಗಾಳದ ಚುನಾವಣೋತ್ತರ ಗಲಭೆಗಳ ವಿಚಾರದಲ್ಲೂ ಕುತಂತ್ರ ಮಾಡಲಾಗಿದೆ ಎಂಬುದು ನನ್ನ ನಂಬಿಕೆ. ಒಟ್ಟಾರೆಯಾಗಿ ತಮಗೆ ಬೇಡದವರನ್ನು, ಅಸಂವೈಧಾನಿಕವಾಗಿಯಾದರೂ ಸರಿಯೇ, ಹೇಗಾದರೂ ತೊಲಗಿಸಿಕೊಳ್ಳುವ ಸರ್ವಾಧಿಕಾರದ ಒಂದು ಸ್ವರೂಪವನ್ನು ಒಕ್ಕೂಟ ಪ್ರದರ್ಶಿಸುತ್ತಿದೆ ಎಂಬುದನ್ನು ಯಾರೂ ಅಲ್ಲಗೆಳೆಯಲಾರರು.

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...