Homeಡೇಟಾ ಖೋಲಿಡೇಟಾ ಖೋಲಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-2

ಡೇಟಾ ಖೋಲಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-2

- Advertisement -
- Advertisement -

ಅರಿಸ್ಟಾಟಲ್ ಅಂತ್ ಒಬ್ಬ ಇದ್ದ. ಸುಮಾರು 2370 ವರ್ಷದ ಹಿಂದೆ. ಆ ಪುಣ್ಯಾತ್ಮ ಒಂದು ಮಾತು ಹೇಳಿ ಹೋದ. “ಅನೇಕ ಸಣ್ಣ ಸಣ್ಣ ವಸ್ತುಗಳು ಒಂದಕ್ಕೊಂದು ಸೇರುವುದರಿಂದ ಒಂದು ದೊಡ್ಡ ವಸ್ತು ಆಗಿರುತ್ತದೆ. ಆದರೆ ತನ್ನೊಳಗಿನ ಭಾಗಗಳಿಂದ ಆದ ಆ ದೊಡ್ಡ ವಸ್ತು, ತನ್ನ ಸಣ್ಣ ಸಣ್ಣ ಭಾಗಗಳ ಒಟ್ಟು ಮೊತ್ತಕ್ಕಿಂತ ಭಿನ್ನವಾಗಿರುತ್ತದೆ” ಎಂದು.

ಆದ್ರ ಆನಂತರ ಬಂದ ಕೆಲ ಮಹಾನುಭಾವರು ಅದನ್ನ ಬದಲು ಮಾಡಿದರು: “ಆ ದೊಡ್ಡ ವಸ್ತು, ತನ್ನ ಸಣ್ಣ ಸಣ್ಣ ಭಾಗಗಳ ಒಟ್ಟು ಮೊತ್ತಕ್ಕಿಂತ ದೊಡ್ಡದಾಗಿರುತ್ತದೆ” ಅಂತ. ಕೇವಲ ಒಂದು ಪದ ಬದಲಿ ಮಾಡಿದ್ರ ಎಷ್ಟು ಅಪಾರ್ಥ ಆಗತಾದ ಅನ್ನೋದು ಇದರಿಂದಾ ಗೊತ್ತಾಗ್ತದ.

ಇದನ್ನ ಗೆಸ್ಟಾಲ್ಟ್ ನಿಯಮ ಅಂತ ಕರೆದರು. ಗೆಸ್ಟಾಲ್ಟ್ ಅನ್ನೋದಕ್ಕ ಕನ್ನಡದೊಳಗ ರೂಪ, ಆಕಾರ ಅಂತ ಕರಿಯಬಹುದು.

ಹಂಗಾರ 20ನೆ ಶತಮಾನದ ಮರಿ ಅರಿಸ್ಟಾಟಲ್‌ಗಳು ರೂಪಿಸಿದ ‘ಗೆಸ್ಟಾಲ್ಟ್ ಥೆರಪಿ’ ಅಥವ ‘ಆಕಾರ ಸಿದ್ಧಾಂಥದ ರೋಗ ನಿದಾನ’ದ ಅರ್ಥ ಏನು? ಸರಳವಾಗಿ ಹೇಳೋದಾದರ, ಒಬ್ಬ ಮನುಷ್ಯನ ವ್ಯಕ್ತಿತ್ವ ತನ್ನ ದೇಹ-ಮನಸ್ಸು-ಸ್ವಂತ ವಿಚಾರ, ಹೊರಗಿನ ಪ್ರಭಾವ, ಸುತ್ತಲಿನ ಪರಿಸ್ಥಿತಿ, ಎಲ್ಲಾ ಸೇರಿ ಆಗಿರ್ತದ. ಈ ರೀತಿ ರೂಪುಗೊಂಡಿರುವುದನ್ನ ವ್ಯಕ್ತಿತ್ವ ಅನ್ನುವುದು. ಒಬ್ಬನ ಸ್ವಭಾವದ ಭಾಗಗಳಾದ ದೇಹ, ಮನಸ್ಸು, ವಿಚಾರ, ಪ್ರಭಾವ, ಪರಿಸ್ಥಿತಿ ಮುಂತಾದವುಗಳ ಒಟ್ಟು ಮೊತ್ತಕ್ಕಿಂತ ಅದು ದೊಡ್ಡದು ಅಂತ ಅವರು ವಾದಿಸಿದರು. ಆ ಮನೋವಿಜ್ಞಾನಿಗಳ ಗುಂಪಿನಲ್ಲಿ ವಿಲ್ಲ್ಹೆಲ್ಮ್ ಉಂಟ್, ಕರ್ಟ್ ಕೊಫ್ಕಾ, ಮ್ಯಾಕ್ಸ್
ವೆರ್ಥೆಮೆರ್, ಫ್ರಿಟ್ಸ್ ಪೆರ್ಲ್ಸ್, ವೂಲ್ಫ್‌ಗ್ಯಾಂಗ್ ಕೊಹ್ಲರ್, ಇತ್ಯಾದಿಗಳು ಇದ್ದರು.
ಅವರು ಪಾಪ ತಮ್ಮ ಕ್ಷೇತ್ರಕ್ಕ ತಮ್ಮ ಕೊಡುಗೆ ಕೊಟ್ಟರು, ಹೋದರು. ಆ ಸಿದ್ಧಾಂತ ಪಾಲಿಸೋ ವಿದ್ವಾಂಸರು ಈಗಲೂ ಇದ್ದಾರ.

ಆದರ ಪ್ರಾಚೀನ ಕಾಲದಿಂದಲೂ ನಮ್ಮ ಕಣ್ಣಿಗೆ ಕಾಣುವ ಜಗತ್ತಿನ ವಿಶ್ವ ಗುರು ಆಗಿರುವ ಭಾರತದ ಕೆಲವು ತಜ್ಞರು ಈ ಗೆಸ್ಟಾಲ್ಟ್ ಸಿದ್ಧಾಂತವನ್ನು ಹೊಸ ಕಣ್ಣಿನಿಂದ ನೋಡಿದರು. ಅದು ಅನ್ವಯ ಆಗುವುದು ನಮ್ಮ ದೇಹಕ್ಕೆ ಅಲ್ಲಾ, ನಮ್ಮ ದೇಶಕ್ಕೆ ಅಂತ ಚೀರಿ ಹೇಳಿದರು.

ಅವ್ರ ಪ್ರಕಾರ ಭಾರತ ಎಂಬೋ ರಾಷ್ಟ್ರ, ಎಲ್ಲಾ ರಾಜ್ಯಗಳ ಒಟ್ಟು ಮೊತ್ತಕ್ಕಿಂತಲೂ ದೊಡ್ಡದು, ಭವ್ಯವಾದದ್ದು. ಭಾರತ ಅನ್ನುವುದು ಕೇವಲ ರಾಜ್ಯಗಳ ಸಮೂಹ ಅಲ್ಲ, ಅದು ಅದಕ್ಕಿಂತಲೂ ದೊಡ್ಡದು, ಭಿನ್ನವಾದದ್ದು, ಭವ್ಯವಾದದ್ದು. ಒಟ್ಟಿನಲ್ಲಿ ಇದು ಒಕ್ಕೂಟ ಅಲ್ಲ, ಸಂಯುಕ್ತ ಸಂಘ ಅಲ್ಲ, ಕೇವಲ ರಾಜ್ಯಗಳ ಒಂದು ಗುಂಪು. ಹೀಗಾಗಿ, ದೇಶದ ಅಸ್ಮಿತೆ ಅನ್ನೋದು ದೊಡ್ಡದು. ರಾಜ್ಯಗಳ ಅನನ್ಯತೆ ಅಥವಾ ತನ್ನತನ ಅನ್ನೋದು ಯಾವ ಲೆಕ್ಕಕ್ಕೂ ಇಲ್ಲ.

ಈ ಪೀಠಿಕೆಯ ನಂತರ ನಮ್ಮ ವಿಷಯಕ್ಕ ಬರೋಣ. ಅದು ಮಾಧ್ಯಮ ನಲ್ಲರ ಬಗ್ಗೆ. ಈ ಹೊತ್ತಿನ ಮಾಧ್ಯಮ ನಲ್ಲರು ಯಾರು ಅಂದರ ಸದಾ ಸುದ್ದಿಯಲ್ಲಿ ಇರುವ ಕೆಲ ರಾಜ್ಯದ ಮುಖ್ಯ ಮಂತ್ರಿಗಳು. ಸುದ್ದಿ ಎನ್ನುವುದು ನಮ್ಮ ದೇಶದಾಗ ಬಹಳ ತಟಸ್ಥ ಹಾಗೂ ಯಾವ ಪಕ್ಷಕ್ಕೂ ಸೇರದೆ ಇರೋದರಿಂದ ಅವರು ಒಳ್ಳೆ ಕೆಲಸ ಮಾಡಿದಾಗ ಅಥವ ಕೆಟ್ಟ ಕೆಲಸ ಮಾಡಿದಾಗ ಅವರು ಸುದ್ದಿ ಮಾಡ್ತಾರ.

ಅದರೊಳಗ ಕೆಲವು ಹೆಸರು – ಅರವಿಂದ ಕೇಜ್ರಿವಾಲ್, ಮಮತಾ ಬ್ಯಾನರ್ಜಿ, ಪಿನರಾಯಿ ವಿಜಯನ್, ಹೇಮಂತ್ ಸೊರೆನ್, ಅಜಯ್ ಸಿಂಗ್ ಬಿಸ್ಟ್ ಅಲಿಯಾಸ್ ಯೋಗಿ ಆದಿತ್ಯನಾಥ್, ಬಿ ಎಸ್ ಯಡಿಯೂರಪ್ಪ, ಇತ್ಯಾದಿ. ಇವರು ಜಾಸ್ತಿ ಹೆಸರು ಮಾಡಿದಾಗಲೆಲ್ಲಾ ಪಂಥ ಪ್ರಧಾನ ಸೇವಕರ ಹೆಸರು ಮರೆ ಆಗಲಿಕ್ಕೆ ಸುರು ಆಗೇದ ಅಂತ ಕೆಲವರಿಗೆ ಚಡಪಡಿಕೆ ಆಗಲಿಕ್ಕೆ ಸುರು ಆಗ್ತದ. ಅವರು ಏನು ಸಣ್ಣ ಸಣ್ಣವರಿಗೆಲ್ಲಾ ಪ್ರಾಮುಖ್ಯತೆ ಕೊಡೋದು? ದೊಡ್ಡವರನ್ನ ಮರೆತರೆ ಹೆಂಗ? ಅಂತ ಜೋರಾಗಿ ಹೇಳ್ತಾರ, “ನಿನ್ನ ಬಿಟ್ಟು ಬೇರೆ ದೇವರನ್ನು ಪೂಜಿಸಿದೊಡೆ ಎಂತಯ್ಯಾ?” ಅಂತ ಗೋಳಾಡುತ್ತಾರೆ. ಅವರ ಮನಸ್ಸಿನಾಗ ಎರಡು ತಪ್ಪು ಕಲ್ಪನೆಗಳು ಇರಬಹುದು. ಒಂದು ಪ್ರಧಾನಿ ಪಟ್ಟ ಅನ್ನೋದು ಸರ್ವ ಪ್ರಥಮ ಪ್ರಮುಖ ಅನ್ನೋದು, ಇನ್ನೊಂದು ರಾಜ್ಯಗಳು ಕನಿಷ್ಠ, ದೇಶ ಶ್ರೇಷ್ಠ ಅನ್ನೋದು. ಅವರೆಲ್ಲ ನಮ್ಮ ಕಾಲದ ಗೆಸ್ಟಾಲ್ಟ್ ನಂಬಿಕಸ್ಥರು.

ಅವರ ನಂಬಿಕೆ ತಪ್ಪು. ಅದಕ್ಕೆ ಯಾವುದೇ ಸಾಮಾಜಿಕ ವಿಜ್ಞಾನದ ಆಧಾರ ಇಲ್ಲ. ಮನೋವಿಜ್ಞಾನದ ಒಳಗ ಈ ವಿಚಾರಕ್ಕೆ ಮನ್ನಣೆ ಇರಬಹುದು. ಅದರಿಂದ ಬಹಳ ಜನ ಗುಣ ಆಗಿರಬಹುದು. ಆದರ ರಾಜ್ಯಶಾಸ್ತ್ರದೊಳಗ ಇದಕ್ಕೆ ಮನ್ನಣೆ ಇಲ್ಲ. ಇದು ಬಹು ಚರ್ಚಿತ ವಿಷಯ ಅಷ್ಟೇ ಅಲ್ಲ, ಬಹಳ ಜನ ಪಂಡಿತರಿಂದ ಟೀಕೆ-ನಿಂದನೆಗೆ ಒಳಗಾದ ವಿಷಯ. ರಾಜ್ಯಗಳ ಅನನ್ಯತೆ ಅನ್ನೋದು, ದೇಶದ ಅಸ್ಮಿತೆಗಿಂತ ದೊಡ್ಡದು. ರಾಜ್ಯಗಳಿಂದ ದೇಶಕ್ಕ ಪ್ರಾಮುಖ್ಯತೆ ಬರ್ತದ. ಉಲ್ಟಾ ಅಲ್ಲಾ.

ಇದಕ್ಕೆ ಒಂದು ಉದಾಹರಣೆ ಕೊಡೋಣ. 2015ರಲ್ಲಿ ಭಾರತದಿಂದ ಕಿರಿಯ ಐಪಿಎಸ್ ಅಧಿಕಾರಿಗಳ ತಂಡ ಅಮೆರಿಕ ದೇಶದ ಅಧ್ಯಯನ ಪ್ರವಾಸಕ್ಕ ಹೋಗಿತ್ತು. ಅವಾಗ ಅವರು ಅಲ್ಲಿನ ಕೆಲವು ಕೇಂದ್ರ ಪೊಲೀಸು ಪಡೆಗಳಾದ ಸಿಐಎ, ಎಫ್‌ಬಿಐ, ಐಆರ್‌ಎಸ್‌ಗಳ ಕಚೇರಿಗೆ ಕರಕೊಂಡು ಹೋದರು. ಆಮ್ಯಾಲೆ ಲಾಸ್ ಎಂಜಲಿಸ್, ಫ್ಲೋರಿಡಾ, ಕೆಂಟಕಿ, ನ್ಯುಯಾರ್ಕ್, ವಾಶಿಂಗ್‌ಟನ್ ಇತ್ಯಾದಿ ರಾಜ್ಯಗಳ ಪೊಲೀಸು ಅಧಿಕಾರಿಗಳ ಜೊತೆ ಭೇಟಿ ಮಾಡಿಸಿದರು.

ಅವಾಗ ಭಾರತೀಯ ಅಧಿಕಾರಿಗಳು ನಂಬಲಿಕ್ಕೆ ಸಾಧ್ಯವಿಲ್ಲದ ಎರಡು ವಿಷಯ ಅವರಿಗೆ ಗೊತ್ತಾತು. ಒಂದು ಅಲ್ಲಿ ಐಪಿಎಸ್ಸು-ಐಎಎಸ್ಸು ಅನ್ನೋದು ಇಲ್ಲ್ಲ.

ಇನ್ನೊಂದು ಅದು ಏನು ಅಂದರ ಅಮೆರಿಕ ದೇಶದಲ್ಲಿ ಕೇವಲ ಒಂದು ಪೊಲೀಸು ವ್ಯವಸ್ಥೆ ಇಲ್ಲ. ಅಲ್ಲೇ ಸುಮಾರು 19,000 ವಿವಿಧ ವ್ಯವಸ್ಥೆಗಳು ಇವೆ. ನಮ್ಮ ಊರಿನಲ್ಲಿ ಪೊಲೀಸು ಕೆಲಸ ಹೆಂಗ ಮಾಡಬೇಕು ಅನ್ನೋದು ನನಗೆ ಚನ್ನಾಗಿ ಗೊತ್ತಿರುತ್ತದೆ. ನನ್ನ ಊರಿಗೆ ಭೇಟಿಯೇ ನೀಡದ ವಾಶಿಂಗ್‌ಟನ್‌ನ ಹಿರಿಯ ಅಧಿಕಾರಿಗೆ ಏನು ಗೊತ್ತಿರ್ತದ ಮಣ್ಣು ಅಂತ ಅಲ್ಲಿನ ಪುಟ್ಟ ನಗರದ ಪೊಲೀಸು ಅಧಿಕಾರಿ ಒಬ್ಬ
ಇವರಿಗೆ ಹೇಳಿದ.

ಇದನ್ನ ಜೀರ್ಣಿಸಿಕೊಳ್ಳಲಿಕ್ಕೆ ಈಸ್ಟ್ ಇಂಡಿಯಾ ಕಂಪನಿಯ ಪಳೆಯುಳಿಕೆಗಳಾದ ನಮ್ಮ ಐಪಿಎಸ್ಸು ಅಧಿಕಾರಿಗಳಿಗೆ ಸಾಧ್ಯ ಆಗಲಿಲ್ಲ. ಅದು ಹೇಗೆ ಸಾಧ್ಯ, ನೀವು ನಮಗೆ ಸುಳ್ಳು ಹೇಳುತ್ತಿದ್ದೀರಿ ಅಂತ ಹೇಳಿ ಜೋರಾಗಿ ಜಗಳ ಮಾಡಿದರು. ಆಮ್ಯಾಲೆ ಅಲ್ಲಿಯೇ ನೆಲೆಸಿದ್ದ ಭಾರತಿಯ ಮೂಲದ ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರನ್ನ ಅಲ್ಲಿಯ ಪೊಲೀಸರು ಕರೆಸಿದರು. ಅವರು ಇವರಿಗೆ ತಿಳಿಸಿ ಹೇಳಿದರು. ನಿಮಗೆ ಸುಳ್ಳು ಹೇಳಿ ಇವರಿಗೆ ಯಾವ ಲಾಭವೂ ಇಲ್ಲ. ಇಲ್ಲೇ ಇರುವುದು ನೈಜ ಒಕ್ಕೂಟ ವ್ಯವಸ್ಥೆ. ಭಾರತದ ಒಕ್ಕೂಟ ವ್ಯವಸ್ಥೆ ಇರೋದು ಬರೀ ಕಾಗದದ ಮೇಲೆ ಅಂತ ಅವರು ತಿಳಿ ಹೇಳುವಾಗ ರಾತ್ರಿ ಆಗಿತ್ತು. ಎಲ್ಲರೂ ಊಟ ಮಾಡಿ ತಲೆನೋವಿನ ಮಾತ್ರೆ ತೊಗೊಂಡು ಮಲಗಿಕೊಂಡರು. ಅವರು ಮರಳಿ ಭಾರತಕ್ಕೆ ಬಂದರೂ ಕೂಡ ಅವರಿಗೆ ಅಲ್ಲಿನ ಪೊಲೀಸು ವ್ಯವಸ್ಥೆ ಅರ್ಥ ಅಗಲಿಲ್ಲ.

ಈ ಕಳೆದ ಐದಾರು ವರ್ಷದೊಳಗ ಎರಡು ಶಬ್ದ ಮತ್ತ ಮತ್ತ ಬಳಕೆ ಆಗಲಿಕ್ಕೆ ಹತ್ತಿದ್ದಾವು. ಅವು ಯಾವಪಾ ಅಂದ್ರ – ವಿಕೇಂದ್ರೀಕರಣ ಮತ್ತು ಒಕ್ಕೂಟ ವ್ಯವಸ್ಥೆ. ಅವು ನಮಗ ಈಗ ಎಷ್ಟು ಮುಖ್ಯ ಅಗ್ಯಾವು ಅನ್ನೋದು ನಾವು ತಿಳಕೊಬೇಕು. ಆ ದಿಕ್ಕಿನಾಗ ಇದು ಒಕ್ಕೂಟ ವ್ಯವಸ್ಥೆಯ ಪರಿಚಯದ ಪ್ರಯತ್ನ. ಉಳಿದದ್ದು ಮುಂದ ನೋಡೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...