Homeಡೇಟಾ ಖೋಲಿಡೇಟಾ ಖೋಲಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-2

ಡೇಟಾ ಖೋಲಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-2

- Advertisement -
- Advertisement -

ಅರಿಸ್ಟಾಟಲ್ ಅಂತ್ ಒಬ್ಬ ಇದ್ದ. ಸುಮಾರು 2370 ವರ್ಷದ ಹಿಂದೆ. ಆ ಪುಣ್ಯಾತ್ಮ ಒಂದು ಮಾತು ಹೇಳಿ ಹೋದ. “ಅನೇಕ ಸಣ್ಣ ಸಣ್ಣ ವಸ್ತುಗಳು ಒಂದಕ್ಕೊಂದು ಸೇರುವುದರಿಂದ ಒಂದು ದೊಡ್ಡ ವಸ್ತು ಆಗಿರುತ್ತದೆ. ಆದರೆ ತನ್ನೊಳಗಿನ ಭಾಗಗಳಿಂದ ಆದ ಆ ದೊಡ್ಡ ವಸ್ತು, ತನ್ನ ಸಣ್ಣ ಸಣ್ಣ ಭಾಗಗಳ ಒಟ್ಟು ಮೊತ್ತಕ್ಕಿಂತ ಭಿನ್ನವಾಗಿರುತ್ತದೆ” ಎಂದು.

ಆದ್ರ ಆನಂತರ ಬಂದ ಕೆಲ ಮಹಾನುಭಾವರು ಅದನ್ನ ಬದಲು ಮಾಡಿದರು: “ಆ ದೊಡ್ಡ ವಸ್ತು, ತನ್ನ ಸಣ್ಣ ಸಣ್ಣ ಭಾಗಗಳ ಒಟ್ಟು ಮೊತ್ತಕ್ಕಿಂತ ದೊಡ್ಡದಾಗಿರುತ್ತದೆ” ಅಂತ. ಕೇವಲ ಒಂದು ಪದ ಬದಲಿ ಮಾಡಿದ್ರ ಎಷ್ಟು ಅಪಾರ್ಥ ಆಗತಾದ ಅನ್ನೋದು ಇದರಿಂದಾ ಗೊತ್ತಾಗ್ತದ.

ಇದನ್ನ ಗೆಸ್ಟಾಲ್ಟ್ ನಿಯಮ ಅಂತ ಕರೆದರು. ಗೆಸ್ಟಾಲ್ಟ್ ಅನ್ನೋದಕ್ಕ ಕನ್ನಡದೊಳಗ ರೂಪ, ಆಕಾರ ಅಂತ ಕರಿಯಬಹುದು.

ಹಂಗಾರ 20ನೆ ಶತಮಾನದ ಮರಿ ಅರಿಸ್ಟಾಟಲ್‌ಗಳು ರೂಪಿಸಿದ ‘ಗೆಸ್ಟಾಲ್ಟ್ ಥೆರಪಿ’ ಅಥವ ‘ಆಕಾರ ಸಿದ್ಧಾಂಥದ ರೋಗ ನಿದಾನ’ದ ಅರ್ಥ ಏನು? ಸರಳವಾಗಿ ಹೇಳೋದಾದರ, ಒಬ್ಬ ಮನುಷ್ಯನ ವ್ಯಕ್ತಿತ್ವ ತನ್ನ ದೇಹ-ಮನಸ್ಸು-ಸ್ವಂತ ವಿಚಾರ, ಹೊರಗಿನ ಪ್ರಭಾವ, ಸುತ್ತಲಿನ ಪರಿಸ್ಥಿತಿ, ಎಲ್ಲಾ ಸೇರಿ ಆಗಿರ್ತದ. ಈ ರೀತಿ ರೂಪುಗೊಂಡಿರುವುದನ್ನ ವ್ಯಕ್ತಿತ್ವ ಅನ್ನುವುದು. ಒಬ್ಬನ ಸ್ವಭಾವದ ಭಾಗಗಳಾದ ದೇಹ, ಮನಸ್ಸು, ವಿಚಾರ, ಪ್ರಭಾವ, ಪರಿಸ್ಥಿತಿ ಮುಂತಾದವುಗಳ ಒಟ್ಟು ಮೊತ್ತಕ್ಕಿಂತ ಅದು ದೊಡ್ಡದು ಅಂತ ಅವರು ವಾದಿಸಿದರು. ಆ ಮನೋವಿಜ್ಞಾನಿಗಳ ಗುಂಪಿನಲ್ಲಿ ವಿಲ್ಲ್ಹೆಲ್ಮ್ ಉಂಟ್, ಕರ್ಟ್ ಕೊಫ್ಕಾ, ಮ್ಯಾಕ್ಸ್
ವೆರ್ಥೆಮೆರ್, ಫ್ರಿಟ್ಸ್ ಪೆರ್ಲ್ಸ್, ವೂಲ್ಫ್‌ಗ್ಯಾಂಗ್ ಕೊಹ್ಲರ್, ಇತ್ಯಾದಿಗಳು ಇದ್ದರು.
ಅವರು ಪಾಪ ತಮ್ಮ ಕ್ಷೇತ್ರಕ್ಕ ತಮ್ಮ ಕೊಡುಗೆ ಕೊಟ್ಟರು, ಹೋದರು. ಆ ಸಿದ್ಧಾಂತ ಪಾಲಿಸೋ ವಿದ್ವಾಂಸರು ಈಗಲೂ ಇದ್ದಾರ.

ಆದರ ಪ್ರಾಚೀನ ಕಾಲದಿಂದಲೂ ನಮ್ಮ ಕಣ್ಣಿಗೆ ಕಾಣುವ ಜಗತ್ತಿನ ವಿಶ್ವ ಗುರು ಆಗಿರುವ ಭಾರತದ ಕೆಲವು ತಜ್ಞರು ಈ ಗೆಸ್ಟಾಲ್ಟ್ ಸಿದ್ಧಾಂತವನ್ನು ಹೊಸ ಕಣ್ಣಿನಿಂದ ನೋಡಿದರು. ಅದು ಅನ್ವಯ ಆಗುವುದು ನಮ್ಮ ದೇಹಕ್ಕೆ ಅಲ್ಲಾ, ನಮ್ಮ ದೇಶಕ್ಕೆ ಅಂತ ಚೀರಿ ಹೇಳಿದರು.

ಅವ್ರ ಪ್ರಕಾರ ಭಾರತ ಎಂಬೋ ರಾಷ್ಟ್ರ, ಎಲ್ಲಾ ರಾಜ್ಯಗಳ ಒಟ್ಟು ಮೊತ್ತಕ್ಕಿಂತಲೂ ದೊಡ್ಡದು, ಭವ್ಯವಾದದ್ದು. ಭಾರತ ಅನ್ನುವುದು ಕೇವಲ ರಾಜ್ಯಗಳ ಸಮೂಹ ಅಲ್ಲ, ಅದು ಅದಕ್ಕಿಂತಲೂ ದೊಡ್ಡದು, ಭಿನ್ನವಾದದ್ದು, ಭವ್ಯವಾದದ್ದು. ಒಟ್ಟಿನಲ್ಲಿ ಇದು ಒಕ್ಕೂಟ ಅಲ್ಲ, ಸಂಯುಕ್ತ ಸಂಘ ಅಲ್ಲ, ಕೇವಲ ರಾಜ್ಯಗಳ ಒಂದು ಗುಂಪು. ಹೀಗಾಗಿ, ದೇಶದ ಅಸ್ಮಿತೆ ಅನ್ನೋದು ದೊಡ್ಡದು. ರಾಜ್ಯಗಳ ಅನನ್ಯತೆ ಅಥವಾ ತನ್ನತನ ಅನ್ನೋದು ಯಾವ ಲೆಕ್ಕಕ್ಕೂ ಇಲ್ಲ.

ಈ ಪೀಠಿಕೆಯ ನಂತರ ನಮ್ಮ ವಿಷಯಕ್ಕ ಬರೋಣ. ಅದು ಮಾಧ್ಯಮ ನಲ್ಲರ ಬಗ್ಗೆ. ಈ ಹೊತ್ತಿನ ಮಾಧ್ಯಮ ನಲ್ಲರು ಯಾರು ಅಂದರ ಸದಾ ಸುದ್ದಿಯಲ್ಲಿ ಇರುವ ಕೆಲ ರಾಜ್ಯದ ಮುಖ್ಯ ಮಂತ್ರಿಗಳು. ಸುದ್ದಿ ಎನ್ನುವುದು ನಮ್ಮ ದೇಶದಾಗ ಬಹಳ ತಟಸ್ಥ ಹಾಗೂ ಯಾವ ಪಕ್ಷಕ್ಕೂ ಸೇರದೆ ಇರೋದರಿಂದ ಅವರು ಒಳ್ಳೆ ಕೆಲಸ ಮಾಡಿದಾಗ ಅಥವ ಕೆಟ್ಟ ಕೆಲಸ ಮಾಡಿದಾಗ ಅವರು ಸುದ್ದಿ ಮಾಡ್ತಾರ.

ಅದರೊಳಗ ಕೆಲವು ಹೆಸರು – ಅರವಿಂದ ಕೇಜ್ರಿವಾಲ್, ಮಮತಾ ಬ್ಯಾನರ್ಜಿ, ಪಿನರಾಯಿ ವಿಜಯನ್, ಹೇಮಂತ್ ಸೊರೆನ್, ಅಜಯ್ ಸಿಂಗ್ ಬಿಸ್ಟ್ ಅಲಿಯಾಸ್ ಯೋಗಿ ಆದಿತ್ಯನಾಥ್, ಬಿ ಎಸ್ ಯಡಿಯೂರಪ್ಪ, ಇತ್ಯಾದಿ. ಇವರು ಜಾಸ್ತಿ ಹೆಸರು ಮಾಡಿದಾಗಲೆಲ್ಲಾ ಪಂಥ ಪ್ರಧಾನ ಸೇವಕರ ಹೆಸರು ಮರೆ ಆಗಲಿಕ್ಕೆ ಸುರು ಆಗೇದ ಅಂತ ಕೆಲವರಿಗೆ ಚಡಪಡಿಕೆ ಆಗಲಿಕ್ಕೆ ಸುರು ಆಗ್ತದ. ಅವರು ಏನು ಸಣ್ಣ ಸಣ್ಣವರಿಗೆಲ್ಲಾ ಪ್ರಾಮುಖ್ಯತೆ ಕೊಡೋದು? ದೊಡ್ಡವರನ್ನ ಮರೆತರೆ ಹೆಂಗ? ಅಂತ ಜೋರಾಗಿ ಹೇಳ್ತಾರ, “ನಿನ್ನ ಬಿಟ್ಟು ಬೇರೆ ದೇವರನ್ನು ಪೂಜಿಸಿದೊಡೆ ಎಂತಯ್ಯಾ?” ಅಂತ ಗೋಳಾಡುತ್ತಾರೆ. ಅವರ ಮನಸ್ಸಿನಾಗ ಎರಡು ತಪ್ಪು ಕಲ್ಪನೆಗಳು ಇರಬಹುದು. ಒಂದು ಪ್ರಧಾನಿ ಪಟ್ಟ ಅನ್ನೋದು ಸರ್ವ ಪ್ರಥಮ ಪ್ರಮುಖ ಅನ್ನೋದು, ಇನ್ನೊಂದು ರಾಜ್ಯಗಳು ಕನಿಷ್ಠ, ದೇಶ ಶ್ರೇಷ್ಠ ಅನ್ನೋದು. ಅವರೆಲ್ಲ ನಮ್ಮ ಕಾಲದ ಗೆಸ್ಟಾಲ್ಟ್ ನಂಬಿಕಸ್ಥರು.

ಅವರ ನಂಬಿಕೆ ತಪ್ಪು. ಅದಕ್ಕೆ ಯಾವುದೇ ಸಾಮಾಜಿಕ ವಿಜ್ಞಾನದ ಆಧಾರ ಇಲ್ಲ. ಮನೋವಿಜ್ಞಾನದ ಒಳಗ ಈ ವಿಚಾರಕ್ಕೆ ಮನ್ನಣೆ ಇರಬಹುದು. ಅದರಿಂದ ಬಹಳ ಜನ ಗುಣ ಆಗಿರಬಹುದು. ಆದರ ರಾಜ್ಯಶಾಸ್ತ್ರದೊಳಗ ಇದಕ್ಕೆ ಮನ್ನಣೆ ಇಲ್ಲ. ಇದು ಬಹು ಚರ್ಚಿತ ವಿಷಯ ಅಷ್ಟೇ ಅಲ್ಲ, ಬಹಳ ಜನ ಪಂಡಿತರಿಂದ ಟೀಕೆ-ನಿಂದನೆಗೆ ಒಳಗಾದ ವಿಷಯ. ರಾಜ್ಯಗಳ ಅನನ್ಯತೆ ಅನ್ನೋದು, ದೇಶದ ಅಸ್ಮಿತೆಗಿಂತ ದೊಡ್ಡದು. ರಾಜ್ಯಗಳಿಂದ ದೇಶಕ್ಕ ಪ್ರಾಮುಖ್ಯತೆ ಬರ್ತದ. ಉಲ್ಟಾ ಅಲ್ಲಾ.

ಇದಕ್ಕೆ ಒಂದು ಉದಾಹರಣೆ ಕೊಡೋಣ. 2015ರಲ್ಲಿ ಭಾರತದಿಂದ ಕಿರಿಯ ಐಪಿಎಸ್ ಅಧಿಕಾರಿಗಳ ತಂಡ ಅಮೆರಿಕ ದೇಶದ ಅಧ್ಯಯನ ಪ್ರವಾಸಕ್ಕ ಹೋಗಿತ್ತು. ಅವಾಗ ಅವರು ಅಲ್ಲಿನ ಕೆಲವು ಕೇಂದ್ರ ಪೊಲೀಸು ಪಡೆಗಳಾದ ಸಿಐಎ, ಎಫ್‌ಬಿಐ, ಐಆರ್‌ಎಸ್‌ಗಳ ಕಚೇರಿಗೆ ಕರಕೊಂಡು ಹೋದರು. ಆಮ್ಯಾಲೆ ಲಾಸ್ ಎಂಜಲಿಸ್, ಫ್ಲೋರಿಡಾ, ಕೆಂಟಕಿ, ನ್ಯುಯಾರ್ಕ್, ವಾಶಿಂಗ್‌ಟನ್ ಇತ್ಯಾದಿ ರಾಜ್ಯಗಳ ಪೊಲೀಸು ಅಧಿಕಾರಿಗಳ ಜೊತೆ ಭೇಟಿ ಮಾಡಿಸಿದರು.

ಅವಾಗ ಭಾರತೀಯ ಅಧಿಕಾರಿಗಳು ನಂಬಲಿಕ್ಕೆ ಸಾಧ್ಯವಿಲ್ಲದ ಎರಡು ವಿಷಯ ಅವರಿಗೆ ಗೊತ್ತಾತು. ಒಂದು ಅಲ್ಲಿ ಐಪಿಎಸ್ಸು-ಐಎಎಸ್ಸು ಅನ್ನೋದು ಇಲ್ಲ್ಲ.

ಇನ್ನೊಂದು ಅದು ಏನು ಅಂದರ ಅಮೆರಿಕ ದೇಶದಲ್ಲಿ ಕೇವಲ ಒಂದು ಪೊಲೀಸು ವ್ಯವಸ್ಥೆ ಇಲ್ಲ. ಅಲ್ಲೇ ಸುಮಾರು 19,000 ವಿವಿಧ ವ್ಯವಸ್ಥೆಗಳು ಇವೆ. ನಮ್ಮ ಊರಿನಲ್ಲಿ ಪೊಲೀಸು ಕೆಲಸ ಹೆಂಗ ಮಾಡಬೇಕು ಅನ್ನೋದು ನನಗೆ ಚನ್ನಾಗಿ ಗೊತ್ತಿರುತ್ತದೆ. ನನ್ನ ಊರಿಗೆ ಭೇಟಿಯೇ ನೀಡದ ವಾಶಿಂಗ್‌ಟನ್‌ನ ಹಿರಿಯ ಅಧಿಕಾರಿಗೆ ಏನು ಗೊತ್ತಿರ್ತದ ಮಣ್ಣು ಅಂತ ಅಲ್ಲಿನ ಪುಟ್ಟ ನಗರದ ಪೊಲೀಸು ಅಧಿಕಾರಿ ಒಬ್ಬ
ಇವರಿಗೆ ಹೇಳಿದ.

ಇದನ್ನ ಜೀರ್ಣಿಸಿಕೊಳ್ಳಲಿಕ್ಕೆ ಈಸ್ಟ್ ಇಂಡಿಯಾ ಕಂಪನಿಯ ಪಳೆಯುಳಿಕೆಗಳಾದ ನಮ್ಮ ಐಪಿಎಸ್ಸು ಅಧಿಕಾರಿಗಳಿಗೆ ಸಾಧ್ಯ ಆಗಲಿಲ್ಲ. ಅದು ಹೇಗೆ ಸಾಧ್ಯ, ನೀವು ನಮಗೆ ಸುಳ್ಳು ಹೇಳುತ್ತಿದ್ದೀರಿ ಅಂತ ಹೇಳಿ ಜೋರಾಗಿ ಜಗಳ ಮಾಡಿದರು. ಆಮ್ಯಾಲೆ ಅಲ್ಲಿಯೇ ನೆಲೆಸಿದ್ದ ಭಾರತಿಯ ಮೂಲದ ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರನ್ನ ಅಲ್ಲಿಯ ಪೊಲೀಸರು ಕರೆಸಿದರು. ಅವರು ಇವರಿಗೆ ತಿಳಿಸಿ ಹೇಳಿದರು. ನಿಮಗೆ ಸುಳ್ಳು ಹೇಳಿ ಇವರಿಗೆ ಯಾವ ಲಾಭವೂ ಇಲ್ಲ. ಇಲ್ಲೇ ಇರುವುದು ನೈಜ ಒಕ್ಕೂಟ ವ್ಯವಸ್ಥೆ. ಭಾರತದ ಒಕ್ಕೂಟ ವ್ಯವಸ್ಥೆ ಇರೋದು ಬರೀ ಕಾಗದದ ಮೇಲೆ ಅಂತ ಅವರು ತಿಳಿ ಹೇಳುವಾಗ ರಾತ್ರಿ ಆಗಿತ್ತು. ಎಲ್ಲರೂ ಊಟ ಮಾಡಿ ತಲೆನೋವಿನ ಮಾತ್ರೆ ತೊಗೊಂಡು ಮಲಗಿಕೊಂಡರು. ಅವರು ಮರಳಿ ಭಾರತಕ್ಕೆ ಬಂದರೂ ಕೂಡ ಅವರಿಗೆ ಅಲ್ಲಿನ ಪೊಲೀಸು ವ್ಯವಸ್ಥೆ ಅರ್ಥ ಅಗಲಿಲ್ಲ.

ಈ ಕಳೆದ ಐದಾರು ವರ್ಷದೊಳಗ ಎರಡು ಶಬ್ದ ಮತ್ತ ಮತ್ತ ಬಳಕೆ ಆಗಲಿಕ್ಕೆ ಹತ್ತಿದ್ದಾವು. ಅವು ಯಾವಪಾ ಅಂದ್ರ – ವಿಕೇಂದ್ರೀಕರಣ ಮತ್ತು ಒಕ್ಕೂಟ ವ್ಯವಸ್ಥೆ. ಅವು ನಮಗ ಈಗ ಎಷ್ಟು ಮುಖ್ಯ ಅಗ್ಯಾವು ಅನ್ನೋದು ನಾವು ತಿಳಕೊಬೇಕು. ಆ ದಿಕ್ಕಿನಾಗ ಇದು ಒಕ್ಕೂಟ ವ್ಯವಸ್ಥೆಯ ಪರಿಚಯದ ಪ್ರಯತ್ನ. ಉಳಿದದ್ದು ಮುಂದ ನೋಡೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...