Homeಮುಖಪುಟಉತ್ತರ ಪ್ರದೇಶ: ಜನರಿಗೆ ಒಮ್ಮೆ ಕೋವ್ಯಾಕ್ಸಿನ್, ಒಮ್ಮೆ ಕೋವಿಶೀಲ್ಡ್ ಲಸಿಕೆ ನೀಡಿದ ಅಧಿಕಾರಿಗಳು!

ಉತ್ತರ ಪ್ರದೇಶ: ಜನರಿಗೆ ಒಮ್ಮೆ ಕೋವ್ಯಾಕ್ಸಿನ್, ಒಮ್ಮೆ ಕೋವಿಶೀಲ್ಡ್ ಲಸಿಕೆ ನೀಡಿದ ಅಧಿಕಾರಿಗಳು!

- Advertisement -
- Advertisement -

ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಜನರಿಗೆ ಒಮ್ಮೆ ಕೋವ್ಯಾಕ್ಸಿನ್, ಒಮ್ಮೆ ಕೋವಿಶೀಲ್ಡ್ ಮಿಶ್ರ ಪ್ರಮಾಣದ ಲಸಿಕೆಗಳನ್ನು ನೀಡಲಾಗಿದೆ. ನೇಪಾಳ ಗಡಿಯ ಸಮೀಪವಿರುವ ಸಿದ್ಧಾರ್ಥನಗರ ಜಿಲ್ಲೆಯ ಸುಮಾರು 20 ಗ್ರಾಮಸ್ಥರಿಗೆ ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಎರಡನ್ನೂ ನೀಡಲಾಗಿದೆ.

ಲಸಿಕೆ ಮಿಶ್ರಣದಿಂದ ಯಾರ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿಲ್ಲ ಮತ್ತು ಈ ಘಟನೆಗೆ ಕಾರಣವಾದವರಿಗೆ ಶಿಕ್ಷೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯ ರಾಜಧಾನಿ ಲಕ್ನೋದಿಂದ 270 ಕಿ.ಮೀ ದೂರದಲ್ಲಿರುವ ಬಹುಮಟ್ಟಿಗೆ ಗ್ರಾಮೀಣ ಜಿಲ್ಲೆಯಾದ  ಸಿದ್ಧಾರ್ಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಆಘಾತ ಸಂಭವಿಸಿದೆ. ಗ್ರಾಮಸ್ಥರಿಗೆ ಏಪ್ರಿಲ್ ಮೊದಲ ವಾರದಲ್ಲಿ ಕೋವಿಶೀಲ್ಡ್ ಚುಚ್ಚುಮದ್ದು ನೀಡಲಾಗಿತ್ತು. ನಂತರ ಮೇ 14 ರಂದು ಕೋವ್ಯಾಕ್ಸಿನ್ ಅವರ ಎರಡನೇ ಡೋಸ್ ಆಗಿ ನೀಡಲಾಗಿದೆ.

ಇದನ್ನೂ ಓದಿ: ಮೊದಲ ಸಲ ಕೋವ್ಯಾಕ್ಸಿನ್, ಎರಡನೆ ಸಲ ಕೋವಿಶೀಲ್ಡ್ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುತ್ತವೆಯೇ?

“ಇದು ಖಂಡಿತವಾಗಿಯೂ ಅಜಾಗರೂಕತೆಯಾಗಿದೆ. ಲಸಿಕೆಗಳನ್ನು ಹೀಗೆ ನೀಡಲು ಸರ್ಕಾರದಿಂದ ಯಾವುದೇ ಸೂಚನೆಯಿರಲಿಲ್ಲ. ಆದ್ದರಿಂದ ಇದು ಒಂದು ಅಜಾಗರೂಕತೆಯಾಗಿದೆ. ಈ ಬಗ್ಗೆ ತನಿಖೆಗೆ ಆದೇಶಿಸಿದ್ದೇವೆ. ತಪ್ಪಿತಸ್ಥರಿಂದ ನಾನು ವಿವರಣೆಯನ್ನು ಕೇಳಿದ್ದೇನೆ. ಕ್ರಮ ಕೈಗೊಳ್ಳುತ್ತೇವೆ ”ಎಂದು ಸಿದ್ಧಾರ್ಥನಗರದ ಮುಖ್ಯ ವೈದ್ಯಾಧಿಕಾರಿ ಸಂದೀಪ್ ಚೌಧರಿ ಹೇಳಿದ್ದಾರೆ.

ಇಂತಹ ಅವಘಡ ಸಂಭವಿಸಿದ್ದರೂ, “ನಮ್ಮ ತಂಡಗಳು ಲಸಿಕೆಯನ್ನು ಪಡೆದ ಎಲ್ಲರೊಂದಿಗೆ ಮಾತನಾಡಿದ್ದಾರೆ. ಎರಡನೆಯ ಡೋಸ್ ತಪ್ಪಾಗಿ ತೆಗೆದುಕೊಂಡಿರುವ ಎಲ್ಲರನ್ನು ಭೇಟಿ ಮಾಡಿದ್ದಾರೆ. ಅವರೆಲ್ಲರೂ ಆರೋಗ್ಯವಂತರಾಗಿದ್ದು, ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿಲ್ಲ” ಎಂದು ಚೌಧರಿ ಹೇಳಿದ್ದಾರೆ.

ಆದರೆ, ಇಲಾಖೆಯಿಂದ ಇಲ್ಲಿಯವರೆಗೂ ಯಾರು ಬಂದು ಭೇಟಿಯಾಘಿ ಪರೀಕ್ಷಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. “ನನಗೆ ಕೋವ್ಯಾಕ್ಸಿನ್ ನೀಡಲಾಗಿದೆ ಎಂದು ಗೊತ್ತಿದೆ. ಲಸಿಕೆ ನೀಡುವಾಗ ಏನೋ ತಪ್ಪು ಸಂಭವಿಸಿದೆ ಎಂದು ವೈದ್ಯರು ನಮಗೆ ತಿಳಿಸಿದ್ದಾರೆ. ಆರೋಗ್ಯ ಇಲಾಖೆಯಿಂದ ಯಾರೂ ನಮ್ಮನ್ನು ಪರೀಕ್ಷಿಸಲು ಬಂದಿಲ್ಲ.” ಎಂದು ಗ್ರಾಮಸ್ಥ ವೃದ್ಧ ರಾಮ್ ಸೂರತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತಿಚೆಗೆ ಲಸಿಕೆ ನೀಡಲು ಗ್ರಾಮಕ್ಕೆ ಬಂದ ಆರೋಗ್ಯ ಕಾರ್ಯಕರ್ತರ ಗುಂಪನ್ನು ನೋಡಿ ಹೆದರಿದ ಜನ ನದಿಗೆ ಹಾರಿರುವ ಘಟನೆ ಉತ್ತರ ಪ್ರದೇಶದ ಬಾರಬಂಕಿಯ ಸಿಸೌರ್ಹಾ ಗ್ರಾಮದಲ್ಲಿ ನಡೆದಿದೆ. ಲಸಿಕೆಯನ್ನು ವಿಷಕಾರಿ ಚುಚ್ಚುಮದ್ದು ಎಂದು ತಿಳಿದ ಗ್ರಾಮಸ್ಥರುಸರಯೂ ನದಿಗೆ ಹಾರಿದ್ದರು. ಈಗಾಗಲೇ ಲಸಿಕೆ ಬಗ್ಗೆ ಅನೇಕ ಅಪನಂಬಿಕೆಗಳಿವೆ. ಇಂತಹ ಸಂದರ್ಭದಲ್ಲಿ ಜಾಗೃತಿ ಮೂಡಿಸಬೇಕಾದ ಆರೋಗ್ಯ ಕಾರ್ಯಕರ್ತರು ಅವಘಡಗಳನ್ನು ಮಾಡಿದರೇ ಜನರಲ್ಲಿ ಲಸಿಕೆ ಬಗ್ಗೆ ಮತ್ತಷ್ಟು ಭಯ ಮೂಡುತ್ತದೆ.


ಇದನ್ನೂ ಓದಿ: ’ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...