Homeಮುಖಪುಟ11 ವರ್ಷ ಅವಧಿಯಲ್ಲಿ ಗರಿಷ್ಠ ಮಟ್ಟ ತಲುಪಿದ ಅಡುಗೆ ಎಣ್ಣೆ ಬೆಲೆ

11 ವರ್ಷ ಅವಧಿಯಲ್ಲಿ ಗರಿಷ್ಠ ಮಟ್ಟ ತಲುಪಿದ ಅಡುಗೆ ಎಣ್ಣೆ ಬೆಲೆ

- Advertisement -
- Advertisement -

ಕೆಲವು ಕಡೆ ಪೆಟ್ರೋಲ್ ದರವು ನೂರರ ಗಡಿಯನ್ನು ದಾಟುವ ಮೊದಲೆ, ಅಡುಗೆ ಎಣ್ಣೆಗೆ 150 ರೂ.ಗಳ ಗಡಿಯನ್ನು ದಾಟಿ ಬಹಳ ದಿನಗಳಾಗಿವೆ. ಈಗ ಪ್ಯಾಕ್‌ ಮಾಡಿದ ಅಡುಗೆ ಎಣ್ಣೆಗಳ ದರ 130 ರಿಂದ 170 ರೂ. ತಲುಪಿದೆ.

ಪೆಟ್ರೋಲ್, ಡಿಸೇಲ್ ದರಗಳ ಸತತ ಏರಿಕೆಯಿಂದ ಸಾಮಾನ್ಯ ಜನರು ತೊಂದರೆಗೆ ಒಳಗಾಗಿದ್ದಾರೆ. ಆದರೆ ಅಡುಗೆ ಮನೆಯಾಚೆ ಅಷ್ಟಾಗಿ ಸುದ್ದಿಯಾಗದ, ಭಾರತದಲ್ಲಿ ಮಹಿಳೆಯರಿಗಷ್ಟೇ ಸಂಬಂಧಿಸಿದ್ದು ಎಂಬಂತಿರುವ ಅಡುಗೆ ಎಣ್ಣೆ ದರ ಏರುತ್ತಲೇ ಸಾಗಿದೆ.

ಈಗ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಈ ಬಗ್ಗೆ ಸಮಾಲೋಚನೆ ಶುರು ಮಾಡಿದೆ. ಸಾಂಕ್ರಾಮಿಕ ಮತ್ತು ವಿವಿಧ ರಾಜ್ಯಗಳಲ್ಲಿನ ಲಾಕ್‌ಡೌನ್‌ಗಳ ಮಧ್ಯೆ ಅಡುಗೆ ಎಣ್ಣೆಗಳ ಬೆಲೆಯಲ್ಲಿನ ಹೆಚ್ಚಳವು ಆರ್ಥಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದ್ದು, ಕೇಂದ್ರ ಆಹಾರ ಇಲಾಖೆ ‘ಇದು ಕಳವಳಕಾರಿ’ ಎಂದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಪ್ಯಾಕ್ ಮಾಡಿದ ಖಾದ್ಯ ತೈಲಗಳ (ಅಡುಗೆ ಎಣ್ಣೆ) ಮಾಸಿಕ ಸರಾಸರಿ ಚಿಲ್ಲರೆ ಬೆಲೆಗಳು ಈ ತಿಂಗಳು ಒಂದು ದಶಕದಲ್ಲಿ ಗರಿಷ್ಠ ಮಟ್ಟಕ್ಕೆ ಏರಿವೆ. ಇದರಲ್ಲಿ ನೆಲಗಡಲೆ(ಸೇಂಗಾ), ಸಾಸಿವೆ, ವನಸ್ಪತಿ, ಸೋಯಾ, ಸೂರ್ಯಕಾಂತಿ ಮತ್ತು ತಾಳೆ ಎಣ್ಣೆಗಳು ಸೇರಿವೆ.

ಇದನ್ನೂ ಓದಿ: ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ಸೋಮವಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಭೆ ನಡೆಸಿ, ಖಾದ್ಯ ತೈಲಗಳ ಬೆಲೆಯನ್ನು ತಗ್ಗಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಖಾದ್ಯ ತೈಲದ ಅಂತರರಾಷ್ಟ್ರೀಯ ಬೆಲೆಗಳ ಏರಿಕೆಗೆ ಹೋಲಿಸಿದರೆ ಭಾರತದಲ್ಲಿ ಖಾದ್ಯ ತೈಲದ ಬೆಲೆಯಲ್ಲಿ ತುಸು ಜಾಸ್ತಿ ಪ್ರಮಾಣದಲ್ಲಿ ಏರಿಕೆಯಾಗುವುದರ ಬಗ್ಗೆ ಕೇಂದ್ರವು ಕಳವಳ ವ್ಯಕ್ತಪಡಿಸಿದ್ದರಿಂದ ಸಭೆಯನ್ನು ನಡೆಸುವ ಅಗತ್ಯ ಬಿತ್ತು ಎಂದು ಇಲಾಖೆ ತಿಳಿಸಿದೆ.

ದೇಶೀಯ ಖಾದ್ಯ ತೈಲ ಬೆಲೆಗಳು ಸಾಮಾನ್ಯವಾಗಿ ಅಂತರರಾಷ್ಟ್ರೀಯ ಬೆಲೆಗಳನ್ನೇ ಪ್ರತಿಬಿಂಬಿಸುತ್ತವೆ, ಏಕೆಂದರೆ ಭಾರತದ ಶೇಕಡಾ 60 ರಷ್ಟು ಬೇಡಿಕೆಯನ್ನು ಆಮದಿನ ಮೂಲಕ ಪೂರೈಸಲಾಗುತ್ತದೆ.
ಬುರ್ಸಾ ಮಲೇಷ್ಯನ್ ವಿನಿಮಯ ಕೇಂದ್ರದಲ್ಲಿ ಕಚ್ಚಾ ತಾಳೆ ಎಣ್ಣೆಯ (ಪಾಮ್ ಆಯಿಲ್) ಬೆಲೆಯನ್ನು ಮೇ 25 ರಂದು ಪ್ರತಿ ಟನ್‌ಗೆ 3,890 ರಿಂಗಿಟ್ (ಮಲೇಷ್ಯಾ ಕರೆನ್ಸಿ) ಎಂದು ಉಲ್ಲೇಖಿಸಲಾಗಿದೆ. ಇದು ಒಂದು ವರ್ಷದ ಹಿಂದೆ 2,281 ಇತ್ತು.

ಚಿಕಾಗೊ ಬೋರ್ಡ್ ಆಫ್ ಟ್ರೇಡ್ (ಸಿಬಿಒಟಿ)ನಲ್ಲಿನ ಸೋಯಾಬೀನ್ ಎಣ್ಣೆ ಬೆಲೆಗಳು ಸಹ ಹೆಚ್ಚಿನ ಮಟ್ಟದಲ್ಲಿವೆ. ಸಿಬಿಒಟಿಯಲ್ಲಿ, ಜುಲೈನಲ್ಲಿ ಸೋಯಾಬೀನ್ ಮುಕ್ತಾಯದ ಬೆಲೆ ಮೇ 24 ರಂದು ಪ್ರತಿ ಟನ್‌ಗೆ 559.51 ಡಾಲರ್‌‌ನಷ್ಟಾಗಿದೆ. ಕಳೆದ ವರ್ಷದ ಈ ಸಮಯದಲ್ಲಿ ಇದು 306.16 ಡಾಲರ್‌ನಷ್ಟಿತ್ತು. ಅಂದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ದುಬಾರಿ ಬೆಲೆಯಿದೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

ರಾಜ್ಯ ನಾಗರಿಕ ಸರಬರಾಜು ಇಲಾಖೆಗಳು ಒದಗಿಸಿದ ಮಾಹಿತಿ ಮತ್ತು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಅಖಿಲ ಭಾರತ ಮಟ್ಟದಲ್ಲಿ ಆರು ಖಾದ್ಯ ತೈಲಗಳ ಚಿಲ್ಲರೆ ಬೆಲೆಗಳು ಜನವರಿ 2010 ಕ್ಕೆ ಹೋಲಿಸಿದರೆ ಗರಿಷ್ಠ ಮಟ್ಟವನ್ನು ತಲುಪಿವೆ ಎಂಬುದು ಗೊತ್ತಾಗುತ್ತದೆ.

ಮಂಗಳವಾರದ ಅಂಕಿಅಂಶದ ಪ್ರಕಾರ, ಸಾಮಾನ್ಯ ಅಡುಗೆ ಎಣ್ಣೆಯಾದ ಸಾಸಿವೆ ಎಣ್ಣೆಯ (ಪ್ಯಾಕ್ಡ್) ಮಾಸಿಕ ಸರಾಸರಿ ಚಿಲ್ಲರೆ ಬೆಲೆ ಈ ವರ್ಷದ ಮೇ ತಿಂಗಳಲ್ಲಿ ಒಂದು ಕೆ.ಜಿ.ಗೆ 164.44 ರೂ.ಗಳ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಇದು ಕಳೆದ ವರ್ಷ ಮೇ ತಿಂಗಳಿಮ ದರಕ್ಕಿಂತ (ಆಗ ರೂ 118.25) ಶೇ 39ರಷ್ಟು ಹೆಚ್ಚಾಗಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಖಾದ್ಯ ತೈಲಗಳ ಸರಾಸರಿ ಬೆಲೆ ಕೆ.ಜಿ.ಗೆ 155.39 ರೂ. ಇದ್ದರೆ, ಮೇ 2010 ರಲ್ಲಿ ಅದು ಕೆ.ಜಿ.ಗೆ 63.05 ರೂ. ಇತ್ತು. ಅಂದರೆ ಎರಡೂವರೆ ಪಟ್ಟು ಏರಿಕೆಯಾಗಿದೆ.

ತಾಳೆ ಎಣ್ಣೆ (ಪಾಮ್ ಆಯಿಲ್) ಭಾರತೀಯ ಮನೆಗಳಲ್ಲಿ ವ್ಯಾಪಕವಾಗಿ ಬಳಸಲ್ಪಡುತ್ತದೆ, ಇದರ ರೇಟು ಇನ್ನೂ ಜೋರಾಗಿ ಏರಿಕೆ ಕಂಡಿದೆ. ಪಾಮ್ ಆಯಿಲ್ ಮಾಸಿಕ ಸರಾಸರಿ ಚಿಲ್ಲರೆ ಬೆಲೆ ಈ ವರ್ಷದ ಮೇ ತಿಂಗಳಿಗೆ ಪ್ರತಿ ಕೆ.ಜಿ.ಗೆ 131.69 ರೂ.ಗಳಷ್ಟಿದೆ. ಇದು ಕಳೆದ 11 ವರ್ಷಗಳಲ್ಲಿ ಅತಿ ಹೆಚ್ಚು ಮತ್ತು ಕಳೆದ ವರ್ಷ ಇದೇ ತಿಂಗಳಿಗೆ ಹೋಲಿಸಿದರೆ ಶೇಕಡಾ 49 ರಷ್ಟು ಹೆಚ್ಚಾಗಿದೆ. ಈಗ ಪ್ರತಿ ಕೆ.ಜಿ.ಗೆ 87.27 ರೂ. ದರವಿದೆ. 11 ವರ್ಷಗಳ ಹಿಂದೆ 2010 ರ ಏಪ್ರಿಲ್‌ನಲ್ಲಿ ತಾಳೆ ಎಣ್ಣೆಯ ಮಾಸಿಕ ಚಿಲ್ಲರೆ ಬೆಲೆಯು ದಾಖಲಾಗಿದ್ದು, ಪ್ರತಿ ಕೆ.ಜಿ.ಗೆ 49.13 ರೂ. ಇತ್ತು. ಅಂದರೆ ಈಗ ಡಬಲ್ ಆಗಿದೆ.

ಇದನ್ನೂ ಓದಿ: ಮತ್ತೆ 25 ರೂ ಹೆಚ್ಚಳ: ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆ

ನಾಲ್ಕು ಇತರ ಖಾದ್ಯ ತೈಲಗಳ ಮಾಸಿಕ ಸರಾಸರಿ ಚಿಲ್ಲರೆ ಬೆಲೆಗಳು – ನೆಲಗಡಲೆ (ಪ್ರತಿ ಕೆ.ಜಿ.ಗೆ  175.55 ರೂ.), ವನಸ್ಪತಿ (ಕೆ.ಜಿ.ಗೆ 128.7 ರೂ.), ಸೋಯಾ (ಕೆ.ಜಿ.ಗೆ 148.27 ರೂ.) ಮತ್ತು ಸೂರ್ಯಕಾಂತಿ (ಕೆ.ಜಿ.ಗೆ 169.54 ರೂ.) ಇವೆ. ಮೇ ತಿಂಗಳಲ್ಲಿ ಈ ದರಗಳು ಗರಿಷ್ಠ ಮಟ್ಟವನ್ನು ತಲುಪಿವೆ. ಕಳೆದ ವರ್ಷಕ್ಕಿಂತ ಶೇಕಡಾ 19-52 ರ ವ್ಯಾಪ್ತಿಯಲ್ಲಿ ಹೆಚ್ಚಳವಾಗಿದೆ.

2019-20 ತೈಲ ವರ್ಷದಲ್ಲಿ (ನವೆಂಬರ್-ಅಕ್ಟೋಬರ್), ಭಾರತದ ದೇಶೀಯ ಸಸ್ಯಜನ್ಯ ತೈಲ ಉತ್ಪಾದನೆಯು ಕೇವಲ 8.5 ದಶಲಕ್ಷ ಟನ್‌ಗಳಷ್ಟಿದೆ ಎಂದು ಅಂದಾಜಿಸಲಾಗಿದ್ದು, ಆಮದು ಪ್ರಮಾಣ 13.5 ಮೆ.ಟನ್ ಇದೆ. ಆಮದು ಮಾಡಿಕೊಳ್ಳುವ ತೈಲಗಳಲ್ಲಿ ತಾಳೆ (7 ಮೆ.ಟನ್), ಸೋಯಾಬೀನ್ (3.5 ಮೆ.ಟನ್) ಮತ್ತು ಸೂರ್ಯಕಾಂತಿ (2.5 ಮೆ.ಟನ್) ಸೇರಿವೆ.

ಒಟ್ಟಿನಲ್ಲಿ ಪೆಟ್ರೋಲ್, ಡಿಸೇಲ್ ದರಗಳನ್ನೂ ಮೀರಿ ಅಡುಗೆ ಎಣ್ಣೆಯ ದರಗಳು ನಾಗಾಲೋಟದಲ್ಲಿದೆ. “ಲಾಕ್‌ಡೌನ್‌ನಲ್ಲಿ ಬೈಕ್ ಮನೆಯಲ್ಲಿಟ್ಟು ಆರಾಮಾಗಿರಬಹುದು. ಆದರೆ ಅಡುಗೆ ಮನೆಯಲ್ಲಿ ಕುದಿ, ಝಳ ಅನುಭವಿಸುವವರಿಗಷ್ಟೇ ಗೊತ್ತು ಇದರ ಕಷ್ಟ” ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ: ಕೇಂದ್ರ ಸಚಿವರು ಸುಳ್ಳು ಹೇಳಿದರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...