Homeಮುಖಪುಟ11 ವರ್ಷ ಅವಧಿಯಲ್ಲಿ ಗರಿಷ್ಠ ಮಟ್ಟ ತಲುಪಿದ ಅಡುಗೆ ಎಣ್ಣೆ ಬೆಲೆ

11 ವರ್ಷ ಅವಧಿಯಲ್ಲಿ ಗರಿಷ್ಠ ಮಟ್ಟ ತಲುಪಿದ ಅಡುಗೆ ಎಣ್ಣೆ ಬೆಲೆ

- Advertisement -
- Advertisement -

ಕೆಲವು ಕಡೆ ಪೆಟ್ರೋಲ್ ದರವು ನೂರರ ಗಡಿಯನ್ನು ದಾಟುವ ಮೊದಲೆ, ಅಡುಗೆ ಎಣ್ಣೆಗೆ 150 ರೂ.ಗಳ ಗಡಿಯನ್ನು ದಾಟಿ ಬಹಳ ದಿನಗಳಾಗಿವೆ. ಈಗ ಪ್ಯಾಕ್‌ ಮಾಡಿದ ಅಡುಗೆ ಎಣ್ಣೆಗಳ ದರ 130 ರಿಂದ 170 ರೂ. ತಲುಪಿದೆ.

ಪೆಟ್ರೋಲ್, ಡಿಸೇಲ್ ದರಗಳ ಸತತ ಏರಿಕೆಯಿಂದ ಸಾಮಾನ್ಯ ಜನರು ತೊಂದರೆಗೆ ಒಳಗಾಗಿದ್ದಾರೆ. ಆದರೆ ಅಡುಗೆ ಮನೆಯಾಚೆ ಅಷ್ಟಾಗಿ ಸುದ್ದಿಯಾಗದ, ಭಾರತದಲ್ಲಿ ಮಹಿಳೆಯರಿಗಷ್ಟೇ ಸಂಬಂಧಿಸಿದ್ದು ಎಂಬಂತಿರುವ ಅಡುಗೆ ಎಣ್ಣೆ ದರ ಏರುತ್ತಲೇ ಸಾಗಿದೆ.

ಈಗ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಈ ಬಗ್ಗೆ ಸಮಾಲೋಚನೆ ಶುರು ಮಾಡಿದೆ. ಸಾಂಕ್ರಾಮಿಕ ಮತ್ತು ವಿವಿಧ ರಾಜ್ಯಗಳಲ್ಲಿನ ಲಾಕ್‌ಡೌನ್‌ಗಳ ಮಧ್ಯೆ ಅಡುಗೆ ಎಣ್ಣೆಗಳ ಬೆಲೆಯಲ್ಲಿನ ಹೆಚ್ಚಳವು ಆರ್ಥಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದ್ದು, ಕೇಂದ್ರ ಆಹಾರ ಇಲಾಖೆ ‘ಇದು ಕಳವಳಕಾರಿ’ ಎಂದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಪ್ಯಾಕ್ ಮಾಡಿದ ಖಾದ್ಯ ತೈಲಗಳ (ಅಡುಗೆ ಎಣ್ಣೆ) ಮಾಸಿಕ ಸರಾಸರಿ ಚಿಲ್ಲರೆ ಬೆಲೆಗಳು ಈ ತಿಂಗಳು ಒಂದು ದಶಕದಲ್ಲಿ ಗರಿಷ್ಠ ಮಟ್ಟಕ್ಕೆ ಏರಿವೆ. ಇದರಲ್ಲಿ ನೆಲಗಡಲೆ(ಸೇಂಗಾ), ಸಾಸಿವೆ, ವನಸ್ಪತಿ, ಸೋಯಾ, ಸೂರ್ಯಕಾಂತಿ ಮತ್ತು ತಾಳೆ ಎಣ್ಣೆಗಳು ಸೇರಿವೆ.

ಇದನ್ನೂ ಓದಿ: ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ಸೋಮವಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಭೆ ನಡೆಸಿ, ಖಾದ್ಯ ತೈಲಗಳ ಬೆಲೆಯನ್ನು ತಗ್ಗಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಖಾದ್ಯ ತೈಲದ ಅಂತರರಾಷ್ಟ್ರೀಯ ಬೆಲೆಗಳ ಏರಿಕೆಗೆ ಹೋಲಿಸಿದರೆ ಭಾರತದಲ್ಲಿ ಖಾದ್ಯ ತೈಲದ ಬೆಲೆಯಲ್ಲಿ ತುಸು ಜಾಸ್ತಿ ಪ್ರಮಾಣದಲ್ಲಿ ಏರಿಕೆಯಾಗುವುದರ ಬಗ್ಗೆ ಕೇಂದ್ರವು ಕಳವಳ ವ್ಯಕ್ತಪಡಿಸಿದ್ದರಿಂದ ಸಭೆಯನ್ನು ನಡೆಸುವ ಅಗತ್ಯ ಬಿತ್ತು ಎಂದು ಇಲಾಖೆ ತಿಳಿಸಿದೆ.

ದೇಶೀಯ ಖಾದ್ಯ ತೈಲ ಬೆಲೆಗಳು ಸಾಮಾನ್ಯವಾಗಿ ಅಂತರರಾಷ್ಟ್ರೀಯ ಬೆಲೆಗಳನ್ನೇ ಪ್ರತಿಬಿಂಬಿಸುತ್ತವೆ, ಏಕೆಂದರೆ ಭಾರತದ ಶೇಕಡಾ 60 ರಷ್ಟು ಬೇಡಿಕೆಯನ್ನು ಆಮದಿನ ಮೂಲಕ ಪೂರೈಸಲಾಗುತ್ತದೆ.
ಬುರ್ಸಾ ಮಲೇಷ್ಯನ್ ವಿನಿಮಯ ಕೇಂದ್ರದಲ್ಲಿ ಕಚ್ಚಾ ತಾಳೆ ಎಣ್ಣೆಯ (ಪಾಮ್ ಆಯಿಲ್) ಬೆಲೆಯನ್ನು ಮೇ 25 ರಂದು ಪ್ರತಿ ಟನ್‌ಗೆ 3,890 ರಿಂಗಿಟ್ (ಮಲೇಷ್ಯಾ ಕರೆನ್ಸಿ) ಎಂದು ಉಲ್ಲೇಖಿಸಲಾಗಿದೆ. ಇದು ಒಂದು ವರ್ಷದ ಹಿಂದೆ 2,281 ಇತ್ತು.

ಚಿಕಾಗೊ ಬೋರ್ಡ್ ಆಫ್ ಟ್ರೇಡ್ (ಸಿಬಿಒಟಿ)ನಲ್ಲಿನ ಸೋಯಾಬೀನ್ ಎಣ್ಣೆ ಬೆಲೆಗಳು ಸಹ ಹೆಚ್ಚಿನ ಮಟ್ಟದಲ್ಲಿವೆ. ಸಿಬಿಒಟಿಯಲ್ಲಿ, ಜುಲೈನಲ್ಲಿ ಸೋಯಾಬೀನ್ ಮುಕ್ತಾಯದ ಬೆಲೆ ಮೇ 24 ರಂದು ಪ್ರತಿ ಟನ್‌ಗೆ 559.51 ಡಾಲರ್‌‌ನಷ್ಟಾಗಿದೆ. ಕಳೆದ ವರ್ಷದ ಈ ಸಮಯದಲ್ಲಿ ಇದು 306.16 ಡಾಲರ್‌ನಷ್ಟಿತ್ತು. ಅಂದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ದುಬಾರಿ ಬೆಲೆಯಿದೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

ರಾಜ್ಯ ನಾಗರಿಕ ಸರಬರಾಜು ಇಲಾಖೆಗಳು ಒದಗಿಸಿದ ಮಾಹಿತಿ ಮತ್ತು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಅಖಿಲ ಭಾರತ ಮಟ್ಟದಲ್ಲಿ ಆರು ಖಾದ್ಯ ತೈಲಗಳ ಚಿಲ್ಲರೆ ಬೆಲೆಗಳು ಜನವರಿ 2010 ಕ್ಕೆ ಹೋಲಿಸಿದರೆ ಗರಿಷ್ಠ ಮಟ್ಟವನ್ನು ತಲುಪಿವೆ ಎಂಬುದು ಗೊತ್ತಾಗುತ್ತದೆ.

ಮಂಗಳವಾರದ ಅಂಕಿಅಂಶದ ಪ್ರಕಾರ, ಸಾಮಾನ್ಯ ಅಡುಗೆ ಎಣ್ಣೆಯಾದ ಸಾಸಿವೆ ಎಣ್ಣೆಯ (ಪ್ಯಾಕ್ಡ್) ಮಾಸಿಕ ಸರಾಸರಿ ಚಿಲ್ಲರೆ ಬೆಲೆ ಈ ವರ್ಷದ ಮೇ ತಿಂಗಳಲ್ಲಿ ಒಂದು ಕೆ.ಜಿ.ಗೆ 164.44 ರೂ.ಗಳ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಇದು ಕಳೆದ ವರ್ಷ ಮೇ ತಿಂಗಳಿಮ ದರಕ್ಕಿಂತ (ಆಗ ರೂ 118.25) ಶೇ 39ರಷ್ಟು ಹೆಚ್ಚಾಗಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಖಾದ್ಯ ತೈಲಗಳ ಸರಾಸರಿ ಬೆಲೆ ಕೆ.ಜಿ.ಗೆ 155.39 ರೂ. ಇದ್ದರೆ, ಮೇ 2010 ರಲ್ಲಿ ಅದು ಕೆ.ಜಿ.ಗೆ 63.05 ರೂ. ಇತ್ತು. ಅಂದರೆ ಎರಡೂವರೆ ಪಟ್ಟು ಏರಿಕೆಯಾಗಿದೆ.

ತಾಳೆ ಎಣ್ಣೆ (ಪಾಮ್ ಆಯಿಲ್) ಭಾರತೀಯ ಮನೆಗಳಲ್ಲಿ ವ್ಯಾಪಕವಾಗಿ ಬಳಸಲ್ಪಡುತ್ತದೆ, ಇದರ ರೇಟು ಇನ್ನೂ ಜೋರಾಗಿ ಏರಿಕೆ ಕಂಡಿದೆ. ಪಾಮ್ ಆಯಿಲ್ ಮಾಸಿಕ ಸರಾಸರಿ ಚಿಲ್ಲರೆ ಬೆಲೆ ಈ ವರ್ಷದ ಮೇ ತಿಂಗಳಿಗೆ ಪ್ರತಿ ಕೆ.ಜಿ.ಗೆ 131.69 ರೂ.ಗಳಷ್ಟಿದೆ. ಇದು ಕಳೆದ 11 ವರ್ಷಗಳಲ್ಲಿ ಅತಿ ಹೆಚ್ಚು ಮತ್ತು ಕಳೆದ ವರ್ಷ ಇದೇ ತಿಂಗಳಿಗೆ ಹೋಲಿಸಿದರೆ ಶೇಕಡಾ 49 ರಷ್ಟು ಹೆಚ್ಚಾಗಿದೆ. ಈಗ ಪ್ರತಿ ಕೆ.ಜಿ.ಗೆ 87.27 ರೂ. ದರವಿದೆ. 11 ವರ್ಷಗಳ ಹಿಂದೆ 2010 ರ ಏಪ್ರಿಲ್‌ನಲ್ಲಿ ತಾಳೆ ಎಣ್ಣೆಯ ಮಾಸಿಕ ಚಿಲ್ಲರೆ ಬೆಲೆಯು ದಾಖಲಾಗಿದ್ದು, ಪ್ರತಿ ಕೆ.ಜಿ.ಗೆ 49.13 ರೂ. ಇತ್ತು. ಅಂದರೆ ಈಗ ಡಬಲ್ ಆಗಿದೆ.

ಇದನ್ನೂ ಓದಿ: ಮತ್ತೆ 25 ರೂ ಹೆಚ್ಚಳ: ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆ

ನಾಲ್ಕು ಇತರ ಖಾದ್ಯ ತೈಲಗಳ ಮಾಸಿಕ ಸರಾಸರಿ ಚಿಲ್ಲರೆ ಬೆಲೆಗಳು – ನೆಲಗಡಲೆ (ಪ್ರತಿ ಕೆ.ಜಿ.ಗೆ  175.55 ರೂ.), ವನಸ್ಪತಿ (ಕೆ.ಜಿ.ಗೆ 128.7 ರೂ.), ಸೋಯಾ (ಕೆ.ಜಿ.ಗೆ 148.27 ರೂ.) ಮತ್ತು ಸೂರ್ಯಕಾಂತಿ (ಕೆ.ಜಿ.ಗೆ 169.54 ರೂ.) ಇವೆ. ಮೇ ತಿಂಗಳಲ್ಲಿ ಈ ದರಗಳು ಗರಿಷ್ಠ ಮಟ್ಟವನ್ನು ತಲುಪಿವೆ. ಕಳೆದ ವರ್ಷಕ್ಕಿಂತ ಶೇಕಡಾ 19-52 ರ ವ್ಯಾಪ್ತಿಯಲ್ಲಿ ಹೆಚ್ಚಳವಾಗಿದೆ.

2019-20 ತೈಲ ವರ್ಷದಲ್ಲಿ (ನವೆಂಬರ್-ಅಕ್ಟೋಬರ್), ಭಾರತದ ದೇಶೀಯ ಸಸ್ಯಜನ್ಯ ತೈಲ ಉತ್ಪಾದನೆಯು ಕೇವಲ 8.5 ದಶಲಕ್ಷ ಟನ್‌ಗಳಷ್ಟಿದೆ ಎಂದು ಅಂದಾಜಿಸಲಾಗಿದ್ದು, ಆಮದು ಪ್ರಮಾಣ 13.5 ಮೆ.ಟನ್ ಇದೆ. ಆಮದು ಮಾಡಿಕೊಳ್ಳುವ ತೈಲಗಳಲ್ಲಿ ತಾಳೆ (7 ಮೆ.ಟನ್), ಸೋಯಾಬೀನ್ (3.5 ಮೆ.ಟನ್) ಮತ್ತು ಸೂರ್ಯಕಾಂತಿ (2.5 ಮೆ.ಟನ್) ಸೇರಿವೆ.

ಒಟ್ಟಿನಲ್ಲಿ ಪೆಟ್ರೋಲ್, ಡಿಸೇಲ್ ದರಗಳನ್ನೂ ಮೀರಿ ಅಡುಗೆ ಎಣ್ಣೆಯ ದರಗಳು ನಾಗಾಲೋಟದಲ್ಲಿದೆ. “ಲಾಕ್‌ಡೌನ್‌ನಲ್ಲಿ ಬೈಕ್ ಮನೆಯಲ್ಲಿಟ್ಟು ಆರಾಮಾಗಿರಬಹುದು. ಆದರೆ ಅಡುಗೆ ಮನೆಯಲ್ಲಿ ಕುದಿ, ಝಳ ಅನುಭವಿಸುವವರಿಗಷ್ಟೇ ಗೊತ್ತು ಇದರ ಕಷ್ಟ” ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ: ಕೇಂದ್ರ ಸಚಿವರು ಸುಳ್ಳು ಹೇಳಿದರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...