Homeಮುಖಪುಟಸರ್ಕಾರದ ಹೊಸ ಐಟಿ ಮಾರ್ಗಸೂಚಿ: ಬಳಕೆದಾರರ ಖಾಸಗಿತನ ರಕ್ಷಿಸಲು ದೆಹಲಿ ಹೈಕೋರ್ಟ್‌ಗೆ ವಾಟ್ಸಾಪ್ ಮೊರೆ

ಸರ್ಕಾರದ ಹೊಸ ಐಟಿ ಮಾರ್ಗಸೂಚಿ: ಬಳಕೆದಾರರ ಖಾಸಗಿತನ ರಕ್ಷಿಸಲು ದೆಹಲಿ ಹೈಕೋರ್ಟ್‌ಗೆ ವಾಟ್ಸಾಪ್ ಮೊರೆ

’ಜನರ ಖಾಸಗೀ ಜೀವನವನ್ನು ಜಗತ್ತಿನ ಮುಂದೆ ತೆರೆದಿಡುವುದು ಗಂಭೀರವಾದ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ’- ವಾಟ್ಸಾಪ್ ಸಂಸ್ಥೆ

- Advertisement -
- Advertisement -

ಬಳಕೆದಾರರ ಖಾಸಗಿತನದ ನಿಯಮವಾಳಿಗೆ ಧಕ್ಕೆ ತರುವ ಸರ್ಕಾರದ ಹೊಸ ಮಾರ್ಗಸೂಚಿಗಳನ್ನು ಪ್ರಶ್ನಿಸಿ ವಾಟ್ಸಾಪ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ವಾಟ್ಸಾಪ್ ಬಳಕೆದಾರರ ಖಾಸಗಿತನಕ್ಕೆ ಸಂಬಂಧಿಸಿದಂತೆ ಬ್ರೆಜಿಲ್ ದೇಶದ ಸುಪ್ರೀಂ ಕೋರ್ಟ್‌ನಲ್ಲೂ ವಿಚಾರಣೆಗಳು ನಡೆಯುತ್ತಿವೆ.

ಇದೇ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಪೆಭ್ರುವರಿ 2021 ರಲ್ಲಿ ಜಾರಿಗೆ ತಂದ ಹೊಸ ಐಟಿ ನಿಯಮಾವಳಿಗಳನ್ನು ಪ್ರಶ್ನಿಸಿ ವಾಟ್ಸಾಪ್ ಸೇರಿದಂತೆ ಹಲವು ಮಾಹಿತಿ ತಂತ್ರಜ್ಞಾನ ಸಂಸ್ಥೆಗಳು ಆಕ್ಷೇಪ ವ್ಯಕ್ತಪಡಿಸಿದ್ದು ಕಾನೂನು ಸಮರಕ್ಕೆ ಸಜ್ಜಾಗಿವೆ. ಮೇ 25 (ಮಂಗಳವಾರ) ವಾಟ್ಸಾಪ್ ಸಂಸ್ಥೆ ದೆಹಲಿ ಹೈಕೋರ್ಟ್‌ನಲ್ಲಿ ಹೊಸ ಐಟಿ ನಿಯಮಾವಳಿಗಳನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದೆ.

ವಾಟ್ಸಾಪ್ ಸಂದೇಶಗಳ ಮೂಲ ಪತ್ತೆ ಹಚ್ಚಲು ಅವಕಾಶ ನೀಡುವ ಸರ್ಕಾರದ ನಿಯಮಾವಳಿಗಳು ಭಾರತ ಸಂವಿಧಾನ ನೀಡುವ ಅಭಿವ್ಯಕ್ತಿ ಸ್ವಾತಂತ್ರ‍್ಯದ ಮೂಲಭೂತ ಹಕ್ಕಿನ ಸ್ಪಷ್ಟವಾದ ಉಲ್ಲಂಘನೆಯಾಗಿದೆ. ಇದು ವಾಟ್ಸಾಪ್ ಸಂಸ್ಥೆಯ ಮೂಲ ನಿಯಮವಾದ ಎಂಡ್ ಟು ಎಂಡ್ ಎನ್ಕ್ರಿಪ್ಶನ್ ಗೆ ವಿರುದ್ಧವಾಗಿದೆ ಎಂದು ದೆಹಲಿ ಹೈಕೋರ್ಟ್ ಮುಂದೆ ವಾಟ್ಸಾಪ್ ಪರ ವಕೀಲರು ಹೇಳಿದ್ದಾರೆ.  ತನ್ನ ಬಳಕೆದಾರರ ಗೌಪ್ಯತೆಗೆ ವಾಟ್ಸಾಪ್ ಯಾವಾಗಲೂ ಬದ್ಧವಾಗಿದೆ. ತನ್ನ ಬಳಕೆದಾರರ ಖಾಸಿಗಿತನದೊಂದಿಗೆ ರಾಜಿಯಾಗಲು ಸಾಧ್ಯವಿಲ್ಲವೆಂದು ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ತಿಳಿಸಿದೆ.

ಇದನ್ನೂ ಓದಿ: ‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’ – ಗಾಂಧಿವಾದಿ ನಿಧನಕ್ಕೆ ಗಣ್ಯರ ಕಂಬನಿ

ಸಂದೇಶಗಳ ಜಾಡನ್ನು, ಮೂಲವನ್ನು ಬಿಟ್ಟುಕೊಡುವುದು ಹೊಸ ಹೊಸ ಸಮಸ್ಯೆಗೆ ದಾರಿಯಾಗಲಿದೆ. ಯಾರದೋ ಸಂದೇಶವನ್ನು ಬೇರೆಯವ ಹೆಸರಿನಲ್ಲಿ ಬಿಂಬಿಸುವ, ತಪ್ಪು ವ್ಯಕ್ತಿಗಳನ್ನು ಸಂದೇಶಗಳ ಮೂಲವೆಂದು ಚಿತ್ರಿಸಲು ಹೊಸ ನಿಯಮಗಳು ಅನವುಮಾಡಿಕೊಡುತ್ತದೆ. ಹಾಗಾಗಿ ಸರ್ಕಾರದ ಹೊಸ ನಿಯಮಗಳಿಗೆ ತಡೆ ಕೋರಿ ವಾಟ್ಸಾಪ್ ನ್ಯಾಯಾಲಯದ ಮೊರೆ ಹೋಗಿದೆ.

ಮೇ 26, 2021 ಸರ್ಕಾರದ ಹೊಸ ಡಿಜಿಟಲ್ ನಿಯಮಾವಳಿಗಳನ್ನು ಅಳವಡಿಸಿಕೊಳ್ಳಲು ಡಿಜಿಟಲ್ ಮೀಡಿಯಾ ಕಂಪನಿಗಳಿಗೆ ಕಡೆಯ ದಿನವಾಗಿದ್ದು, ಒಂದು ವೇಳೆ ಸರ್ಕಾರದ ನಿಯಮಾವಳಿಗಳನ್ನು ಪಾಲಿಸಲು ವಿಫಲವಾದರೆ ವಾಟ್ಸಾಪ್, ಫೇಸ್ ಬುಕ್‌ನಂತಹ ಜಾಗತಿಕ ಕಂಪನಿಗಳನ್ನು ತಾತ್ಕಾಲಿಕವಾಗಿ ನಿಷೇಧಿಸುವುದಾಗಿ ಸರ್ಕಾರ ಹೇಳಿತ್ತು. ನಿಷೇಧದ ಭೀತಿಯ ನಡುವೆಯೇ ವಾಟ್ಸಾಪ್ ಕೇಂದ್ರ ಸರ್ಕಾರದೊಂದಿಗೆ ಸಂಘರ್ಷಕ್ಕಿಳಿದಿದೆ.

ವಾಟ್ಸಾಪ್‌ನ ಮಾತೃ ಸಂಸ್ಥೆ ಫೇಸ್‌ಬುಕ್ ತನಗೆ ನಿಯಮಾವಳಿಗಳನ್ನು ಅಳವಡಿಸಿಕೊಳ್ಳಲು ಇನ್ನಷ್ಟು ಸಮಯಬೇಕು. ಸರ್ಕಾರದೊಂದಿಗೆ ಕೆಲವು ವಿಷಯಗಳನ್ನು ಸ್ಪಷ್ಟಪಡಿಸಿಕೊಳ್ಳಬೇಕಿದೆ ಎಂದು ನಿನ್ನೆ ಹೇಳಿದೆ.

ಐಟಿ ಕಾಯ್ದೆಯಡಿ ಫೆಭ್ರವರಿ 25 ರಂದು ಕೇಂದ್ರ ಸರ್ಕಾರ ಹೊಸ ಡಿಜಿಟಲ್ ಮೀಡಿಯಾ ನೀತಿಗಳನ್ನು ಜಾರಿಗೊಳಿಸಿತ್ತು. ಈ ನಿಯಮದಡಿಯಲ್ಲಿ ಡಿಜಿಟಲ್ ಮಾಧ್ಯಮ ಸಂಸ್ಥೆಗಳು ದೂರು ಮತ್ತು ಇತರ ವಿಷಯಗಳಿಗಾಗಿ ಸರ್ಕಾರಕ್ಕೆ ಸಂಬಂಧಿಸಿದ ವ್ಯಕ್ತಿಯನ್ನು ನೇಮಿಸಿಕೊಳ್ಳಬೇಕು. ಸರ್ಕಾರಕ್ಕೆ ಸಂಬಂಧಿಸಿದ ವ್ಯಕ್ತಿಯು ವಾಟ್ಸಾಪ್ ಚಟುವಟಿಕೆಗಳ ಮೇಲೆ ನಿಗಾ ಇಡುವುದಲ್ಲದೇ ಸಂದೇಶಗಳ ಮೂಲ ಪತ್ತೆ ಹಚ್ಚಲು ಸರ್ಕಾರಕ್ಕೆ ನೆರವಾಗುತ್ತಾರೆ. ಸರ್ಕಾರ ಮತ್ತು ಇತರ ತನಿಖಾ ಇಲಾಖೆಗಳ ದೂರಿನ ಆಧಾರದಲ್ಲಿ ಸರ್ಕಾರಿ ಅಧಿಕಾರಿಯು ವಾಟ್ಸಾಪ್ ಖಾತೆಗಳನ್ನು ನಿಷ್ಕ್ರೀಯಗೊಳಿಸುವ, ಸಂದೇಶಗಳನ್ನು ಸೃಷ್ಟಿಸಿದ ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ಮಾಡುತ್ತಾರೆ. ಆದರೆ ಸರ್ಕಾರದ ಹೊಸ ನಿಯಮಾವಳಿಗಳು ಸರಿ ಬಂದಿಲ್ಲ ಎಂದು ವಾಟ್ಸಾಪ್ ತಿಳಿಸಿದೆ.

ಬಳಕೆದಾರರ ಸಂದೇಶಗಳ ಮಾಹಿತಿಯನ್ನು, ಖಾಸಗಿತನವನ್ನು ಸಂರಕ್ಷಿಸಲು ತಾನು ಮಾಡಬೇಕಾದ ಎಲ್ಲಾ ಪ್ರಯತ್ನವನ್ನು ಕಂಪನಿ ಮಾಡುತ್ತಿದೆ. ಅದೇ ಪ್ರಯತ್ನವಾಗಿ ವಾಟ್ಸಾಪ್‌ ಸಂದೇಶಗಳ ಮೂಲದ ಜಾಡನ್ನು ಪತ್ತೆಹಚ್ಚುವುದನ್ನು ಕಂಪನಿ ವಿರೋಧಿಸುತ್ತಿದೆ ಎಂದು ವಾಟ್ಸಾಪ್‌ ಸಂಸ್ಥೆಯ ವಕ್ತಾರರು ಹೇಳಿದ್ದಾರೆ. ಬಳಕೆದಾರರ ಮಾಹಿತಿಯನ್ನು ಬಿಟ್ಟುಕೊಡುವುದೆಂದರೆ ಅವರ ಬೆರಳಚ್ಚನ್ನು ಸಂಗ್ರಹಿಸಿ ಬಳಸಿಕೊಂಡಂತೆಯೇ ಸರಿ. ವಾಟ್ಸಾಪ್‌ನ ‘ಎಂಡ್‌ ಟು ಎಂಡ್‌ ಎನ್ಕ್ರಿಪ್ಷನ್’ ವ್ಯವಸ್ಥೆಯನ್ನು ತಡೆಯುವುದೆಂದರೆ  ಭಾರತ ಸಂವಿಧಾನದ ಅನುಚ್ಛೇದ 21 ರ ಅಡಿಯ ಖಾಸಗಿತನದ ಹಕ್ಕನ್ನು ಕಿತ್ತುಕೊಳ್ಳುವುದು ಎಂದೇ ಅರ್ಥ.

ಇದನ್ನೂ ಓದಿ: ನಾಲ್ವರು ಮಹಿಳೆಯರ ಮೇಲೆ ಅತ್ಯಾಚಾರ ಆರೋಪ: ಸ್ವಯಂಘೋಷಿತ ದೇವಮಾನವನ ಬಂಧನ

ಜಗತ್ತಿನಾದ್ಯಂತ ಜನರ ಖಾಸಗಿ ಬದುಕನ್ನು ನಿಗಾ ಇರಿಸಲು ಮುಂದಾಗುತ್ತಿರುವ ಸರ್ಕಾರಗಳ ವಿರುದ್ಧ ನಾಗರಿಕರು ಮತ್ತು ತಂತ್ರಜ್ಞರು ಹೋರಾಡುತ್ತಿದ್ದಾರೆ. ವಾಟ್ಸಾಪ್‌ ಸತತವಾಗಿ ಅವರ ಬೆಂಬಲಕ್ಕೆ ನಿಂತಿದೆ ಎಂದು ವಾಟ್ಸಾಪ್‌ ಹೇಳಿದೆ. ಸುಳ್ಳು ಸುದ್ದಿಗಳ ಹರಡುವಿಕೆಯನ್ನು ತಡೆಗಟ್ಟುವ ಮತ್ತು ಜನರ ಸುರಕ್ಷತೆಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರ ವಾಟ್ಸಾಪ್‌ ಸಹಕಾರವನ್ನು ನೀಡುತ್ತ ಬಂದಿದೆ.  ವಾಟ್ಸಾಪ್‌ ಮೂಲಕ ನಡೆಯುವ ಆರ್ಥಿಕ ವಂಚನೆ, ಅಪರಾಧಿಕ ಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಕ್ಕೆ ಕಾನೂನಾತ್ಮಕವಾಗಿ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದ್ದೇವೆ ಎಂದು ವಾಟ್ಸಾಪ್‌ ಸ್ಪಷ್ಟಪಡಿಸಿದೆ.

ಅನೇಕ ಸರ್ಕಾರಗಳು ಜನರ ಖಾಸಗಿ ಸಂದೇಶಗಳನ್ನು ಬಹಿರಂಗಗೊಳಿಸುವಂತೆ ಡಿಜಿಟಲ್‌ ತಂತ್ರಜ್ಞಾನ ಸಂಸ್ಥೆಗಳ ಮೇಲೆ ಒತ್ತಡ ಹೇರುತ್ತಿವೆ. ಪ್ರತಿಯೊಬ್ಬರ ಖಾಸಗಿ ಸಂದೇಶಗಳನ್ನು ಬಹಿರಂಗಗೊಳಿಸುವುದರಿಂದ ವಾಟ್ಸಾಪ್‌ನ ನೂರು ಕೋಟಿ ಬಳಕೆದಾರರ ಖಾಸಗಿ ಬದುಕಿಗೆ ತೊಂದರೆಯಾಗುತ್ತದೆ. ಪ್ರತಿನಿತ್ಯ ಕೋಟ್ಯಾಂತರ ಜನರು ವಾಟ್ಸಾಪ್‌ ಮೂಲಕ ತಮ್ಮ ಖುಷಿ, ದು:ಖ, ಖಾಸಗಿ ಬದುಕಿನ ಕ್ಷಣಗಳನ್ನು, ಘಟನೆಗಳನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಜನರ ಖಾಸಗೀ ಜೀವನವನ್ನು ಜಗತ್ತಿನ ಮುಂದೆ ತೆರೆದಿಡುವುದು ಗಂಭೀರವಾದ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ನಾಗರಿಕರ ಖಾಸಗಿ ಬದುಕನ್ನು ನಿಗಾವಹಿಸುವುದು ಜನರಲ್ಲಿ ಅಭದ್ರತೆಯ ಭಾವವನ್ನು ಇನ್ನಷ್ಟು ಹೆಚ್ಚಿಸುತ್ತದೆ.

ಸಾವಿರಾರು ಅಮಾಯಕರು ಭಾರತ ಸರ್ಕಾರದ ಹೊಸ ನಿಯಾಮವಳಿಯಿಂದ ತಮ್ಮ ಖಾಸಗಿತನದ ಹಕ್ಕನ್ನು ಕಳೆದುಕೊಳ್ಳುತ್ತಾರೆ.  ಸಾಮಾಜಿಕ ಮಾಧ್ಯಮಗಳ ಮೂಲಕ ನಡೆಯುವ ಅಪರಾಧ ಕೃತ್ಯಗಳನ್ನು ತಡಯಲು ಸರ್ಕಾರ ಮತ್ತು ಡಿಜಿಟಲ್‌ ಮಾಧ್ಯಮ ಸಂಸ್ಥೆಗಳು ಸೇರಿ ಸಮಗ್ರವಾದ ಯೋಜನೆಯನ್ನು ರೂಪಿಸಬೇಕಿದೆ. ಜನರ ಖಾಸಗಿ ತನದ ಬೆಲೆಯಲ್ಲಿ ಇದನ್ನು ರೂಪಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರ ಮೂಲಭೂತ ಹಕ್ಕನ್ನು ರಕ್ಷಿಸಲು ಸರ್ಕಾರಗಳು ಬದ್ಧವಾಗಬೇಕು. ವಾಟ್ಸಾಪ್‌ ಬಳಕೆದಾರರ ಖಾಸಗಿತವನ್ನು ಸಂರಕ್ಷಿಸುವಲ್ಲಿ ತನ್ನ ಬದ್ಧತೆಯನ್ನು ಪ್ರದರ್ಶಿಸುತ್ತಲೇ ಬಂದಿದೆ ಎಂದು ಅಂತರ್ಜಾಲ ಬ್ಲಾಗ್‌ವೊಂದರಲ್ಲಿ ವಾಟ್ಸಾಪ್‌ ಸ್ಪಷ್ಟನೆಯನ್ನು ನೀಡಿದೆ.

ಮಾಹಿತಿ ತಂತ್ರಜ್ಞಾನ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, “ಸರ್ಕಾರ ನೀಡಿದ ಗಡವಿನ ಒಳಗೆ ಡಿಜಿಟಲ್‌ ಮಾಧ್ಯಮ ಸಂಸ್ಥೆಗಳು ಹೊಸ ನಿಯಮಗಳನ್ನು ಜಾರಿಗೆ ತರಬೇಕು. ಇಲ್ಲವಾದರೆ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಲಿದೆ. ಕಂಪನಿಗಳೊಂದಿಗೆ ಯಾವುದೇ ಚರ್ಚೆ ಈ ಹಂತದಲ್ಲಿ ಸಾಧ್ಯವಿಲ್ಲ. ಯಾವುದೇ ಕಂಪನಿಗಳು ಇದುವರೆಗೆ ಹೊಸ ನಿಯಮಾವಳಿಗಳಂತೆ  ತಮ್ಮ ವೆಬ್‌ ಸೈಟ್‌ನಲ್ಲಿ ಅಧಿಕಾರಿಗಳನ್ನು ನೇಮಿಸಿದ ಮಾಹಿತಿಯಿಲ್ಲ. ಇಲಾಖೆಯೊಂದಿಗೆ ಈ ಸಂಬಂಧ ಯಾವುದೇ ಡಿಜಿಟಲ್‌ ಮಾಧ್ಯಮ ಕಂಪನಿಯೂ ಮಾಹಿತಿಯನ್ನು ಹಂಚಿಕೊಂಡಿಲ್ಲ” ಎಂದು ಹೆಸರು ಹೇಳಲು ಇಚ್ಛಿಸದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಹೊಸ ಮಾಹಿತಿ ತಂತ್ರಜ್ಞಾನ ನೀತಿಯು ಅಂತರ್ಜಾಲ ಆಧರಿತ ಸುದ್ದಿ ಸಂಸ್ಥೆಗಳಿಗೆ ಕಡಿವಾಣ ಹಾಕಲಿದೆ.  ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ 69(A) ಅಡಿಯಲ್ಲಿ ಅಂತರ್ಜಾಲದ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಸಂಸ್ಥೆಗಳನ್ನು ನಿಷೇಧಿಸುವ, ಸುದ್ದಿ ಪ್ರಸಾರವನ್ನು ತಡೆಹಿಡಿಯುವ ಕಾನೂನುಗಳನ್ನು ಹೊಸ  ಮಾಹಿತಿ ತಂತ್ರಜ್ಞಾನ ನೀತಿಯಲ್ಲಿ ಕೇಂದ್ರಸರ್ಕಾರ ಸೇರಿಸಿದೆ.  ಸಾರ್ವಜನಿಕರ ಸುರಕ್ಷತೆ ಮತ್ತು ಕಾನೂನು ಸುವ್ಯಸ್ಥೆಗೆ ಧಕ್ಕಯುಂಟುಮಾಡುತ್ತದೆ ಎಂಬ ಕಾರಣಗಳಡಿಯಲ್ಲಿ ಸರ್ಕಾರವು ಯಾವುದೇ ಸುದ್ದಿ ಮತ್ತು ಸುದ್ದಿ ಸಂಸ್ಥೆಗಳ ಪ್ರಸಾರವನ್ನು ತಡೆಯಬಹುದಾಗಿದೆ.

ಹೊಸ ಐಟಿ ನೀತಿಯ ವಿರುದ್ಧ ದೇಶದಲ್ಲಿ ಈಗಾಗಲೇ ಟ್ವಿಟ್ಟರ್‌ ಸೇರಿದಂತೆ ಅನೇಕ ಡಿಜಿಟಲ್‌ ಮಾಧ್ಯಮದ ದೈತ್ಯ ಸಂಸ್ಥೆಗಳು ಧ್ವನಿಯೆತ್ತಿವೆ. ದೇಶದಲ್ಲಿ ಪತ್ರಿಕಾ ಸ್ವಾತಂತ್ರ‍್ಯವನ್ನು ದಮನಗೊಳಿಸುವ ಸರ್ಕಾರದ ಪ್ರಯತ್ನದ ವಿರುದ್ಧ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳು ಇದುವರೆಗೆ ಯಾವುದೇ ಅಸಮಧಾನವನ್ನು ವ್ಯಕ್ತಪಡಿಸದಿರುವುದು ಆಶ್ಚರ್ಯ. ಸುದ್ಧಿ ಸಂಸ್ಥೆಗಳ ಹೊರತಾಗಿ ನೂರಾರು ಸ್ವತಂತ್ರ ಪತ್ರಕರ್ತರು, ಸಂವಿಧಾನ ಹಕ್ಕುಗಳ ಹೋರಾಟಗಾರರು, ನ್ಯಾಯಾಧೀಶರು, ನ್ಯಾಯವಾದಿಗಳು, ಪ್ರಿ ಪ್ರೆಸ್‌ ಮತ್ತು ಪ್ರೆಸ್‌ ಫ್ರೀಡಮ್‌ ಗಾಗಿ ಹೋರಾಡುತ್ತಿರುವ ಸಂಘಟನೆಗಳು ಕಾನೂನು ಹೋರಾಟ ಮತ್ತು ಡಿಜಿಟಲ್‌ ಅಭಿಯಾನವನ್ನು ಆರಂಭಿಸಿದ್ದಾರೆ.

ಡಿಜಿಟಲ್‌ ಸುದ್ದಿ ಮಾಧ್ಯಮ ಸಂಸ್ಥೆಗಳು ಮತ್ತು ನೆಟ್‌ಫ್ಲಿಕ್ಸ್‌, ಅಮೇಜಾನ್‌ ಪ್ರೈಮ್‌, ಹಾಟ್ ಸ್ಟಾರ್ ನಂತಹ ಡಿಜಿಟಲ್‌ ಮನರಂಜನಾ ತಾಣಗಳು ಕೂಡ ಮಾಹಿತಿ ತಂತ್ರಜ್ಞಾನ ಇಲಾಖೆಯ ಹೊಸ ನಿಯಮಗಳಡಿ ಬರುತ್ತವೆ. ಮೇ 26, 2021ರ ನಂತರ ಹೊಸ ನಿಯಮಗಳ ಪ್ರಕಾರ ‘ತರ್ಡ್ ಪಾರ್ಟಿ ಇನ್ಪಾರ್ಮೇಷನ್’  ಎಂದು ಕರೆಯಲಾಗುವ ಡಿಜಟಲ್‌ ಮಾಧ್ಯಮ ಸಂಸ್ಥೆಗಳ ವೆಬ್‌ಸೈಟ್‌ ನಲ್ಲಿ ಪ್ರಕಟವಾಗುವ ಮೂರನೇಯ ವ್ಯಕ್ತಿಯ ಮಾಹಿತಿಗಳಿಗೆ ಸಂಸ್ಥೆಗಳನ್ನೇ ಹೊಣೆಗಾರರನ್ನು ಮಾಡಲಾಗುತ್ತದೆ. ಈ ಸಂಬಂಧ ಡಿಜಿಟಲ್‌ ಮನರಂಜನಾ ತಾಣಗಳು ಸರ್ಕಾರಿ ಅಧಿಕಾರಿಯನ್ನು ತಮ್ಮ ಸಂಸ್ಥೆಯಲ್ಲಿ ನಿಯುಕ್ತಿಗೊಳಿಸಬೇಕಿದೆ. ಆ  ಅಧಿಕಾರಿಯು  ಡಿಜಿಟಲ್‌ ಮಾಧ್ಯಮದಲ್ಲಿ ತನಗೆ ಆಕ್ಷೇಪಾರ್ಹವಾಗಿ  ಕಂಡುಬಂದ ನಿರ್ದಿಷ್ಟ ವಿಷಯಗಳನ್ನು, ಮಾಹಿತಿಯನ್ನು ತಕ್ಷಣವೇ ತೆಗೆದುಹಾಕುವಂತೆ ಡಿಜಿಟಲ್‌ ಮಾಧ್ಯಮಗಳಿಗೆ ಆದೇಶಿಸಬಹುದಾಗಿದೆ. ಸರ‍್ಕಾರ ಮತ್ತು ನಾಗರಿಕರಿಂದ ಬಂದ ದೂರುಗಳ ಆಧಾರದಲ್ಲೂ ಆನಲೈನ್‌ ಮಾಧ್ಯಮಗಳ ನಿರ್ದಿಷ್ಟ ಕಂಟೆಂಟ್‌ ಗಳನ್ನು ನಿಷೇಧಿಸುವ ಅಧಿಕಾರವನ್ನು ಸರ್ಕಾರದ ಈ ವ್ಯಕ್ತಿ ಹೊಂದಿರುತ್ತಾನೆ.

ಸಾಮಾಜಿಕ ಮಾಧ್ಯಮ, ಡಿಜಿಟಲ್‌ ಮನರಂಜನಾ ಮಾಧ್ಯಮವನ್ನು ಸೆನ್ಸಾರ್‌ ಮುಕ್ತಗೊಳಿಸಲು ಜಗತ್ತಿನಾದ್ಯಂತ ಹೋರಾಟ, ಅಭಿಯಾನ, ಆಂದೋಲನಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರವು ಜನರ ಅಂತರ್ಜಾಲ ಬಳಕೆಯ ಮೇಲೆ ಅಂಕುಶ ಹಾಕಲು ಮುಂದಾಗಿದೆ. ಪತ್ರಿಕಾ ಸ್ವಾತಂತ್ರ‍್ಯವನ್ನು ಹತ್ತಿಕ್ಕುವ ಮೂಲಕ ಸರ್ಕಾರದ ವಿರುದ್ಧದ ಮಾಧ್ಯಮದ ಧ್ವನಿಯನ್ನು ಅಡಗಿಸಲು ಮುಂದಾಗಿದೆ. ಅಂತರ್ಜಾಲ ಸಂಪರ್ಕವನ್ನು ಕಡಿತಗೊಳಿಸುವ, ಮಾಧ್ಯಮಗಳ ಪ್ರಸಾರಕ್ಕೆ ತಡೆ ಹಿಡಿಯುವ, ಜನರ ಖಾಸಗಿತನವನ್ನು ಕೊನೆಗೊಳಿಸುವ ಕೇಂದ್ರದ ಹೊಸ ನಿಯಮಾವಳಿಗಳು ಭಾರತದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರುತ್ತಿರುವ ಸ್ಪಷ್ಟ ಸೂಚನೆಯಂತಿದೆ.

ಮೂಲ : ಹಿಂದುಸ್ತಾನ್ ಟೈಮ್ಸ್


ಇದನ್ನೂ ಓದಿ: ಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...