Homeಅಂತರಾಷ್ಟ್ರೀಯಮಾನವೀಯತೆಯ ಸಾಕ್ಷಿಪ್ರಜ್ಞೆಯಾಗಿ ಉಳಿದ ಜಾರ್ಜ್‌ ಫ್ಲಾಯ್ಡ್‌ ಹತ್ಯೆಗೆ ಒಂದು ವರ್ಷ

ಮಾನವೀಯತೆಯ ಸಾಕ್ಷಿಪ್ರಜ್ಞೆಯಾಗಿ ಉಳಿದ ಜಾರ್ಜ್‌ ಫ್ಲಾಯ್ಡ್‌ ಹತ್ಯೆಗೆ ಒಂದು ವರ್ಷ

- Advertisement -
- Advertisement -

ಅಮೆರಿಕಾದ ಇತಿಹಾಸದಲ್ಲೇ ಮೇ 25, 2020 ಅತ್ಯಂತ ಕರಾಳ ದಿನ. ಪೊಲೀಸ್‌ ವ್ಯವಸ್ಥೆಯ ವರ್ಣದ್ವೇಷಕ್ಕೆ ಅಮಾಯಕ ವ್ಯಕ್ತಿ ಜಾರ್ಜ್‌ ಫ್ಲಾಯ್ಡ್‌ ಮೃತಪಟ್ಟ ದುರಂತದ ದಿನ. ಆ ಘಟನೆಗೆ ಒಂದು ವರ್ಷ ಕಳೆದಿದೆ. ಈ ಒಂದು ವರ್ಷದಲ್ಲಿ ಅಮೆರಿಕಾ ಮತ್ತು ಜಗತ್ತಿನಲ್ಲಿ ಅನೇಕ ಘಟನೆಗಳು ನಡೆದಿವೆ.

ಜಾರ್ಜ್‌ ಫ್ಲಾಯ್ಡ್‌ ಹತ್ಯೆಯ ನಂತರ ಅಮೆರಿಕಾ ಸಾಕಷ್ಟು ಹೋರಾಟ, ನೋವು ಸಂಕಟಗಳಿಗೆ ಸಾಕ್ಷಿಯಾಗಿದೆ. ಈ ಒಂದು ವರ್ಷದ ಅವಧಿಯಲ್ಲಿ ಜನಾಂಗೀಯ ತಾರತಮ್ಯದ ವಿರುದ್ಧ ಜಗತ್ತಿನಾದ್ಯಂತ ಜನರ ಧ್ವನಿಗಳು ಮಾರ್ಧನಿಸಿವೆ. 2020, ಮೇ 26ರ ಜಾರ್ಜ್‌ ಫ್ಲಾಯ್ಡ್‌ ಹತ್ಯೆ ಈ ಶತಮಾನದ ಅತಿದೊಡ್ಡ ಜನಾಂಗೀಯ ದ್ವೇಷದ ವಿರುದ್ಧದ ಹೋರಾಟಕ್ಕೆ ಸ್ಪೂರ್ತಿ ನೀಡಿದೆ. ಬ್ಲಾಕ್‌ ಲೈವ್‌ ಮ್ಯಾಟರ್ಸ್‌ ಎಂಬ ಘೋಷಣೆಗಳು ಅಮೆರಿಕಾದ ಜನರನ್ನು ಬಡಿದೆಬ್ಬಿಸಿದೆ.

ಜಾರ್ಜ್‌ ಫ್ಲಾಯ್ಡ್‌ ಹತ್ಯೆಯ ಕರಾಳದಿನವನ್ನು ನೆನೆಯುತ್ತ ಜಗತ್ತಿನ ಅನೇಕ ಗಣ್ಯರು ತಮ್ಮ  ಸಂತಾಪಗಳನ್ನು ಹಂಚಿಕೊಂಡಿದ್ದಾರೆ.  ಜಾರ್ಜ್‌ ಹತ್ಯೆಯ ನಂತರವೂ ಅನೇಕ ಜನರು ಅಮೆರಿಕಾದಲ್ಲಿ ಪೊಲೀಸ್‌ ಎನ್‌ಕೌಂಟರ್‌ ಗೆ ಬಲಿಯಾಗಿದ್ದಾರೆ. ಆದರೆ ಜಾರ್ಜ್‌ ಹತ್ಯೆಯ ವಿರುದ್ಧ ಸಿಡಿದೆದ್ದ ಅಮೆರಿಕಾದ ಜನರ ಅಂತ:ಪ್ರಜ್ಞೆ ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಜಾರ್ಜ್‌ ಫ್ಲಾಯ್ಡ್‌ ಮಾತ್ರ ಅಮೆರಿಕಾದ ಜನರ ನೆನಪಿನಲ್ಲಿ ಶಾಶ್ವತವಾಗಿ ಉಳಿಯುತ್ತಾನೆ ಎಂದು ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಟ್ವಿಟ್‌ ಮೂಲಕ ನೆನಪನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ಮೇ 25, 2021 ಮಿನಿಪೊಲೀಸ್‌ ನಗರ 46 ವರ್ಷದ ಕಪ್ಪು ವರ್ಣೀಯ ವ್ಯಕ್ತಿಯ ಧಾರುಣ ಸಾವಿಗೆ ಸಾಕ್ಷಿಯಾಯಿತು. ಆ ಘಟನೆಯಲ್ಲಿ ಧಾರುಣವಾಗಿ ಮೃತಪಟ್ಟ ವ್ಯಕ್ತಿ ಬೇರೆಯಾರೂ ಅಲ್ಲ ಜಾರ್ಜ್‌ ಫ್ರಾಯ್ಡ್.  ಶ್ವೇತವರ್ಣಿಯ ಪೊಲೀಸ್‌ ಅಧಿಕಾರಿಯ ಮಂಡಿಯ ನಡುವೆ ಸಿಲುಕಿ ಫ್ಲಾಯ್ಡ್‌ ಉಸಿರು ನಿಂತಿತ್ತು. ಇದು ಜಗತ್ತಿನಲ್ಲಿ ನಿತ್ಯ ನಡೆಯುವ ಸಾವಿರಾರು ಪೊಲೀಸ್‌ ದೌರ್ಜನ್ಯದಂತೆ ದಾಖಲೆಯೇ ಇಲ್ಲದೆ ಹೋಗಿದ್ದರೆ ಇವತ್ತಿನ ಅಮೆರಿಕಾದ ಸ್ಥಿತಿ ಬೇರೆಯದೇ ಇರುತ್ತಿತ್ತು. ಆದರೆ ಪೊಲೀಸ್‌ ಅಧಿಕಾರಿಯ ಮಂಡಿಯ ನಡುವೆ ಸಿಲುಕಿ ಉಸಿರಾಡಲು ಒದ್ದಾಡುತ್ತಿದ್ದ ಫ್ಲಾಯ್ಡ್‌ ತನಗೆ ಅರಿವಿಲ್ಲದಂತೆ ಹೊಸ ಇತಿಹಾಸವೊಂದರ, ಹೋರಾಟವೊಂದರ ಆರಂಭಕ್ಕೆ ಕಾರಣವಾಗಿ ಹೋಗಿದ್ದ.

ಪೊಲೀಸರ ಮಂಡಿಯಲ್ಲಿ ಸಿಲುಕಿ ಐ ಕಾಂಟ್‌ ಬ್ರೀಥ್ ಎಂದು ಇಪ್ಪತ್ತಕ್ಕೂ ಹೆಚ್ಚು ಸಾರಿ ಫ್ಲಾಯ್ಡ್‌ ಕಿರುಚುತ್ತಿರುವ ದೃಶ್ಯದ ತುಣುಕು ಕೆಲವೇ ಗಂಟೆಗಳಲ್ಲಿ ಜಗತ್ತಿನ ಮೂಲ ಮೂಲೆಗೂ ತಲುಪಿತು. ಈ ದೃಶ್ಯ ನೋಡಿ ಬೆಚ್ಚಿಬಿದ್ದ ಅಮೆರಿಕ್ಕನ್ನರು ದೇಶದಲ್ಲಿ ಅಘೋಷಿತವಾಗಿ ನಡೆಯುತ್ತಿರುವ ವರ್ಣಬೇಧ ವ್ಯವಸ್ಥೆಯ ವಿರುದ್ಧ ಸಿಡಿದೆದ್ದರು. ಆಗ ಫ್ಲಾಯ್ಡ್‌ ಸಾವಿಗೆ ನ್ಯಾಯವೊದಗಿಸಲು ಆರಂಭವಾದ ಹೋರಾಟವೇ ಬ್ಲಾಕ್‌ ಲೈವ್‌ ಮ್ಯಾಟರ್ಸ್. ಅಮೆರಿಕಾದ ನ್ಯೂಯಾರ್ಕ್‌ ನಗರ ಈ ಹೋರಾಟಕ್ಕೆ ವೇದಿಕೆಯಾಯಿತು. ಜಗತ್ತಿನ ಬೇರೆ ಬೇರೆ ದೇಶಗಳಲ್ಲೂ ಇಂತಹದೇ ಘಟನೆಗಳು ವರದಿಯಾದವು. ಶ್ವೇತವರ್ಣೀಯರಲ್ಲದ ಜನ ತಮ್ಮ ವಿರುದ್ಧ ನಡೆಯುತ್ತಿರುವ ಜನಾಂಗೀಯ ತಾರತಮ್ಯವನ್ನು ವಿರೋಧಿಸಿ ಅಮೆರಿಕಾದ ಬೀದಿ ಬೀದಿಗಳಲ್ಲಿ ಪ್ರತಿಭಟನೆಗೆ ತೊಡಗಿದರು.

ಜಸ್ಟಿಸ್‌ ಫಾರ್‌ ಫ್ಲಾಯ್ಡ್‌, ಬ್ಲಾಕ್‌ ಲೈವ್‌ ಮ್ಯಾಟರ್‌ ಫ್ಲೆಕಾರ್ಡುಗಳನ್ನು ಹಿಡಿದ ಸಾವಿರಾರು ವಿದ್ಯಾರ್ಥಿಗಳು ಹೋರಾಟಕ್ಕೆ ಅಣಿಯಾದರು. ಶ್ವೇತವರ್ಣಿಯರೂ ಸೇರಿದಂತೆ ಜಗತ್ತಿನ ಕ್ರೀಡಾಪಟುಗಳು, ಚಲನಚಿತ್ರ ತಾರೆಯರು, ರಾಜಕಾರಣಿಗಳು, ಉದ್ಯಮಿಗಳು ಹೋರಾಟಕ್ಕೆ ಬೆಂಬಲ ಸೂಚಿಸುತ್ತ ಸಾಮಾಜಿಕ ಮಾಧ್ಯಮಗಳ ಮೂಲಕ ಮತ್ತು ಪ್ರತ್ಯಕ್ಷವಾಗಿ ಪ್ರತಿಭಟನೆಯ ಭಾಗವಾದರು. ಅಮೆರಿಕಾಕ್ಕೆ ಅಮೆರಿಕಾ ಮುಂದಿನ ಎರಡು ತಿಂಗಳು ಸ್ಥಬ್ಧವಾಯಿತು. ಹೆಚ್ಚುತ್ತಿರುವ ಪ್ರತಿಭಟನೆಗಳನ್ನು ನಿಗ್ರಹಿಸಲು ಟ್ರಂಪ್‌ ನೇತ್ರತ್ವದ ಸರ್ಕಾರ ಬಲ ಪ್ರಯೋಗಕ್ಕೆ ಮುಂದಾಯಿತು. ಪೊಲೀಸ್‌ ಮತ್ತು ಸೈನ್ಯದ ಮೂಲಕ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್‌, ಅಶ್ರುವಾಯು, ಗುಂಡಿನ ದಾಳಿಗಳನ್ನು ನಡೆಸಿತು. ಸರ್ಕಾರ ಪ್ರತಿಭಟನೆಯನ್ನು ದಮನಿಸಲು ಮುಂದಾದಂತೆಲ್ಲ ಹೋರಾಟ ಉಗ್ರ ಸ್ವರೂಪವನ್ನು ಪಡೆಯಿತು. ಅಂತಿಮವಾಗಿ ನ್ಯೂಯಾರ್ಕ್‌, ಮುಂತಾದ ರಾಜ್ಯಗಳು ಜನರನ್ನು ಕ್ರೂರವಾಗಿ ನಡೆಸಿಕೊಳ್ಳುವ ಪೊಲೀಸ್‌ ಕಾಯ್ದೆಯ ತಿದ್ದುಪಡಿಗೆ ಅಲ್ಲಿನ ರಾಜ್ಯಗಳು ಮುಂದಾದವು. ಸಂಪೂರ್ಣ ಅಮೆರಿಕಾಕ್ಕೆ ಅನ್ವಯವಾಗುವ ಫೆಡರಲ್‌ ಕಾನೂನುಗಳಲ್ಲೂ ಬದಲಾವಣೆಗೆ ಸರ್ಕಾರ ಮುಂದಾಯಿತು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಯುವತಿ

ಶ್ವೇತವರ್ಣೀಯರಲ್ಲದವರು  ಅಮೆರಿಕಾದ ನಾಗರಿಕರಾಗುವ ಅರ್ಹತೆಯನ್ನು ಹೊಂದಿಲ್ಲ. ಶ್ವೇತ ವರ್ಣೀಯರಿಗೆ ಸಮನಾದ ಹಕ್ಕನ್ನು ಇತರ ವರ್ಣೀಯರಿಗೆ ಅದರಲ್ಲೂ ಕಪ್ಪು ವರ್ಣೀಯರಿಗೆ ನೀಡಿರುವುದು ಅಮೆರಿಕಾದ ದುರಂತವೆಂದು ಬಹಿರಂಗವಾಗಿ ಹೇಳುತ್ತಿದ್ದ ಅಂದಿನ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗೆ ಜಾರ್ಜ್‌ ಫ್ಲಾಯ್ಡ್‌ ಹತ್ಯೆಯ ನಂತರದ ಘಟನೆಗಳು ಹೊಸ ಪಾಠವನ್ನು ಕಲಿಸಿವೆ. 2020 ನವೆಂಬರ್‌ ಅಂದರೆ ಈ ಘಟನೆಯ ಆರು ತಿಂಗಳ ನಂತರ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್‌ ಹೀನಾಯವಾಗಿ ಸೋತರು. ಟ್ರಂಪ್‌ ಸೋಲಿಗೆ ಜಾರ್ಜ್‌ ಫ್ಲಾಯ್ಡ್‌ ಹತ್ಯೆಯ ನಂತರದ ಘಟನೆಗಳೂ ಕಾರಣವಾಗಿದ್ದವು. ಪ್ರತಿಭಟನಾಕಾರರ ಮೇಲೆ ನಡೆಸಿದ ದೌರ್ಜನ್ಯವೂ ಕಾರಣವಾಗಿದ್ದವು. ಮುಖ್ಯವಾಗಿ ಬರಾಕ್‌ ಒಬಾಮಾ ನಂತರ ಅಮೆರಿಕದ ಅಧ್ಯಕ್ಷಗಿರಿಗೆ ಏರಿದ್ಧ ಟ್ರಂಪ್‌ ಸ್ವತ: ಜನಾಂಗೀಯ ದ್ವೇಷದ ಪ್ರತೀಕವಾಗಿದ್ದರು. ಟ್ರಂಪ್‌ ಆಢಳಿತದ ಅವಧಿಯಲ್ಲಿ ಅಮೆರಿಕಾ ಇತಿಹಾಸದಲ್ಲೇ ಕಂಡು ಕೇಳರಿಯದಷ್ಟು ಜನಾಂಗೀಯ ಹತ್ಯೆ, ದೌರ್ಜನ್ಯ, ಕಪ್ಪು ವರ್ಣೀಯರ ಹಕ್ಕನ್ನು ನಿರಾಕರಿಸುವ ಘಟನೆಗಳು ನಡೆದಿದ್ದವು. ಈ ಎಲ್ಲ ಹತ್ಯೆ ದೌರ್ಜನ್ಯದ ವಿರುದ್ಧದ ಅಮೆರಿಕ್ಕನರ ಸಿಟ್ಟು ಅಂತಿಮವಾಗಿ ಕಟ್ಟೆ ಒಡೆದಂತೆ ನಡೆದಿದ್ದು ಜಾರ್ಜ್‌ ಫ್ಲಾಯ್ಡ್‌ ಹತ್ಯೆ. ಇದೆಲ್ಲದ ಪರಿಣಾಮವಾಗಿ 2020 ಡಿಸೆಂಬರ್‌ ನಲ್ಲಿ ಅಮೆರಿಕಾ ನೆಲ ಹೊಸ ಇತಿಹಾಸಕ್ಕೆ ಸಾಕ್ಷಿಯಾಯಿತು. ಮೊತ್ತ ಮೊದಲ ಬಾರಿಗೆ ಶ್ವೇತವರ್ಣೀಯರಲ್ಲದ ಮಹಿಳೆ ಅಮೆರಿಕಾ ಉಪಾಧಯಕ್ಷೆಯಾಗಿ ಜನರಿಂದ ಆಯ್ಕೆಯಾಗಿದ್ದರು.

ಅಮೆರಿಕಾದಲ್ಲಿ ನಡೆದ ಈ ಐತಿಹಾಸಿಕ ಘಟನೆಗಳಲ್ಲಿ ಪೊಲೀಸ್‌ ದೌರ್ಜನ್ಯದಿಂದ ಮೃತನಾದ ಜಾರ್ಜ್‌ ಫ್ಲಾಯ್ಡ್‌ ಕೂಡ ಪಾಲುದಾರ. ತನಗರಿವಿಲ್ಲದಂತೆ ಎಲ್ಲ ಘಟನೆಗಳಿಗೆ ಕಾರಣವಾದ ಜಾರ್ಜ್‌ ಫ್ಲಾಯ್ಡ್‌ರನ್ನು ಜಗತ್ತು ಸ್ಮರಿಸುತ್ತಿದೆ.

ಅಮೆರಿಕಾ ಸ್ಟೇಟ್‌ ಸೆಕ್ರೆಟ್ರಿ ಅಂಟೋನಿ ಬ್ಲಿಂಕನ್‌,  ಫ್ರಾಯ್ಡ್‌ ನೆನೆಯುತ್ತ ಜಗತ್ತಿನೆಲ್ಲೆಡೆ ಮಾನವ ಹಕ್ಕುಗಳ ರಕ್ಷಣೆಗೆ ನಿಲ್ಲುವ ಅಮೆರಿಕಾ ತನ್ನ ನೆಲದಲ್ಲಿ ನಡೆಯುವ ತಾರತಮ್ಯಗಳನ್ನು ಒಪ್ಪಿಕೊಳ್ಳಬೇಕಿದೆ. ವಾಸ್ತವವನ್ನು ಒಪ್ಪಿಕೊಂಡು ಅಮೆರಿಕಾದ ಮೂಲ ಸಿದ್ಧಾಂತವಾದ ಸಮಾನತೆಯನ್ನು ತನ್ನೆಲ್ಲಾ ಪ್ರಜೆಗಳಿಗೆ ಶಾಶ್ವತಗೊಳಿಸಬೇಕಿದೆ ಎಂದು ಟ್ವೀಟ್ ಮಾಡಿದ್ದಾರೆ.

ಫಾರ್ಮುಲಾ ಒನ್‌ ರೇಸ್‌ನ ಚಾಂಪಿಯನ್‌ ಲೂಯಿಸ್‌ ಹ್ಯಾಮಿಲ್ಟನ್‌ ಟ್ವೀಟ್ ಮಾಡಿ, ಆ ದಿನ ಫ್ರಾಯ್ಡ್‌ ಸಾಯಬಾರದಿತ್ತು. ತಂದೆಯನ್ನು ಕಳೆದುಕೊಂಡ ಮಗಳಿಗೆ ಯಾರು ಈಗ ನ್ಯಾಯ ಒದಗಿಸುತ್ತಾರೆ..? ಪತಿಯನ್ನು ಕಳೆದುಕೊಂಡ ಪತ್ನಿಗೆ ಯಾರು ನ್ಯಾಯ ಒದಗಿಸುತ್ತಾರೆ. ಕೇವಲ ತೊಗಲಿನ ಬಣ್ಣ ವ್ಯತ್ಯಾಸವಿರುವುದಕ್ಕೆ ಒಬ್ಬ ವ್ಯಕ್ತಿಯ ಜೀವವನ್ನು ತೆಗೆಯ ಬಹುದಾದರೆ ಎಲ್ಲಿದೆ  ಮಾನವೀಯತೆ ? ಫ್ಲಾಯ್ಡ್‌ ನೀನು ಸದಾ ಮಾನವೀಯತೆಯ ಸಾಕ್ಷಿಪ್ರಜ್ಞೆಯಾಗಿ ನಮ್ಮೊಡನೆ ನೆಲಸಿರುವೆ ಎಂದು  ಹ್ಯಾಮಿಲ್ಟನ್‌ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ  ಫೇಸ್‌ಬುಕ್‌, ಇನ್ಸ್ಟಾಗ್ರಾಮ್‌, ಟ್ವಿಟ್ರರ್‌ ತುಂಬ ಜಗತ್ತಿನ ನಾನಾ ದೇಶದ ಜನರು ಜಾರ್ಜ್‌ ಫ್ಲಾಯ್ಡ್‌ ನೆನಪಿನಲ್ಲಿ ಕಂಬನಿ ಮಿಡಿದಿದ್ದಾರೆ. ಈ ಸಾವಿಗೆ ಕಾರಣವಾದ ಪೊಲೀಸ್‌ ಅಧಿಕಾರಿ ಡೆರೆಕ್‌ ಚುವಿನ್‌ಗೆ ಅಮೆರಿಕಾ ನ್ಯಾಯಾಲಯ ಏಪ್ರಿಲ್‌ 2021 ರಲ್ಲಿ ಶಿಕ್ಷೆ ವಿಧಿಸಿದೆ.

21 ನೇ ಶತಮಾನದ ಅಲ್ಟ್ರಾ ಮಾಡರ್ನ್‌, ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ರೊಬೊಟಿಕ್‌ ತಂತ್ರಜ್ಞಾನ, ಜೀವ ಮರು ಸೃಷ್ಟಿಸುವ ಜೈವಿಕ ತಂತ್ರಜ್ಞಾನ, ಅಂತರಿಕ್ಷದ ಮಹಾ ಪ್ರಯಾಣದ ಮೈಲಿಗಲ್ಲು ಎಲ್ಲವನ್ನೂ ಸಾಧಿಸಿರುವ ವೇಳೆ ನಾಗರಿಕತೆಯ ಮೂಲಮಂತ್ರವನ್ನೇ ಮನುಕುಲ ಮರೆತಿರುವುದು ದುರದೃಷ್ಟಕರ. ಮಾನವೀಯತೆಯ ಸಾಕ್ಷಿ ಪ್ರಜ್ಞೆಯಾಗಿ ಜಾರ್ಜ್‌ ಫ್ಲಾಯ್ಡ್‌ ಸಾಕಷ್ಟುಕಾಲ ಜಗತ್ತಿನ ನೆನಪಿನಲ್ಲುಳಿಯಲಿ. ಸಾಂಕ್ರಾಮಿಕದ ಮಹಾ ವಿಪತ್ತಿನ ನಡುವೆ ಜಾರ್ಜ್‌ ಫ್ಲಾಯ್ಡ್‌ ಹೆಸರಿನೊಂದಿಗೆ ನಾಗರಿಕತೆಯ ಒಂದಷ್ಟು ಮೂಲ ಪಾಠಗಳನ್ನು ಮರಳಿ ಓದೋಣ.


ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...