HomeUncategorized‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

- Advertisement -
- Advertisement -

ಇತ್ತಿಚಿಗೆ ಒಂದು ನಾಲ್ಕು ದಿನ ಜಯದೇವ ಆಸ್ಪತ್ರೆಯಲಿ ನಮ್ಮೆಲ್ಲರ ಸ್ಫೂರ್ತಿ ದೊರೆಸ್ವಾಮಿ ತಾತನ ಆರೈಕೆಯಲ್ಲಿ ಇದ್ದೆ. ಈ ಮುಂಚೆಯೂ ಮನೆಯಲ್ಲಿದ್ದಾಗಲೂ ಕೆಲವೊಮ್ಮೆ ಹೋಗಿದ್ದೆ. ತಾತಾನಿಗೆ ಅವರ ಜೊತೆ ಇರುವವರಿಗೆ ಯಾರಿಗೂ ತೊಂದರೆ ಕೊಡಬಾರದು, ಬೇಜಾರು ಮಾಡಬಾರದು ಎಂಬ ಸೂಕ್ಷ್ಮತೆ ತುಂಬಾ ಇತ್ತು.

ಒಮ್ಮೆ ಹೀಗೆ ರಾತ್ರಿ 12 ಸಮಯದಲ್ಲಿ ಒಮ್ಮೆ ಕರೆದು ‘ಏನಪ್ಪ ನಿನಗೆ ಈ ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ? ನಿನ್ನ ಅಭಿಪ್ರಾಯ ಏನು’ ಎಂದು ಕೇಳಿದರು. ನಾನು ಇಲ್ಲ ಅನಿಸುತ್ತೆ ತಾತಾ ಅಂದೆ. ಆಗ ಮತ್ತೆ ಅಲ್ಲಪ್ಪ ಹಾಗದರೆ ಈ ಬೆಟ್ಟ ಗುಡ್ಡ ಇಷ್ಟೆಲ್ಲ ಪರಿಸರ ಜಗತ್ತನ್ನ ಯಾರು ಸೃಷ್ಟಿ ಮಾಡಿದರು ಅದಕ್ಕೆ ಒಬ್ಬ ಸರ್ವಶಕ್ತನೋ ಸರ್ವಶಕ್ತೆಯೋ ಇರಬೇಕಲ್ಲ? ಅಂದರು. ನಾನು ತಾತ ಅದು ಏನು ಇದ್ದರೂ ಎಲ್ಲಾ ವೈಜ್ಞಾನಿಕವಾಗಿ ನಡೆಯುತ್ತೆ. ಈಗ ದೇವರು ದಿಂಡ್ರು ಅನ್ನೋ ಹೆಸರಲ್ಲಿ ಮೋಸ ನಡಿತಿದಿಯಲ್ಲ ಆ ದೇವರು ಇಲ್ಲ ಅಂದೆ. ಆಗ ಸ್ವಲ್ಪ ಯೋಚಿಸಿ ಸರಿ ಕಣಪ್ಪ ನಿನ್ನ ಅಭಿಪ್ರಾಯನು ನಾನು ಗೌರವಿಸ್ತೀನಿ ಅಂದರು. ಹೀಗೆ ಬೇರೆ ಬೇರೆ ವಿಚಾಗಳಲ್ಲಿ ಅಭಿಪ್ರಾಯ ಕೇಳುತ್ತಿದ್ದರು.

ಆಸ್ಪತ್ರೆಯಲ್ಲಿ ಪತ್ರಿಕೆ ಓದುತ್ತಿರುವ ದೊರೆಸ್ವಾಮಿ

ಒಂದೆರಡು ದಿನ ರಾತ್ರಿ ಕೆಮ್ಮು ಮತ್ತು ಕಫದಿಂದ ತಾತಾ ನಿದ್ದೆ ಮಾಡೋಕೆ ಆಗಿರಲಿಲ್ಲ. ತಾತ ನನ್ನ ಕುಟುಂಬದ ಬಗ್ಗೆ ನಮ್ಮ ತಂದೆ ತಾಯಿ ಮಾಡೋ ಕೆಲಸದ ಬಗ್ಗೆ ವಿಚಾರಿಸಿದ್ದರು. ಸ್ವಾಭಿಮಾನಿ ಕುಟುಂಬ ವೆರಿ ಗುಡ್ ಎಂದರು.

ಇದನ್ನೂ ಓದಿ: ಗೌರವ ನಮನ | ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ನೀನು ಸಂಘಟನೆ ಹೋರಾಟದ ಸಹವಾಸಕ್ಕೆ ಹೇಗೆ ಬಂದೆ ಎಂದು ಕೇಳಿದ್ದಕ್ಕೆ, ಸಾಣೇಹಳ್ಳಿ ಮಠ – ರಂಗಭೂಮಿ – ಸಮಾನ ಶಿಕ್ಷಣಕ್ಕಾಗಿ ಹೋರಾಟ – ಉಡುಪಿ ಚಲೋ ಎಲ್ಲಾ ಕೇಳಿಸಿಕೊಂಡು ಮಧ್ಯೆ ಮಧ್ಯೆ ಪ್ರಶ್ನೆ ಮಾಡಿ ಎಲ್ಲಾ ವಿಚಾರಿಸಿಕೊಂಡು ಬೇಷ್ ಹೇಳಿದರು. ನಮ್ಮ ಊರು ಹಿಂದೂಪುರದ ಹತ್ತಿರ ಅಂದಾಗ ಅವರ ಮುಖ ಅರಳಿತು. ಅವರು ಸ್ವತಂತ್ರ ಹೋರಾಟದ ಸಮಯದಲ್ಲಿ ಕರ್ನಾಟಕದಲ್ಲಿ ಅವರ ಪತ್ರಿಕೆ ತಡೆದದ್ದರಿಂದ ಹಿಂದೂಪುರಕ್ಕೆ ಹೋಗಿ ಆಂಧ್ರದಿಂದ ಪತ್ರಿಕೆ ತಂದ ಸಾಹಸಗಳ ಬಗ್ಗೆ ಹೇಳಿದರು. ಅಲ್ಲಿ ಸಹಾಯ ಮಾಡಿದ ಗೆಳೆಯರನ್ನು ನೆನೆದರು.

ಆರೋಗ್ಯ ಕೈ ಕೊಟ್ಟಿದ್ದಕ್ಕಾಗಿ ತುಂಬಾ ನೊಂದಿದ್ದರು. ನಾನು ವಾಪಸ್ಸು ಆಸ್ಪತ್ರೆಯಿಂದ ಬರೋ ದಿನಕ್ಕಿಂತ ಮುಂಚಿನ ರಾತ್ರಿ ಕೆಮ್ಮು ಏನು ಇಲ್ಲದೆ ಚನ್ನಾಗಿ ನಿದ್ದೆ ಮಾಡಿದ್ದರು. ನನಗೆ ನೀನು ಮೊದಲು ಹೋಗಿ ರೆಸ್ಟ್ ಮಾಡು ಅಂದರು. ಎಲ್ಲಾ ಯುವ ಜನರು ಮೊದಲು ಆರೋಗ್ಯ ಚೆನ್ನಾಗಿ ನೋಡಿಕೊಳ್ಳಬೇಕು. ಇಡೀ ದೇಶಕ್ಕೆ ಬಂದಿರೋದು ನನಗೂ ಬಂದಿದೆ (ಕೊರೊನಾ), ಇದನ್ನ ಗೆಲ್ಲಬೇಕಾದರೆ ಎಲ್ಲರೂ ಧೈರ್ಯ ಮತ್ತು ಪ್ರೀತಿಯಿಂದ ಜನರ ಬಳಿ ಹೋಗಬೇಕು. ಆಗ ಮಾತ್ರ ಗೆಲ್ಲೋಕೆ ಆಗುತ್ತೆ ಎಂದು ಹೇಳಿದರು.

ಇದನ್ನೂ ಓದಿ: ಎಚ್ ಎಸ್ ದೊರೆಸ್ವಾಮಿ; ಜೇಬಲ್ಲೇ ಪರಿಹಾರ ಇಟ್ಟುಕೊಳ್ಳುತ್ತಿದ್ದ ಎನರ್ಜಿ ಬೂಸ್ಟರ್

ಅಂದಿನ ರಾತ್ರಿ ಸಿರಿಮನೆ ನಾಗರಾಜ್ ಅವರಿಗೆ ಕಾಲ್ ಮಾಡಿ ಹೆದರಬೇಡಿ ಅಂತ ಹೇಳಿದರು. ನೀವು ಅಷ್ಟು ಧೈರ್ಯಕೊಟ್ಟರೆ ಸಾಕು ಅಂತ ಸಿರಿಮನೆ ಕುಣಿದಾಡೋ ರೀತಿ ಮಾತಾಡಿದ್ದರು. ಬೆಳಿಗ್ಗೆ ನಾನು ಅಲ್ಲಿಂದ ಹೊರಡತೀನಿ ಎಂದು ಹೇಳಿದಾಗ ಮತ್ತೆ ಕಾಲ್ ಮಾಡಪ್ಪ ಮರಿಬೇಡ ದಿನಾ ಕಾಲ್ ಮಾಡು ಅಂತ ಹೇಳಿದರು.

ಅಭಿನಂದನ್‌, ಗಜೇಂದ್ರ (ಈ ಮುಂಚೆ ತಾತಾನನ್ನ ನೋಡಿಕೊಳ್ಳತ್ತಿದ್ದ ಇಬ್ಬರಿಗೂ ಆರೋಗ್ಯ ಕೆಟ್ಟಿತ್ತು) ಇಬ್ಬರಿಗೂ ಕಾಲ್‌ ಮಾಡೋಕೆ ಹೇಳು ಅವರಿಗೆ ಆರೋಗ್ಯ ನೋಡಿಕೊಳ್ಳೋಕೆ ಹೇಳು ಎಂದು ಹೇಳಿದರು.

ಪ್ರತಿ ದಿನ ರವಿಕೃಷ್ಣ ರೆಡ್ಡಿಯವರು ದೊರೆಸ್ವಾಮಿಯವರನ್ನು ಮಾತಾಡಿಸುತ್ತಿದ್ದು ಅವರಿಗೆ ತುಂಬಾ ರಿಲ್ಯಾಕ್ಸ್ ಕೊಡುತ್ತಿತ್ತು. ರವಿಕೃಷ್ಣ ರೆಡ್ಡಿಯವರಂತು ತುಂಬಾ ಕರ್ತವ್ಯ ಪ್ರಜ್ಞೆ, ತಾತನ ಮೇಲಿನ ಪ್ರೀತಿ, ಗೌರವಗಳನ್ನು ತುಂಬಾ ಗ್ರೇಟ್‌ಪುಲ್ ಆಗಿ ಅರ್ಪಿಸಿದರು. ತುಂಬಾ ಜನಕ್ಕೆ ಕಾಲ್ ಮಾಡೋಕೆ ಹೇಳಿ ಮಾತಾಡುತ್ತಿದ್ದರು. ಎಲ್ಲಾ ಪ್ರಗತಿಪರ ಹಿರಿಕಿರಿಯರನ್ನು ನೆನೆಸಿಕೊಳ್ಳುತ್ತಿದ್ದರು. ನಾನು ತುಂಬಾ ಒಳ್ಳೆಯ ಜನರ ಸಹವಾಸ ಮಾಡಿದೆ ಅದೇ ನನಗೆ ದೊಡ್ಡ ಸಾರ್ಥಕ ಎಂದು ಪದೇ ಪದೇ ಹೇಳುತ್ತಿದ್ದರು.

ಹಿಂದೂ ಪತ್ರಿಕೆಯ ಆದಿತ್ಯ ಅವರಿಗೆ ಕಾಲ್ ಮಾಡಿಸಿ ನನಗೆ ಪ್ರತಿದಿನ ಪತ್ರಿಕೆ ಬರೋ ವ್ಯವಸ್ಥೆ ಮಾಡಿಸಪ್ಪ ಎಂದಿದ್ದರು. ಅವರು ಪ್ರತಿದಿನ ಪತ್ರಿಕೆ ಸಿಗೋ ರೀತಿ ಮಾಡಿದ್ದರು.

ದೊರೆಸ್ವಾಮಿಯವರು ನಮ್ಮ ನಡುವೆ ದೈಹಿಕವಾಗಿ ಇಲ್ಲದಿರಬಹುದು ಆದರೆ ಅವರ ಆಶಯಗಳನ್ನು ಮುಂದೆ ತೆಗೆದುಕೊಂಡು ಹೋಗುವ ಪ್ರಯತ್ನವೇ ಅವರನ್ನ ಜೀವಂತ ಇರಿಸಲಿದೆ.

ಇದನ್ನೂ ಓದಿ: ‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...