HomeUncategorized‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

- Advertisement -
- Advertisement -

ಇತ್ತಿಚಿಗೆ ಒಂದು ನಾಲ್ಕು ದಿನ ಜಯದೇವ ಆಸ್ಪತ್ರೆಯಲಿ ನಮ್ಮೆಲ್ಲರ ಸ್ಫೂರ್ತಿ ದೊರೆಸ್ವಾಮಿ ತಾತನ ಆರೈಕೆಯಲ್ಲಿ ಇದ್ದೆ. ಈ ಮುಂಚೆಯೂ ಮನೆಯಲ್ಲಿದ್ದಾಗಲೂ ಕೆಲವೊಮ್ಮೆ ಹೋಗಿದ್ದೆ. ತಾತಾನಿಗೆ ಅವರ ಜೊತೆ ಇರುವವರಿಗೆ ಯಾರಿಗೂ ತೊಂದರೆ ಕೊಡಬಾರದು, ಬೇಜಾರು ಮಾಡಬಾರದು ಎಂಬ ಸೂಕ್ಷ್ಮತೆ ತುಂಬಾ ಇತ್ತು.

ಒಮ್ಮೆ ಹೀಗೆ ರಾತ್ರಿ 12 ಸಮಯದಲ್ಲಿ ಒಮ್ಮೆ ಕರೆದು ‘ಏನಪ್ಪ ನಿನಗೆ ಈ ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ? ನಿನ್ನ ಅಭಿಪ್ರಾಯ ಏನು’ ಎಂದು ಕೇಳಿದರು. ನಾನು ಇಲ್ಲ ಅನಿಸುತ್ತೆ ತಾತಾ ಅಂದೆ. ಆಗ ಮತ್ತೆ ಅಲ್ಲಪ್ಪ ಹಾಗದರೆ ಈ ಬೆಟ್ಟ ಗುಡ್ಡ ಇಷ್ಟೆಲ್ಲ ಪರಿಸರ ಜಗತ್ತನ್ನ ಯಾರು ಸೃಷ್ಟಿ ಮಾಡಿದರು ಅದಕ್ಕೆ ಒಬ್ಬ ಸರ್ವಶಕ್ತನೋ ಸರ್ವಶಕ್ತೆಯೋ ಇರಬೇಕಲ್ಲ? ಅಂದರು. ನಾನು ತಾತ ಅದು ಏನು ಇದ್ದರೂ ಎಲ್ಲಾ ವೈಜ್ಞಾನಿಕವಾಗಿ ನಡೆಯುತ್ತೆ. ಈಗ ದೇವರು ದಿಂಡ್ರು ಅನ್ನೋ ಹೆಸರಲ್ಲಿ ಮೋಸ ನಡಿತಿದಿಯಲ್ಲ ಆ ದೇವರು ಇಲ್ಲ ಅಂದೆ. ಆಗ ಸ್ವಲ್ಪ ಯೋಚಿಸಿ ಸರಿ ಕಣಪ್ಪ ನಿನ್ನ ಅಭಿಪ್ರಾಯನು ನಾನು ಗೌರವಿಸ್ತೀನಿ ಅಂದರು. ಹೀಗೆ ಬೇರೆ ಬೇರೆ ವಿಚಾಗಳಲ್ಲಿ ಅಭಿಪ್ರಾಯ ಕೇಳುತ್ತಿದ್ದರು.

ಆಸ್ಪತ್ರೆಯಲ್ಲಿ ಪತ್ರಿಕೆ ಓದುತ್ತಿರುವ ದೊರೆಸ್ವಾಮಿ

ಒಂದೆರಡು ದಿನ ರಾತ್ರಿ ಕೆಮ್ಮು ಮತ್ತು ಕಫದಿಂದ ತಾತಾ ನಿದ್ದೆ ಮಾಡೋಕೆ ಆಗಿರಲಿಲ್ಲ. ತಾತ ನನ್ನ ಕುಟುಂಬದ ಬಗ್ಗೆ ನಮ್ಮ ತಂದೆ ತಾಯಿ ಮಾಡೋ ಕೆಲಸದ ಬಗ್ಗೆ ವಿಚಾರಿಸಿದ್ದರು. ಸ್ವಾಭಿಮಾನಿ ಕುಟುಂಬ ವೆರಿ ಗುಡ್ ಎಂದರು.

ಇದನ್ನೂ ಓದಿ: ಗೌರವ ನಮನ | ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ನೀನು ಸಂಘಟನೆ ಹೋರಾಟದ ಸಹವಾಸಕ್ಕೆ ಹೇಗೆ ಬಂದೆ ಎಂದು ಕೇಳಿದ್ದಕ್ಕೆ, ಸಾಣೇಹಳ್ಳಿ ಮಠ – ರಂಗಭೂಮಿ – ಸಮಾನ ಶಿಕ್ಷಣಕ್ಕಾಗಿ ಹೋರಾಟ – ಉಡುಪಿ ಚಲೋ ಎಲ್ಲಾ ಕೇಳಿಸಿಕೊಂಡು ಮಧ್ಯೆ ಮಧ್ಯೆ ಪ್ರಶ್ನೆ ಮಾಡಿ ಎಲ್ಲಾ ವಿಚಾರಿಸಿಕೊಂಡು ಬೇಷ್ ಹೇಳಿದರು. ನಮ್ಮ ಊರು ಹಿಂದೂಪುರದ ಹತ್ತಿರ ಅಂದಾಗ ಅವರ ಮುಖ ಅರಳಿತು. ಅವರು ಸ್ವತಂತ್ರ ಹೋರಾಟದ ಸಮಯದಲ್ಲಿ ಕರ್ನಾಟಕದಲ್ಲಿ ಅವರ ಪತ್ರಿಕೆ ತಡೆದದ್ದರಿಂದ ಹಿಂದೂಪುರಕ್ಕೆ ಹೋಗಿ ಆಂಧ್ರದಿಂದ ಪತ್ರಿಕೆ ತಂದ ಸಾಹಸಗಳ ಬಗ್ಗೆ ಹೇಳಿದರು. ಅಲ್ಲಿ ಸಹಾಯ ಮಾಡಿದ ಗೆಳೆಯರನ್ನು ನೆನೆದರು.

ಆರೋಗ್ಯ ಕೈ ಕೊಟ್ಟಿದ್ದಕ್ಕಾಗಿ ತುಂಬಾ ನೊಂದಿದ್ದರು. ನಾನು ವಾಪಸ್ಸು ಆಸ್ಪತ್ರೆಯಿಂದ ಬರೋ ದಿನಕ್ಕಿಂತ ಮುಂಚಿನ ರಾತ್ರಿ ಕೆಮ್ಮು ಏನು ಇಲ್ಲದೆ ಚನ್ನಾಗಿ ನಿದ್ದೆ ಮಾಡಿದ್ದರು. ನನಗೆ ನೀನು ಮೊದಲು ಹೋಗಿ ರೆಸ್ಟ್ ಮಾಡು ಅಂದರು. ಎಲ್ಲಾ ಯುವ ಜನರು ಮೊದಲು ಆರೋಗ್ಯ ಚೆನ್ನಾಗಿ ನೋಡಿಕೊಳ್ಳಬೇಕು. ಇಡೀ ದೇಶಕ್ಕೆ ಬಂದಿರೋದು ನನಗೂ ಬಂದಿದೆ (ಕೊರೊನಾ), ಇದನ್ನ ಗೆಲ್ಲಬೇಕಾದರೆ ಎಲ್ಲರೂ ಧೈರ್ಯ ಮತ್ತು ಪ್ರೀತಿಯಿಂದ ಜನರ ಬಳಿ ಹೋಗಬೇಕು. ಆಗ ಮಾತ್ರ ಗೆಲ್ಲೋಕೆ ಆಗುತ್ತೆ ಎಂದು ಹೇಳಿದರು.

ಇದನ್ನೂ ಓದಿ: ಎಚ್ ಎಸ್ ದೊರೆಸ್ವಾಮಿ; ಜೇಬಲ್ಲೇ ಪರಿಹಾರ ಇಟ್ಟುಕೊಳ್ಳುತ್ತಿದ್ದ ಎನರ್ಜಿ ಬೂಸ್ಟರ್

ಅಂದಿನ ರಾತ್ರಿ ಸಿರಿಮನೆ ನಾಗರಾಜ್ ಅವರಿಗೆ ಕಾಲ್ ಮಾಡಿ ಹೆದರಬೇಡಿ ಅಂತ ಹೇಳಿದರು. ನೀವು ಅಷ್ಟು ಧೈರ್ಯಕೊಟ್ಟರೆ ಸಾಕು ಅಂತ ಸಿರಿಮನೆ ಕುಣಿದಾಡೋ ರೀತಿ ಮಾತಾಡಿದ್ದರು. ಬೆಳಿಗ್ಗೆ ನಾನು ಅಲ್ಲಿಂದ ಹೊರಡತೀನಿ ಎಂದು ಹೇಳಿದಾಗ ಮತ್ತೆ ಕಾಲ್ ಮಾಡಪ್ಪ ಮರಿಬೇಡ ದಿನಾ ಕಾಲ್ ಮಾಡು ಅಂತ ಹೇಳಿದರು.

ಅಭಿನಂದನ್‌, ಗಜೇಂದ್ರ (ಈ ಮುಂಚೆ ತಾತಾನನ್ನ ನೋಡಿಕೊಳ್ಳತ್ತಿದ್ದ ಇಬ್ಬರಿಗೂ ಆರೋಗ್ಯ ಕೆಟ್ಟಿತ್ತು) ಇಬ್ಬರಿಗೂ ಕಾಲ್‌ ಮಾಡೋಕೆ ಹೇಳು ಅವರಿಗೆ ಆರೋಗ್ಯ ನೋಡಿಕೊಳ್ಳೋಕೆ ಹೇಳು ಎಂದು ಹೇಳಿದರು.

ಪ್ರತಿ ದಿನ ರವಿಕೃಷ್ಣ ರೆಡ್ಡಿಯವರು ದೊರೆಸ್ವಾಮಿಯವರನ್ನು ಮಾತಾಡಿಸುತ್ತಿದ್ದು ಅವರಿಗೆ ತುಂಬಾ ರಿಲ್ಯಾಕ್ಸ್ ಕೊಡುತ್ತಿತ್ತು. ರವಿಕೃಷ್ಣ ರೆಡ್ಡಿಯವರಂತು ತುಂಬಾ ಕರ್ತವ್ಯ ಪ್ರಜ್ಞೆ, ತಾತನ ಮೇಲಿನ ಪ್ರೀತಿ, ಗೌರವಗಳನ್ನು ತುಂಬಾ ಗ್ರೇಟ್‌ಪುಲ್ ಆಗಿ ಅರ್ಪಿಸಿದರು. ತುಂಬಾ ಜನಕ್ಕೆ ಕಾಲ್ ಮಾಡೋಕೆ ಹೇಳಿ ಮಾತಾಡುತ್ತಿದ್ದರು. ಎಲ್ಲಾ ಪ್ರಗತಿಪರ ಹಿರಿಕಿರಿಯರನ್ನು ನೆನೆಸಿಕೊಳ್ಳುತ್ತಿದ್ದರು. ನಾನು ತುಂಬಾ ಒಳ್ಳೆಯ ಜನರ ಸಹವಾಸ ಮಾಡಿದೆ ಅದೇ ನನಗೆ ದೊಡ್ಡ ಸಾರ್ಥಕ ಎಂದು ಪದೇ ಪದೇ ಹೇಳುತ್ತಿದ್ದರು.

ಹಿಂದೂ ಪತ್ರಿಕೆಯ ಆದಿತ್ಯ ಅವರಿಗೆ ಕಾಲ್ ಮಾಡಿಸಿ ನನಗೆ ಪ್ರತಿದಿನ ಪತ್ರಿಕೆ ಬರೋ ವ್ಯವಸ್ಥೆ ಮಾಡಿಸಪ್ಪ ಎಂದಿದ್ದರು. ಅವರು ಪ್ರತಿದಿನ ಪತ್ರಿಕೆ ಸಿಗೋ ರೀತಿ ಮಾಡಿದ್ದರು.

ದೊರೆಸ್ವಾಮಿಯವರು ನಮ್ಮ ನಡುವೆ ದೈಹಿಕವಾಗಿ ಇಲ್ಲದಿರಬಹುದು ಆದರೆ ಅವರ ಆಶಯಗಳನ್ನು ಮುಂದೆ ತೆಗೆದುಕೊಂಡು ಹೋಗುವ ಪ್ರಯತ್ನವೇ ಅವರನ್ನ ಜೀವಂತ ಇರಿಸಲಿದೆ.

ಇದನ್ನೂ ಓದಿ: ‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...