Homeಅಂತರಾಷ್ಟ್ರೀಯಪಿಎನ್‌ಬಿ ಸಾಲ ವಂಚನೆ ಆರೋಪಿ ಚೋಕ್ಸಿ ಡೊಮಿನಿಕಾದಲ್ಲಿ ಬಂಧನ; ಭಾರತಕ್ಕೆ ಹಸ್ತಾಂತರ ಮಾಡಲು ಆಂಟಿಗುವ ಪ್ರಧಾನಿ...

ಪಿಎನ್‌ಬಿ ಸಾಲ ವಂಚನೆ ಆರೋಪಿ ಚೋಕ್ಸಿ ಡೊಮಿನಿಕಾದಲ್ಲಿ ಬಂಧನ; ಭಾರತಕ್ಕೆ ಹಸ್ತಾಂತರ ಮಾಡಲು ಆಂಟಿಗುವ ಪ್ರಧಾನಿ ಸೂಚನೆ

- Advertisement -
- Advertisement -

ಡೊಮಿನಿಕಾದಲ್ಲಿ ಬಂಧಿತನಾಗಿರುವ ವಜ್ರವ್ಯಾಪಾರಿ, ಪಿಎನ್‌ಬಿ ಹಣ ವಂಚನೆಯ ಆರೋಪಿ ಮೆಹುಲ್‌ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಆಂಟಿಗುವಾ ಮತ್ತು ಬಾರ್ಬುಡಾ ಪ್ರಧಾನಿ ಗಾಸ್ಟನ್ ಬ್ರೌನ್ ಕೇಳಿಕೊಂಡಿದ್ದಾರೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮಂಗಳವಾರ ರಾತ್ರಿ (ಸ್ಥಳೀಯ ಕಲಾಮಾನ) ಡೊಮಿನಿಕಾದಲ್ಲಿ ಚೋಕ್ಸಿ ಬಂಧನದ ಸುದ್ದಿ ಬಂದ ನಂತರ, ಬ್ರೌನ್ ಸ್ಥಳೀಯ ಮಾಧ್ಯಮಗಳಿಗೆ ಚೋಕ್ಸಿಯನ್ನು ಭಾರತಕ್ಕೆ ವಾಪಸ್ ಕಳುಹಿಸಲು ಡೊಮಿನಿಕನ್ ಅಧಿಕಾರಿಗಳಿಗೆ “ಸ್ಪಷ್ಟ ಸೂಚನೆಗಳನ್ನು” ನೀಡಿದ್ದೇನೆ ಎಂದು ಹೇಳಿದ್ದಾರೆ.

“ಅವರನ್ನು ಆಂಟಿಗುವಾಕ್ಕೆ ವಾಪಸ್ ಕಳುಹಿಸಬಾರದು ಎಂದು ಕೇಳಿಕೊಂಡಿದ್ದೇವೆ. ಅವರು ಭಾರತಕ್ಕೆ ಮರಳಬೇಕಾಗಿದ್ದು, ಅಲ್ಲಿ ಅವರು ಅವರ ಮೇಲೆ ಹೊರಿಸಲಾಗಿರುವ ಕ್ರಿಮಿನಲ್ ಆರೋಪಗಳನ್ನು ಎದುರಿಸಬೇಕಾಗಿದೆ” ಎಂದು ಆಂಟಿಗುವಾ ನ್ಯೂಸ್‌ ರೂಮ್ ಎಂಬ ಮಾಧ್ಯಮವು ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಪತ್ರಕರ್ತರೊಂದಿಗೆ ಬ್ರೌನ್ ನಡೆಸಿದ ಸಂವಾದವನ್ನು ಉಲ್ಲೇಖಿಸಿದೆ.

ಇದನ್ನೂ ಓದಿ: 14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

ಭಾತದಿಂದ ಪರಾರಿಯಾಗಿದ್ದ ಮೆಹುಲ್ ಚೋಕ್ಸಿ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಪೌರತ್ವವನ್ನು ಹೊಂದಿದ್ದಾರೆ. ಆದರೆ ಡೊಮಿನಿಕಾದಲ್ಲಿ ಮೆಹುಲ್ ಚೋಕ್ಸಿ ಪೌರತ್ವ ಹೊಂದಿಲ್ಲ. ಆದ್ದರಿಂದ ಡೊಮಿನಿಕ ಅವರನ್ನು ನೇರವಾಗಿ ಭಾರತಕ್ಕೆ ವಾಪಸ್ ಕಳುಹಿಸುವುದು ಸುಲಭವಾಗಲಿದೆ ಎಂದು ಪ್ರಧಾನಿ ಬ್ರೌನ್‌ ತಿಳಿಸಿದ್ದಾರೆ.

ಇತ್ತೀಚೆಗೆ ಆಂಟಿಗುವಾ ಮತ್ತು ಬಾರ್ಬುಡಾದಿಂದ ಕಾಣೆಯಾಗಿದ್ದ ಚೋಕ್ಸಿ ವಿರುದ್ಧ ಇಂಟರ್ಪೋಲ್ ಯಲ್ಲೋ ನೋಟಿಸ್ ಜಾರಿಗೊಳಿಸಿತ್ತು. ಇದಾಗಿ ಅವರನ್ನು ಡೊಮಿನಿಕಾದಲ್ಲಿ ಸೆರೆಹಿಡಿಯಲಾಗಿದೆ. ಕಾಣೆಯಾದವರನ್ನು ಪತ್ತೆಹಚ್ಚಲು ಇಂಟರ್ಪೋಲ್ನಿಂದ ಯಲ್ಲೋ ನೋಟಿಸ್ ನೀಡಲಾಗುತ್ತದೆ.

ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 13,500 ಕೋಟಿ ರೂ.ಗಳ ಸಾಲ ವಂಚನೆಯಲ್ಲಿ ಸಿಲುಕಿರುವ ಚೋಕ್ಸಿ 2018 ರಲ್ಲಿ ಭಾರತದಿಂದ ಆಂಟಿಗುವಾಕ್ಕೆ ಪರಾರಿಯಾಗಿದ್ದರು. ಅವರು 2017 ರಲ್ಲಿ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಪೌರತ್ವ ಪಡೆದ್ದರು.

ಇದನ್ನೂ ಓದಿ: ಬಾಬಾ ರಾಮದೇವ್ ವಿರುದ್ಧ 1,000 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...