Homeಮುಖಪುಟತಮಿಳುನಾಡಿನ ಹೊಸ ಸರ್ಕಾರದ ಆರಂಭಿಕ ಹೆಜ್ಜೆಗಳು ಮೂಡಿಸಿರುವ ಭರವಸೆಗಳು..

ತಮಿಳುನಾಡಿನ ಹೊಸ ಸರ್ಕಾರದ ಆರಂಭಿಕ ಹೆಜ್ಜೆಗಳು ಮೂಡಿಸಿರುವ ಭರವಸೆಗಳು..

- Advertisement -
- Advertisement -

2021 ರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡಿದ್ದ ಪಂಚರಾಜ್ಯ ಚುನಾವಣೆಗಳ ತೂಕ ಒಂದಾದರೆ, ತಮಿಳುನಾಡಿನ ಚುನಾವಣೆಯೇ ಒಂದು ತೂಕ ಎಂಬಂತೆ ಬಿಂಬಿಸಲಾಗಿತ್ತು. ಅಮ್ಮ ಖ್ಯಾತಿಯ ಜಯಲಲಿತಾ ಮತ್ತು ಕಲೈಜ್ಞರ್ ಖ್ಯಾತಿಯ ಕರುಣಾನಿಧಿ ಇಬ್ಬರೂ ಇಲ್ಲದೆ ತಮಿಳುನಾಡಿನಲ್ಲಿ ನಡೆದ ಮೊದಲ ಚುನಾವಣೆ ಇದಾಗಿದ್ದು, 50 ವರ್ಷಗಳ ನಂತರ ಮೊದಲ ಭಾರಿಗೆ ದ್ರಾವಿಡ ನಾಡಿನಲ್ಲಿ ನಾಯಕನಿಲ್ಲದ ನಿರ್ವಾತ ಸ್ಥಿತಿಯನ್ನು ಕಂಡಿತ್ತು. ಜಯಲಲಿತಾ ಅಕಾಲಿಕ ಸಾವು ಹಾಗೂ ಆಡಳಿತರೂಢ ಎಡಿಎಂಕೆ ಪಕ್ಷದ ಗೊತ್ತು ಗುರಿ ಇಲ್ಲದ ಅನೇಕ ಯಡವಟ್ಟುಗಳ ಕಾರಣದಿಂದಾಗಿ 10 ವರ್ಷಗಳ ಬಳಿಕ ಕೊನೆಗೂ ಡಿಎಂಕೆ ಅಧಿಕಾರಕ್ಕೆ ಏರಿದೆ.

ಹಾಗೆ ನೋಡಿದರೆ ಚುನಾವಣೆಗೆ ಮುನ್ನವೇ ಎಲ್ಲಾ ಸಮೀಕ್ಷಾ ವರದಿಗಳೂ ಈ ಬಾರಿ ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಏರುವುದು ಹಾಗೂ ಕರುಣಾನಿಧಿ ಮಗ ಸ್ಟಾಲಿನ್ ಸಿಎಂ ಆಗುವುದು ಖಚಿತ ಎಂದು ಷರ ಬರೆದಿದ್ದವು. ಅದರಂತೆ ಕೊನೆಗೂ ಎಡಿಎಂಕೆ ಸ್ವಂತ ಬಲದಲ್ಲಿ ಸರ್ಕಾರ ನಿರ್ಮಿಸಿದೆ. ಎಂ.ಕೆ. ಸ್ಟಾಲಿನ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. 34 ಜನರ ಕ್ಯಾಬಿನೆಟ್ ಸಹ ರಚಿಸಲಾಗಿದ್ದು, ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಪ್ರಮುಖ 6 ಅಂಶಗಳಿಗೆ ಮೊದಲ ಸಹಿ ಹಾಕಲಾಗಿದೆ.

ತಮಿಳುನಾಡಿನಲ್ಲಿ ಸರ್ಕಾರ ರಚಿಸುತ್ತಿದ್ದಂತೆ ಎಂಕೆ ಸ್ಟಾಲಿನ್ ತೆಗೆದುಕೊಂಡಿರುವ ಪ್ರಮುಖ ನಿರ್ಧಾರಗಳು ಹಾಗೂ ದ್ವೇಷ ರಾಜಕಾರಣಕ್ಕೆ ಹೆಸರಾದ ತಮಿಳುನಾಡಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ವಿರೋಧ ಪಕ್ಷಗಳನ್ನೂ ಗೌರವಿಸಿದ ಅವರ ನಡೆ ಹಲವರ ಮೆಚ್ಚುಗೆಗೆ ಪಾತ್ರವಾಗಿದೆ. ಈ ನಡೆ ರಾಷ್ಟ್ರ ಮಟ್ಟದಲ್ಲೂ ಚರ್ಚೆಯಾಗುತ್ತಿದೆ. ಹಾಗಾದರೆ ಏನದು ತಮಿಳುನಾಡಿನ ಇತ್ತೀಚಿನ ರಾಜಕೀಯ ಬೆಳವಣಿಗೆ?

ಸ್ಟಾಲಿನ್ ಸಹಿ ಹಾಕಿದ 6 ಯೋಜನೆಗಳು

1. ಇಡೀ ದೇಶದಾದ್ಯಂತ ಇಂದು ಕೊರೊನಾ ಸೋಂಕು ಮಿತಿಮೀರಿದೆ. ತಮಿಳುನಾಡಿನಲ್ಲೂ ಇದರ ಆರ್ಭಟ ಕಡಿಮೆ ಏನಲ್ಲ. ಹೀಗಾಗಿ ಹೊಸ ಸರ್ಕಾರ ರಚಿಸಿದ ತಕ್ಷಣ ಸಿಎಂ ಸ್ಟಾಲಿನ್ ಕ್ಯಾಬಿನೆಟ್ ಸಭೆಯಲ್ಲಿ ಕೊರೊನಾ ರೋಗ ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚಿಸಿ ತಮಿಳುನಾಡಿನಲ್ಲಿ ಲಾಕ್‌ಡೌನ್ ಘೋಷಣೆ ಮಾಡಿದ್ದರು. ಅಲ್ಲದೆ, ಜನರಿಗೆ ಪರಿಹಾರದ ಜೊತೆಗೆ ಮನೆ ಮನೆ ಆಹಾರದ ರೇಷನ್ ಕಿಟ್ ತಲುಪಿಸುವ ನಿರ್ಧಾರ ಮನೆ ಮಾತಾಗಿತ್ತು.

2. ಕೊರೊನಾ ರೋಗಿಗಳಿಗೆ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಉತ್ತಮ ಹಾಗೂ ಉಚಿತ ಚಿಕಿತ್ಸೆ ನೀಡಬೇಕು. ಜಿಲ್ಲಾ ಉಸ್ತುವಾರಿ ಸಚಿವ ಆಯಾ ಜಿಲ್ಲೆಗಳಲ್ಲಿಗೆ ಮುಕ್ಕಾಂ ಹೂಡಿ ಜಿಲ್ಲೆಗಳ ಎಲ್ಲಾ ಆಸ್ಪತ್ರೆಗಳು ಹಾಗು ಅಲ್ಲಿಗೆ ಬರುವ ರೋಗಿಗಳ ತಕ್ಷಣದ ಚಿಕಿತ್ಸೆಯನ್ನು ಮೇಲ್ವಿಚಾರಣೆ ಮಾಡಬೇಕು.

3. ಅನೇಕ ಬಿಕ್ಕಟ್ಟುಗಳ ಮಧ್ಯೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಆಮ್ಲಜನಕವನ್ನು ಪೂರೈಸಲಾಗುತ್ತಿದೆ. ಈ ಆಮ್ಲಜನಕವನ್ನು ಸರಿಯಾಗಿ ಬಳಸಲಾಗಿದೆಯೆ ಮತ್ತು ಯಾವುದೇ ಸಂದರ್ಭದಲ್ಲೂ ಆಮ್ಲಜನಕ ವ್ಯರ್ಥವಾಗದಂತೆ ನೋಡಿಕೊಳ್ಳಬೇಕು.

4. ಚೆನ್ನೈನಲ್ಲಿ ಮಾತ್ರವಲ್ಲ, ಕೊಯಮತ್ತೂರು, ಸೇಲಂ, ತಿರುಚ್ಚಿ, ಮಧುರೈ ಮತ್ತು ತಿರುನೆಲ್ವೇಲಿ ಸೇರಿದಂತೆ ತಮಿಳುನಾಡಿನ ಪ್ರಮುಖ ನಗರಗಳಲ್ಲಿ ಕೋವಿಡ್ ಔಷಧಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಇದನ್ನು ಕೂಡಲೇ ತಡೆಯಬೇಕು. ತಪ್ಪಿತಸ್ತರನ್ನು ಬಂಧಿಸಬೇಕು.

PC : Hindustan Times

5. ಕೊರೊನಾ ಲಸಿಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಎಲ್ಲರೂ ಲಸಿಕೆ ಪಡೆಯುವಂತಾಗಬೇಕು ಹಾಗೂ ಈ ಲಸಿಕೆಯನ್ನು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗುತ್ತದೆ. ಈ ಬಗ್ಗೆ ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ನಗರಾಭಿವೃದ್ಧಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕೆಲಸ ಮಾಡಬೇಕು.

6. ರಾಜ್ಯ ನಗರ ಸಾರಿಗೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ.

ಸ್ಟಾಲಿನ್ ಮುಖ್ಯಮಂತ್ರಿಯಾಗಿ ತನ್ನ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಈ ಎಲ್ಲಾ ತೀರ್ಮಾನಗಳನ್ನೂ ತೆಗೆದುಕೊಳ್ಳಲಾಗಿದೆ. ಸಿಎಂ ಆಜ್ಞೆಯಂತೆ ಎಲ್ಲಾ ಸಚಿವರು ಕೊರೊನಾ ನಿಯಂತ್ರಿಸುವ ಮತ್ತು ಜನರಿಗೆ ಉಚಿತ ಚಿಕಿತ್ಸೆ ನೀಡುವ ಸಲುವಾಗಿ ತಮ್ಮ ಜಿಲ್ಲೆಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಕೊರೊನಾ ಕಾಲದಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಪ್ರಾಥಮಿಕ ವರದಿಗಳು ಮೂಡಿವೆ.

ಇನ್ನೂ ಲಾಕ್‌ಡೌನ್ ಸಂದರ್ಭದಲ್ಲಿ ಬಡ ಜನರಿಗೆ ಸಮಸ್ಯೆ ಆಗಬಾರದು ಎಂದು 5 ಸಾವಿರ ರೂ ಪರಿಹಾರ ಧನ ಘೋಷಣೆ ಮಾಡಿರುವುದು ಮತ್ತು ಆಹಾರ ಸಾಮಗ್ರಿಗಳನ್ನು ನೀಡಿರುವುದು ಜನರ ಮೆಚ್ಚುಗೆಗೆ ಕಾರಣವಾಗಿದೆ. ಇನ್ನು ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣದ ನಿರ್ಧಾರವನ್ನು ಇಡೀ ದ್ರಾವಿಡ ಸಮಾಜ ಸ್ವಾಗತಿಸಿದೆ. ಈ ಯೋಜನೆ ಬಡ ಮತ್ತು ಕೂಲಿ ಕಾರ್ಮಿಕ ಮಹಿಳೆಯರಿಗೆ ವರದಾನವಾಗಲಿದೆ ಎಂದು ಬಣ್ಣಿಸಲಾಗಿದೆ.

ದ್ವೇಷ ರಾಜಕಾರಣಕ್ಕೆ ಪೂರ್ಣ ವಿರಾಮ

ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನವೇ ದ್ವೇಷ ರಾಜಕಾರಣವನ್ನು ರಾಷ್ಟ್ರಕ್ಕೆ ಪರಿಚಯಿಸಿದ ಖ್ಯಾತಿ ತಮಿಳುನಾಡಿಗೆ ಇದೆ. ಪೆರಿಯಾರ್ ಕಾಲದ ದ್ರಾವಿಡ ಚಳುವಳಿಗಳ ಕಾರಣಕ್ಕಾಗಿ ವೈಚಾರಿಕ ನಾಡು ಎಂಬ ಖ್ಯಾತಿಯನ್ನು ತಮಿಳುನಾಡು ಗಳಿಸಿದ್ದರೂ ಸಹ ದ್ವೇಷ ರಾಜಕಾರಣಕ್ಕೆ ಮೊದಲ ಬೀಜ ಭಿತ್ತಿದ ಕುಖ್ಯಾತಿಯೂ ತಮಿಳುನಾಡಿಗೆ ಇದೆ ಎಂಬುದು ಉಲ್ಲೇಖಾರ್ಹ.

ಡಿಎಂಕೆ ಮತ್ತು ಎಡಿಎಂಕೆ ಎರಡೂ ಪಕ್ಷಗಳೂ ಪೆರಿಯಾರ್ ಸಿದ್ದಾಂತದ ಅಡಿಯಲ್ಲಿ ರೂಪುಗೊಂಡಿದ್ದರೂ ಸಹ ಕರುಣಾನಿಧಿ ಮತ್ತು ಜಯಲಲಿತಾ ಅವರಿಗೆ ಒಬ್ಬರ ಮುಖ ಕಂಡರೆ ಒಬ್ಬರಿಗೆ ಆಗದ ಪರಿಸ್ಥಿತಿ ಅಲ್ಲಿತ್ತು. ಕರುಣಾನಿಧಿ ಸಿಎಂ ಆದರೆ ಜಯಲಲಿತಾ ಅವರನ್ನು ಬಂಧಿಸುವುದು, ಜಯಲಲಿತಾ ಸಿಎಂ ಆದರೆ ಕರುಣಾನಿಧಿಯನ್ನು ಬಂಧಿಸುವುದು ಸಾಮಾನ್ಯ ಘಟನೆಯಾಗಿತ್ತು. ಇನ್ನು ಕಾರ್ಯಕರ್ತರ ನಡುವಿನ ಅನೇಕ ಜಗಳಗಳು ಕೊಲೆಯಲ್ಲಿ ಅಂತ್ಯವಾದ ಘಟನೆಗಳೂ ಇವೆ.

ಆದರೆ, ಈ ಚುನಾವಣೆ ಫಲಿತಾಂಶದ ನಂತರ ಮೊದಲ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಸ್ಟಾಲಿನ್ ಈ ದ್ವೇಷ ರಾಜಕಾರಣಕ್ಕೆ ಪೂರ್ಣ ವಿರಾಮ ಹಾಕಲು ಮುಂದಾಗಿದ್ದಾರೆ. ತಮಿಳುನಾಡಿನಲ್ಲಿ ಸಾಮಾನ್ಯವಾಗಿ ಹೊಸ ಸಿಎಂ ಪ್ರಮಾಣ ವಚನ ಸಮಾರಂಭಕ್ಕೆ ವಿರೋಧ ಪಕ್ಷಗಳಿಗೆ ಆಹ್ವಾನವೇ ಇರುವುದಿಲ್ಲ. ಆದರೆ, ಈ ಬಾರಿ ಸ್ಟಾಲಿನ್ ಮಾಜಿ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಹಾಗೂ ಮಾಜಿ ಡಿಸಿಎಂ ಓ ಪನ್ನೀರ್ ಸೆಲ್ವಂ ಸೇರಿದಂತೆ ಪ್ರಮುಖ ವಿರೋಧ ಪಕ್ಷದ ನಾಯಕರನ್ನು ತಮ್ಮ ಸಮಾರಂಭಕ್ಕೆ ಖುದ್ದು ಆಹ್ವಾನಿಸಿದ್ದರು. ಅಲ್ಲದೆ, ಸಮಾರಂಭದ ಬಳಿಕ ಅವರ ಪಕ್ಕದಲ್ಲಿ ಕುಳಿತು ಸಮಾಲೋಚನೆ ನಡೆಸಿದ್ದ ದೃಶ್ಯ ಅನೇಕರಲ್ಲಿ ಅಚ್ಚರಿಗೆ ಕಾರಣವಾಗಿತ್ತು.

ಈ ವೇಳೆ ಮಾಧ್ಯಮಗಳ ಎದುರು ಸ್ಪಷ್ಟವಾಗಿ ಒಂದು ಮಾಹಿತಿಯನ್ನೂ ರವಾನಿಸಿದ್ದ ಸ್ಟಾಲಿನ್, ಡಿಎಂಕೆ ಪಕ್ಷ ಬೇರೆ, ಸರ್ಕಾರವೇ ಬೇರೆ. ಇಂದು ಅಧಿಕಾರ ಸ್ವೀಕರಿಸಿರುವ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸಲಿರುವ ಸರ್ಕಾರವೇ ಹೊರತು, ಡಿಎಂಕೆ ಪಕ್ಷಕ್ಕೆ ಸೀಮಿತವಾದ ಸರ್ಕಾರವಲ್ಲ ಎಂದು ಹೇಳುವ ಮೂಲಕ ತಮಿಳುನಾಡಿನಲ್ಲಿ ಹೊಸ ಇತಿಹಾಸ ನಿರ್ಮಿಸುವ ಹಾಗೂ ಉತ್ತಮ ಆಡಳಿತ ನೀಡುವ ಭರವಸೆಯನ್ನು ನೀಡಿದ್ದಾರೆ.

ಇದಕ್ಕೆ ಪೂರಕವಾಗಿ ಅನುಭವಿ ಹಾಗೂ ಸಾಮರ್ಥ್ಯಶಾಲಿಗಳಿಗೆ ಸಚಿವ ಸ್ಥಾನ ನೀಡಿದ್ದಾರೆ. ಹಣಕಾಸು ಇಲಾಖೆಯನ್ನು ಮುಖ್ಯಮಂತ್ರಿಗಳೇ ತಮ್ಮ ಬಳಿ ಇಟ್ಟುಕೊಳ್ಳುವುದು ಸಾಮಾನ್ಯ ಸಂಗತಿ. ಆದರೆ, ಸ್ಟಾಲಿನ್ ಮಧುರೈ ಕ್ಷೇತ್ರದ ಯುವ ಶಾಸಕ ಪಳನಿವೇಲ್ ತ್ಯಾಗರಾಜನ್ ಅವರಿಗೆ ಮೊದಲ ಬಾರಿಗೆ ಸಚಿವ ಸ್ಥಾನದ ಜೊತೆಗೆ ಹಣಕಾಸು ಇಲಾಖೆಯನ್ನು ನೀಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಡೆಯನ್ನು ಟೀಕಿಸುತ್ತಾ, ಸುಸ್ಥಿರ ಆರ್ಥಿಕತೆಯ ಬಗ್ಗೆ ಎಲ್ಲೆಡೆ ಮಾತನಾಡುತ್ತಿದ್ದ ಪಳನಿವೇಲ್ ತ್ಯಾಗರಾಜನ್ ಅವರಿಗೆ ಅನಿರೀಕ್ಷಿತವಾಗಿಯೇ ಹಣಕಾಸು ಇಲಾಖೆ ಸಿಕ್ಕಿದ್ದು, ಜನರಿಗೂ ಸಹ ಅವರ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ. ಅಲ್ಲದೆ, ಸ್ಟಾಲಿನ್ ಅವರ ಈ ನಡೆಯೂ ಸಹ ಕುತೂಹಲ ಮೂಡಿಸಿದೆ.

ಸಿಎಂ ಸ್ಥಾನಕ್ಕೆ ಏರಿದ ತಕ್ಷಣ ಇಂತಹ ಅಭಿವೃದ್ಧಿ ಯೋಜನೆಗಳನ್ನು ಘೋಷಿಸುವುದು, ಜನರ ಹಾಗೂ ಮಾಧ್ಯಮಗಳು ಗಮನ ತನ್ನಡೆ ಸೆಯುವಂತೆ ನೋಡಿಕೊಳ್ಳುವುದು ತಮಿಳುನಾಡಿನ ರಾಜಕಾರಣದಲ್ಲಿ ಹೊಸ ವಿಚಾರವೇನಲ್ಲ. ಈ ಹಿಂದೆ ಕೂಡ ಸಾಕಷ್ಟು ಇಂತಹ ನಿದರ್ಶನಗಳು ಕಣ್ಣ ಮುಂದಿವೆ. ಎಂ.ಕೆ. ಸ್ಟಾಲಿನ್ ಸಹ ಅದನ್ನೇ ಮಾಡುತ್ತಿದ್ದಾರೆ. ಆದರೆ, ಈ ಜನಹಿತ ಆಡಳಿತ ಹೀಗೆ ಮುಂದುವರೆಯುತ್ತದೆಯೇ? ಹೊಸ ಸಿಎಂ ಸ್ಟಾಲಿನ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನೀಡುತ್ತಾರೆಯೇ? ನಾಯಕ ನಿರ್ವಾತ ಸ್ಥಿತಿ ಅನುಭವಿಸುತ್ತಿರುವ ತಮಿಳುನಾಡಿಗೆ ಭವಿಷ್ಯವಾಗಿ ರೂಪುಗೊಳ್ಳುತ್ತಾರೆಯೇ? ಎಂಬುದು ಇದೀಗ ಎಲ್ಲರ ಮುಂದಿರುವ ಪ್ರಶ್ನೆ.


ಇದನ್ನೂ ಓದಿ: ತಮಿಳುನಾಡು: ಸ್ಟಾಲಿನ್ ಸಂಪುಟದಲ್ಲಿ ಪುರುಷರದೇ ದರ್ಬಾರು – ಮಹಿಳೆಯರಿಗೆ ಕನಿಷ್ಠ ಪ್ರಾತಿನಿಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...