Homeಅಂಕಣಗಳುಗೌರಿ ಕಾರ್ನರ್: ಸೋಮಾಲಿಯಾದ ಅರಣ್ಯ ರಕ್ಷಿಸಿದ ಫಾತಿಮಾ

ಗೌರಿ ಕಾರ್ನರ್: ಸೋಮಾಲಿಯಾದ ಅರಣ್ಯ ರಕ್ಷಿಸಿದ ಫಾತಿಮಾ

- Advertisement -
- Advertisement -

ಜಗತ್ತಿನ ಅತಿ ಬಡರಾಷ್ಟ್ರಗಳಲ್ಲಿ ಸೋಮಾಲಿಯಾ ಒಂದು. ಆಫ್ರಿಕಾ ಖಂಡದ ಪೂರ್ವಭಾಗದಲ್ಲಿ ಸೌದಿ ಅರೇಬಿಯಾದಂತಹ ಶ್ರೀಮಂತ ರಾಷ್ಟ್ರಕ್ಕೆ ಹೊಂದಿಕೊಂಡಂತಿರುವ ಸೋಮಾಲಿಯಾ ಬಡತನ, ಅನಕ್ಷರತೆ, ಅಂತರ್ಯುದ್ಧ ಮತ್ತು ದಂಗೆಗಳಿಂದ ತತ್ತರಿಸಿರುವ ದೇಶ.

ಸೋಮಾಲಿಯಾ ಜನರನ್ನು ಒಗ್ಗೂಡಿಸುವುದು ಅವರ ಧರ್ಮ (ಇಸ್ಲಾಂ) ಮತ್ತು ಭಾಷೆ. ಆದರೆ ತಮ್ಮ ಸಾಂಸ್ಕೃತಿಕ ಒಗ್ಗಟ್ಟಿನ ಬಗ್ಗೆ ಹೆಮ್ಮೆ ಪಡುವ ಸೋಮಾಲಿಗಳು ಅವಕಾಶ ಸಿಕ್ಕಾಗಲೆಲ್ಲಾ ತಮ್ಮವರೇ ಆದ ನೆರೆಯ ಬುಡಕಟ್ಟಿನವರೊಂದಿಗೆ ಕಾಳಗಕ್ಕೆ ಇಳಿಯುವುದೇ ಒಂದು ವೈಚಿತ್ರ್ಯ.

ಶೇ.76ರಷ್ಟು ಸೋಮಾಲಿಗಳು ಇವತ್ತಿಗೂ ಅಲೆಮಾರಿ ಗೊಲ್ಲರು. ತಮ್ಮ ಕುರಿ, ಮೇಕೆ, ಒಂಟೆ ಮತ್ತು ಜಾನುವಾರುಗಳೊಂದಿಗೆ ಅಲೆಮಾರಿ ಜೀವನ ಸಾಗಿಸುವ ಸೋಮಾಲಿಗಳು ಇವತ್ತಿಗೂ ಅವಲಂಬಿಸಿರುವುದು ತಮ್ಮ ಸಾಕುಪ್ರಾಣಿಗಳನ್ನೇ. ಅಷ್ಟೇ ಏಕೆ, ಸೋಮಾಲಿಯಾ ದೇಶದ ಆರ್ಥಿಕತೆ ಕೂಡ ಅವಲಂಬಿತವಾಗಿರುವುದು ತನ್ನ ಅಲೆಮಾರಿ ಜನರ ಜೀವನಾಧಾರಗಳನ್ನೇ. ತನ್ನ ಗೊಲ್ಲರ ಸಾಕುಪ್ರಾಣಿಗಳ ಮಾಂಸ, ಚರ್ಮ ಇತ್ಯಾದಿಗಳನ್ನು ಬೇರೆ ದೇಶಗಳಿಗೆ ಮಾರಾಟ ಮಾಡುವುದರಲ್ಲಿಯೇ ಸೋಮಾಲಿಯಾ ದೇಶ ತನ್ನ ವಿದೇಶ ವಿನಿಮಯದ ಶೇ.90ರಷ್ಟನ್ನು ಗಳಿಸುತ್ತದೆ. ಸೋಮಾಲಿಯಾದ ಜೀವನೋತ್ಪನ್ನಗಳು ಹೆಚ್ಚಾಗಿ ರಫ್ತಾಗುತ್ತಿದ್ದದ್ದು ತನ್ನ ನೆರೆಯಲ್ಲಿರುವ ಸೌದಿ ಅರೇಬಿಯಾಕ್ಕೆ.

ಅಲೆಮಾರಿ ಗೊಲ್ಲರ ಸರಳ ಜೀವನ ಮತ್ತು ಅವರ ಉತ್ಪನ್ನವನ್ನೇ ನಂಬಿದ್ದ ಸೋಮಾಲಿಯಾ ದೇಶ ಸಂಕಷ್ಟದ ದಿನಗಳಿಗೆ ಸಿಲುಕಿದ್ದು 90ರ ದಶಕದಲ್ಲಿ ಅಂತರ್ಯುದ್ಧ ಶುರುವಾದಾಗ. ಆ ಯುದ್ಧದ ಪರಿಣಾಮವಾಗಿ ಮೂರು ಲಕ್ಷ ಜನ ಸಾವನ್ನಪ್ಪಿದರಲ್ಲದೆ, 45 ಲಕ್ಷ ಜನ ಕಾಯಿಲೆ ಹಾಗೂ ಉಪವಾಸದಿಂದ ನರಳಿದರು.

ಈ ದುರಂತದಿಂದ ಸೋಮಾಲಿಯಾ ಚೇತರಿಸಿಕೊಳ್ಳುತ್ತಿರುವಾಗಲೇ, ಸೋಮಾಲಿಯಾದ ಗೊಲ್ಲರ ಉತ್ಪನ್ನಗಳನ್ನು ಹೆಚ್ಚು ಪ್ರಮಾಣದಲ್ಲಿ ಖರೀದಿಸುತ್ತಿದ್ದ ಸೌದಿ ಅರೇಬಿಯಾ ಒಂದು ಶಾಕ್ ನೀಡಿತು. ಸೋಮಾಲಿಯಾದ ಪ್ರಾಣಿಗಳು ’ಕಣಿವೆ ಜ್ವರ’ದಿಂದ (Rift valley fever) ಬಳಲುತ್ತಿವೆಯೆಂದು ಅವುಗಳ ರಫ್ತನ್ನು ನಿಷೇಧಿಸಿತು. ಅಷ್ಟೇ ಅಲ್ಲದೆ, ಸೋಮಾಲಿಯಾದ ಪ್ರಾಣಿಗಳಿಗೆ ಬದಲಾಗಿ, ಅಲ್ಲಿನ ಮರಮಟ್ಟುಗಳತ್ತ ಸೌದಿ ಅರೇಬಿಯಾ ಕಣ್ಣುಗಳನ್ನಿಟ್ಟಿತು. ಇದ್ದಲಿನ (ಚಾರ್ಕೋಲ್) ಮುಖ್ಯ ಆಧಾರ ಈ ಮರಗಳು. ಅಷ್ಟು ಹೊತ್ತಿಗಾಗಲೇ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದ ಸೋಮಾಲಿಗಳು ಕಂಡಕಂಡಲ್ಲಿ ಮರಮಟ್ಟುಗಳನ್ನು ಕೆಡವಲಾರಂಭಿಸಿದ್ದರು. ನಿಧಾನವಾಗಿ ಸೋಮಾಲಿಯಾದ ಅರಣ್ಯಗಳು ನಾಶವಾಗಲಾರಂಭಿಸಿದವು.

ಆಗ, ತನ್ನ ದೇಶದ ಜನರಿಗೆ ಬುದ್ದಿ ಹೇಳಿದವಳು ಫಾತಿಮಾ ಜಿಬ್ರೆಲ್. ಈಕೆ ಸೋಮಾಲಿಯಾದ ಅಲೆಮಾರಿ ಗೊಲ್ಲರ ಕುಟುಂಬವೊಂದರಲ್ಲಿ ಜನಿಸಿದಾಕೆ. ಆದರೆ ಅಮೆರಿಕದಲ್ಲಿ ಪದವಿ ಶಿಕ್ಷಣ ಪಡೆದವಳು. ಸಹಸ್ರಾರು ವರ್ಷಗಳಿಂದ ಪರಿಸರವನ್ನೇ ನಂಬಿ ಬದುಕಿದ್ದ ತನ್ನ ಜನ ಹೀಗೆ ಪರಿಸರಕ್ಕೇ ಕೊಡಲಿ ಹಾಕಿದ್ದನ್ನು ಕಂಡ ಫಾತಿಮಾ ತಕ್ಷಣವೇ ಕ್ರಿಯಾಶೀಲವಾದಳು.

ಮರಗಳನ್ನು ಕೆಡವಿದರೆ, ಕಾಡುಗಳನ್ನು ನಾಶಮಾಡಿದರೆ, ಪರಿಸರಕ್ಕೆ ಧಕ್ಕೆ ತಂದರೆ, ಐತಿಹಾಸಿಕವಾಗಿ ಸೋಮಾಲಿಗಳು ನಂಬಿರುವ ಸಾಕುಪ್ರಾಣಿಗಳಿಗೂ ಮತ್ತು ತಮ್ಮ ಅಲೆಮಾರಿ ಜೀವನಶೈಲಿಗೂ ಹಾನಿ ತಂದುಕೊಂಡಂತೆ ಎಂದು ಭಾವಿಸಿದಳು ಫಾತಿಮಾ. “ನಾವು ಅವಲಂಬಿಸಿರುವ ಪರಿಸರವನ್ನು ಒಮ್ಮೆ ನಾಶ ಮಾಡಿದರೆ ಮತ್ತೆ ಲಕ್ಷಾಂತರ ವರ್ಷಗಳಾದರೂ ಅದನ್ನು ಸರಿಪಡಿಸಲಾರೆವು” ಎಂದ ಫಾತಿಮಾ, “ತನಗೆ ಬೇಕಾಗಿರುವ ಇದ್ದಲಿಗಾಗಿ ಸೌದಿ ಅರೇಬಿಯಾ ಸೋಮಾಲಿಯಾಕ್ಕೆ ಮಾಡುತ್ತಿರುವ ಹಾನಿಯನ್ನು ಅರ್ಥೈಸಿಕೊಂಡು ನಮ್ಮ ಬಡದೇಶಕ್ಕೆ ಮಾಡುತ್ತಿರುವ ಅನ್ಯಾಯವನ್ನು ನಿಲ್ಲಿಸಲಿ.” ಎಂದು ಘೋಷಿಸಿದಳು.

ಅಂದಿನಿಂದ ಸೋಮಾಲಿಯಾದ ಪರಿಸರವನ್ನು ರಕ್ಷಿಸುವ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾಳೆ ಫಾತಿಮಾ. ಈಗ ಮುದುಕಿಯಾಗಿರುವ ಫಾತಿಮಾ ಚಿಕ್ಕಪುಟ್ಟ ಗ್ರಾಮಗಳಲ್ಲೂ ಪರಿಸರದ ರಕ್ಷಣೆಯ ಬಗ್ಗೆ ಜಾಗೃತಿ ನೀಡುತ್ತಿದ್ದಾಳೆ. ಇನ್ನು ಸೋಮಾಲಿಯಾದಲ್ಲಿ ಕಾಡುಗಳು ಸುರಕ್ಷಿತವಾಗಿದ್ದರೆ, ಹಳ್ಳಿಗಳಲ್ಲಿ ಸೌರಶಕ್ತಿ ಬಳಕೆ ಆಗುತ್ತಿದ್ದರೆ ಅದಕ್ಕೆ ಫಾತಿಮಾ ಕಾರಣ. ಆದರೆ ಇದು ಫಾತಿಮಾ ಸುಲಭವಾಗಿ ಗಳಿಸಿದ ಸಾಧನೆಯಲ್ಲ.

ಒಂದು ದಶಕದಿಂದ ಅಂತರ್ಯುದ್ಧವನ್ನು ಎದುರಿಸುತ್ತಿರುವ ಸೋಮಾಲಿಯಾ ಈಗ ಬರಗಾಲದಿಂದ ತತ್ತರಿಸುತ್ತಿದೆ. ಈಗ ಅದು ಅಂತರರಾಷ್ಟ್ರೀಯ ಭಯೋತ್ಪಾದಕರಿಗೆ ಸುರಕ್ಷಿತ ತಾಣ ಕೂಡ ಆಗಿದೆ. ಈ ಎಲ್ಲದರ ಮಧ್ಯೆ ಫಾತಿಮಾ ಪರಿಸರವನ್ನು ರಕ್ಷಿಸುವುದಕ್ಕಾಗಿ, ಮಹಿಳೆಯರನ್ನು ಒಗ್ಗೂಡಿಸುತ್ತಿರುವುದಕ್ಕಾಗಿ ಹಲವಾರು ರೀತಿಯ ಕಷ್ಟಗಳನ್ನು ಎದುರಿಸುತ್ತಿದ್ದಾಳೆ. ಆದರೂ, ಈ ಎಲ್ಲಾ ತೊಂದರೆಗಳ ನಡುವೆಯೂ ಇತ್ತೀಚೆಗೆ ಸೋಮಾಲಿಯಾದ ಒಂದು ರಾಜ್ಯವಾದ ಪುಂಟ್‌ಲ್ಯಾಂಡ್‌ನಿಂದ ಇದ್ದಿಲು ರಫ್ತನ್ನು ನಿಷೇಧ ಮಾಡುವುದರಲ್ಲಿ ಯಶಸ್ವಿಯಾಗಿದ್ದಾಳೆ.

ತನ್ನ ಜನರ ಜೀವನಶೈಲಿಯನ್ನು ಮತ್ತು ಪರಿಸರವನ್ನು ಸಂರಕ್ಷಿಸುವುದರಲ್ಲಿ ಫಾತಿಮಾಳದ್ದು ಏಕಾಂಗಿ ಹೋರಾಟ. ಕಳೆದ ವಾರ ಈ ದಿಟ್ಟ ಮಹಿಳೆಯ ಕೊಡುಗೆಯನ್ನು ಪರಿಗಣಿಸಿ ಪರಿಸರ ಸಂರಕ್ಷಣೆಗಾಗಿ ’ಗೋಲ್ಡ್ ಮ್ಯಾನ್ ಎನ್‌ವೈರ್ನಮೆಂಟ್ ಪ್ರೈಜ’ನ್ನು ಈಕೆಗೆ ನೀಡಲಾಗಿದೆ. ಈ ಪ್ರಶಸ್ತಿ ಬರುವವರೆಗೂ ಫಾತಿಮಾ ಜಿಬ್ರೆಲ್ ಬಗ್ಗೆ ಸೋಮಾಲಿಯಾ ಹೊರತುಪಡಿಸಿ ಹೊರಜಗತ್ತಿಗೆ ಗೊತ್ತಿರಲಿಲ್ಲ. ಆದರೆ ಕಾಳಜಿ ಮತ್ತು ಅರ್ಪಣಾಭಾವ ಇದ್ದರೆ ಯಾರಾದರೂ ತಮ್ಮ ಸಮುದಾಯದ ಅಭಿವೃದ್ಧಿಗೆ ಕೊಡುಗೆ ನೀಡಬಹುದು ಎಂಬುದಕ್ಕೆ ಫಾತಿಮಾ ಜಿಬ್ರೆಲ್ ಒಂದು ಉದಾಹರಣೆ.

(ಇದು ಗೌರಿಯವರ ಕಂಡಹಾಗೆ ಅಂಕಣ ಬರಹವೊಂದರ ಮರುಪ್ರಕಟಣೆ)


ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೀಗೆ ಉತ್ತಮ ಬರಹಗಳನ್ನು ಮರು ಪ್ರಕಟಣೆ ಮಾಡುತ್ತಿರಿ. ಧನ್ಯವಾದ. ‌

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...