ದಾಖಲೆಯ ಬೆಲೆ ಏರಿಕೆ ಮತ್ತು ಕೊರೊನಾ ಲಸಿಕೆಯ ಬಗ್ಗೆ ಜನರು ಕೇಳುತ್ತಿದ್ದರೆ, ಕೇಂದ್ರ ಸರ್ಕಾರ ಮಾತ್ರ ಸಾಮಾಜಿಕ ಜಾಲತಾಣ ಹಾಗೂ ತನ್ನ ಸುಳ್ಳು ವರ್ಚಸ್ಸನ್ನು ಆದ್ಯತೆಯಾಗಿ ಪರಿಗಣಿಸಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಸೋಂಕಿನಿಂದ ಸಾವು ಹೆಚ್ಚುತ್ತಿದೆ; ಕೇಂದ್ರ ಜನರ ಗಮನ ಬೇರೆಡೆ ಸೆಳೆಯುತ್ತಿದೆ: ರಾಹುಲ್ ಗಾಂಧಿ ಆಕ್ರೋಶ
ಈ ಹಿನ್ನಲೆಯಲ್ಲಿ ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರವು ಸಾಮಾಜಿಕ ಜಾಲತಾಣ, ಸುಳ್ಳು ವರ್ಚಸ್ಸಿನ ಬಗ್ಗೆ ಆದ್ಯತೆಯಾಗಿ ತೆಗೆದುಕೊಂಡಿದೆ. ಆದರೆ ಸಾರ್ವಜನಿಕರ ಆದ್ಯತೆಯು ದಾಖಲೆ ಮುರಿಯುತ್ತಿರುವ ಬೆಲೆ ಏರಿಕೆ ಮತ್ತು ಕೊರೊನಾ ಲಸಿಕೆಯಾಗಿದೆ. ಇದು ಯಾವ ಅಚ್ಚೇ ದಿನ್?” ಎಂದು ಪ್ರಶ್ನಿಸಿದ್ದಾರೆ.
केंद्र सरकार की प्राथमिकता- सोशल मीडिया, झूठी इमेज।
जनता की प्राथमिकता- रिकॉर्ड तोड़ महँगाई, कोरोना वैक्सीन।
ये कैसे अच्छे दिन!
— Rahul Gandhi (@RahulGandhi) May 27, 2021
ದೇಶದಲ್ಲಿ ಕೊರೊನಾ ಎರಡನೆ ಅಲೆಯು ಗ್ರಾಮೀಣ ಭಾಗದಲ್ಲಿ ತೀವ್ರವಾಗಿ ಹರಡುತ್ತಿರುವುದರ ಬಗ್ಗೆ ತಜ್ಞರು ಆಂತಕ ವ್ಯಕ್ತಪಡಿಸುತ್ತಿದ್ದಾರೆ. ಕೊರೊನಾ ಲಸಿಕೆಯ ಪ್ರಕ್ರಿಯೆಯು ನಿಧಾನವಾಗುತ್ತಿದ್ದು, ದೆಹಲಿಯು ಇತ್ತೀಚೆಗೆ ಯುವಕರಿಗೆ ಲಸಿಕೆಯನ್ನು ನೀಡುವುದನ್ನು ನಿಲ್ಲಿಸಲಿದ್ದೇವೆ ಎಂದು ಹೇಳಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಟ್ವಿಟರ್, ಫೇಸ್ಬುಕ್ ಮುಂತಾದ ಸಾಮಾಜಿಕ ಜಾಲತಾಣಗಳ ಹಿಂದೆ ಬಿದ್ದಿದ್ದು, ಹೊಸ ನಿಯಮಗಳನ್ನು ಹೇರಲು ಪ್ರಯತ್ನಿಸುತ್ತಿದೆ.
ಇದನ್ನೂ ಓದಿ: ವೆಂಟಿಲೇಟರ್ ಮತ್ತು ಪ್ರಧಾನಿ ಇಬ್ಬರೂ ವಿಫಲರಾಗಿದ್ದಾರೆ ಎಂದ ರಾಹುಲ್ ಗಾಂಧಿ