Homeಮುಖಪುಟಕೃಷಿ ಕಾನೂನುಗಳನ್ನು ವಾಪಸ್ ಪಡೆದು, ಪ್ರತಿಭಟನೆಯಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಘೋಷಿಸಿ- ಸಿದ್ದರಾಮಯ್ಯ

ಕೃಷಿ ಕಾನೂನುಗಳನ್ನು ವಾಪಸ್ ಪಡೆದು, ಪ್ರತಿಭಟನೆಯಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಘೋಷಿಸಿ- ಸಿದ್ದರಾಮಯ್ಯ

’ಅದಾನಿ ಮುಂತಾದವರು ಅಕ್ರಮವಾಗಿ ಸಂಗ್ರಹಿಸಿರುವ ಎಲ್ಲ ಕೃಷಿ ಉತ್ಪನ್ನಗಳನ್ನು ವಶಪಡಿಸಿಕೊಂಡು ಮಾರುಕಟ್ಟೆಗೆ ತಂದು ಹಣದುಬ್ಬರವನ್ನು ನಿಯಂತ್ರಿಸಿ, ನ್ಯಾಯಯುತ ಬೆಲೆಗಳಿಗೆ ಮಾರುವಂತೆ ಮಾಡಬೇಕು’

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ರೈತರ ಹೋರಾಟಕ್ಕೆ ಆರು ತಿಂಗಳಾಗಿದ್ದು, ಬೇಡಿಕೆಗಳನ್ನು ಪ್ರಜಾತಾಂತ್ರಿಕವಾಗಿ ಬಗೆಹರಿಸಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.

“ಪ್ರತಿಭಟನೆಯ ಸ್ಥಳದಲ್ಲಿ ಸುಮಾರು 340 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಈ ಸಾವುಗಳಿಗೆ ಕೇಂದ್ರದ ಬಿಜೆಪಿ ಸರ್ಕಾರವೇ ನೇರಹೊಣೆ. ಜಗತ್ತಿನ ಯಾವುದೇ ದೇಶದ ನಾಗರಿಕ ಸರ್ಕಾರವು ಜನರ ಬೃಹತ್ ಚಳುವಳಿಯನ್ನು ಈ ಮಟ್ಟದಲ್ಲಿ ನಿರ್ಲಕ್ಷಿಸಿದ ಇತಿಹಾಸವಿಲ್ಲ” ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

’ದೇಶದ ಶೇ. 80 ರಷ್ಟು ಜನರು ರೈತಾಪಿ ಕುಟುಂಬಗಳೊಂದಿಗೆ ಪ್ರತ್ಯಕ್ಷ ಇಲ್ಲವೇ ಪರೋಕ್ಷ ಸಂಬಂಧವಿರುವವರು. ಇಷ್ಟು ಬೃಹತ್ ಜನ ಸಮುದಾಯದ ಹಕ್ಕೊತ್ತಾಯಗಳಿಗೆ ಮೋದಿಯವರ ಸರ್ಕಾರ ಕುರುಡಾಗಿ, ಕಿವುಡಾಗಿ ನಡೆದುಕೊಳ್ಳುತ್ತಿರುವುದು ದುರಂತ. ದೇಶದ ಎಲ್ಲ ರಂಗಗಳು ವಿಫಲವಾಗಿದ್ದಾಗ ಕೃಷಿಯು ರಾಜ್ಯದಲ್ಲಿ ಶೇ 6.4 ರಷ್ಟು, ದೇಶದಲ್ಲಿ 3.5 ರಷ್ಟು ಪ್ರಗತಿಯಾಗಿದೆಯೆಂದು ಸರ್ಕಾರಗಳೇ ತಮ್ಮ ವರದಿಗಳಲ್ಲಿ ಹೇಳಿಕೊಂಡಿವೆ. ಹಾಗಿದ್ದರೂ ತೊಗರಿ, ಹೆಸರು, ಸೂರ್ಯಕಾಂತಿ, ಕಡಲೆ ಕಾಯಿ ಮುಂತಾದ ಬೆಳೆಗಳಿಗೆ ಒಳ್ಳೆ ಬೆಲೆ ಏಕೆ ಸಿಗಲಿಲ್ಲ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಾಬಾ ರಾಮದೇವ್ ವಿರುದ್ಧ 1,000 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್

 

’ಮಾರುಕಟ್ಟೆಯಲ್ಲಿ ಬೇಳೆ ಕಾಳುಗಳ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 75 ರಷ್ಟು ಹೆಚ್ಚಾಗಿದೆ. ಅಡುಗೆ ಎಣ್ಣೆಯ ಬೆಲೆ ಶೇ. 120 ಹೆಚ್ಚಾಗಿದೆ. ಇವುಗಳಿಗೆ ಸಂಬಂಧಿಸಿದಂತೆ ಹಣದುಬ್ಬರದ ಪ್ರಮಾಣ ಶೇ.16 ಹೆಚ್ಚಾಗಿದೆ. ಹಾಗಿದ್ದರೆ ರೈತರು ಬೆಳೆದದ್ದೆಲ್ಲ ಎಲ್ಲಿ ಹೋಯಿತು..?. ಬೇಳೆ ಕಾಳುಗಳು ಮತ್ತು ಎಣ್ಣೆ ಕಾಳುಗಳ ಪ್ರಮುಖ ವ್ಯಾಪಾರಿ ಅದಾನಿ ಮತ್ತು ಅದಾನಿ ವಿಲ್ಮಾರ್ ಕಂಪೆನಿ. ದೇಶದಲ್ಲಿ ಸುಮಾರು 5 ಮಿಲಿಯನ್ ಟನ್ ತೊಗರಿ ಬೇಳೆ ಬಳಕೆ ಇದೆ. ಒಂದು ಕೆ.ಜಿ. ತೊಗರಿ ಬೇಳೆಯ ಬೆಲೆ 30 ರೂಗಳಷ್ಟು ಹೆಚ್ಚಾದರೆ ಈ ಕಂಪೆನಿಗೆ ಒಂದು ವರ್ಷಕ್ಕೆ ಒಂದೂವರೆ ಲಕ್ಷ ಕೋಟಿಯಷ್ಟು ಹೆಚ್ಚಿನ ಲಾಭ ಸಿಗುತ್ತೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ತೊಗರಿಬೇಳೆಯ ಬೆಲೆ ಕಳೆದ ಕೆಲವು ತಿಂಗಳಿಂದ ಈಚೆಗೆ ಸರಾಸರಿ 100 ರೂಪಾಯಿಗಳಷ್ಟು ಹೆಚ್ಚಾಗಿದೆ. ಅನೇಕ ಕಡೆ ಕೆಜಿಗೆ 180 ರೂ.ವರೆಗೆ ಮಾರಾಟವಾಗುತ್ತಿದೆ. ಕಳೆದ ವರ್ಷ ಇದು 80-90 ರೂ. ಮಾತ್ರ ಇತ್ತು. ಪರಿಸ್ಥಿತಿ ಹೀಗೆ ಇದ್ದರೆ ರೈತರ ಉದ್ಧಾರ ಹೇಗೆ ಸಾಧ್ಯ..? ವಿದೇಶಿ ಆಮದನ್ನು ನಿಲ್ಲಿಸಿ, ಅದಾನಿ ಮುಂತಾದವರು ಅಕ್ರಮವಾಗಿ ಸಂಗ್ರಹಿಸಿರುವ ಎಲ್ಲ ಕೃಷಿ ಉತ್ಪನ್ನಗಳನ್ನು ವಶಪಡಿಸಿಕೊಂಡು ಮಾರುಕಟ್ಟೆಗೆ ತಂದು ಹಣದುಬ್ಬರವನ್ನು ನಿಯಂತ್ರಿಸಿ, ನ್ಯಾಯಯುತ ಬೆಲೆಗಳಿಗೆ ಮಾರುವಂತೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾವು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದಿದ್ದ ಪತ್ರ ಬಗ್ಗೆಯೂ ಸಿದ್ದರಾಮಯ್ಯ ನೆನಪಿಸಿದ್ದಾರೆ. ’ಹಿಂದೆ ಬರೆದ ಪತ್ರದಲ್ಲಿ ಉಲ್ಲೇಖಿಸಿದಂತೆ, “ ರೈತರು ನಡೆಸುತ್ತಿರುವ ಹೋರಾಟ ತಮಗಾಗಿ ಮಾತ್ರವಲ್ಲ. ರೈತರ ಉತ್ಪನ್ನಗಳನ್ನು ಕೊಂಡುಕೊಳ್ಳುತ್ತಿರುವ ಗ್ರಾಹಕರ ಪರವಾಗಿ ನಡೆಸುತ್ತಿರುವ ಹೋರಾಟವು ಆಗಿದೆ”.  ಇದು ದೇಶ ಉಳಿಸುವ ಹೋರಾಟವು ಹೌದು’ ಎಂದಿದ್ದಾರೆ.

 

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಮರಣ ಹೊಂದಿದ ಎಲ್ಲ ರೈತರನ್ನು ಹುತಾತ್ಮರೆಂದು ಘೋಷಿಸಿ ಅವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆಗ್ರಹಿಸಿದ್ದಾರೆ.

’ರೈತರು ಬೆಳೆದ ಬೆಳೆಗಳಿಗೆ ಬೆಲೆ ಖಾತ್ರಿ ಕಾಯಿದೆಯನ್ನು, ಗ್ರಾಹಕರಿಗೆ ನ್ಯಾಯಯುತ ಬೆಲೆಗಳ ಖಾತ್ರಿಯ ಕಾಯಿದೆಯನ್ನು ಜಾರಿಗೊಳಿಸಬೇಕು. ಇದನ್ನು ನಿಭಾಯಿಸಲು ಸರ್ವಪಕ್ಷಗಳ, ತಜ್ಞರ, ರೈತ ಮುಖಂಡರ, ಗ್ರಾಹಕ ಪ್ರತಿನಿಧಿಗಳ ಶಾಶ್ವತ ಸಮಿತಿಯನ್ನು ರಚಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...