Homeಚಳವಳಿಶ್ರದ್ಧಾಂಜಲಿ : ಕರ್ನಾಟಕದ ಮಕ್ಕಳಿಗೂ ಪ್ರೇರಣೆಯಾಗಿದ್ದ ಸಂತ ಸುಂದರಲಾಲ್ ಬಹುಗುಣ

ಶ್ರದ್ಧಾಂಜಲಿ : ಕರ್ನಾಟಕದ ಮಕ್ಕಳಿಗೂ ಪ್ರೇರಣೆಯಾಗಿದ್ದ ಸಂತ ಸುಂದರಲಾಲ್ ಬಹುಗುಣ

- Advertisement -
- Advertisement -

ಋಷಿಯಂತೆ ಬದುಕಿ, ಪರಿಸರ ಜಾಗೃತಿ ಮೂಡಿಸಿ, ಅದಕ್ಕಾಗಿ ಪಾದಯಾತ್ರೆ ನಡೆಸಿ ಹೋರಾಟ ಮಾಡಿ ಹಿಮಾಲಯದ ತಪ್ಪಲು ಹಸಿರಾಗಿರುವಂತೆ ನೋಡಿಕೊಂಡ ಸುಂದರಲಾಲ್ ಬಹುಗುಣ ಅವರನ್ನು ಮೇ 21ರಂದು ಕಳೆದುಕೊಂಡೆವು.

ಎಂಟನೆಯ ತರಗತಿಯ ಇಂಗ್ಲಿಷ್ ಪಠ್ಯದಲ್ಲಿ ’ಚಿಪ್ಕೊ ಚಳವಳಿ’ಯ ಬಗ್ಗೆ ಪಾಠವಿತ್ತು. ಆ ಪಾಠವನ್ನು ಓದಿದ ನನ್ನ ಹಲವಾರು ವಿದ್ಯಾರ್ಥಿಗಳು ಆಡುಕುರಿಗಳಿಗಾಗಿ ಮತ್ತು ಉರುವಲಿಗಾಗಿ ಗಿಡ ಕಡಿಯುವವರೊಂದಿಗೆ ಜಗಳಕ್ಕಿಳಿದು ಪೊಲೀಸ್ ಸ್ಟೇಷನ್ನಿಗೆ ಸುದ್ದಿ ಮುಟ್ಟಿಸಿ ಹಲವಾರು ಗಿಡಗಳ ರಕ್ಷಣೆ ಮಾಡಿದರು. ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೂಟಿಯ ದಿನಗಳಂದು ಶಿಕ್ಷಕರ ಮಾರ್ಗದರ್ಶನದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸುತ್ತಿದ್ದರು. ಹೊಲ ಮನೆ ಇಲ್ಲದ ನೌಕರರ ಮಕ್ಕಳು ತಮ್ಮ ಸ್ನೇಹಿತರ ಹೊಲಗಳಲ್ಲಿ ಹಣ್ಣಿನ ಗಿಡ ನೆಟ್ಟರು. ಇಂತಹ ಎಲ್ಲ ಪರಿಸರ ರಕ್ಷಣಾ ಚಟುವಟಿಕೆಗೆ ಮೂಲಕಾರಣ ಸುಂದರಲಾಲ್ ಬಹುಗುಣರು. ಗಢವಾಲದ ಈ ಸಂತ ಕರ್ನಾಟಕದ ಮಕ್ಕಳನ್ನು ಈ ರೀತಿ ಗಿಡ ನೆಡಲು ಪ್ರೇರೆಪಿಸಿದ್ದರು.

ಕೆಲವರ್ಷಗಳ ಹಿಂದೆ ’ಪಶ್ಚಿಮ ಘಟ್ಟ ಉಳಿಸಿ’ ಅಭಿಯಾನದಲ್ಲಿ ಅವರು ಗೋವೆಗೆ ಬಂದಿದ್ದರು. ಅಲ್ಲಿ ಅವರಾಡಿದ ಮಾತುಗಳು ಇನ್ನೂ ನೆನಪಿನಲ್ಲಿ ಹಸಿರಾಗಿ ಉಳಿದಿವೆ.

’ನಾವು ಶಿವನ ಜಟೆಯಲ್ಲಿ ಗಂಗೆ ವಾಸಿಸಿದ್ದಾಳೆಂದು ನಂಬಿದ್ದೇವೆ. ಶಿವ ಹಿಮಾಲಯವಾಸಿ. ಅವನ ಜಟೆಯೆಂದರೆ ಹಿಮಾಲಯದ ತಪ್ಪಲಿನ ದಟ್ಟ ಅರಣ್ಯದಲ್ಲಿಯ ವೃಕ್ಷರಾಶಿ. ತಮ್ಮ ಬೇರುಗಳ ಮೂಲಕ ನೀರನ್ನು ಭೂಮಿಯ ಅಂತರಾಳಕ್ಕೆ ಇಳಿಸುತ್ತವೆ. ಹೀಗಾಗಿ ಅಂತರ್ಜಲ ಹೆಚ್ಚಾಗಿ ವರ್ಷವಿಡೀ ನಾವು ನೀರು ಪಡೆಯುತ್ತೇವೆ. ನಾವು ಅರಣ್ಯನಾಶದಿಂದ ಶಿವನ ಜಟೆಯನ್ನು ಕತ್ತರಿಸಿದರೆ ಗಂಗೆಯ ವಾಸಸ್ಥಾನವನ್ನು ಹಾಳುಮಾಡಿದಂತಾಗುತ್ತದೆ. ಅರಣ್ಯ ಉಳಿದರೆ ಗಂಗೆ, ಗಂಗೆ ಉಳಿದರೆ ನೀರು’ ಎಂದಿದ್ದರು.

ಹಲವು ದಶಕಗಳ ಹಿಂದೆಯೇ ಸುಂದರಲಾಲ್ ಬಹುಗುಣರು ಪ್ರವಾಹಗಳ ಪರಿಣಾಮವನ್ನು ಊಹಿಸಿದ್ದರು. ಹಿಮಾಲಯದ ದೇವಧಾರು ಮತ್ತು ಇತ್ಯಾದಿ ಮರಗಳ ನಾಶದಿಂದ ಭೂಮಿಯ ಮೇಲ್ಮೈ ಸಡಿಲಗೊಂಡು ಮಣ್ಣೆಲ್ಲ ಹಳ್ಳ ತೊರೆಗಳ ಮೂಲಕ ನದಿಯನ್ನು ಸೇರುತ್ತದೆ. ನದಿಯ ಆಳ ಕಡಿಮೆಯಾಗಿ ಅಗಲ ಹೆಚ್ಚಾಗುವುದು. ನದಿ ತನ್ನ ಒಡಲನ್ನು ಬಿಟ್ಟು ಸುತ್ತೆಲ್ಲ ಪಸರಿಸಿ ಹರಿಯುತ್ತದೆ. ಊರುಗಳು ಮತ್ತು ಹೊಲಗಳಲ್ಲೆಲ್ಲ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗುತ್ತದೆ. ಭೂಮಿಯ ಮೇಲ್ಮೈ ಮಣ್ಣು ನಾಶವಾಗಿ ಭೂಮಿ ಬರಡಾಗುತ್ತದೆ. ಜನರ ಆಹಾರ ಮೂಲವಾದ ಹೊಲಗಳನ್ನು ಕಳೆದುಕೊಳ್ಳುತ್ತಾರೆ. ಗಿಡ ಕಡಿಯುವುದನ್ನು ನಿಲ್ಲಿಸಿ ಪ್ರವಾಹಗಳನ್ನು ತಡೆಯಬೇಕೆಂದು ಆಗಲೇ ಹೇಳಿದ್ದರು. ಸರಕಾರಗಳು ಟಿಂಬರ್ ಮಾಫಿಯಾಗಳ ಪ್ರಭಾವಕ್ಕೆ ಮಣಿನು ಅವರ ಮಾತನ್ನು ನಿರ್ಲಕ್ಷಿಸಿದವು. ಪ್ರತಿಫಲ ಎಲ್ಲರೂ ಅನುಭವಿಸಬೇಕಾಯಿತು.

PC : Sakshi

ಅವರು ದೊಡ್ಡ ದೊಡ್ಡ ಅಣೆಕಟ್ಟುಗಳನ್ನು ವಿರೋಧಿಸಿದರು. ನಮ್ಮ ಅರಣ್ಯಗಳೇ ನಮ್ಮ ಅಣೆಕಟ್ಟುಗಳು. ಅರಣ್ಯ ಉಳಿಸಿದರೆ ಅಲ್ಲಿಯ ಗಿಡಮರಗಳು ಅಂತರ್ಜಲ ಹೆಚ್ಚಿಸಿ ವರ್ಷವಿಡಿ ನೀರನ್ನು ಹಿಡಿದಿಡುತ್ತವೆ. ನದಿಗಳು ಹನ್ನೆರಡು ತಿಂಗಳು ಹರಿಯುತ್ತವೆ. ಜೀವ ವೈವಿಧ್ಯ ರಕ್ಷಣೆಯಾಗುತ್ತದೆ. ಮಾನವನ ಅವಶ್ಯಕತೆಗಳಾದ Food, Fodder, Fibre, Fertilizer, Furniture ಇತ್ಯಾದಿಗಳು ಸುಲಭವಾಗಿ ದೊರಕುತ್ತವೆ. ಇಂತಹ ದಟ್ಟ ಅರಣ್ಯ ನಾಶಮಾಡಿ ಅಣೆಕಟ್ಟು ಕಟ್ಟಿ ನೀರನ್ನು ಉಳಿಸುವ ಪ್ರಯತ್ನವೆಂದರೆ ಜಲಸಂಪನ್ಮೂಲವನ್ನು ನಾಶ ಮಾಡಿ ಜಲ ಉಳಿಸುವ ಯತ್ನ. ಈ ಜಲಾಶಯಗಳು ಅರ್ಥಹೀನ, ಹಿಮಾಲಯದ ತಪ್ಪಲಿನಲ್ಲಿ ಈ ಜಲಾಶಯಗಳು ಟೈಂಬಾಂಬ್ ಇಟ್ಟಂತೆ ಎಂದು ಹೇಳುತ್ತಿದ್ದರು. ದೊಡ್ಡ ದೊಡ್ಡ ಅಣೆಕಟ್ಟುಗಳು ನಿರ್ಮಾಣದ ವಿರುದ್ಧ ಹೋರಾಟ ಮಾಡಿದರು.

ಗೋಧಿ, ಅಕ್ಕಿಯನ್ನು ಬೆಳೆಯಲು ಬಹಳ ನೀರು ಬೇಕು. ಅದರ ಬದಲಿಗೆ ಕಡಿಮೆ ನೀರು ಬೇಡುವ ತೃಣಧಾನ್ಯಗಳನ್ನು ಬೆಳೆಯಲು ಪ್ರೋತ್ಸಾಹಿಸಿದರು. ತಾವು ಗೋಧಿ ಮತ್ತು ಅಕ್ಕಿಯನ್ನು ಉಣ್ಣುವುದನ್ನೇ ಬಿಟ್ಟರು.

ಅವರು ಕರ್ನಾಟಕದ ಲಕ್ಷವೃಕ್ಷ ಆಂದೋಲನ, ಅಪ್ಪಿಕೊ ಚಳವಳಿ ಇತ್ಯಾದಿಗಳಲ್ಲಿ ಭಾಗವಹಿಸಿದ್ದರು. ಇಲ್ಲಿಯ ಬಹಳಷ್ಟು ಶಾಲಾಮಕ್ಕಳನ್ನು ಭೇಟಿಯಾಗಿ ಅವರೊಂದಿಗೆ ಮಾತನಾಡಿದರು. ಗಿಡಮರ ನೆಡಲು ಪ್ರೇರೇಪಿಸಿದರು.

ಆ ಹಿರಿಯ ಜೀವ ತನ್ನ ಮುಂದಿನ ಜನಾಂಗಗಳ ಬಗೆಗೆ ಹೊಂದಿದ್ದ ಕಾಳಜಿಯನ್ನು ನಾವು ಅರ್ಥಮಾಡಿಕೊಳ್ಳಬೇಕು. ಭೂಮಿಯ ಮೇಲಿನ ಹಸಿರು ಹೊದಿಕೆ ಉಳಿಸಿಕೊಳ್ಳಬೇಕು. ಈ ಮುಖಾಂತರ ಸುಂದರಲಾಲ್ ಬಹುಗುಣರಿಗೆ ಶ್ರದ್ಧಾಂಜಲಿ ಅರ್ಪಿಸಬೇಕು.

ಆರ್ ಜಿ ತಿಮ್ಮಾಪುರ
ನಿವೃತ್ತ ಶಿಕ್ಷಕರು, ಪರಿಸರಾಸಕ್ತರು ಮತ್ತು ಪ್ರಸ್ತುತ ಸಾವಯವ ಕೃಷಿಕರು


ಇದನ್ನೂ ಓದಿ: ‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...