Homeಕರೋನಾ ತಲ್ಲಣವಿಶ್ವದಲ್ಲೆ ಅತಿಹೆಚ್ಚು ಲಸಿಕೆ ತಯಾರಿಸುವ ಭಾರತ ಯಾಕೆ ಕೊರತೆ ಎದುರಿಸುತ್ತಿದೆ: ಪ್ರಿಯಾಂಕ ಗಾಂಧಿ

ವಿಶ್ವದಲ್ಲೆ ಅತಿಹೆಚ್ಚು ಲಸಿಕೆ ತಯಾರಿಸುವ ಭಾರತ ಯಾಕೆ ಕೊರತೆ ಎದುರಿಸುತ್ತಿದೆ: ಪ್ರಿಯಾಂಕ ಗಾಂಧಿ

- Advertisement -
- Advertisement -

“ವಿಶ್ವದಲ್ಲೇ ಅತಿಹೆಚ್ಚು ಲಸಿಕೆಗಳನ್ನು ತಯಾರಿಸುವ ದೇಶಗಳಲ್ಲಿ ಒಂದಾದ ಭಾರತ ಇಂದು ಯಾಕೆ ಕೊರತೆಯನ್ನು ಎದುರಿಸುತ್ತಿದೆ?” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಪ್ರಶ್ನಿಸಿದ್ದು, ಕೊರೊನಾ ಲಸಿಕೆ ಪ್ರಕ್ರಿಯೆಯ ನಿರ್ವಹಣೆಯ ಬಗ್ಗೆ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಭಾರತ ಸರ್ಕಾರವು ಭಾರತದ ಜನರಿಗೆ ಉತ್ತರಿಸಬೇಕಿದೆ” ಎಂಬ ಶೀರ್ಷಿಕೆಯ ವೀಡಿಯೊವನ್ನು ದಲ್ಲಿ, ಕೇಂದ್ರ ಸರ್ಕಾರವು ಈ ವರ್ಷದ ಜನವರಿಯಲ್ಲಷ್ಟೇ ಲಸಿಕೆಗಾಗಿ ಮೊದಲ ಆದೇಶ ನೀಡಿದೆ ಎಂದು ಹೇಳಿದ್ದಾರೆ.

“ವಿಶ್ವದ ಅತಿ ಹೆಚ್ಚು ಲಸಿಕೆಗಳ ತಯಾರಕರಲ್ಲಿ ಒಂದಾದ ಭಾರತ ಇಂದು ಏಕೆ ಕೊರತೆಯನ್ನು ಎದುರಿಸುತ್ತಿದೆ? 2020 ರ ಬೇಸಿಗೆಯ ಸಮಯದಲ್ಲಿ ಇತರ ದೇಶಗಳು ಲಸಿಕೆಗಾಗಿ ತಮ್ಮ ಆದೇಶಗಳನ್ನು ನೀಡಲು ಪ್ರಾರಂಭಿಸಿದಾಗ, ಭಾರತ ಸರ್ಕಾರವು ತನಗೆ ಲಸಿಕೆ ಬೇಕೆಂದು ಮೊದಲ ಆದೇಶವನ್ನು 2021 ರ ಜನವರಿಯಲ್ಲಿ ನೀಡಿದ್ದು ಯಾಕೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಜನರಿಗಿಂತ ಸಾಮಾಜಿಕ ಜಾಲತಾಣಗಳನ್ನು ಆದ್ಯತೆಯಾಗಿ ಪರಿಗಣಿಸಿದೆ: ರಾಹುಲ್ ಗಾಂಧಿ

“ನಮ್ಮ ಸರ್ಕಾರವು 2021 ರ ಜನವರಿ ಮತ್ತು ಮಾರ್ಚ್ ನಡುವೆ ಆರು ಕೋಟಿ ಲಸಿಕೆಗಳನ್ನು ರಫ್ತು ಮಾಡುವ ಅದೇ ಸಮಯದಲ್ಲಿ, ಭಾರತೀಯರಿಗೆ ಕೇವಲ 3.5 ಕೋಟಿ ಲಸಿಕೆಯನ್ನು ಮಾತ್ರ ನೀಡಿತು.ಇದಕ್ಕೆ ಭಾರತ ಸರ್ಕಾರವು ದೇಶದ ಜನರಿಗೆ ಉತ್ತರಿಸಬೇಕಿದೆ. ನಾವು ಅವರಿಗೆ ಪ್ರಶ್ನೆಗಳನ್ನು ಕೇಳಬೇಕಾಗಿದ್ದು, ಅದಕ್ಕೆ ಅವರು ಉತ್ತರಿಸಲೇ ಬೇಕು” ಎಂದು ಹೇಳಿದ್ದಾರೆ.

ಪ್ರಿಯಾಂಕ ಗಾಂಧಿ ಈ ಹಿಂದೆ ಕೂಡಾ ದೇಶದಲ್ಲಿ ಕೊರೊನಾ ಲಸಿಕೆಗಳ ಕೊರತೆಗೆ ಕೇಂದ್ರ ಸರ್ಕಾರವನ್ನು ಟೀಕಿದ್ದರು.

ಇದನ್ನೂ ಓದಿ: ಸೋಂಕು ಹೆಚ್ಚಾದಂತೆ ವ್ಯವಸ್ಥೆಯ ಅಮಾನವೀಯತೆಗೆ ಗುರಿಯಾಗುತ್ತಿರುವ ಬೆಂಗಳೂರಿನ ಸ್ಮಶಾನ ಕಾರ್ಮಿಕರು

ದೇಶದಾದ್ಯಂತ ಕಳೆದ ಕೆಲವು ದಿನಗಳಿಂದ ಲಸಿಕೆ ಕೊರತೆಯಾಗಿರುವುದಕ್ಕೆ ಲಸಿಕೆ ಕೇಂದ್ರಗಳನ್ನು ಮುಚ್ಚಲಾಗಿದೆ. ಪಂಜಾಬ್, ಕೇರಳ, ಮಹಾರಾಷ್ಟ್ರ, ಪಂಜಾಬ್, ಆಂಧ್ರಪ್ರದೇಶ, ರಾಜಸ್ಥಾನ, ಉತ್ತರಾಖಂಡ ಮತ್ತು ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಕೊರೊನಾ ಲಸಿಕೆಗಳಿಗಾಗಿ ಜಾಗತಿಕ ಟೆಂಡರ್‌ಗಳನ್ನು ಕರೆಯುವ ಹಾದಿಯಲ್ಲಿದೆ.

ಲಸಿಕೆ ತಯಾರಕ ಸಂಸ್ಥೆಯಾದ ಮೊಡೆರ್ನಾ ನೇರವಾಗಿ ಲಸಿಕೆಗಳನ್ನು ಪಂಜಾಬ್ ಸರ್ಕಾರಕ್ಕೆ ಕಳುಹಿಸಲು ನಿರಾಕರಿಸಿದೆ ಎಂದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕಳೆದ ವಾರ ಮಾಹಿತಿ ನೀಡಿದ್ದರು. ದೆಹಲಿಗೆ ಕೂಡಾ ಫಿಜರ್ ಮತ್ತು ಮಾಡರ್ನಾ ಸಂಸ್ಥೆಗಳು ಅದೇ ಪ್ರತಿಕ್ರಿಯೆ ನೀಡಿದೆ.

ದೆಹಲಿಗೆ ಲಸಿಕೆಗಳನ್ನು ಪೂರೈಸಲು ಸ್ಪುಟ್ನಿಕ್ ವಿ ತಯಾರಕರು ಒಪ್ಪಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಮಾಹಿತಿ ನೀಡಿದ್ದಾರೆ.

ಕೇಂದ್ರ ಮಟ್ಟದಲ್ಲಿ ಟೆಂಡರ್ ಕರೆಯುವಂತೆ ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...