Homeಕರೋನಾ ತಲ್ಲಣವಿಶ್ವದಲ್ಲೆ ಅತಿಹೆಚ್ಚು ಲಸಿಕೆ ತಯಾರಿಸುವ ಭಾರತ ಯಾಕೆ ಕೊರತೆ ಎದುರಿಸುತ್ತಿದೆ: ಪ್ರಿಯಾಂಕ ಗಾಂಧಿ

ವಿಶ್ವದಲ್ಲೆ ಅತಿಹೆಚ್ಚು ಲಸಿಕೆ ತಯಾರಿಸುವ ಭಾರತ ಯಾಕೆ ಕೊರತೆ ಎದುರಿಸುತ್ತಿದೆ: ಪ್ರಿಯಾಂಕ ಗಾಂಧಿ

- Advertisement -
- Advertisement -

“ವಿಶ್ವದಲ್ಲೇ ಅತಿಹೆಚ್ಚು ಲಸಿಕೆಗಳನ್ನು ತಯಾರಿಸುವ ದೇಶಗಳಲ್ಲಿ ಒಂದಾದ ಭಾರತ ಇಂದು ಯಾಕೆ ಕೊರತೆಯನ್ನು ಎದುರಿಸುತ್ತಿದೆ?” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಪ್ರಶ್ನಿಸಿದ್ದು, ಕೊರೊನಾ ಲಸಿಕೆ ಪ್ರಕ್ರಿಯೆಯ ನಿರ್ವಹಣೆಯ ಬಗ್ಗೆ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಭಾರತ ಸರ್ಕಾರವು ಭಾರತದ ಜನರಿಗೆ ಉತ್ತರಿಸಬೇಕಿದೆ” ಎಂಬ ಶೀರ್ಷಿಕೆಯ ವೀಡಿಯೊವನ್ನು ದಲ್ಲಿ, ಕೇಂದ್ರ ಸರ್ಕಾರವು ಈ ವರ್ಷದ ಜನವರಿಯಲ್ಲಷ್ಟೇ ಲಸಿಕೆಗಾಗಿ ಮೊದಲ ಆದೇಶ ನೀಡಿದೆ ಎಂದು ಹೇಳಿದ್ದಾರೆ.

“ವಿಶ್ವದ ಅತಿ ಹೆಚ್ಚು ಲಸಿಕೆಗಳ ತಯಾರಕರಲ್ಲಿ ಒಂದಾದ ಭಾರತ ಇಂದು ಏಕೆ ಕೊರತೆಯನ್ನು ಎದುರಿಸುತ್ತಿದೆ? 2020 ರ ಬೇಸಿಗೆಯ ಸಮಯದಲ್ಲಿ ಇತರ ದೇಶಗಳು ಲಸಿಕೆಗಾಗಿ ತಮ್ಮ ಆದೇಶಗಳನ್ನು ನೀಡಲು ಪ್ರಾರಂಭಿಸಿದಾಗ, ಭಾರತ ಸರ್ಕಾರವು ತನಗೆ ಲಸಿಕೆ ಬೇಕೆಂದು ಮೊದಲ ಆದೇಶವನ್ನು 2021 ರ ಜನವರಿಯಲ್ಲಿ ನೀಡಿದ್ದು ಯಾಕೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಜನರಿಗಿಂತ ಸಾಮಾಜಿಕ ಜಾಲತಾಣಗಳನ್ನು ಆದ್ಯತೆಯಾಗಿ ಪರಿಗಣಿಸಿದೆ: ರಾಹುಲ್ ಗಾಂಧಿ

“ನಮ್ಮ ಸರ್ಕಾರವು 2021 ರ ಜನವರಿ ಮತ್ತು ಮಾರ್ಚ್ ನಡುವೆ ಆರು ಕೋಟಿ ಲಸಿಕೆಗಳನ್ನು ರಫ್ತು ಮಾಡುವ ಅದೇ ಸಮಯದಲ್ಲಿ, ಭಾರತೀಯರಿಗೆ ಕೇವಲ 3.5 ಕೋಟಿ ಲಸಿಕೆಯನ್ನು ಮಾತ್ರ ನೀಡಿತು.ಇದಕ್ಕೆ ಭಾರತ ಸರ್ಕಾರವು ದೇಶದ ಜನರಿಗೆ ಉತ್ತರಿಸಬೇಕಿದೆ. ನಾವು ಅವರಿಗೆ ಪ್ರಶ್ನೆಗಳನ್ನು ಕೇಳಬೇಕಾಗಿದ್ದು, ಅದಕ್ಕೆ ಅವರು ಉತ್ತರಿಸಲೇ ಬೇಕು” ಎಂದು ಹೇಳಿದ್ದಾರೆ.

ಪ್ರಿಯಾಂಕ ಗಾಂಧಿ ಈ ಹಿಂದೆ ಕೂಡಾ ದೇಶದಲ್ಲಿ ಕೊರೊನಾ ಲಸಿಕೆಗಳ ಕೊರತೆಗೆ ಕೇಂದ್ರ ಸರ್ಕಾರವನ್ನು ಟೀಕಿದ್ದರು.

ಇದನ್ನೂ ಓದಿ: ಸೋಂಕು ಹೆಚ್ಚಾದಂತೆ ವ್ಯವಸ್ಥೆಯ ಅಮಾನವೀಯತೆಗೆ ಗುರಿಯಾಗುತ್ತಿರುವ ಬೆಂಗಳೂರಿನ ಸ್ಮಶಾನ ಕಾರ್ಮಿಕರು

ದೇಶದಾದ್ಯಂತ ಕಳೆದ ಕೆಲವು ದಿನಗಳಿಂದ ಲಸಿಕೆ ಕೊರತೆಯಾಗಿರುವುದಕ್ಕೆ ಲಸಿಕೆ ಕೇಂದ್ರಗಳನ್ನು ಮುಚ್ಚಲಾಗಿದೆ. ಪಂಜಾಬ್, ಕೇರಳ, ಮಹಾರಾಷ್ಟ್ರ, ಪಂಜಾಬ್, ಆಂಧ್ರಪ್ರದೇಶ, ರಾಜಸ್ಥಾನ, ಉತ್ತರಾಖಂಡ ಮತ್ತು ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಕೊರೊನಾ ಲಸಿಕೆಗಳಿಗಾಗಿ ಜಾಗತಿಕ ಟೆಂಡರ್‌ಗಳನ್ನು ಕರೆಯುವ ಹಾದಿಯಲ್ಲಿದೆ.

ಲಸಿಕೆ ತಯಾರಕ ಸಂಸ್ಥೆಯಾದ ಮೊಡೆರ್ನಾ ನೇರವಾಗಿ ಲಸಿಕೆಗಳನ್ನು ಪಂಜಾಬ್ ಸರ್ಕಾರಕ್ಕೆ ಕಳುಹಿಸಲು ನಿರಾಕರಿಸಿದೆ ಎಂದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕಳೆದ ವಾರ ಮಾಹಿತಿ ನೀಡಿದ್ದರು. ದೆಹಲಿಗೆ ಕೂಡಾ ಫಿಜರ್ ಮತ್ತು ಮಾಡರ್ನಾ ಸಂಸ್ಥೆಗಳು ಅದೇ ಪ್ರತಿಕ್ರಿಯೆ ನೀಡಿದೆ.

ದೆಹಲಿಗೆ ಲಸಿಕೆಗಳನ್ನು ಪೂರೈಸಲು ಸ್ಪುಟ್ನಿಕ್ ವಿ ತಯಾರಕರು ಒಪ್ಪಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಮಾಹಿತಿ ನೀಡಿದ್ದಾರೆ.

ಕೇಂದ್ರ ಮಟ್ಟದಲ್ಲಿ ಟೆಂಡರ್ ಕರೆಯುವಂತೆ ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...