Homeಮುಖಪುಟಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

- Advertisement -
- Advertisement -

ಕಳೆದ ವರ್ಷ ಏಪ್ರಿಲ್ ಮತ್ತು ಮೇ ತಿಂಗಳ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಗಂಗಾ ನದಿಗೆ ಹರಿದು ಬರುವ ಮಾಲಿನ್ಯವು ಕಡಿಮೆಯಾಗಿದ್ದರಿಂದ ನದಿಯು ಸ್ಪಚ್ಛಗೊಂಡಿತ್ತು. ಆದರೆ ಕೊರೊನಾ ಎರಡನೆ ಅಲೆಯ ಸಂದರ್ಭದಲ್ಲಿ ಹೇರಲ್ಪಟ್ಟ ಲಾಕ್‌ಡೌನ್‌ನಿಂದಾಗಿ ನದಿಯು ಸ್ವಚ್ಛವಾಗಬಹುದು ಎಂದು ನಂಬಲಾಗಿತ್ತು, ಆದರೆ ಇದೀಗ ನದಿ ನೀರಿನ ಬಣ್ಣವು ಗಾಢ ಹಸಿರು ಬಣ್ಣಕ್ಕೆ ತಿರುಗಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಗಂಗಾ ನದಿಯು ತನ್ನ ಬಣ್ಣವನ್ನು ಹಸಿರು ಬಣ್ಣಕ್ಕೆ ಬದಲಾಯಿಸಿದಂತೆ ತೋರುತ್ತಿದೆ. ವಿಜ್ಞಾನಿಗಳ ಪ್ರಕಾರ, ನೀರು ವಿಷಕಾರಿಯಾಗುವ ಸಾಧ್ಯತೆಯಿದ್ದು, ಹಸಿರು ಬಣ್ಣವು ಹೆಚ್ಚು ಕಾಲ ಇರಲಿದೆಯೆ ಎಂದು ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಜನರಿಗಿಂತ ಸಾಮಾಜಿಕ ಜಾಲತಾಣಗಳನ್ನು ಆದ್ಯತೆಯಾಗಿ ಪರಿಗಣಿಸಿದೆ: ರಾಹುಲ್ ಗಾಂಧಿ

ಕೆಲವು ದಿನಗಳಿಂದ ನದಿ ನೀರಿನ ಬಣ್ಣದಲ್ಲಿ ಬದಲಾವಣೆಯಾಗಿದ್ದು ವಾರಣಾಸಿಯ ಜನರು ಕಳವಳ ವ್ಯಕ್ತಪಡಿಸಿದ್ದಾರೆ. 84 ಕಾಂಕ್ರೀಟ್ ನದಿ ತೀರಗಳ ಹೊರತಾಗಿಯು, ನದಿಯು ಹಸಿರು ಬಣ್ಣಕ್ಕೆ ಬದಲಾಗಿದ್ದು ಇತರ ಪ್ರದೇಶಗಳಲ್ಲೂ ಕಾಣಿಸುತ್ತಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

PC: India Today / Roshan Jaiswal

“ಮಳೆಗಾಲದ ಸಮಯದಲ್ಲಿ ಕೊಳ, ಕೆರೆಗಳಿಂದ ಪಾಚಿಗಳು ನದಿಗೆ ಸೇರುವುದರಿಂದ ಗಂಗಾ ನದಿಯ ನೀರು ತಿಳಿ ಹಸಿರು ಬಣ್ಣಕ್ಕೆ ತಿರುಗುವುದು ಸಾಮಾನ್ಯವಾಗಿದೆ. ಆದರೆ ಈ ಸಮಯದಲ್ಲಿ ನದಿಯ ನೀರು ಗಾಢ ಹಸಿರು ಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ, ಕೆಲವು ಘಾಟ್‌ಗಳಿಂದ ನಿಂತು ನೋಡಿದರೆ ಮಾತ್ರ ಕಾಣಿಸುತ್ತಿತ್ತು ಆದರೆ ಈಗ ಎಲ್ಲಡೆ ಈ ಬಣ್ಣ ಗೋಚರಿಸುತ್ತದೆ. ಕೆಟ್ಟ ವಾಸನೆ ಹರಡಿರುವುದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ವಾರಣಾಸಿಯ ನಿವಾಸಿ ಲವ್‌ಕುಶ್‌‌ ಸಾಹ್ನಿ ಹೇಳಿದ್ದಾರೆಂದು ಇಂಡಿಯಾ ಟುಡೆ ವರದಿ ಮಾಡಿದೆ.

ಬೆನಾರಸ್ ಹಿಂದೂ ವಿಶ್ವವಿದ್ಯಾಲಯದ ಮಾಳವಿಯಾ ಗಂಗಾ ಸಂಶೋಧನಾ ಕೇಂದ್ರದ ಅಧ್ಯಕ್ಷ ಬಿ.ಡಿ. ತ್ರಿಪಾಠಿ ಅವರು, ನದಿಯ ಹಸಿರು ಬಣ್ಣವು ಮೈಕ್ರೋಸಿಸ್ಟಿಸ್ ಪಾಚಿಗಳಿಂದಾಗಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಜೆ ಮೇಲೆ ತೆರಳಿದ ಲೈಂಗಿಕ ಹಗರಣ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥ, ತನಿಖೆ ಸ್ಥಗಿತ 

“ಹರಿಯುವ ನೀರಿನಲ್ಲಿ ಇವುಗಳನ್ನು ಕಾಣಬಹುದು. ಆದರೆ ಇದು ಸಾಮಾನ್ಯವಾಗಿ ಗಂಗಾ ನದಿಯಲ್ಲಿ ಕಂಡುಬರುವುದಿಲ್ಲ. ಆದರೆ ನೀರು ನಿಂತು ಪೋಷಕಾಂಶಗಳು ಸೃಷ್ಟಿಯಾದರೆ ಈ ಮೈಕ್ರೋಸಿಸ್ಟಿಸ್ ಪಾಚಿ ಬೆಳೆಯಲು ಪ್ರಾರಂಭಿಸುತ್ತದೆ. ಕೊಳ ಮತ್ತು ಕಾಲುವೆಗಳ ನೀರಿನಲ್ಲಿ ಮಾತ್ರ ಬೆಳೆಯುವುದು ಇದರ ವಿಶೇಷತೆಯಾಗಿದ” ಎಂದು ತ್ರಿಪಾಠಿ ಹೇಳಿದ್ದಾರೆ.

“ಪ್ರಸ್ತುತ ನೀರು ಹತ್ತಿರದ ಕೊಳ ಮತ್ತು ಸಣ್ಣ ನದಿಗಳಿಂದ ಬಂದಿರಬಹುದು. ನೀರಿನ ಹರಿವು ಹೆಚ್ಚಾದರೆ ಪಾಚಿಗಳು ಹರಿಯುತ್ತವೆ. ಆದರೆ ಅದು ಹರಿದು ಹೋಗದೆ ಈ ರೀತಿ ತುಂಬಾ ಸಮಯ ಇದ್ದರೆ ಅವು ನರಮಂಡಲದ ಮೇಲೆ ಪರಿಣಾಮ ಬೀರುವ ವಿಷವನ್ನು ಹೊರಸೂಸುತ್ತದೆ. ಇದು ಜಲಚರಗಳಿಗೆ ಅಪಾಯವನ್ನುಂಟು ಮಾಡುತ್ತದೆ” ಅವರು ಹೇಳಿದ್ದಾರೆ.

PC: India Today / Roshan Jaiswal

ಪರಿಸರ ಮಾಲಿನ್ಯ ವಿಜ್ಞಾನಿ ಡಾ.ಕೃಪಾ ರಾಮ್ ಅವರು ಹೇಳುವಂತೆ ನೀರಿನಲ್ಲಿ ಪಾಚಿ ಬೆಳೆಯುವ ಪೋಷಕಾಂಶಗಳು ಹೆಚ್ಚಿರುವುದರಿಂದ ಇದು ಕಂಡುಬಂದಿದೆ. ಗಂಗಾ ನೀರಿನ ಬಣ್ಣ ಬದಲಾಗಲು ಮಳೆ ಕೂಡ ಒಂದು ಕಾರಣ ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

“ಮಳೆಯಿಂದಾಗಿ, ಈ ಪಾಚಿಗಳು ನದಿಗೆ ಹರಿಯುತ್ತವೆ. ಸಾಕಷ್ಟು ಪೋಷಕಾಂಶಗಳನ್ನು ಪಡೆದ ನಂತರ ಅವು ದ್ಯುತಿಸಂಶ್ಲೇಷಣೆಯ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತವೆ. ನೀರು ತುಂಬಾ ಸಮಯದವರೆಗೂ ಹಾಗೆ ಇದ್ದರೆ, ದ್ಯುತಿಸಂಶ್ಲೇಷಣೆಯನ್ನು ಶಕ್ತಗೊಳಿಸುವ ಸೂರ್ಯನ ಕಿರಣಗಳು ಆಳಕ್ಕೆ ಹೋಗಬಹುದು. ಫಾಸ್ಫೇಟ್, ಗಂಧಕ ಮತ್ತು ನೈಟ್ರೇಟ್‌ ಪಾಚಿಗಳ ಬೆಳವಣಿಗೆಗೆ ಸಹಾಯ ಮಾಡುವ ಪೋಷಕಾಂಶಗಳಾಗಿವೆ. ಪೋಷಕಾಂಶಗಳು ಕೃಷಿ ಭೂಮಿ ಮತ್ತು ಒಳಚರಂಡಿಯಿಂದಲೂ ಬರಬಹುದು” ಎಂದು ಕೃಪಾ ರಾಮ್ ಹೇಳಿದ್ದಾರೆ.

“ಯಾವುದೆ ಚಿಂತೆಯ ಅಗತ್ಯವಿಲ್ಲ. ಇದು ನೈಸರ್ಗಿಕ ಪ್ರಕ್ರಿಯೆಯಾಗಿದ್ದು, ಸಾಮಾನ್ಯವಾಗಿ ಮಾರ್ಚ್ ಮತ್ತು ಮೇ ನಡುವೆ ನಡೆಯುತ್ತದೆ. ಆದರೆ ಇದು ನೀರನ್ನು ವಿಷಕಾರಿಯಾಗಿಸುತ್ತದೆ. ಅದರಲ್ಲಿ ಸ್ನಾನ ಮಾಡುವುದರಿಂದ ಚರ್ಮ ರೋಗಗಳು ಉಂಟಾಗುತ್ತದೆ. ಅಲ್ಲದೆ ಈ ನೀರನ್ನು ಕುಡಿಯುವುದರಿಂದ ಯಕೃತ್ತಿಗೆ ಹಾನಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೊರೊನಾಗೆ ಬಲಿಯಾಗುತ್ತಿರುವವರ ನಿಜವಾದ ಪ್ರಮಾಣವೆಷ್ಟು? ಭಾರತವನ್ನೇ ಬೆಚ್ಚಿ ಬೀಳಿಸುವಂತಿದೆ ಈ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...