Homeಮುಖಪುಟನಾರದಾ ಪ್ರಕರಣ: ನಾಲ್ವರು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿದ ಕೊಲ್ಕತ್ತಾ ಹೈಕೋರ್ಟ್

ನಾರದಾ ಪ್ರಕರಣ: ನಾಲ್ವರು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿದ ಕೊಲ್ಕತ್ತಾ ಹೈಕೋರ್ಟ್

- Advertisement -
- Advertisement -

ನಾರದಾ ಪ್ರಕರಣದಲ್ಲಿ ಮೇ 17 ರಂದು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಯಿಂದ ಬಂಧಿಸಲ್ಪಟ್ಟ ಪಶ್ಚಿಮ ಬಂಗಾಳದ ಇಬ್ಬರು ಮಂತ್ರಿಗಳು ಸೇರಿದಂತೆ ನಾಲ್ವರು ರಾಜಕಾರಣಿಗಳಿಗೆ ಶುಕ್ರವಾರ ಕೊಲ್ಕತ್ತಾ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಕೊಲ್ಕತ್ತಾ ಹೈಕೋರ್ಟ್‌ನ ಐದು ನ್ಯಾಯಾಧೀಶರ ನ್ಯಾಯಪೀಠ ಶುಕ್ರವಾರ ಟಿಎಂಸಿ ನಾಯಕರಾದ ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್, ಮದನ್ ಮಿತ್ರ ಮತ್ತು ಮಾಜಿ ಮೇಯರ್ ಮತ್ತು ಮಾಜಿ ಟಿಎಂಸಿ ಸದಸ್ಯ ಸೋವನ್ ಚಟರ್ಜಿ ಅವರಿಗೆ ಮಧ್ಯಂತರ ಜಾಮೀನು ನೀಡಿತು.

ಇದನ್ನೂ ಓದಿ: ನಾರದ ಪ್ರಕರಣದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಸರು ಉಲ್ಲೇಖಿಸಿದ ಸಿಬಿಐ

ನಾರದಾ ಪ್ರಕರಣದಲ್ಲಿ ಬಂಧಿಸಲ್ಪಟ್ಟ ನಾಲ್ವರು ಮುಖಂಡರಿಗೆ ತಲಾ 2 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಅನ್ನು ಇಬ್ಬರು ವ್ಯಕ್ತಿಗಳ ಜಾಮೀನುಗಳೊಂದಿಗೆ ಸಲ್ಲಿಸುವಂತೆ ಹೈಕೋರ್ಟ್ ನ್ಯಾಯಪೀಠ ಕೇಳಿದೆ. ಹಗರಣದ ಬಗ್ಗೆ ಪತ್ರಿಕಾ ಸಂದರ್ಶನಗಳನ್ನು ನೀಡಬಾರದು ಹಾಗೂ ತನಿಖೆಯಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಅದು ಹೇಳಿದೆ. “ಜಾಮೀನಿನ ಯಾವುದೇ ಷರತ್ತಿನ ಉಲ್ಲಂಘನೆ ಮಾಡಿದರೆ ಜಾಮೀನು ರದ್ದಾಗುತ್ತದೆ” ಎಂದು ಕೊಲ್ಕತ್ತಾ ಹೈಕೋರ್ಟ್ ಎಚ್ಚರಿಸಿದೆ.

ತೃಣಮೂಲ ಕಾಂಗ್ರೆಸ್‌ನ ಉನ್ನತ ನಾಯಕರನ್ನು ಗುರಿಯಾಗಿಸಿಕೊಂಡು ಪತ್ರಕರ್ತ ಮ್ಯಾಥ್ಯೂ ಸ್ಯಾಮ್ಯುಯೆಲ್ ನಡೆಸಿದ ಕುಟುಕು ಕಾರ್ಯಾಚರಣೆಯಾಗಿದೆ ‘ನಾರದಾ ಕುಟುಕು ಕಾರ್ಯಾಚರಣೆ’. ಈ ಕಾರ್ಯಾಚರಣೆಯ ಮೂಲಕ ಹಲವಾರು ರಾಜಕಾರಣಿಗಳು ಮತ್ತು ಉನ್ನತ ದರ್ಜೆಯ ಪೊಲೀಸ್ ಅಧಿಕಾರಿಯೊಬ್ಬರು ಕಂಪನಿಗೆ ಅನಧಿಕೃತವಾಗಿ ಬೆಂಬಲಿಸುತ್ತೇವೆ ಎಂದು ನಗದು ಲಂಚ ಪಡೆದೂದನ್ನು ಬಯಲಿಗೆಳೆದಿತ್ತು. 2016 ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಲಾದ ಈ ಕುಟುಕು ಕಾರ್ಯಾಚರಣೆಯನ್ನು 2014 ರಲ್ಲಿ ಚಿತ್ರೀಕರಿಸಲಾಗಿತ್ತು.

ನಾರದಾ ಲಂಚ ಪ್ರಕರಣವನ್ನು ಉಲ್ಲೇಖಿಸಿ ಕೇಂದ್ರ ತನಿಖಾ ದಳ (ಸಿಬಿಐ) ವು ಮೇ 17 ರಂದು ತೃಣಮೂಲ ಕಾಂಗ್ರೆಸ್‌ ಶಾಸಕರಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರ ಮತ್ತು ಮಾಜಿ ಸಚಿವ, ಕೋಲ್ಕತಾ ಮೇಯರ್ ಶೋವನ್ ಚಟರ್ಜಿಯನ್ನು ವಶಕ್ಕೆ ತೆಗೆದುಕೊಂಡಿತ್ತು.

ಇದನ್ನೂ ಓದಿ: ‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...