Homeಫ್ಯಾಕ್ಟ್‌ಚೆಕ್ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ - ಲಸಿಕೆ...

ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ – ಲಸಿಕೆ ಹಾಕಿಸಿಕೊಳ್ಳಿ

- Advertisement -
- Advertisement -

ಯಾವುದೇ ಕೋವಿಡ್ ಲಸಿಕೆಗಳನ್ನು ಪಡೆದ ಜನರಿಗೆ ಬದುಕುಳಿಯುವ ಅವಕಾಶವಿಲ್ಲ ಎಂದು ನೊಬೆಲ್ ಪ್ರಶಸ್ತಿ ವಿಜೇತ ಲುಕ್ ಮೊಂಟಾಗ್ನಿಯರ್ ಹೇಳಿದ್ದಾರೆ ಎಂಬ ವಾಟ್ಸಾಪ್ ಸಂದೇಶವೊದು ವೈರಲ್ ಆಗಿದೆ. ಆ ಸಂದೇಶದಲ್ಲಿ ಅವರು ಹೀಗೆ ಹೇಳಿದ್ದಾರೆ, ಹಾಗೆ ಹೇಳಿದ್ದಾರೆ ಎಂದು ವಿವಿಧ ಉಲ್ಲೇಖಗಳನ್ನು ಪ್ರಸ್ತಾಪಿಸಿದೆ. ಈ ಸುಳ್ಳು ಸಮರ್ಥನೆಯನ್ನು ಬೆಂಬಲಿಸಲು ಅವರ ಲೇಖನಕ್ಕೆ ಲೈಫ್‌ಸೈಟ್‌ನ್ಯೂಸ್‌.ಕಾಂ ಎಂಬ ಲಿಂಕ್ ಅನ್ನು ಹಂಚಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ, ಮೊಂಟಾಗ್ನಿಯರ್ ಅವರ ವಿಕಿಪೀಡಿಯಾ ಪುಟಕ್ಕೆ ಲಿಂಕ್ ಅನ್ನು ಸಹ ಹಂಚಿಕೊಳ್ಳಲಾಗಿದೆ.

ಬಹುದೊಡ್ಡ ಸುಳ್ಳು

ನೊಬೆಲ್ ಪ್ರಶಸ್ತಿಯ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, 2008 ರಲ್ಲಿ ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್ (ಎಚ್‌ಐವಿ) ಆವಿಷ್ಕಾರಕ್ಕೆ ನೀಡಿದ ಕೊಡುಗೆಗಾಗಿ ಫ್ರೆಂಚ್ ವೈರಾಲಜಿಸ್ಟ್ ಲುಕ್ ಮೊಂಟಾಗ್ನಿಯರ್ ಅವರಿಗೆ ಪ್ರಶಸ್ತಿ ನೀಡಲಾಯಿತು. ಅಂದಿನಿಂದ ಅವರು ಹುಸಿ ವೈಜ್ಞಾನಿಕ ಭಾವನೆಗಳನ್ನು ವ್ಯಕ್ತಪಡಿಸುವುದಕ್ಕಾಗಿ ಸುದ್ದಿಯಲ್ಲಿದ್ದಾರೆ. ಕೊರೋನಾ ವೈರಸ್ ಮಾನವ ನಿರ್ಮಿತವಾಗಿದೆ ಮತ್ತು ಎಚ್‌ಐವಿಯಿಂದ ಆನುವಂಶಿಕ ವಸ್ತುಗಳನ್ನು ಒಳಗೊಂಡಿದೆ ಎಂದು ಮೊಂಟಾಗ್ನಿಯರ್ ತಪ್ಪಾಗಿ ಹೇಳಿಕೊಂಡಿದ್ದಾರೆ ಎಂದು ಫ್ರೆಂಚ್ ಮ್ಯಾಗಝೀನ್ ‘ಸೈನ್ಸ್ ಫೀಡ್‌ಬ್ಯಾಕ್’ ಕಳೆದ ವರ್ಷ ವರದಿ ಮಾಡಿದೆ.

ನೊಬೆಲ್ ಪ್ರಶಸ್ತಿ ವಿಜೇತ ಲುಕ್ ಮೊಂಟಾಗ್ನಿಯರ್, ಸಾಮೂಹಿಕ ಕೋವಿಡ್ ಲಸಿಕಾ ಕಾರ್ಯಕ್ರಮ ‘ಸ್ವೀಕಾರಾರ್ಹವಲ್ಲ, ಅದು ತಪ್ಪು’ ಎಂದು ಹೇಳಿದ್ದಾರೆ ಎಂದು ಪ್ರತಿಪಾದಿಸುವ ‘ಲೈಫ್ ಸೈಟ್ ನ್ಯೂಸ್’ ಲೇಖನವನ್ನು ಅಲ್ಟ್ ನ್ಯೂಸ್ ಗಮನಿಸಿದೆ ಮತ್ತು ಅದರಲ್ಲಿ ಅಂತಹ ವಿವರಣೆ ಇಲ್ಲವೇ ಇಲ್ಲ ಎಂಬುದನ್ನು ಕಂಡುಕೊಂಡಿದೆ. ಲೈಫ್ ಸೈಟ್ ನ್ಯೂಸ್ ಲೇಖನವು ಯುಎಸ್ ಮೂಲದ ಎನ್‌ಜಿಒ ರೇರ್ ಫೌಂಡೇಶನ್ ಮೇ 18 ರಂದು ಪ್ರಕಟಿಸಿದ ಲೇಖನವನ್ನು ಆಧರಿಸಿದೆ. ಈ ಲೇಖನವು ಮೊಂಟಾಗ್ನಿಯರ್ ಅವರ ಸಂದರ್ಶನದ ಎರಡು ನಿಮಿಷಗಳ ಕ್ಲಿಪ್ ಅನ್ನು ಒಳಗೊಂಡಿದೆ. ಈ ಸಂದರ್ಶನದ ಸಂಪೂರ್ಣ 11 ನಿಮಿಷಗಳ ಆವೃತ್ತಿಯನ್ನು ಫ್ರೆಂಚ್ ವೆಬ್‌ಸೈಟ್ ಪ್ಲಾನೆಟ್ 360 ಗೆ ಅಪ್‌ಲೋಡ್ ಮಾಡಲಾಗಿದೆ. ಲಸಿಕೆಗಳ ಕಾರಣದಿಂದಾಗಿ ಹೊಸ ಕೋವಿಡ್ ರೂಪಾಂತರಗಳನ್ನು ರಚಿಸಲಾಗಿದೆ ಎಂದು ಮೊಂಟಾಗ್ನಿಯರ್ ನಂಬಿದ್ದಾರೆ. ಎರಡು ನಿಮಿಷಗಳ ಕ್ಲಿಪ್‌ನಲ್ಲಿ, “ಸಾಮೂಹಿಕ ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ನೀವು ಹೇಗೆ ನೋಡುತ್ತೀರಿ?” ಎಂಬ ಪ್ರಶ್ನೆಗೆ ಉತ್ತರಿಸುತ್ತ ಮಾಂಟಾಗ್ನಿಯರ್ “ಇದು ಅಪಾರ ತಪ್ಪು, ಅಲ್ಲವೇ? ವೈಜ್ಞಾನಿಕ ದೋಷ ಮತ್ತು ವೈದ್ಯಕೀಯ ದೋಷ. ಇದು ಸ್ವೀಕಾರಾರ್ಹವಲ್ಲದ ತಪ್ಪು. ವ್ಯಾಕ್ಸಿನೇಷನ್‌ನಿಂದಾಗಿ ಇದು ರೂಪಾಂತರಗಳನ್ನು ರಚಿಸುತ್ತಿದೆ ಎಂದು ಇತಿಹಾಸ ಪುಸ್ತಕಗಳು ತೋರಿಸುತ್ತವೆ” ಎನ್ನುತ್ತಾರೆ. (ಬೋಲ್ಡ್ ಆಗಿರುವ ವಿಭಾಗವನ್ನು ವಾಟ್ಸಾಪ್ ಸಂದೇಶದಲ್ಲಿ ಸೇರಿಸಲಾಗಿದೆ.)

ಮಾಂಟಾಗ್ನಿಯರ್ ಲಸಿಕೆ ವಿರೋಧಿ ನಿಲುವಿಗೆ ಹೆಸರುವಾಸಿಯಾಗಿದ್ದಾರೆ ಎಂಬುದನ್ನು ಓದುಗರು ಗಮನಿಸಬೇಕು. ಆಲ್ಟ್ ನ್ಯೂಸ್ ಸೈನ್ಸ್‌ನ ಸಂಸ್ಥಾಪಕ ಸಂಪಾದಕರಾದ ಡಾ. ಸುಮಯ್ಯ ಶೇಖ್ ಅವರು, “ಇದು ಮೊಂಟಾಗ್ನಿಯರ್ ಹೇಳಿದ್ದಕ್ಕೆ ವಿರುದ್ಧವಾಗಿದೆ. ಲಸಿಕೆಗಳೊಂದಿಗೆ ವೈರಸ್ ಹರಡುವಿಕೆಯು ಕಡಿಮೆಯಾಗುತ್ತದೆ. ಹೀಗಾಗಿ, ಲಸಿಕೆ ಹಾಕುವ ಮೂಲಕ ಮತ್ತು ಸೋಂಕಿನ ಹರಡುವಿಕೆಯನ್ನು ತಡೆಯುವ ಮೂಲಕ, ವೈರಸ್ ಹರಡುವುದನ್ನು ನಿಲ್ಲಿಸಲಾಗುತ್ತದೆ ಮತ್ತು ಆ ಮೂಲಕ, ಹೊಸ ರೂಪಾಂತರಗಳು ಸಮುದಾಯದಲ್ಲಿ ಹರಡಲು ಕಡಿಮೆ ಅವಕಾಶಗಳನ್ನು ಹೊಂದಿರುತ್ತವೆ. ಲಸಿಕೆಗಳು ದೊಡ್ಡ ಜನಸಂಖ್ಯೆಯಲ್ಲಿ ವ್ಯಾಪಕವಾದ ಪುನರಾವರ್ತನೆಯನ್ನು ತಡೆಯುತ್ತವೆ, ಇದು ಅಂತಿಮವಾಗಿ ಹೊಸ ರೂಪಾಂತರಗಳ ರಚನೆಯನ್ನು ಕಡಿಮೆ ಮಾಡುತ್ತದೆ” ಎಂದಿದ್ದಾರೆ.

ತಪ್ಪುದಾರಿಗೆಳೆಯುವ ವಾಟ್ಸಾಪ್ ಸಂದೇಶದ ಬಗ್ಗೆ ಅಸ್ಸಾಂ ಪೊಲೀಸರು ಫೇಸ್‌ಬುಕ್‌ನಲ್ಲಿ ಎಚ್ಚರಿಕೆಯನ್ನು ಪೋಸ್ಟ್ ಮಾಡಿದ್ದಾರೆ.

ಫ್ರೆಂಚ್ ವೈರಾಲಜಿಸ್ಟ್ ಲುಕ್ ಮೊಂಟಾಗ್ನಿಯರ್ “ಈಗಾಗಲೇ ಲಸಿಕೆ ಹಾಕಿದವರಿಗೆ ಯಾವುದೇ ಭರವಸೆ ಇಲ್ಲ ಮತ್ತು ಸಂಭವನೀಯ ಚಿಕಿತ್ಸೆ ಇಲ್ಲ. ದೇಹಗಳನ್ನು ಸುಡಲು ನಾವು ಸಿದ್ಧರಾಗಿರಬೇಕು. ಲಸಿಕೆ ಹಾಕಿದ ಜನರು ಎರಡು ವರ್ಷಗಳಲ್ಲಿ ಸಾಯುತ್ತಾರೆ” ಎಂದು ಅವರು ಹೇಳಿಕೊಂಡಿಲ್ಲ. ಆದಾಗ್ಯೂ, ಅವರು ಈ ಹಿಂದೆ ಲಸಿಕೆ ವಿರೋಧಿ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

2010 ರಲ್ಲಿ, ಜರ್ಮನಿಯಲ್ಲಿ ನಡೆದ ಲಿಂಡೌ ನೊಬೆಲ್ ಪ್ರಶಸ್ತಿ ವಿಜೇತ ಸಭೆಯಲ್ಲಿ ಮೊಂಟಾಗ್ನಿಯರ್ ಆಘಾತಕಾರಿ ಭಾಷಣ ಮಾಡಿದರು. ವೈರಸ್ ಸೋಂಕುಗಳನ್ನು ಪತ್ತೆಹಚ್ಚಲು ಅವರು ಹೊಸ ವಿಧಾನವನ್ನು ಪ್ರಸ್ತುತಪಡಿಸಿದರು, ಅದು ಹೋಮಿಯೋಪತಿಯ ಮೂಲ ಸಿದ್ಧಾಂತಗಳಿಗೆ ಹೋಲುತ್ತದೆ. ಇದನ್ನು ದಿ ಆಸ್ಟ್ರೇಲಿಯಾ ನ್ಯೂಸ್ ವರದಿ ಮಾಡಿದೆ.
ಆಲ್ಟ್ ನ್ಯೂಸ್ ಸೈನ್ಸ್ 2018 ರಲ್ಲಿ ‘ಹೋಮಿಯೋಪತಿ ಚಿಕಿತ್ಸೆ ಪರಿಣಾಮಕಾರಿ ರೂಪವೇ?’ ಎಂಬ ಲೇಖನವನ್ನು ಪ್ರಕಟಿಸಿತ್ತು, ಇದು ಆಧುನಿಕ ವೈಜ್ಞಾನಿಕ ವಿವರಣೆಯ ಪ್ರಕಾರ ಹೋಮಿಯೋಪತಿ ಔಷಧಿಗಳನ್ನು ಅವುಗಳ ಪ್ಲಾಸಿಬೊ ಪರಿಣಾಮಕ್ಕೆ ಮಾತ್ರ ಸಿಮೀತ ಎಂದು ತೀರ್ಮಾನಿಸಿದೆ.

ಒಟ್ಟಿನಲ್ಲಿ, ಲಸಿಕೆ ಕುರಿತು ಭಯ ಬೀಳಿಸುವ ವ್ಯಾಟ್ಸಾಪ್ ಸಂದೇಶ ನಂಬಬೇಡಿ, ಲಸಿಕೆ ಹಾಕಿಸಿಕೊಳ್ಳಿ, ಪ್ರತಿರೋಧಕ ಶಕ್ತಿ ಪಡೆದುಕೊಳ್ಳಿ…. ವ್ಯಾಕ್ಸಿನ್ ಕುರಿತಾದ ನಿಮ್ಮ ಪ್ರಶ್ನೆಗಳಿಗೆ ಬೆಂಗಳೂರಿನ ಬಿಎಂಸಿ 92 ಸಾಲಿನ ವೈದ್ಯರು ಉತ್ತರಿಸಿದ್ದಾರೆ. ಈ ಕೆಳಗಿನ ವಿಡಿಯೋ ನೋಡಿ.


ಇದನ್ನೂ ಓದಿ; 2021 ರ ಅಂತ್ಯಕ್ಕೆ ಸಂಪೂರ್ಣ ಭಾರತಕ್ಕೆ ವ್ಯಾಕ್ಸಿನ್‌: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...