Homeಮುಖಪುಟಹೊಸ ಯೋಜನೆಯಡಿ ಉಚಿತ ‘ಸ್ಯಾನಿಟರಿ ಪ್ಯಾಡ್‌‌’ ಒದಗಿಸಲಿರುವ ಪಂಜಾಬ್

ಹೊಸ ಯೋಜನೆಯಡಿ ಉಚಿತ ‘ಸ್ಯಾನಿಟರಿ ಪ್ಯಾಡ್‌‌’ ಒದಗಿಸಲಿರುವ ಪಂಜಾಬ್

- Advertisement -
- Advertisement -

‘ಅಂತರರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ದಿನಾಚರಣೆ’ಯ ಸಂದರ್ಭದಲ್ಲಿ ಪಂಜಾಬ್ ಸರ್ಕಾರವು ರಾಜ್ಯದಾದ್ಯಂತ ಅಗತ್ಯವಿರುವ ಹೆಣ್ಣುಮಕ್ಕಳಿಗೆ ಮತ್ತು ಮಹಿಳೆಯರಿಗೆ ಉಚಿತ ‘ಸ್ಯಾನಿಟರಿ ನ್ಯಾಪ್‌ಕಿನ್‌’ ನೀಡುವ ಯೋಜನೆಯನ್ನು ಶುಕ್ರವಾರ ಪ್ರಾರಂಭಿಸಿತು.

‘ಉದಾನ್’ ಎಂದು ಕರೆಯಲ್ಪಡುವ ಈ ಯೋಜನೆಗೆ ವರ್ಷಕ್ಕೆ 40.55 ಕೋಟಿ ರೂ ಬೇಕಾಗುತ್ತದೆ ಎಂದು ಪಂಜಾಬ್ ಸಾಮಾಜಿಕ ಭದ್ರತೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅರುಣಾ ಚೌಧರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಮತ್ತು ಅವರ ಪುತ್ರನ ಕಾಲು ಹಿಡಿದು ಸಿ.ಪಿ. ಯೋಗೇಶ್ವರ್‌‌ ಸಚಿವರಾಗಿದ್ದು: ರೇಣುಕಾಚಾರ್ಯ

ಹೊಸ ಯೋಜನೆಯು ಶಾಲೆಯಿಂದ ಹೊರಗುಳಿಯುವ ಹುಡುಗಿಯರು, ಕಾಲೇಜಿಗೆ ಹಾಜರಾಗದ ಯುವತಿಯರು, ಬಿಪಿಎಲ್ ಕುಟುಂಬಗಳ ಮಹಿಳೆಯರು, ಮನೆಯಿಲ್ಲದ ಮಹಿಳೆಯರು, ಕೊಳೆಗೇರಿ ಪ್ರದೇಶದ ನಿವಾಸಿಗಳು ಮತ್ತು ಇತರ ಇಲಾಖೆಗಳ ಯಾವುದೇ ಯೋಜನೆಯಡಿ ಉಚಿತ ಅಥವಾ ಸಬ್ಸಿಡಿಯ ರೂಪದಲ್ಲಿ ಸ್ಯಾನಿಟರಿ ಪ್ಯಾಡ್‌‌‌‌ಗಳನ್ನು ಪಡೆಯದವರನ್ನು ಒಳಗೊಳ್ಳುತ್ತದೆ ಅವರು ಹೇಳಿದ್ದಾರೆ.

ಪ್ರತಿ ಫಲಾನುಭವಿಗೆ ತಿಂಗಳಿಗೆ ಗರಿಷ್ಠ ಒಂಬತ್ತು ಪ್ಯಾಡ್‌ಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಒಟ್ಟು 1,22,91,300 ಸ್ಯಾನಿಟರಿ ಪ್ಯಾಡ್‌ಗಳನ್ನು 13,65,700 ಫಲಾನುಭವಿಗಳಿಗೆ 27,314 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರು ಮತ್ತು ಸಹಾಯಕರ ಮೂಲಕ ವಿತರಿಸಲಾಗುವುದು ಎಂದು ಅರುಣಾ ಹೇಳಿದ್ದಾರೆ.

ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದು, ಮೂಲಭೂತ ಉತ್ಪನ್ನಗಳ ಲಭ್ಯತೆಯನ್ನು ಸುಧಾರಿಸುವುದು, ಉತ್ತಮ ಜೀವನ ಮಟ್ಟವನ್ನು ಉತ್ತೇಜಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ಮಹಿಳಾ ಆಧಾರಿತ ಯೋಜನೆಯು ಅವರ ಜೀವನದ ಗುಣಮಟ್ಟವನ್ನು ಸುಧಾರಿಸುವುದು, ಅವರ ಸ್ವಾಭಿಮಾನವನ್ನು ಹೆಚ್ಚಿಸುವುದು ಮತ್ತು ಸ್ಯಾನಿಟರಿ ಪ್ಯಾಡ್‌ಗಳ ಸುರಕ್ಷಿತವಾಗಿ ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಯೋಜನೆಯ ಉಧ್ಘಾಟನಾ ಸಮಾರಂಭದಲ್ಲಿ 1,500 ಸ್ಥಳಗಳಲ್ಲಿ ಮತ್ತು ರಾಜ್ಯದ ಇತರ ಅಂಗನವಾಡಿ ಕೇಂದ್ರಗಳಲ್ಲಿ ಒಂದು ಲಕ್ಷ ಪ್ಯಾಕೆಟ್ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಯೋಜನೆಯ ಒಟ್ಟಾರೆ ಪ್ರಗತಿ ಮತ್ತು ಸುಗಮ ಅನುಷ್ಠಾನದ ಮೇಲ್ವಿಚಾರಣೆಗಾಗಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಒಳಗೊಂಡ ರಾಜ್ಯ ಕಾರ್ಯಪಡೆ ರಚಿಸಲಾಗಿದೆ ಎಂದು ಸಚಿವೆ ಹೇಳಿದ್ದಾರೆ.

ಪ್ರತಿ ತಿಂಗಳು, ಸರ್ಕಾರದಿಂದ ಅನುಮೋದಿತ ಎಂಪನೇಲ್ಡ್ ಪ್ರಯೋಗಾಲಯಗಳು ಸ್ಯಾನಿಟರಿ ಪ್ಯಾಡ್‌‌ ಗುಣಮಟ್ಟದ ಪರೀಕ್ಷೆಯನ್ನು ನಡೆಸುತ್ತವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸುದ್ದಿಯೇನೇ ಮನೋಲ್ಲಾಸಿನಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...