Homeಮುಖಪುಟಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿದ ಕೇಂದ್ರ ಸರ್ಕಾರ

ಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿದ ಕೇಂದ್ರ ಸರ್ಕಾರ

ವಿವಾದಾತ್ಮಕ ಕಾಯ್ದೆಯಾದ 2019 ರ ತಿದ್ದುಪಡಿ ಕಾಯ್ದೆಯ ನಿಯಮಗಳನ್ನು ಇನ್ನೂ ರೂಪಿಸಲಾಗಿಲ್ಲ

- Advertisement -
- Advertisement -

ಪೌರತ್ವ ಕಾಯ್ದೆ-1955 ಮತ್ತು ಪೌರತ್ವ ನಿಯಮಗಳು-2009 ರ ಅಡಿಯಲ್ಲಿ ಅಫ್ಗಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಮುಂತಾದ ದೇಶಗಳಿಂದ ಬಂದು ಗುಜರಾತ್‌, ರಾಜಸ್ಥಾನ, ಛತ್ತೀಸಗಡ, ಹರಿಯಾಣ ಮತ್ತು ಪಂಜಾಬ್‌ನ 13 ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಹಿಂದೂ, ಸಿಖ್‌, ಜೈನ, ಬೌದ್ಧರು ಸೇರಿದಂತೆ ಮುಸ್ಲಿಮೇತರ ಧರ್ಮೀಯರಿಗೆ ಭಾರತದ ಪೌರತ್ವಕ್ಕಾಗಿ ಕೇಂದ್ರ ಸರ್ಕಾರವು ಶುಕ್ರವಾರ ಅರ್ಜಿ ಆಹ್ವಾನಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) 2019 ರ ಅಡಿಯಲ್ಲಿ ಕೇಂದ್ರವು ಇನ್ನೂ ನಿಯಮಗಳನ್ನು ರೂಪಿಸದ ಕಾರಣ, ಪೌರತ್ವದ ಅರ್ಜಿಗಳನ್ನು ಸ್ವೀಕರಿಸಲು, ಪರಿಶೀಲಿಸಲು ಮತ್ತು ಅನುಮೋದಿಸಲು ಗುಜರಾತ್, ಚತ್ತೀಸ್‌ಗಡ, ರಾಜಸ್ಥಾನ, ಹರಿಯಾಣ ಮತ್ತು ಪಂಜಾಬ್‌ನ 13 ಜಿಲ್ಲೆಗಳ ಅಧಿಕಾರಿಗಳಿಗೆ ಅಸ್ತಿತ್ವದಲ್ಲಿರುವ ನಿಯಮಗಳ ಅಡಿಯಲ್ಲಿ ಅಧಿಕಾರವನ್ನು ನೀಡುವ ಗೆಜೆಟ್ ಅಧಿಸೂಚನೆಯನ್ನು ಕೇಂದ್ರವು ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಸಿಎಂ ಮತ್ತು ಅವರ ಪುತ್ರನ ಕಾಲು ಹಿಡಿದು ಸಿ.ಪಿ. ಯೋಗೇಶ್ವರ್‌‌ ಸಚಿವರಾಗಿದ್ದು: ರೇಣುಕಾಚಾರ್ಯ

ಅಧಿಸೂಚನೆಯು ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾ ರ್ಸಿಗಳು ಮತ್ತು ಕ್ರಿಶ್ಚಿಯನ್ನರನ್ನು ಈ ಅರ್ಜಿಗೆ ಒಳಗೊಳ್ಳುವ ಸಮುದಾಯಗಳೆಂದು ಪಟ್ಟಿ ಮಾಡುತ್ತದೆ ಮತ್ತು ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕಾಗುತ್ತದೆ ಎಂದು ಹೇಳುತ್ತದೆ.

ಈ ಆದೇಶವನ್ನು ಪೌರತ್ವ ಕಾಯ್ದೆ, 1955 ಮತ್ತು ಪೌರತ್ವ ನಿಯಮಗಳು, 2009 ರ ಅಡಿಯಲ್ಲಿ ನೀಡಲಾಗಿದೆಯೆ ಹೊರತು ಪೌರತ್ವದ ಅಡಿಯಲ್ಲಿ ಅಲ್ಲ.

2019 ರ ತಿದ್ದುಪಡಿ ಕಾಯ್ದೆಯ ನಿಯಮಗಳನ್ನು ಇನ್ನೂ ರೂಪಿಸಲಾಗಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ. ಹಲವಾರು ರಾಜ್ಯಗಳ ಇತರ ಜಿಲ್ಲೆಗಳಿಗೂ ಇದೇ ರೀತಿಯ ಅಧಿಸೂಚನೆಯನ್ನು 2018 ರಲ್ಲಿ ನೀಡಲಾಗಿದೆ.

ಇದನ್ನೂ ಓದಿ: ಕೊರೊನಾ ಇಲ್ಲದಿರುತ್ತಿದ್ದರೆ ಇಷ್ಟೊತ್ತಿಗಾಗಲೇ BJP ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು: ಕಾಂಗ್ರೆಸ್‌

ಅಧಿಸೂಚನೆಯಲ್ಲಿ ಪಟ್ಟಿ ಮಾಡಲಾದ ಜಿಲ್ಲೆಗಳು ಇಂತಿವೆ: ಮೊರ್ಬಿ, ರಾಜ್‌ಕೋಟ್, ಪಠಾನ್ ಮತ್ತು ವಡೋದರಾ (ಗುಜರಾತ್); ದುರ್ಗ್ ಮತ್ತು ಬಲೋದಬಜಾರ್ (ಚತ್ತೀಸ್‌ಗಡ್‌); ಜಲೋರ್, ಉದಯಪುರ, ಪಾಲಿ, ಬಾರ್ಮರ್ ಮತ್ತು ಸಿರೋಹಿ (ರಾಜಸ್ಥಾನ); ಫರಿದಾಬಾದ್ (ಹರಿಯಾಣ); ಮತ್ತು, ಜಲಂಧರ್ (ಪಂಜಾಬ್).

ಛತ್ತೀಸ್‌ಗಢ, ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ದೆಹಲಿಯಂತಹ ರಾಜ್ಯಗಳ ಕೆಲವು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮತ್ತು ಗೃಹ ಕಾರ್ಯದರ್ಶಿಗಳಿಗೆ 2018 ರಲ್ಲಿ ಸರ್ಕಾರ ಇದೇ ರೀತಿಯ ಅಧಿಕಾರವನ್ನು ನೀಡಿತ್ತು.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಹಿಂದೂ, ಜೈನ, ಸಿಖ್, ಪಾರ್ಸಿ, ಕ್ರಿಶ್ಚಿಯನ್ ಮತ್ತು ಬೌದ್ಧ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರಿಗೆ ಪೌರತ್ವ ನೀಡುವ ಪೌರತ್ವ ಕಾಯ್ದೆಯನ್ನು 2019 ರ ಡಿಸೆಂಬರ್‌ನಲ್ಲಿ ಸಂಸತ್ತು ತಿದ್ದುಪಡಿ ಮಾಡಿತು. ಆದರೆ ಈ ತಿದ್ದುಪಡಿಯಲ್ಲಿ ಮುಸ್ಲಿಮರಿಗೆ ಪೌರತ್ವ ಪಡೆಯಲು ಅವಕಾಶ ಇರಲಿಲ್ಲ. ಪ್ರತಿಪಕ್ಷಗಳು ಈ ಕಾನೂನು ಸಂವಿಧಾನ ವಿರೋಧಿಯಾಗಿದ್ದು, ಧಾರ್ಮಿಕ ನಂಬಿಕೆಯ ಮೇಲೆ ತಾರತಮ್ಯ ಮಾಡುತ್ತದೆ ಎಂಬ ತೀವ್ರ ಟೀಕೆಗಳ ಮಧ್ಯೆಯು ಅಂಗೀಕರಿಸಲಾಯಿತು. ಈ ಕಾನೂನಿನ ವಿರುದ್ದ ರಾಷ್ಟ್ರವ್ಯಾಪಿ ಬೃಹತ್ ಪ್ರತಿಭಟನೆ ಕೂಡಾ ನಡೆದಿದ್ದು ವಿಶ್ವದ ಗಮನ ಸೆಳೆದಿತ್ತು.

ಇದನ್ನೂ ಓದಿ: ದೆಹಲಿ ವಾಸ್ತು- ಹಿನ್ನೋಟ; ಭವ್ಯ ಕಟ್ಟಡವೊಂದಕ್ಕೆ ಪರಂಪರೆಯ ನೆಲಸಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....